MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಗಾರ್ಡನ್‌ ಸಿಟಿ ಬೆಂಗಳೂರಲ್ಲಿ ದೇಶದ ಚೊಚ್ಚಲ ಕ್ಲೀನ್‌ ಏರ್‌ ಸ್ಟ್ರೀಟ್‌ಗೆ ಚಾಲನೆ

ಗಾರ್ಡನ್‌ ಸಿಟಿ ಬೆಂಗಳೂರಲ್ಲಿ ದೇಶದ ಚೊಚ್ಚಲ ಕ್ಲೀನ್‌ ಏರ್‌ ಸ್ಟ್ರೀಟ್‌ಗೆ ಚಾಲನೆ

ಬೆಂಗಳೂರು(ನ.08): ವಾಯು ಗುಣಮಟ್ಟ ಸುಧಾರಿಸಲು ಹಾಗೂ ಸೈಕಲ್‌ ಮತ್ತು ವಿದ್ಯುತ್‌ ಚಾಲಿತ ವಾಹನಗಳ ಬಳಕೆ ಪ್ರೋತ್ಸಾಹಿಸಲು ದೇಶದಲ್ಲೇ ಪ್ರಥಮ ಬಾರಿಗೆ ನಗರದ ‘ಚರ್ಚ್‌ ಸ್ಟ್ರೀಟ್‌’ನಲ್ಲಿ ‘ಕ್ಲೀನ್‌ ಏರ್‌ಸ್ಟ್ರೀಟ್‌’ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. 

2 Min read
Kannadaprabha News | Asianet News
Published : Nov 08 2020, 08:05 AM IST| Updated : Nov 08 2020, 08:17 AM IST
Share this Photo Gallery
  • FB
  • TW
  • Linkdin
  • Whatsapp
18
<p>ನಗರದ ಎಂ.ಜಿ.ರಸ್ತೆಯ ಚರ್ಚ್‌ ಸ್ಟ್ರೀಟ್‌ನಲ್ಲಿ ಶನಿವಾರ ನಗರ ಭೂ ಸಾರಿಗೆ ನಿರ್ದೇಶನಾಲಯ, ಯುಕೆ ಕ್ಯಾಟಪಲ್ಟ್‌ , ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಹಾಗೂ ಚರ್ಚ್‌ ಸ್ಟ್ರೀಟ್‌ ಆಕ್ಯುಪೆಂಟ್ಸ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಯಡಿಯೂರಪ್ಪ&nbsp;</p>

<p>ನಗರದ ಎಂ.ಜಿ.ರಸ್ತೆಯ ಚರ್ಚ್‌ ಸ್ಟ್ರೀಟ್‌ನಲ್ಲಿ ಶನಿವಾರ ನಗರ ಭೂ ಸಾರಿಗೆ ನಿರ್ದೇಶನಾಲಯ, ಯುಕೆ ಕ್ಯಾಟಪಲ್ಟ್‌ , ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಹಾಗೂ ಚರ್ಚ್‌ ಸ್ಟ್ರೀಟ್‌ ಆಕ್ಯುಪೆಂಟ್ಸ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಯಡಿಯೂರಪ್ಪ&nbsp;</p>

ನಗರದ ಎಂ.ಜಿ.ರಸ್ತೆಯ ಚರ್ಚ್‌ ಸ್ಟ್ರೀಟ್‌ನಲ್ಲಿ ಶನಿವಾರ ನಗರ ಭೂ ಸಾರಿಗೆ ನಿರ್ದೇಶನಾಲಯ, ಯುಕೆ ಕ್ಯಾಟಪಲ್ಟ್‌ , ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಹಾಗೂ ಚರ್ಚ್‌ ಸ್ಟ್ರೀಟ್‌ ಆಕ್ಯುಪೆಂಟ್ಸ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಯಡಿಯೂರಪ್ಪ 

