ಪೊಲೀಸ್ ವ್ಯವಸ್ಥೆಗೆ 100 ಕೋಟಿ ಅನುದಾನ: ಸಿಎಂ ಯಡಿಯೂರಪ್ಪ
First Published Nov 28, 2020, 7:36 AM IST
ಬೆಂಗಳೂರು(ನ.28): ರಾಜ್ಯ ಪೊಲೀಸ್ ವ್ಯವಸ್ಥೆಯ ಆಧುನೀಕರಣಕ್ಕೆ ಮುಂದಿನ ಆಯವಯ್ಯದಲ್ಲಿ .100 ಕೋಟಿ ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ನಗರದ ಮಡಿವಾಳದಲ್ಲಿ ಶುಕ್ರವಾರ ನಡೆದ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲದ ಕಚೇರಿ ಆವರಣದಲ್ಲಿ ನಿರ್ಮಿಸಿರುವ ‘ನ್ಯಾಯ ವಿಜ್ಞಾನ ಪ್ರಯೋಗಾಲಯದ ನಿರ್ದೇಶನಾಲಯ’ದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಪೊಲೀಸ್ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಡೀ ದೇಶದಲ್ಲಿ ನಮ್ಮ ರಾಜ್ಯದ ಪೊಲೀಸ್ ವ್ಯವಸ್ಥೆ ಸುಭದ್ರವಾಗಿದೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಹಾಗೂ ವಾಹನ ಖರೀದಿ ಸೇರಿದಂತೆ ಪೊಲೀಸ್ ಬಲವರ್ಧನೆಗೆ ಸರ್ಕಾರ ಮುಕ್ತವಾಗಿ ಆರ್ಥಿಕ ನೆರವು ಒದಗಿಸಿದೆ. ಮುಂದಿನ ಬಜೆಟ್ನಲ್ಲಿ ಸಹ ಗೃಹ ಸಚಿವರ ಪ್ರಸ್ತಾಪಿಸಿರುವ ಆಧುನೀಕರಣಕ್ಕೆ 100 ಕೋಟಿ ಅನುದಾನ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?