ಎರಡನೇ ಹಂತದ ಲಾಕ್ಡೌನ್: KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ
ಬೆಂಗಳೂರು(ಏ.15): ಇಂದಿನಿಂದ(ಏ.15) ರಿಂದ ಮೇ.3 ರ ವರೆಗೆ ಎರಡನೇ ಹಂತದ ಲಾಕ್ಡೌನ್ ಘೋಷಣೆಯಾಗಿದೆ. ಹೀಗಾಗಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ. ರೈತರ ಬೆಳೆ ನಷ್ಟ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಕೈ ನಾಯಕರು ನಿರ್ಧರಿಸಿದ್ದಾರೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಭಾಗವಹಿಸಿದ್ದರು.
ದೇಶಾದ್ಯಂತ ಎರಡನೇ ಹಂತ ಲಾಕ್ಡೌನ್ ಜಾರಿ
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆ
ರೈತರ ಬೆಳೆ ನಷ್ಟ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಕಾರ್ಯಪಡೆ ನಿರ್ಧಾರ
ಬಡವರಿಗೆ ಆಹಾರ ಪೂರೈಕೆಗೆ ಕೈ ಕಾರ್ಯಕರ್ತರು ಮುಂದಾಗುವಂತೆ ಸೂಚನೆ ನೀಡಲು ಸಭೆಯಲ್ಲಿ ನಿರ್ಧಾರ
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಭಾಗಿ