MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಮೊಸಳೆಗೆ ಊಟ ಹಾಕಬೇಡಿ ಎಂದಿದ್ದ ಎಸಿಎಫ್ ಮದನ್ ನಾಯ್ಕ ಕೊಂದ ಪ್ರವಾಸಿಗರು, 14 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ಪ್ರಕಟ

ಮೊಸಳೆಗೆ ಊಟ ಹಾಕಬೇಡಿ ಎಂದಿದ್ದ ಎಸಿಎಫ್ ಮದನ್ ನಾಯ್ಕ ಕೊಂದ ಪ್ರವಾಸಿಗರು, 14 ವರ್ಷಗಳ ಬಳಿಕ ಆರೋಪಿಗಳಿಗೆ ಶಿಕ್ಷೆ ಪ್ರಕಟ

ದಾಂಡೇಲಿ ಎಸಿಎಫ್ ಮದನ್ ನಾಯ್ಕ ಅವರ ಸಾವಿಗೆ ಸಂಬಂಧಿಸಿದ 14 ವರ್ಷಗಳ ಹಳೆಯ ಪ್ರಕರಣದಲ್ಲಿ ಯಲ್ಲಾಪುರ ಸಂಚಾರಿ ನ್ಯಾಯಾಲಯವು ಅಂತಿಮ ತೀರ್ಪು ನೀಡಿದೆ. 12 ಆರೋಪಿಗಳ ಪೈಕಿ 8 ಮಂದಿಯನ್ನು ದೋಷಿಗಳೆಂದು ಘೋಷಿಸಿದ್ದು, ಮುಖ್ಯ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.  

2 Min read
Author : Gowthami K
Published : Jan 09 2026, 05:08 PM IST
Share this Photo Gallery
  • FB
  • TW
  • Linkdin
  • Whatsapp
15
ಯಲ್ಲಾಪುರ ಸಂಚಾರಿ ನ್ಯಾಯಾಲಯದಿಂದ ಶಿಕ್ಷೆ ಘೋಷಣೆ
Image Credit : Asianet News

ಯಲ್ಲಾಪುರ ಸಂಚಾರಿ ನ್ಯಾಯಾಲಯದಿಂದ ಶಿಕ್ಷೆ ಘೋಷಣೆ

ಕಾರವಾರ / ಉತ್ತರ ಕನ್ನಡ: ಬರೋಬ್ಬರಿ 14 ವರ್ಷಗಳ ಕಾನೂನು ಹೋರಾಟದ ಬಳಿಕ ದಾಂಡೇಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮದನ್ ನಾಯ್ಕ ಅವರ ಹತ್ಯೆ ಪ್ರಕರಣ ಸುಖಾಂತ್ಯ ಕಂಡಿದೆ. ದೀರ್ಘ ಕಾಲದ ನ್ಯಾಯಾಂಗ ಪ್ರಕ್ರಿಯೆಯ ಬಳಿಕ ಯಲ್ಲಾಪುರ ಸಂಚಾರಿ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಪ್ರಕರಣದ ಒಟ್ಟು 12 ಆರೋಪಿಗಳ ಪೈಕಿ 8 ಜನರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

25
ಮೂರನೇ ಆರೋಪಿಗೆ 10 ವರ್ಷ ಜೈಲು ಶಿಕ್ಷೆ
Image Credit : Asianet News

ಮೂರನೇ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಪ್ರಕರಣದ ಮೂರನೇ ಆರೋಪಿ ಪ್ರಶಾಂತ್ ರಾಮು ಲಂಬಾಣಿಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹11,000 ದಂಡ ವಿಧಿಸಲಾಗಿದೆ. ಜೊತೆಗೆ, ಮೃತ ಮದನ್ ನಾಯ್ಕ ಅವರ ಅವಲಂಭಿತರಿಗೆ ₹50,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಮೂರನೇ ಆರೋಪಿ ಹೊರತುಪಡಿಸಿ, ಆರೋಪಿತರಾದ 1 ರಿಂದ 4, 6, 8 ಮತ್ತು 10ನೇ ಆರೋಪಿಗಳಿಗೆ ತಲಾ ₹1,000 ದಂಡ ವಿಧಿಸಲಾಗಿದೆ. ಈ ಮೂಲಕ, ಪ್ರಕರಣದಲ್ಲಿ ಮಹಿಳೆಯರು ಸೇರಿದಂತೆ ಒಟ್ಟು ಎಂಟು ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ.

Related Articles

Related image1
ಚಿಟ್ಸ್ ಫಂಡ್ ಹೆಸರಲ್ಲಿ ಹತ್ತು ಕೋಟಿ ವಂಚಿಸಿದವ ಕೋರ್ಟ್‌ಗೆ ಬಂದಾಗ ಹಿಡಿದ ಗ್ರಾಹಕರು! ರಸ್ತೆಯಲ್ಲಿ ಮೆರವಣಿಗೆ ಶಿಕ್ಷೆ!
Related image2
ಆರೋಪಿಯ ಒಳಚಡ್ಡಿಯ ಬದಲಾವಣೆ: ಕೇರಳ ಶಾಸಕನಿಗೆ 3 ವರ್ಷ ಜೈಲು ಶಿಕ್ಷೆ
35
ಕೊಲೆ ಸಾಬೀತು ಮಾಡಲು ವಿಫಲ, ಆದರೆ ಹಲ್ಲೆ ಸಾಬೀತು
Image Credit : Asianet News

ಕೊಲೆ ಸಾಬೀತು ಮಾಡಲು ವಿಫಲ, ಆದರೆ ಹಲ್ಲೆ ಸಾಬೀತು

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಆರೋಪಿಗಳು ಮದನ್ ನಾಯ್ಕ ಅವರ ಮೇಲೆ ಹಲ್ಲೆ ನಡೆಸಿರುವುದು ಪ್ರತ್ಯಕ್ಷದರ್ಶಿ ಸಾಕ್ಷಿಗಳಿಂದ ಸ್ಪಷ್ಟವಾಗಿ ಸಾಬೀತಾಗಿದೆ. ಆದರೆ, ಕೊಲೆ ಎಂಬುದನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ಅಭಿಯೋಗ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

2012ರ ಮೇ 6ರಂದು ನಡೆದಿದ್ದ ದುರ್ಘಟನೆ

ಈ ಪ್ರಕರಣವು 2012ರ ಮೇ 6ರಂದು ದಾಂಡೇಲಿಯ ಖಾಸಗಿ ಮೊಸಳೆ ಉದ್ಯಾನವನ (ಮೊಸಳೆ ಪಾರ್ಕ್) ನಲ್ಲಿ ನಡೆದ ಘಟನೆಯಾಗಿದ್ದು, ಆ ಸಮಯದಲ್ಲಿ ಮದನ್ ನಾಯ್ಕ ಅವರು ದಾಂಡೇಲಿ ಅರಣ್ಯ ಇಲಾಖೆಯ ಎಸಿಎಫ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದರು. ಘಟನೆ ದಿನ, ಮದ್ಯಪಾನದಲ್ಲಿದ್ದ ಪ್ರವಾಸಿಗರ ಗುಂಪೊಂದು ಮೊಸಳೆಗಳಿಗೆ ಮಾಂಸ ಎಸೆಯುತ್ತಿದ್ದುದನ್ನು ಮದನ್ ನಾಯ್ಕ ತಡೆಯಲು ಯತ್ನಿಸಿದ್ದರು. ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಈ ಕೃತ್ಯ ನಡೆಯುತ್ತಿದ್ದುದನ್ನು ಪ್ರಶ್ನಿಸಿದ್ದ ಮದನ್ ನಾಯ್ಕ ಅವರೊಂದಿಗೆ ಪ್ರವಾಸಿಗರ ಗುಂಪು ವಾಗ್ವಾದ ನಡೆಸಿತ್ತು.

45
ಪ್ರವಾಸಿಗರು ಹಾಗೂ ಮಹಿಳೆಯರಿಂದ ಮಾರಣಾಂತಿಕ ಹಲ್ಲೆ
Image Credit : Asianet News

ಪ್ರವಾಸಿಗರು ಹಾಗೂ ಮಹಿಳೆಯರಿಂದ ಮಾರಣಾಂತಿಕ ಹಲ್ಲೆ

ವಾಗ್ವಾದ ತೀವ್ರಗೊಂಡು, ಪ್ರವಾಸಿಗರು ಮತ್ತು ಅವರೊಂದಿಗೆ ಇದ್ದ ಮಹಿಳೆಯರೂ ಸೇರಿ ಮದನ್ ನಾಯ್ಕ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ಮದನ್ ನಾಯ್ಕ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 8ರಂದು ಮದನ್ ನಾಯ್ಕ ಅವರು ಮೃತಪಟ್ಟಿದ್ದರು.

ಸಿಐಡಿಗೆ ತನಿಖೆ ವಹಿಸಿದ್ದ ಸರ್ಕಾರ

ಈ ಘಟನೆಯ ಬಳಿಕ ಸ್ಥಳೀಯ ಪೊಲೀಸರ ನಿಷ್ಕ್ರಿಯತೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಅಂದಿನ ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಮೃತ ಎಸಿಎಫ್ ಮದನ್ ನಾಯ್ಕ ಅವರ ಪತ್ನಿ ಸುಮತಿ ನಾಯ್ಕ ಅವರು ನೀಡಿದ ದೂರಿನ ಆಧಾರದಲ್ಲಿ ಸಿಐಡಿ ತನಿಖೆ ಆರಂಭಿಸಿತು. ತನಿಖೆಯ ವೇಳೆ, ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಮೊಸಳೆ ಪಾರ್ಕ್ ನಡೆಸುತ್ತಿದ್ದ ಮಾಲೀಕ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.

55
ಕೇಸ್ ಗೆದ್ದ ಪಬ್ಲಿಕ್ ಪ್ರಾಸಿಕ್ಯೂಟಗೆ ಸನ್ಮಾನ
Image Credit : Asianet News

ಕೇಸ್ ಗೆದ್ದ ಪಬ್ಲಿಕ್ ಪ್ರಾಸಿಕ್ಯೂಟಗೆ ಸನ್ಮಾನ

ಈ ಪ್ರಕರಣದ ತೀರ್ಪನ್ನು ಶಿರಸಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಕಿಣಿ ಅವರು ಪ್ರಕಟಿಸಿದರು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಮಾಳಗೇಕರ್ ಅವರು ವಾದ ಮಂಡಿಸಿದ್ದರು. ಪ್ರಕರಣದ ಶಿಕ್ಷೆ ಘೋಷಣೆಯ ಬಳಿಕ, ಅರಣ್ಯ ಇಲಾಖೆ ಹಾಗೂ ವಕೀಲರ ಸಂಘದಿಂದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಮಾಳಗೇಕರ್ ಅವರಿಗೆ ಅಭಿನಂದನೆ ಹಾಗೂ ಸನ್ಮಾನ ಸಲ್ಲಿಸಲಾಯಿತು. ಅರಣ್ಯಾಧಿಕಾರಿಗಳ ಕರ್ತವ್ಯ ನಿರ್ವಹಣೆಯ ವೇಳೆ ನಡೆದ ದೌರ್ಜನ್ಯಕ್ಕೆ ನ್ಯಾಯಾಂಗ ಸ್ಪಂದನೆ ದೊರೆತಿದೆ ಎಂದು ಅರಣ್ಯ ಇಲಾಖೆ ಸಂತಸ ವ್ಯಕ್ತಪಡಿಸಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಉತ್ತರ ಕನ್ನಡ
ಸುದ್ದಿ
ಕ್ರೈಮ್ ನ್ಯೂಸ್
ನ್ಯಾಯಾಲಯ
ಕರ್ನಾಟಕ ಸುದ್ದಿ
ಅರಣ್ಯ

Latest Videos
Recommended Stories
Recommended image1
ಬೆಂಗಳೂರು ಶಾಕಿಂಗ್: ಯುವತಿಗೆ ಲೈಂಗಿಕ ಕಿರುಕುಳ ನೀಡಿ ಮಾನಹಾನಿಗೆ ಯತ್ನಿಸಿದ ಡೆಲಿವರಿ ಬಾಯ್‌!
Recommended image2
ಬೆಂಗಳೂರು ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮ*ಹತ್ಯೆ; ಪ್ರಿನ್ಸಿಪಾಲ್, ಉಪನ್ಯಾಸಕರ ಕಿರುಕುಳವೇ ಕಾರಣವೆಂದ ತಾಯಿ!
Recommended image3
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳ 369 ವಾರ್ಡ್‌ಗಳಿಗೆ ಮೀಸಲಾತಿ ಪ್ರಕಟಿಸಿದ ರಾಜ್ಯ ಸರ್ಕಾರ
Related Stories
Recommended image1
ಚಿಟ್ಸ್ ಫಂಡ್ ಹೆಸರಲ್ಲಿ ಹತ್ತು ಕೋಟಿ ವಂಚಿಸಿದವ ಕೋರ್ಟ್‌ಗೆ ಬಂದಾಗ ಹಿಡಿದ ಗ್ರಾಹಕರು! ರಸ್ತೆಯಲ್ಲಿ ಮೆರವಣಿಗೆ ಶಿಕ್ಷೆ!
Recommended image2
ಆರೋಪಿಯ ಒಳಚಡ್ಡಿಯ ಬದಲಾವಣೆ: ಕೇರಳ ಶಾಸಕನಿಗೆ 3 ವರ್ಷ ಜೈಲು ಶಿಕ್ಷೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved