MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Coastal Karnataka Rain Crisis : ಮಕ್ಕಳಂತೆ ಬೆಳೆಸಿದ 800 ಅಡಿಕೆ ಮರಗಳನ್ನು ಜೆಸಿಬಿಯಿಂದ ನೆಲಸಮ ಮಾಡಿಸಿದ ರೈತ!

Coastal Karnataka Rain Crisis : ಮಕ್ಕಳಂತೆ ಬೆಳೆಸಿದ 800 ಅಡಿಕೆ ಮರಗಳನ್ನು ಜೆಸಿಬಿಯಿಂದ ನೆಲಸಮ ಮಾಡಿಸಿದ ರೈತ!

ಕರಾವಳಿಯಲ್ಲಿ ಮಳೆ ಕೊರತೆ ಮತ್ತು ನೀರಿನ ತೀವ್ರ ಅಭಾವದಿಂದ ಹತಾಶರಾದ ರೈತರೊಬ್ಬರು, 4 ವರ್ಷಗಳಿಂದ ಬೆಳೆಸಿದ್ದ 2 ಎಕರೆ ಅಡಿಕೆ ತೋಟವನ್ನು ಜೆಸಿಬಿಯಿಂದ ನೆಲಸಮ ಮಾಡಿದ್ದಾರೆ. ಸುಮಾರು 10 ಲಕ್ಷ ಸಾಲ ಮಾಡಿ 6 ಬೋರ್‌ವೆಲ್‌ ಕೊರೆಸಿದರೂ ನೀರು ಸಿಗದ ಕಾರಣ, ಬೆಳೆ ಒಣಗುವುದು ನೋಡಲಾರದೇ ನೆಲಸಮ ಮಾಡಿಸಿದ್ದಾರೆ.

2 Min read
Author : Sathish Kumar KH
Published : Jun 21 2026, 04:41 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಉತ್ತರ ಕನ್ನಡ (ಜೂ.21): ವರ್ಷಾನುಗಟ್ಟಲೆ ಬೆವರು ಸುರಿಸಿ, ಸಾಲ ಮಾಡಿ ಬೆಳೆಸಿದ ಬೆಳೆ ಕಣ್ಣೆದುರೇ ಒಣಗಿ ಹೋಗುತ್ತಿದ್ದರೆ ಆ ರೈತನ ನೋವು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಇಂತಹದ್ದೇ ಒಂದು ಕರುಣಾಜನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದನಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆ ಕೊರತೆ ಮತ್ತು ನೀರಿನ ಅಭಾವದಿಂದ ಕಂಗಾಲಾದ ಯುವ ರೈತರೊಬ್ಬರು ತಾವು ನಾಲ್ಕು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ತೋಟವನ್ನು ಜೆಸಿಬಿ ಬಳಸಿ ಕಿತ್ತುಹಾಕಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಘಟನೆಯ ವಿವರ:

ದನಗನಹಳ್ಳಿಯ ನಿವಾಸಿ ರಾಕೇಶ್ ರಾಮಚಂದ್ರ ಅಗಸರ್ (22) ಎಂಬ ಯುವ ರೈತನೇ ಈ ಕಠಿಣ ನಿರ್ಧಾರ ತೆಗೆದುಕೊಂಡ ದುರ್ದೈವಿ. ರಾಕೇಶ್ ಕಳೆದ ನಾಲ್ಕು ವರ್ಷಗಳಿಂದ ತನ್ನ ಎರಡು ಎಕರೆ ಜಮೀನಿನಲ್ಲಿ ಅತೀ ಆಸೆಯಿಂದ 800 ಅಡಿಕೆ ಸಸಿಗಳನ್ನು ನಾಟಿ ಮಾಡಿದ್ದರು. ಮುಂದಿನ ದಿನಗಳಲ್ಲಿ ಉತ್ತಮ ಫಸಲು ಬಂದು ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು.

Related Articles

Related image1
ತುಮಕೂರಿನಲ್ಲಿ 200 ಅಡಿಕೆ ಗಿಡಗಳ ಕಡಿದ ಕಿಡಿಗೇಡಿಗಳು, ಮತ್ತೊಂದೆಡೆ ಕೆರೆ ಒಡೆದು ನೀರು ಪೋಲು
Related image2
ತೀರ್ಥಹಳ್ಳಿಯಲ್ಲಿ ಅಡಿಕೆ ಕಳ್ಳರು ಅರೆಸ್ಟ್, ಹಾವೇರಿಯ ಇಬ್ಬರಿಂದ 4.50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ!
35
Image Credit : Asianet News

10 ಲಕ್ಷ ಸಾಲ, 6 ಬೋರ್‌ವೆಲ್ ಆದರೂ ಸಿಗದ ನೀರು:

ತೋಟವನ್ನು ಉಳಿಸಿಕೊಳ್ಳಲು ರಾಕೇಶ್ ಪಡಬಾರದ ಕಷ್ಟಪಟ್ಟಿದ್ದಾರೆ. ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಹಣ ವ್ಯಯಿಸಿ ಆರು ಬೋರ್‌ವೆಲ್‌ಗಳನ್ನು ಕೊರೆಸಿದರೂ ಹನಿ ನೀರು ಸಿಗಲಿಲ್ಲ. ಅತ್ತ ಮಳೆಯೂ ಇಲ್ಲ, ಇತ್ತ ಬೋರ್‌ವೆಲ್‌ನಲ್ಲೂ ನೀರಿಲ್ಲದೆ ತೋಟ ಸಂಪೂರ್ಣ ಒಣಗಲು ಆರಂಭಿಸಿತ್ತು. ಮೊದಲೇ ಬ್ಯಾಂಕ್ ಹಾಗೂ ಹೊರಗಡೆ ಸಾಲ ಮಾಡಿಕೊಂಡಿದ್ದ ರೈತ ನೀರಿನ ಸಮಸ್ಯೆಯಿಂದ ಹತಾಶರಾಗಿದ್ದರು. ಕಣ್ಣೆದುರೇ ಒಣಗುತ್ತಿದ್ದ ಗಿಡಗಳನ್ನು ನೋಡಲಾಗದೆ, ಅಂತಿಮವಾಗಿ ಜೆಸಿಬಿ ತರಿಸಿ ಇಡೀ ತೋಟವನ್ನು ನೆಲಸಮ ಮಾಡಿದ್ದಾರೆ.

45
Image Credit : Asianet News

ಜಿಲ್ಲೆಯಲ್ಲಿ ಮಳೆ ಕೊರತೆ ಆತಂಕ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮಳೆ ತೀವ್ರ ಕೈಕೊಟ್ಟಿದೆ. ಜೂನ್ ಮೊದಲ ವಾರದಲ್ಲಿ ಶೇ. 32 ರಷ್ಟು ಮಳೆ ಕೊರತೆಯಾಗಿದ್ದರೆ, ಕಳೆದ ವಾರದಲ್ಲಿ ಶೇ. 24 ರಷ್ಟು ಮಳೆಯ ಅಭಾವ ಕಂಡುಬಂದಿದೆ. ಇದರಿಂದ ಕೇವಲ ಅಡಿಕೆ ಮಾತ್ರವಲ್ಲದೆ, ಭತ್ತ ಹಾಗೂ ಇತರ ಬೆಳೆಗಳಿಗೂ ತೀವ್ರ ಸಂಕಷ್ಟ ಎದುರಾಗಿದೆ.

55
Image Credit : Asianet News

ಬಿಸಿಲಿನ ತಾಪಕ್ಕೆ ತೋಟಗಳು ಸುಟ್ಟು ಕರಕಲಾಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ತನಗಾದ ನಷ್ಟಕ್ಕೆ ಪರಿಹಾರ ನೀಡಬೇಕು ಮತ್ತು ಜಿಲ್ಲೆಯ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ರಾಕೇಶ್ ಮನವಿ ಮಾಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಉತ್ತರ ಕನ್ನಡ
ಕರ್ನಾಟಕ ಮಳೆ
ಮಳೆ

Latest Videos
Recommended Stories
Recommended image1
ದಾವಣಗೆರೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ 19ರ ಹರೆಯದ ನವ ವಿವಾಹಿತೆ ಮೃತದೇಹ ಪತ್ತೆ
Recommended image2
ಶೀಘ್ರದಲ್ಲಿಯೇ ವಿಜಯಪುರ–ತಿರುಪತಿ ನಡುವೆ ನೇರ ರೈಲು ಸೇವೆ : ಟ್ರೈನ್ ರೂಟ್ ಯಾವುದು?
Recommended image3
Bengaluru: ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್
Related Stories
Recommended image1
ತುಮಕೂರಿನಲ್ಲಿ 200 ಅಡಿಕೆ ಗಿಡಗಳ ಕಡಿದ ಕಿಡಿಗೇಡಿಗಳು, ಮತ್ತೊಂದೆಡೆ ಕೆರೆ ಒಡೆದು ನೀರು ಪೋಲು
Recommended image2
ತೀರ್ಥಹಳ್ಳಿಯಲ್ಲಿ ಅಡಿಕೆ ಕಳ್ಳರು ಅರೆಸ್ಟ್, ಹಾವೇರಿಯ ಇಬ್ಬರಿಂದ 4.50 ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved