MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಚಿಕ್ಕಮಗಳೂರು: ನನ್ ಹೆಂಡ್ತಿಗೆ ಕಂಡ್ ಕಂಡೋನು ಮೆಸೇಜ್ ಮಾಡ್ತಾನೆಂದು ಆತ್ಮ*ಹತ್ಯೆ ಮಾಡಿಕೊಂಡ ಗಂಡ!

ಚಿಕ್ಕಮಗಳೂರು: ನನ್ ಹೆಂಡ್ತಿಗೆ ಕಂಡ್ ಕಂಡೋನು ಮೆಸೇಜ್ ಮಾಡ್ತಾನೆಂದು ಆತ್ಮ*ಹತ್ಯೆ ಮಾಡಿಕೊಂಡ ಗಂಡ!

ಚಿಕ್ಕಮಗಳೂರು ತಾಲೂಕಿನ ಬ್ಯಾಗದಹಳ್ಳಿ ಗ್ರಾಮದಲ್ಲಿ, ಪತ್ನಿಯ ಅಕ್ರಮ ಸಂಬಂಧ ಹಾಗೂ ಆಕೆಗೆ ಬರುತ್ತಿದ್ದ ಸಂದೇಶಗಳಿಂದ ಮನನೊಂದು ಮನು ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಗೆ ಪತ್ನಿ ಹಾಗೂ ಆಕೆಯ ಪ್ರಿಯಕರನೇ ಕಾರಣ ಎಂದು ಆರೋಪಿಸಿ ಮೃತನ ಪೋಷಕರು ದೂರು ನೀಡಿದ್ದಾರೆ.

2 Min read
Author : Sathish Kumar KH
Published : Feb 21 2026, 09:19 PM IST
Share this Photo Gallery
  • FB
  • TW
  • Linkdin
  • Whatsapp
15
ಚಿಕ್ಕಮಗಳೂರು ಮನು
Image Credit : Asianet News

ಚಿಕ್ಕಮಗಳೂರು ಮನು

ಚಿಕ್ಕಮಗಳೂರು (ಫೆ.21): ಸಂಸಾರದಲ್ಲಿ ಅನುಮಾನ ಎಂಬ ಹೆಮ್ಮಾರಿ ಹೊಕ್ಕರೆ ಎಂತಹ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಈ ದಾರುಣ ಘಟನೆಯೇ ಸಾಕ್ಷಿ. ಪತ್ನಿಯ ಅಕ್ರಮ ಸಂಬಂಧ ಹಾಗೂ ಆಕೆಗೆ ಪರಪುರುಷನಿಂದ ಬರುತ್ತಿದ್ದ ಸಂದೇಶಗಳಿಂದ (Messages) ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬ್ಯಾಗದಹಳ್ಳಿಯಲ್ಲಿ ನಡೆದಿದೆ.

25
ಘಟನೆಯ ವಿವರ:
Image Credit : Asianet News

ಘಟನೆಯ ವಿವರ:

ಚಿಕ್ಕಮಗಳೂರು ತಾಲೂಕಿನ ಬ್ಯಾಗದಹಳ್ಳಿ ಗ್ರಾಮದ ನಿವಾಸಿ ಮನು (26) ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಮನು ಅವರಿಗೆ ವಿವಾಹವಾಗಿದ್ದು, ಕಳೆದ ಕೆಲವು ದಿನಗಳಿಂದ ದಂಪತಿಗಳ ನಡುವೆ ಪತ್ನಿಯ ಅಕ್ರಮ ಸಂಬಂಧದ ವಿಚಾರವಾಗಿ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಪತ್ನಿಯ ಮೊಬೈಲ್‌ಗೆ ಪರಪುರುಷನೊಬ್ಬ ನಿರಂತರವಾಗಿ ಸಂದೇಶಗಳನ್ನು ಕಳುಹಿಸುತ್ತಿದ್ದ ವಿಚಾರ ಮನು ಅವರಿಗೆ ತಿಳಿದಿತ್ತು. ಇದು ಸಂಸಾರದಲ್ಲಿ ಬಿರುಗಾಳಿ ಎಬ್ಬಿಸಿತ್ತು.

Related Articles

Related image1
ಪತಿ ಸಾವಿನ 6 ದಿನಕ್ಕೆ ಪತ್ನಿ ಆತ್ಮ*ಹತ್ಯೆ: ಮತ್ತೊಬ್ಬ ಪೇದೆಯ ಕರಾಳ ಮುಖ ಬಿಚ್ಚಿಟ್ಟ ಸಂದೇಶ
Related image2
ಗಂಡ ಫಾರಿನ್ ಟ್ರಿಪ್ ಕಳಿಸಿಲ್ಲವೆಂದು, ಡೈರೆಕ್ಟ್ ಯಮಲೋಕಕ್ಕೆ ಪರ್ಮನೆಂಟ್ ಪ್ರವಾಸ ಹೋದ ಹೆಂಡತಿ!
35
ನಿನ್ನೆ ರಾತ್ರಿ ನಡೆದಿದ್ದ ಹೈಡ್ರಾಮಾ
Image Credit : Asianet News

ನಿನ್ನೆ ರಾತ್ರಿ ನಡೆದಿದ್ದ ಹೈಡ್ರಾಮಾ

ಶುಕ್ರವಾರ ರಾತ್ರಿ ಇದೇ ವಿಚಾರವಾಗಿ ಮನು ಮತ್ತು ಅವರ ಪತ್ನಿ ನಡುವೆ ದೊಡ್ಡ ಮಟ್ಟದ ಜಗಳ ನಡೆದಿತ್ತು. ಈ ವೇಳೆ ಪತ್ನಿಯ ಆಪ್ತ ಸ್ನೇಹಿತ ಎನ್ನಲಾದ ವ್ಯಕ್ತಿಯೂ ಸ್ಥಳದಲ್ಲಿದ್ದು, ಮನು ಅವರೊಂದಿಗೆ ವಾಗ್ವಾದ ನಡೆಸಿದ್ದ ಎನ್ನಲಾಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಸ್ಥಳೀಯರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರಿಗೂ ಬುದ್ಧಿ ಹೇಳಿ, ಸಮಾಧಾನಪಡಿಸಿ ಅಲ್ಲಿಂದ ತೆರಳಿದ್ದರು.

ಮನನೊಂದು ಪ್ರಾಣ ಬಿಟ್ಟ ಮನು:

ಪೊಲೀಸರು ಬಂದು ಹೋದ ನಂತರವೂ ಮನು ತೀವ್ರ ಮಾನಸಿಕ ವೇದನೆಗೆ ಒಳಗಾಗಿದ್ದರು ಎನ್ನಲಾಗಿದೆ. ಪತ್ನಿಯ ನಡವಳಿಕೆ ಮತ್ತು ಸಾರ್ವಜನಿಕವಾಗಿ ಉಂಟಾದ ಅವಮಾನದಿಂದ ನೊಂದ ಮನು, ಇಂದು ತನ್ನ ಮನೆಯಲ್ಲೇ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.

45
ಪೋಷಕರ ಆಕ್ರೋಶ, ನ್ಯಾಯಕ್ಕಾಗಿ ಆಗ್ರಹ
Image Credit : Asianet News

ಪೋಷಕರ ಆಕ್ರೋಶ, ನ್ಯಾಯಕ್ಕಾಗಿ ಆಗ್ರಹ

ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಮನು ಪೋಷಕರು ಮತ್ತು ಸಂಬಂಧಿಕರ ಆಕ್ರೋಶ ಮುಗಿಲು ಮುಟ್ಟಿದೆ. 'ನಮ್ಮ ಮಗನ ಸಾವಿಗೆ ಆತನ ಪತ್ನಿಯ ಅಕ್ರಮ ಸಂಬಂಧವೇ ಕಾರಣ. ಆಕೆ ಮತ್ತು ಆಕೆಯ ಪ್ರಿಯಕರ ಮಗನಿಗೆ ಕಿರುಕುಳ ನೀಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನಮ್ಮ ಮಗನ ಸಾವಿಗೆ ನ್ಯಾಯ ಕೊಡಿಸಬೇಕು' ಎಂದು ಮನು ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

55
ಪೊಲೀಸ್ ಠಾಣೆಯಲ್ಲಿ ಪ್ರಕರಣ
Image Credit : Asianet News

ಪೊಲೀಸ್ ಠಾಣೆಯಲ್ಲಿ ಪ್ರಕರಣ

ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪತ್ನಿಯ ಅಕ್ರಮ ಸಂಬಂಧದ ಆಯಾಮದಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಚಿಕ್ಕಮಗಳೂರು
ಮದುವೆ
ಪತ್ನಿ

Latest Videos
Recommended Stories
Recommended image1
ಶಿವಾಜಿ ಮೆರವಣಿಗೆಗೆ ಎಸೆದರು ಸ್ಟೋನ್; ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಎಂಟ್ರಿ ಬ್ಯಾನ್; ಜಿಲ್ಲಾಧಿಕಾರಿ ಆದೇಶ!
Recommended image2
ಬೆಳ್ಳಂದೂರು ಮೆಟ್ರೋ ಇನ್ಮುಂದೆ ‘ಪ್ರೆಸ್ಟೀಜ್ ಬೆಳ್ಳಂದೂರು ಸ್ಟೇಷನ್’: BMRCL ಜೊತೆಗೆ ₹90 ಕೋಟಿ ಒಪ್ಪಂದ!
Recommended image3
ಮುಂಡಗೋಡ ಅರಣ್ಯದಲ್ಲಿ ತಲೆ ಕತ್ತರಿಸಿದ ಮಹಿಳೆಯ ಬೆ*ತ್ತಲೆ ಶವ ಪತ್ತೆ; ಗುರುತು ಪತ್ತೆಗೆ ಪೊಲೀಸರ ಪರದಾಟ!
Related Stories
Recommended image1
ಪತಿ ಸಾವಿನ 6 ದಿನಕ್ಕೆ ಪತ್ನಿ ಆತ್ಮ*ಹತ್ಯೆ: ಮತ್ತೊಬ್ಬ ಪೇದೆಯ ಕರಾಳ ಮುಖ ಬಿಚ್ಚಿಟ್ಟ ಸಂದೇಶ
Recommended image2
ಗಂಡ ಫಾರಿನ್ ಟ್ರಿಪ್ ಕಳಿಸಿಲ್ಲವೆಂದು, ಡೈರೆಕ್ಟ್ ಯಮಲೋಕಕ್ಕೆ ಪರ್ಮನೆಂಟ್ ಪ್ರವಾಸ ಹೋದ ಹೆಂಡತಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved