ಜನಸೇವೆಗೆ ಸಚಿವ ಸೋಮಣ್ಣ ಮೇಲ್ಪಂಕ್ತಿ: ಬಿಎಸ್ವೈ
ಬೆಂಗಳೂರು(ಡಿ.07): ಸಚಿವ ವಿ.ಸೋಮಣ್ಣ ಅವರು ಕ್ಷೇತ್ರದ ಜನರ ಸಮಸ್ಯೆ ಆಲಿಸಿ ಬಗೆಹರಿಸಲು ಕಚೇರಿ ತೆರೆದಿರುವಂತೆ ರಾಜ್ಯದ ಎಲ್ಲ ಶಾಸಕರು ಹಾಗೂ ಮಂತ್ರಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

<p>ಸೋಮಣ್ಣ ಅವರು ಪ್ರತಿನಿಧಿಸುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಸೋಮಣ್ಣ ಅವರು ಏನೇ ಮಾಡಿದರೂ ವಿಶೇಷವಾಗಿ ಮಾಡುತ್ತಾರೆ. ಕ್ಷೇತ್ರದ ಜನರು ಬಂದು ಸಮಸ್ಯೆ ಹೇಳಿಕೊಂಡು ಬಗೆಹರಿಸಿಕೊಳ್ಳಲಿ ಎಂಬ ಆಪೇಕ್ಷೆಯಿಂದ ಈ ಕಚೇರಿ ತೆರೆದಿದ್ದಾರೆ. ಈ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಶಾಸಕರು ಹಾಗೂ ಮಂತ್ರಿಗಳು ಇದೇ ಮಾದರಿಯ ಕೆಲಸ ಮಾಡಬೇಕು ಎಂದು ಕರೆ ನೀಡಿದರು.</p>
ಸೋಮಣ್ಣ ಅವರು ಪ್ರತಿನಿಧಿಸುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಸೋಮಣ್ಣ ಅವರು ಏನೇ ಮಾಡಿದರೂ ವಿಶೇಷವಾಗಿ ಮಾಡುತ್ತಾರೆ. ಕ್ಷೇತ್ರದ ಜನರು ಬಂದು ಸಮಸ್ಯೆ ಹೇಳಿಕೊಂಡು ಬಗೆಹರಿಸಿಕೊಳ್ಳಲಿ ಎಂಬ ಆಪೇಕ್ಷೆಯಿಂದ ಈ ಕಚೇರಿ ತೆರೆದಿದ್ದಾರೆ. ಈ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಶಾಸಕರು ಹಾಗೂ ಮಂತ್ರಿಗಳು ಇದೇ ಮಾದರಿಯ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
<p>ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ನಾನು ಬಹಳ ಕಾರ್ಯಾಲಯಗಳನ್ನು ಉದ್ಘಾಟಿಸಿದ್ದೇನೆ. ಕಾರ್ಯಕರ್ತರು ಕೆಲಸ ಮಾಡಲು ಕಾರ್ಯಾಲಯ ಬೇಕು. ಪ್ರಧಾನಿ ಮೋದಿ ಅವರ ಆಶಯದಂತೆ ಈ ಕಾರ್ಯಾಲಯ ನಿರ್ಮಾಣವಾಗಿದೆ. ಈ ಕಾರ್ಯಾಲಯ ದೇವಸ್ಥಾನ ಇದ್ದಂತೆ. ಕಾರ್ಯಕರ್ತರು ಕೆಲ ಹೊತ್ತು ಕುಳಿತು ಹೋದರೆ ಕೆಲಸ ಮಾಡಲು ಉತ್ಸಾಹ ಸಿಗುತ್ತದೆ. ಅಂತೆಯೇ ಪಕ್ಷದ ಕೆಲಸಗಳನ್ನು ಪ್ರಚಾರ ಮಾಡಲು ಪ್ರೇರಣೆ ದೊರೆಯುತ್ತದೆ ಎಂದರು.</p>
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ನಾನು ಬಹಳ ಕಾರ್ಯಾಲಯಗಳನ್ನು ಉದ್ಘಾಟಿಸಿದ್ದೇನೆ. ಕಾರ್ಯಕರ್ತರು ಕೆಲಸ ಮಾಡಲು ಕಾರ್ಯಾಲಯ ಬೇಕು. ಪ್ರಧಾನಿ ಮೋದಿ ಅವರ ಆಶಯದಂತೆ ಈ ಕಾರ್ಯಾಲಯ ನಿರ್ಮಾಣವಾಗಿದೆ. ಈ ಕಾರ್ಯಾಲಯ ದೇವಸ್ಥಾನ ಇದ್ದಂತೆ. ಕಾರ್ಯಕರ್ತರು ಕೆಲ ಹೊತ್ತು ಕುಳಿತು ಹೋದರೆ ಕೆಲಸ ಮಾಡಲು ಉತ್ಸಾಹ ಸಿಗುತ್ತದೆ. ಅಂತೆಯೇ ಪಕ್ಷದ ಕೆಲಸಗಳನ್ನು ಪ್ರಚಾರ ಮಾಡಲು ಪ್ರೇರಣೆ ದೊರೆಯುತ್ತದೆ ಎಂದರು.
<p>ಕಾರ್ಯಾಲಯಗಳು ಕಾರ್ಯಕರ್ತರ ಬೆಳವಣಿಗೆಗೆ ಸಹಕಾರಿಯಾಗಬೇಕು. ಇಲ್ಲಿ ಸಿಗುವ ಪುಸ್ತಕ ಓದಿದರೆ ಜ್ಞಾನ ಬೆಳೆಯುತ್ತದೆ. ಇದರ ಮೂಲಕ ಮತ್ತಷ್ಟು ವಿಚಾರಧಾರೆ ಬೆಳೆಸಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ಶಾಸಕರ ಕಚೇರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>
ಕಾರ್ಯಾಲಯಗಳು ಕಾರ್ಯಕರ್ತರ ಬೆಳವಣಿಗೆಗೆ ಸಹಕಾರಿಯಾಗಬೇಕು. ಇಲ್ಲಿ ಸಿಗುವ ಪುಸ್ತಕ ಓದಿದರೆ ಜ್ಞಾನ ಬೆಳೆಯುತ್ತದೆ. ಇದರ ಮೂಲಕ ಮತ್ತಷ್ಟು ವಿಚಾರಧಾರೆ ಬೆಳೆಸಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ಶಾಸಕರ ಕಚೇರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
<p>ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಒಬ್ಬ ಶಾಸಕ ಹೇಗಿರಬೇಕು ಅನ್ನುವುದಕ್ಕೆ ಸಚಿವ ಸೋಮಣ್ಣ ಮಾದರಿಯಾಗಿದ್ದಾರೆ ಎಂದರು.</p>
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಒಬ್ಬ ಶಾಸಕ ಹೇಗಿರಬೇಕು ಅನ್ನುವುದಕ್ಕೆ ಸಚಿವ ಸೋಮಣ್ಣ ಮಾದರಿಯಾಗಿದ್ದಾರೆ ಎಂದರು.
<p>ಇದೇ ವೇಳೆ ಸಚಿವ ವಿ.ಸೋಮಣ್ಣ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮೈಸೂರು ಪೇಟಾ ತೊಡಿಸಿ, ನೆನಪಿ ಕಾಣಿಕೆಯಾಗಿ ಬೆಳ್ಳಿ ದೀಪ ನೀಡಿ ಸನ್ಮಾನಿಸಿದರು.</p>
ಇದೇ ವೇಳೆ ಸಚಿವ ವಿ.ಸೋಮಣ್ಣ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮೈಸೂರು ಪೇಟಾ ತೊಡಿಸಿ, ನೆನಪಿ ಕಾಣಿಕೆಯಾಗಿ ಬೆಳ್ಳಿ ದೀಪ ನೀಡಿ ಸನ್ಮಾನಿಸಿದರು.
<p>ಇದೇ ಸಂದರ್ಭದಲ್ಲಿ ಸ್ಥಳೀಯ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಸಮಾಜ ಕಲ್ಯಾಣ ಬಿ.ಶ್ರೀರಾಮುಲು, ಸಂಸದರಾದ ತೇಜಸ್ವಿ ಸೂರ್ಯ, ಭಗವಂತ ಕೂಬಾ, ಮುಖಂಡರಾದ ಅರುಣ್ ಸೋಮಣ್ಣ, ವಿಶ್ವನಾಥಗೌಡ, ಉಮೇಶ್ ಶೆಟ್ಟಿಮತ್ತಿತರರು ಉಪಸ್ಥಿತರಿದ್ದರು.</p>
ಇದೇ ಸಂದರ್ಭದಲ್ಲಿ ಸ್ಥಳೀಯ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಸಮಾಜ ಕಲ್ಯಾಣ ಬಿ.ಶ್ರೀರಾಮುಲು, ಸಂಸದರಾದ ತೇಜಸ್ವಿ ಸೂರ್ಯ, ಭಗವಂತ ಕೂಬಾ, ಮುಖಂಡರಾದ ಅರುಣ್ ಸೋಮಣ್ಣ, ವಿಶ್ವನಾಥಗೌಡ, ಉಮೇಶ್ ಶೆಟ್ಟಿಮತ್ತಿತರರು ಉಪಸ್ಥಿತರಿದ್ದರು.