28
<p>ಬೆಂಗಳೂರಿನಲ್ಲಿ ವಾಯುಮಾಲಿನ್ಯ ತಡೆದು ಸ್ವಚ್ಛ ಗಾಳಿ ಒದಗಿಸಲು ಈ ಯೋಜನೆ ಸಹಕಾರಿ. 2021ರ ಫೆಬ್ರುವರಿ ಅಂತ್ಯದವರೆಗೆ ಚರ್ಚ್‌ ಸ್ಟ್ರೀಟ್‌ನಲ್ಲಿ ಯೋಜನೆ ಜಾರಿಯಲ್ಲಿರಲಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಮಾರ್ಗದಲ್ಲಿ ಪಾದಚಾರಿಗಳು, ತುರ್ತು ಸೇವೆ ಹಾಗೂ ಸ್ಥಳೀಯ ನಿವಾಸಿಗಳ ವಾಹನ ಬಿಟ್ಟು ಬೇರೆಲ್ಲ ವಾಹನ ನಿರ್ಬಂಧಿಸಲಾಗಿದೆ ಎಂದ ಸಿಎಂ</p>

<p>ಬೆಂಗಳೂರಿನಲ್ಲಿ ವಾಯುಮಾಲಿನ್ಯ ತಡೆದು ಸ್ವಚ್ಛ ಗಾಳಿ ಒದಗಿಸಲು ಈ ಯೋಜನೆ ಸಹಕಾರಿ. 2021ರ ಫೆಬ್ರುವರಿ ಅಂತ್ಯದವರೆಗೆ ಚರ್ಚ್‌ ಸ್ಟ್ರೀಟ್‌ನಲ್ಲಿ ಯೋಜನೆ ಜಾರಿಯಲ್ಲಿರಲಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಮಾರ್ಗದಲ್ಲಿ ಪಾದಚಾರಿಗಳು, ತುರ್ತು ಸೇವೆ ಹಾಗೂ ಸ್ಥಳೀಯ ನಿವಾಸಿಗಳ ವಾಹನ ಬಿಟ್ಟು ಬೇರೆಲ್ಲ ವಾಹನ ನಿರ್ಬಂಧಿಸಲಾಗಿದೆ ಎಂದ ಸಿಎಂ</p>

ಬೆಂಗಳೂರಿನಲ್ಲಿ ವಾಯುಮಾಲಿನ್ಯ ತಡೆದು ಸ್ವಚ್ಛ ಗಾಳಿ ಒದಗಿಸಲು ಈ ಯೋಜನೆ ಸಹಕಾರಿ. 2021ರ ಫೆಬ್ರುವರಿ ಅಂತ್ಯದವರೆಗೆ ಚರ್ಚ್‌ ಸ್ಟ್ರೀಟ್‌ನಲ್ಲಿ ಯೋಜನೆ ಜಾರಿಯಲ್ಲಿರಲಿದೆ. ಪ್ರತಿ ಶನಿವಾರ ಮತ್ತು ಭಾನುವಾರ ಈ ಮಾರ್ಗದಲ್ಲಿ ಪಾದಚಾರಿಗಳು, ತುರ್ತು ಸೇವೆ ಹಾಗೂ ಸ್ಥಳೀಯ ನಿವಾಸಿಗಳ ವಾಹನ ಬಿಟ್ಟು ಬೇರೆಲ್ಲ ವಾಹನ ನಿರ್ಬಂಧಿಸಲಾಗಿದೆ ಎಂದ ಸಿಎಂ

38
<p>ಶುದ್ಧ ಗಾಳಿ, ನೀರು ನಾಗರಿಕನ ಹಕ್ಕು. ನಗರದಲ್ಲಿ 85 ಲಕ್ಷಕ್ಕೂ ಅಧಿಕ ವಾಹನಗಳಿದ್ದು, ಶೇ.50ರಷ್ಟುವಾಯುಮಾಲಿನ್ಯ ಉಂಟಾಗುತ್ತಿದೆ. ವಾಯುಮಾಲಿನ್ಯ ವಾರ್ಷಿಕ ಶೇ.10ರಷ್ಟು ಹೆಚ್ಚುತ್ತಿದೆ. ಹೀಗಾಗಿ ಎಲ್ಲರೂ ಪರಿಸರ ಸಂರಕ್ಷಿಸಬೇಕಿದೆ ಎಂದರು.</p>

<p>ಶುದ್ಧ ಗಾಳಿ, ನೀರು ನಾಗರಿಕನ ಹಕ್ಕು. ನಗರದಲ್ಲಿ 85 ಲಕ್ಷಕ್ಕೂ ಅಧಿಕ ವಾಹನಗಳಿದ್ದು, ಶೇ.50ರಷ್ಟುವಾಯುಮಾಲಿನ್ಯ ಉಂಟಾಗುತ್ತಿದೆ. ವಾಯುಮಾಲಿನ್ಯ ವಾರ್ಷಿಕ ಶೇ.10ರಷ್ಟು ಹೆಚ್ಚುತ್ತಿದೆ. ಹೀಗಾಗಿ ಎಲ್ಲರೂ ಪರಿಸರ ಸಂರಕ್ಷಿಸಬೇಕಿದೆ ಎಂದರು.</p>

ಶುದ್ಧ ಗಾಳಿ, ನೀರು ನಾಗರಿಕನ ಹಕ್ಕು. ನಗರದಲ್ಲಿ 85 ಲಕ್ಷಕ್ಕೂ ಅಧಿಕ ವಾಹನಗಳಿದ್ದು, ಶೇ.50ರಷ್ಟುವಾಯುಮಾಲಿನ್ಯ ಉಂಟಾಗುತ್ತಿದೆ. ವಾಯುಮಾಲಿನ್ಯ ವಾರ್ಷಿಕ ಶೇ.10ರಷ್ಟು ಹೆಚ್ಚುತ್ತಿದೆ. ಹೀಗಾಗಿ ಎಲ್ಲರೂ ಪರಿಸರ ಸಂರಕ್ಷಿಸಬೇಕಿದೆ ಎಂದರು.

48
<p>ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಮಾತನಾಡಿ, ವಾಣಿಜ್ಯ ಚಟುವಟಿಕೆಯ ಕೇಂದ್ರವಾಗಿರುವ ಚಚ್‌ರ್‍ಸ್ಟ್ರೀಟ್‌ನಲ್ಲಿ ಪಾದಚಾರಿಗಳು ಹೆಚ್ಚು, ಜನದಟ್ಟಣೆಯೂ ಅಧಿಕ. ಸದ್ಯ ಯೋಜನೆಯಿಂದ ಚಚ್‌ರ್‍ಸ್ಟ್ರೀಟ್‌ನಲ್ಲಿ ಸೈಕಲ್‌ಗಳು, ವಿದ್ಯುತ್‌ಚಾಲಿತ ವಾಹನಗಳು ಮಾತ್ರ ಸಂಚರಿಸಲಿವೆ ಎಂದು ಹೇಳಿದರು.</p>

<p>ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಮಾತನಾಡಿ, ವಾಣಿಜ್ಯ ಚಟುವಟಿಕೆಯ ಕೇಂದ್ರವಾಗಿರುವ ಚಚ್‌ರ್‍ಸ್ಟ್ರೀಟ್‌ನಲ್ಲಿ ಪಾದಚಾರಿಗಳು ಹೆಚ್ಚು, ಜನದಟ್ಟಣೆಯೂ ಅಧಿಕ. ಸದ್ಯ ಯೋಜನೆಯಿಂದ ಚಚ್‌ರ್‍ಸ್ಟ್ರೀಟ್‌ನಲ್ಲಿ ಸೈಕಲ್‌ಗಳು, ವಿದ್ಯುತ್‌ಚಾಲಿತ ವಾಹನಗಳು ಮಾತ್ರ ಸಂಚರಿಸಲಿವೆ ಎಂದು ಹೇಳಿದರು.</p>

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಮಾತನಾಡಿ, ವಾಣಿಜ್ಯ ಚಟುವಟಿಕೆಯ ಕೇಂದ್ರವಾಗಿರುವ ಚಚ್‌ರ್‍ಸ್ಟ್ರೀಟ್‌ನಲ್ಲಿ ಪಾದಚಾರಿಗಳು ಹೆಚ್ಚು, ಜನದಟ್ಟಣೆಯೂ ಅಧಿಕ. ಸದ್ಯ ಯೋಜನೆಯಿಂದ ಚಚ್‌ರ್‍ಸ್ಟ್ರೀಟ್‌ನಲ್ಲಿ ಸೈಕಲ್‌ಗಳು, ವಿದ್ಯುತ್‌ಚಾಲಿತ ವಾಹನಗಳು ಮಾತ್ರ ಸಂಚರಿಸಲಿವೆ ಎಂದು ಹೇಳಿದರು.

58
<p>ಶಾಸಕ ಎನ್‌.ಎ.ಹ್ಯಾರಿಸ್‌ ಮಾತನಾಡಿ, ದೂರದೃಷ್ಟಿಯಿಂದ ಆರಂಭಿಸಿರುವ ಈ ಯೋಜನೆಯಿಂದ ಬೆಂಗಳೂರು ಭವಿಷ್ಯದಲ್ಲಿ ಸಂಚಾರ ದಟ್ಟಣೆ, ವಾಯುಮಾಲಿನ್ಯ ತುಂಬಿಕೊಂಡ ದೆಹಲಿ, ಮುಂಬೈ ಮಹಾನಗರಗಳಂತೆ ಆಗುವುದನ್ನು ತಪ್ಪಿಸಲಿದೆ. ಯೋಜನೆ ಜಾರಿಯಲ್ಲಿರುವ ನಾಲ್ಕು ತಿಂಗಳು ವಿದ್ಯುತ್‌ ವಾಹನ ಬಳಕೆ ಹೆಚ್ಚಲಿದೆ ಎಂದರು.</p>

<p>ಶಾಸಕ ಎನ್‌.ಎ.ಹ್ಯಾರಿಸ್‌ ಮಾತನಾಡಿ, ದೂರದೃಷ್ಟಿಯಿಂದ ಆರಂಭಿಸಿರುವ ಈ ಯೋಜನೆಯಿಂದ ಬೆಂಗಳೂರು ಭವಿಷ್ಯದಲ್ಲಿ ಸಂಚಾರ ದಟ್ಟಣೆ, ವಾಯುಮಾಲಿನ್ಯ ತುಂಬಿಕೊಂಡ ದೆಹಲಿ, ಮುಂಬೈ ಮಹಾನಗರಗಳಂತೆ ಆಗುವುದನ್ನು ತಪ್ಪಿಸಲಿದೆ. ಯೋಜನೆ ಜಾರಿಯಲ್ಲಿರುವ ನಾಲ್ಕು ತಿಂಗಳು ವಿದ್ಯುತ್‌ ವಾಹನ ಬಳಕೆ ಹೆಚ್ಚಲಿದೆ ಎಂದರು.</p>

ಶಾಸಕ ಎನ್‌.ಎ.ಹ್ಯಾರಿಸ್‌ ಮಾತನಾಡಿ, ದೂರದೃಷ್ಟಿಯಿಂದ ಆರಂಭಿಸಿರುವ ಈ ಯೋಜನೆಯಿಂದ ಬೆಂಗಳೂರು ಭವಿಷ್ಯದಲ್ಲಿ ಸಂಚಾರ ದಟ್ಟಣೆ, ವಾಯುಮಾಲಿನ್ಯ ತುಂಬಿಕೊಂಡ ದೆಹಲಿ, ಮುಂಬೈ ಮಹಾನಗರಗಳಂತೆ ಆಗುವುದನ್ನು ತಪ್ಪಿಸಲಿದೆ. ಯೋಜನೆ ಜಾರಿಯಲ್ಲಿರುವ ನಾಲ್ಕು ತಿಂಗಳು ವಿದ್ಯುತ್‌ ವಾಹನ ಬಳಕೆ ಹೆಚ್ಚಲಿದೆ ಎಂದರು.

68
<p>ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಮಾತನಾಡಿ, ಪ್ರತಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12ರ ವರೆಗೆ ಚರ್ಚ್‌ ಸ್ಟ್ರೀಟ್‌ನಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ನಾಲ್ಕು ತಿಂಗಳಲ್ಲಿ ಚಚ್‌ರ್‍ಸ್ಟ್ರೀಟ್‌ನ ವಾಯುಮಾಲಿನ್ಯ ಎಷ್ಟುತಡೆಯಲಾಗಿದೆ ಎಂಬುದನ್ನು ಪರೀಕ್ಷಿಸಲಾಗುವುದು. ಯೋಜನೆ ಯಶಸ್ವಿಯಾದರೆ ರಜಾದಿನದ ಜೊತೆಗೆ ಉಳಿದ ದಿನಗಳಲ್ಲಿ ಯೋಜನೆ ಜಾರಿ ಮಾಡಲಾಗುವುದು ಹಾಗೂ ನಗರದ ಇತರೆಡೆಗೆ ಮತ್ತು ಬೇರೆ ಜಿಲ್ಲೆಗಳಲ್ಲಿ ಯೋಜನೆ ಅಳವಡಿಸಲಾಗುವುದು ಎಂದರು.</p>

<p>ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಮಾತನಾಡಿ, ಪ್ರತಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12ರ ವರೆಗೆ ಚರ್ಚ್‌ ಸ್ಟ್ರೀಟ್‌ನಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ನಾಲ್ಕು ತಿಂಗಳಲ್ಲಿ ಚಚ್‌ರ್‍ಸ್ಟ್ರೀಟ್‌ನ ವಾಯುಮಾಲಿನ್ಯ ಎಷ್ಟುತಡೆಯಲಾಗಿದೆ ಎಂಬುದನ್ನು ಪರೀಕ್ಷಿಸಲಾಗುವುದು. ಯೋಜನೆ ಯಶಸ್ವಿಯಾದರೆ ರಜಾದಿನದ ಜೊತೆಗೆ ಉಳಿದ ದಿನಗಳಲ್ಲಿ ಯೋಜನೆ ಜಾರಿ ಮಾಡಲಾಗುವುದು ಹಾಗೂ ನಗರದ ಇತರೆಡೆಗೆ ಮತ್ತು ಬೇರೆ ಜಿಲ್ಲೆಗಳಲ್ಲಿ ಯೋಜನೆ ಅಳವಡಿಸಲಾಗುವುದು ಎಂದರು.</p>

ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಮಾತನಾಡಿ, ಪ್ರತಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12ರ ವರೆಗೆ ಚರ್ಚ್‌ ಸ್ಟ್ರೀಟ್‌ನಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ನಾಲ್ಕು ತಿಂಗಳಲ್ಲಿ ಚಚ್‌ರ್‍ಸ್ಟ್ರೀಟ್‌ನ ವಾಯುಮಾಲಿನ್ಯ ಎಷ್ಟುತಡೆಯಲಾಗಿದೆ ಎಂಬುದನ್ನು ಪರೀಕ್ಷಿಸಲಾಗುವುದು. ಯೋಜನೆ ಯಶಸ್ವಿಯಾದರೆ ರಜಾದಿನದ ಜೊತೆಗೆ ಉಳಿದ ದಿನಗಳಲ್ಲಿ ಯೋಜನೆ ಜಾರಿ ಮಾಡಲಾಗುವುದು ಹಾಗೂ ನಗರದ ಇತರೆಡೆಗೆ ಮತ್ತು ಬೇರೆ ಜಿಲ್ಲೆಗಳಲ್ಲಿ ಯೋಜನೆ ಅಳವಡಿಸಲಾಗುವುದು ಎಂದರು.

78
<p>ಸಮಾರಂಭದ ಬಳಿಕ ಪ್ರದರ್ಶನದಲ್ಲಿದ್ದ ವಿವಿಧ ಕಂಪನಿಗಳ ವಿನೂತನ ವಿದ್ಯುತ್‌ ಚಾಲಿತ ದ್ವಿ ಮತ್ತು ತ್ರಿಚಕ್ರ ವಾಹನಗಳು, ಸೈಕಲ್‌ಗಳನ್ನು ಓಡಿಸಿ ನೆರೆದಿದ್ದ ಸಾರ್ವಜನಿಕರು, ಸ್ಥಳೀಯರು ವಾಯುಮಾಲಿನ್ಯ ಬಗ್ಗೆ ಜಾಗೃತಿ ಮೂಡಿಸಿದರು.</p>

<p>ಸಮಾರಂಭದ ಬಳಿಕ ಪ್ರದರ್ಶನದಲ್ಲಿದ್ದ ವಿವಿಧ ಕಂಪನಿಗಳ ವಿನೂತನ ವಿದ್ಯುತ್‌ ಚಾಲಿತ ದ್ವಿ ಮತ್ತು ತ್ರಿಚಕ್ರ ವಾಹನಗಳು, ಸೈಕಲ್‌ಗಳನ್ನು ಓಡಿಸಿ ನೆರೆದಿದ್ದ ಸಾರ್ವಜನಿಕರು, ಸ್ಥಳೀಯರು ವಾಯುಮಾಲಿನ್ಯ ಬಗ್ಗೆ ಜಾಗೃತಿ ಮೂಡಿಸಿದರು.</p>

ಸಮಾರಂಭದ ಬಳಿಕ ಪ್ರದರ್ಶನದಲ್ಲಿದ್ದ ವಿವಿಧ ಕಂಪನಿಗಳ ವಿನೂತನ ವಿದ್ಯುತ್‌ ಚಾಲಿತ ದ್ವಿ ಮತ್ತು ತ್ರಿಚಕ್ರ ವಾಹನಗಳು, ಸೈಕಲ್‌ಗಳನ್ನು ಓಡಿಸಿ ನೆರೆದಿದ್ದ ಸಾರ್ವಜನಿಕರು, ಸ್ಥಳೀಯರು ವಾಯುಮಾಲಿನ್ಯ ಬಗ್ಗೆ ಜಾಗೃತಿ ಮೂಡಿಸಿದರು.

88
<p>ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಅಪರ ಮುಖ್ಯ ಕಾರ್ಯದರ್ಶಿ ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು.</p>

<p>ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಅಪರ ಮುಖ್ಯ ಕಾರ್ಯದರ್ಶಿ ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು.</p>

ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಅಪರ ಮುಖ್ಯ ಕಾರ್ಯದರ್ಶಿ ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Recommended image1
ಕಾಂಗ್ರೆಸ್ ಸರ್ಕಾರಕ್ಕೆ ಕುರ್ಚಿರೋಗ ಬಂದಿದೆ: ಡಿ.ವಿ.ಸದಾನಂದ ಗೌಡ ವಾಗ್ದಾಳಿ
Recommended image2
ಇದೀಗ ಆಸ್ಟ್ರೇಲಿಯಾ, ಸೌದಿ, ಅಮೆರಿಕಕ್ಕೂ ನಂದಿನಿ ತುಪ್ಪ ರಫ್ತು: ಸಿದ್ದರಾಮಯ್ಯ ಹಸಿರು ನಿಶಾನೆ
Recommended image3
ಸಿಎಂ ಬದಲಾವಣೆಯ ಯಾವುದೇ ಸುಳಿವು ಸದ್ಯಕ್ಕಿಲ್ಲ: ಸಚಿವ ಆರ್.ಬಿ.ತಿಮ್ಮಾಪೂರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved