MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಚಿತ್ರದುರ್ಗ ವರ್ಷಿತಾ ಕೊಲೆ ಕೇಸ್ ರಿವೀಲ್: 3ನೇ ಸ್ಟೇಜ್ ಕ್ಯಾನ್ಸರ್ ರೋಗಿ ಪ್ರೀತಿ ಮಾಡದಿದ್ದಕ್ಕೆ ಮರ್ಡರ್!

ಚಿತ್ರದುರ್ಗ ವರ್ಷಿತಾ ಕೊಲೆ ಕೇಸ್ ರಿವೀಲ್: 3ನೇ ಸ್ಟೇಜ್ ಕ್ಯಾನ್ಸರ್ ರೋಗಿ ಪ್ರೀತಿ ಮಾಡದಿದ್ದಕ್ಕೆ ಮರ್ಡರ್!

ಚಿತ್ರದುರ್ಗದಲ್ಲಿ ನಡೆದ 19 ವರ್ಷದ ವಿದ್ಯಾರ್ಥಿನಿ ವರ್ಷಿತಾ ಕೊಲೆ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಬಂಧಿಸಿದ್ದಾರೆ. 3ನೇ ಸ್ಟೇಜ್ ಕ್ಯಾನ್ಸರ್ ಪೇಷಂಟ್‌ನ ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ.

2 Min read
Sathish Kumar KH
Published : Aug 21 2025, 08:00 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಚಿತ್ರದುರ್ಗ (ಆ.21): ನಗರದಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿನಿ ವರ್ಷಿತಾ (19) ಕೊಲೆ ಪ್ರಕರಣದ ರಹಸ್ಯವನ್ನು ಚಿತ್ರದುರ್ಗ ಪೊಲೀಸರು ಭೇದಿಸಿದ್ದು, ವರ್ಷಿತಾಳನ್ನು ಕೊಲೆ ಮಾಡಿದ್ದ ಆರೋಪಿ ಚೇತನ್‌ನನ್ನು ಬಂಧಿಸಿದ್ದಾರೆ.

28
Image Credit : Asianet News

ಆರೋಪಿ ಚೇತನ್‌ನನ್ನು ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ಹಾಗೂ ತನ್ನ ಅನಾರೋಗ್ಯದ ವಿಷಯ ತಿಳಿದ ನಂತರ ದೂರವಾಗಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಈ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

Related Articles

Related image1
ಚಿತ್ರದುರ್ಗ ವಿದ್ಯಾರ್ಥಿನಿ ಹ*ತ್ಯೆ: ಆರೋಪಿ ಚೇತನ್ ಜೊತೆ ವರ್ಷಿತಾ ಇರೋ ಫೋಟೋ ಭಾರೀ ವೈರಲ್
Related image2
ನಿರ್ಭಯಾ ಹತ್ಯೆಗಿಂತ ಕ್ರೂರ; ಚಿತ್ರದುರ್ಗ ಕಾಲೇಜು ವಿದ್ಯಾರ್ಥಿನಿ ರೇಪ್ ಮಾಡಿ, ಬೆಂಕಿ ಹಚ್ಚಿ ಸುಟ್ಟರಾ ಕ್ರಿಮಿಗಳು!
38
Image Credit : Asianet News

ಕೊಲೆಗೂ ಮುನ್ನ ಪೆಟ್ರೋಲ್ ಖರೀದಿಸಿದ್ದ ಆರೋಪಿ: ಚಿತ್ರದುರ್ಗದ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಕೆಳಗೋಟೆ ಬಡಾವಣೆಯ ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಚೇತನ್ (20) ಎಂಬಾತನನ್ನು ಬಂಧಿಸಲಾಗಿದೆ.

48
Image Credit : Asianet News

ಕಳೆದ 11 ತಿಂಗಳ ಹಿಂದೆ ಚೇತನ್‌ಗೆ ವರ್ಷಿತಾಳ ಪರಿಚಯವಾಗಿತ್ತು. ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಚೇತನ್, ಆಕೆಯೊಂದಿಗೆ ಪ್ರೇಮ ಬೆಳೆಸಿದ್ದನು. ಆದರೆ, ಆತನಗೆ ಕ್ಯಾನ್ಸರ್ 3ನೇ ಹಂತದಲ್ಲಿದೆ ಎಂದು ವರ್ಷಿತಾಗೆ ತಿಳಿದ ನಂತರ, ಆಕೆ ಚೇತನ್‌ನನ್ನು ಅವಾಯ್ಡ್ ಮಾಡಲು ಶುರುಮಾಡಿದ್ದಳು. ಬೇರೆ ಯುವಕನೊಂದಿಗೆ ಮಾತನಾಡಲು ಆರಂಭಿಸಿದ್ದಳು.

58
Image Credit : Asianet News

ಈ ನಡುವೆ, ವರ್ಷಿತಾ ಗರ್ಭಿಣಿಯಾಗಿದ್ದಳು. ಈ ವಿಷಯ ತಿಳಿದ ಆಕೆಯ ಚಿಕ್ಕಮ್ಮ ಚೇತನ್‌ಗೆ ಕರೆ ಮಾಡಿ ಮದುವೆಯಾಗುವಂತೆ ಒತ್ತಡ ಹಾಕಿದ್ದರು. ಇದರಿಂದ ಕೋಪಗೊಂಡ ಚೇತನ್, ವರ್ಷಿತಾಳನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದನು.

68
Image Credit : X

ಆಗಸ್ಟ್ 18ರಂದು ವರ್ಷಿತಾಳಿಗೆ ಕರೆ ಮಾಡಿ ಚಿತ್ರದುರ್ಗಕ್ಕೆ ಬರುವಂತೆ ತಿಳಿಸಿದ್ದನು. ವರ್ಷಿತಾ ಬರುವ ಮೊದಲೇ ಚೇತನ್ ಪೆಟ್ರೋಲ್ ಖರೀದಿಸಿದ್ದನು. ಗೋನೂರು ಗ್ರಾಮದ ಬಳಿಗೆ ಕರೆದೊಯ್ದು ಆಕೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿ, ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎಂದು ಎಸ್ಪಿ ತಿಳಿಸಿದರು.

78
Image Credit : Asianet News

ಸ್ಥಳ ಮಹಜರು ನಡೆಸಿದ ಪೊಲೀಸರು: ಕೊಲೆ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸಿಪಿಐ ಮುದ್ದುರಾಜ್ ಅವರ ನೇತೃತ್ವದಲ್ಲಿ ಆರೋಪಿ ಚೇತನ್‌‌ನನ್ನು ಗೋನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಕರೆದೊಯ್ದು ಸ್ಥಳ ಮಹಜರು ನಡೆಸಿದರು.

88
Image Credit : Asianet News

ಆರೋಪಿ ಚೇತನ್ ಕೊಲೆ ಮಾಡಿದ ಸ್ಥಳವನ್ನು ತೋರಿಸಿ, ಕೃತ್ಯದ ಕುರಿತು ಮಾಹಿತಿ ನೀಡಿದ್ದಾನೆ. ಪೊಲೀಸರು ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಈ ಘಟನೆ ಚಿತ್ರದುರ್ಗದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಚಿತ್ರದುರ್ಗ
ಕ್ರೈಮ್ ನ್ಯೂಸ್
ವಿದ್ಯಾರ್ಥಿ
ಪ್ರೀತಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved