MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ದಾವಣಗೆರೆ ಪೊಲೀಸರ ಮೇಲೆ ಕೈ ಹಾಕಿದ ಪೈಲ್ವಾನ್ ಪುತ್ರರು! ಮಹಿಳಾ ಆಯೋಗ ಮೌನಕ್ಕೆ ವ್ಯಾಪಕ ಆಕ್ರೋಶ

ದಾವಣಗೆರೆ ಪೊಲೀಸರ ಮೇಲೆ ಕೈ ಹಾಕಿದ ಪೈಲ್ವಾನ್ ಪುತ್ರರು! ಮಹಿಳಾ ಆಯೋಗ ಮೌನಕ್ಕೆ ವ್ಯಾಪಕ ಆಕ್ರೋಶ

ದಾವಣಗೆರೆಯಲ್ಲಿ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರರು ಮಹಿಳಾ ಸಿಪಿಐ ಸೇರಿದಂತೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಘಟನೆ ಬಳಿಕ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಈ ಪ್ರಕರಣವು ರಾಜಕೀಯ ತಿರುವು ಪಡೆದುಕೊಂಡಿದೆ.

2 Min read
Author : Gowthami K
Published : Feb 02 2026, 05:31 PM IST
Share this Photo Gallery
  • FB
  • TW
  • Linkdin
  • Whatsapp
16
ಆರೋಪಿಗಳ ಬಂಧನಕ್ಕೆ ವಿಶೇಷ ತಂಡ
Image Credit : Asianet News

ಆರೋಪಿಗಳ ಬಂಧನಕ್ಕೆ ವಿಶೇಷ ತಂಡ

ದಾವಣಗೆರೆಯಲ್ಲಿ ಮಹಿಳಾ ಸಿಪಿಐ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯ ಮೇಲೆ ನಡೆದ ಹಲ್ಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ನ ದಾವಣಗೆರೆ ದಕ್ಷಿಣ ಬ್ಲಾಕ್ ಅಧ್ಯಕ್ಷ ಆಯೂಬ್ ಪೈಲ್ವಾನ್ ಪುತ್ರರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದು, ಘಟನೆ ಬಳಿಕ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

26
ಆಯೂಬ್ ಪೈಲ್ವಾನ್ ವಿಚಾರಣೆ, ನೋಟಿಸ್ ನೀಡಿ ಬಿಡುಗಡೆ
Image Credit : Asianet News

ಆಯೂಬ್ ಪೈಲ್ವಾನ್ ವಿಚಾರಣೆ, ನೋಟಿಸ್ ನೀಡಿ ಬಿಡುಗಡೆ

ಘಟನೆಯ ಸಂಬಂಧ ಆಯೂಬ್ ಪೈಲ್ವಾನ್ ಅವರು ತಮ್ಮ ಮಕ್ಕಳಿಗೆ ಪರಾರಿಯಾಗಲು ಸಹಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪೊಲೀಸರು ಶನಿವಾರ ಬೆಳಗ್ಗೆ ಅವರನ್ನು ವಶಕ್ಕೆ ಪಡೆದು ಬಡಾವಣೆ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಬಿಎನ್‌ಎಸ್ ಸೆಕ್ಷನ್ 35ರ ಅಡಿಯಲ್ಲಿ ನೋಟಿಸ್ ನೀಡಿದ ಪೊಲೀಸರು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರನ್ನು ಬಿಡುಗಡೆ ಮಾಡಿದ್ದಾರೆ.

Related Articles

Related image1
ದಾವಣಗೆರೆ: ಬಂಧಿಸಲು ಹೋದ ಲೇಡಿ ಸಿಪಿಐ, ಸಿಬ್ಬಂದಿ ಮೇಲೆಯೇ ಹಲ್ಲೆ!
Related image2
ದಾವಣಗೆರೆ ಒಂದು ಮದುವೆ-ಎರಡು ಹೆಣ: ಪತಿ ಹಾಗೂ ಮಾವನ ಸಾವಿಗೆ ಕಾರಣರಾದ ಪತ್ನಿ, ಪ್ರಿಯಕರ ಅರೆಸ್ಟ್!
36
ಪ್ರಕರಣದ ಹಿನ್ನೆಲೆ
Image Credit : Asianet News

ಪ್ರಕರಣದ ಹಿನ್ನೆಲೆ

ಜನವರಿ 31ರಂದು ದಾವಣಗೆರೆ ಜಿಲ್ಲಾಸ್ಪತ್ರೆ ಸಮೀಪ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಆಯೂಬ್ ಪೈಲ್ವಾನ್ ಪುತ್ರರಾದ ಹುಸೇನ್, ಹಸೇನ್ ಹಾಗೂ ಹಮ್ಜಾ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಲು ತೆರಳಿದ ವೇಳೆ ಘಟನೆ ತೀವ್ರ ತಿರುವು ಪಡೆದುಕೊಂಡಿದೆ. ಬಂಧನಕ್ಕೆ ಬಂದ ಪೊಲೀಸರ ವಿರುದ್ಧ ಆಯೂಬ್ ಪೈಲ್ವಾನ್ ಪುತ್ರರು ಉದ್ಧಟತನ ಪ್ರದರ್ಶಿಸಿದ್ದು, ಬಡಾವಣೆ ಠಾಣೆಯ ಸಿಪಿಐ ಗಾಯತ್ರಿ, ಪೇದೆ ಕೆಂಚಪ್ಪ ಹಾಗೂ ಪೇದೆ ಹರೀಶ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪೇದೆ ಹರೀಶ್ ಅವರ ಕೊರಳಪಟ್ಟಿ ಹಿಡಿದು ಹಮ್ಜಾ ಹಲ್ಲೆ ನಡೆಸಿದ್ದು, ಅವರನ್ನು ಬಿಡಿಸಲು ಮುಂದಾದ ಸಿಪಿಐ ಗಾಯತ್ರಿ ಅವರೊಂದಿಗೆ ಅನುಚಿತವಾಗಿ ವರ್ತಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಮನೆಯ ಹೊರಗಡೆಯಲ್ಲಿಯೂ ಮಹಿಳಾ ಅಧಿಕಾರಿಯ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಆಯೂಬ್ ಪೈಲ್ವಾನ್ ಅವರು ತಮ್ಮ ಮಕ್ಕಳಿಗೆ ಬುದ್ಧಿವಾದ ಹೇಳದೇ ಪೊಲೀಸರ ವಿರುದ್ಧವೇ ಹರಿಹಾಯ್ದಿದ್ದಾರೆ ಎಂಬ ಆರೋಪವೂ ದಾಖಲಾಗಿದೆ.

46
ಒಬ್ಬ ಆರೋಪಿ ಬಂಧನ, ಇಬ್ಬರಿಗಾಗಿ ಶೋಧ
Image Credit : Asianet News

ಒಬ್ಬ ಆರೋಪಿ ಬಂಧನ, ಇಬ್ಬರಿಗಾಗಿ ಶೋಧ

ಪ್ರಕರಣದ ಸಂಬಂಧ ಆರೋಪಿ ಹಸೇನ್‌ನನ್ನು ಪೊಲೀಸರು ಬಂಧಿಸಿದ್ದು, ಹುಸೇನ್ ಹಾಗೂ ಹಮ್ಜಾ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ದಾವಣಗೆರೆ ಎಸ್‌ಪಿ ಉಮಾಪ್ರಶಾಂತ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌ಪಿ, ಯಾರೇ ಆರೋಪಿಯಾಗಿದ್ದರೂ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, “ಆರೋಪಿಗಳು ಯಾರೇ ಆಗಿರಲಿ, ತಪ್ಪು ಮಾಡಿದರೆ ಕಾನೂನಿನ ಪ್ರಕಾರ ಜೈಲಿಗೆ ಹೋಗಲೇಬೇಕು” ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

56
ಮಹಿಳಾ ಆಯೋಗದ ಮೌನಕ್ಕೆ ಬಿಜೆಪಿ ಆಕ್ರೋಶ
Image Credit : Asianet News

ಮಹಿಳಾ ಆಯೋಗದ ಮೌನಕ್ಕೆ ಬಿಜೆಪಿ ಆಕ್ರೋಶ

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ನಡೆದ ಹಲ್ಲೆ ಪ್ರಕರಣದ ಕುರಿತು ರಾಜ್ಯ ಮಹಿಳಾ ಆಯೋಗ ಸ್ಪಂದಿಸದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜಯಮ್ಮ ಹೆಚ್.ಸಿ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, “ಈ ಘಟನೆ ಇಡೀ ಹೆಣ್ಣು ಕುಲಕ್ಕೆ ಮಾಡಿದ ಅಪಮಾನ” ಎಂದು ಕಿಡಿಕಾರಿದರು. “ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಫೇಸ್‌ಬುಕ್ ಹಾಗೂ ಟ್ವಿಟರ್‌ಗಳಿಗೆ ಸೀಮಿತವಾಗಿದ್ದಾರೆ. ಮಹಿಳಾ ಅಧಿಕಾರಿಗೆ ತೊಂದರೆ ಆದಾಗ ಒಂದು ಹೇಳಿಕೆಯನ್ನೂ ನೀಡಿಲ್ಲ. ತಕ್ಷಣವೇ ಆರೋಪಿಗಳ ಬಂಧನಕ್ಕೆ ಮಹಿಳಾ ಆಯೋಗವು ಎಸ್‌ಪಿಗೆ ಸೂಚನೆ ನೀಡಬೇಕು” ಎಂದು ಆಗ್ರಹಿಸಿದರು.

66
ಗಡಿಪಾರಿಗೆ ಒತ್ತಾಯ
Image Credit : Asianet News

ಗಡಿಪಾರಿಗೆ ಒತ್ತಾಯ

ಆರೋಪಿಗಳನ್ನು ತಕ್ಷಣ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ ಅವರು, “ಸಿಪಿಐ ಗಾಯತ್ರಿ ಅವರ ಜೊತೆಗೆ ಇಡೀ ರಾಜ್ಯದ ಹೆಣ್ಣುಮಕ್ಕಳು ನಿಂತಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಲಿದೆ” ಎಂದು ಎಚ್ಚರಿಸಿದರು. ಸಚಿವರ ಬೆಂಬಲವಿದೆ ಎಂಬ ಕಾರಣಕ್ಕೆ ಆರೋಪಿಗಳು ಹಾರಾಡುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದ ಜಯಮ್ಮ, “ಸಚಿವರು ಚಿವಟೋದು ತೂಗೋದು ಎರಡನ್ನೂ ಮಾಡಬಾರದು. ಕಾನೂನು ಎಲ್ಲರಿಗೂ ಒಂದೇ” ಎಂದು ಕಠಿಣ ಸಂದೇಶ ನೀಡಿದರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕ್ರೈಮ್ ನ್ಯೂಸ್
ದಾವಣಗೆರೆ
ಪೊಲೀಸ್
ಸುದ್ದಿ
ಮಹಿಳೆಯರು

Latest Videos
Recommended Stories
Recommended image1
ಬೆಂಗಳೂರು ಟ್ರೇಡ್ ಲೈಸೆನ್ಸ್ ನವೀಕರಣಕ್ಕೆ ಹೊಸ ಸುತ್ತೋಲೆ ಹೊರಡಿಸಿದ ಜಿಬಿಎ: ಶೇ.100 ದಂಡದ ಎಚ್ಚರಿಕೆ!
Recommended image2
ಶನಿದೇವರ ಮುಂದೆ ಆಣೆ ಪ್ರಮಾಣಕ್ಕೆ ಹೋಗಿ ಗಲಾಟೆ, ಲಾಂಗ್ ನಲ್ಲಿ ಹೊಡೆದಾಟ: ಪ್ರೀತಿ ತಂದಿಟ್ಟ ಮಾರಣಾಂತಿಕ ಸಂಚು
Recommended image3
ಬೆಂಗಳೂರು ಸಂಬಂಧಿ ಮನೆಗೆ ಬಂದಿದ್ದ 26 ವರ್ಷದ ಯುವಕ 4ನೇ ಮಹಡಿಯಿಂದ ಬಿದ್ದು ನಿಗೂಢ ಸಾವು!
Related Stories
Recommended image1
ದಾವಣಗೆರೆ: ಬಂಧಿಸಲು ಹೋದ ಲೇಡಿ ಸಿಪಿಐ, ಸಿಬ್ಬಂದಿ ಮೇಲೆಯೇ ಹಲ್ಲೆ!
Recommended image2
ದಾವಣಗೆರೆ ಒಂದು ಮದುವೆ-ಎರಡು ಹೆಣ: ಪತಿ ಹಾಗೂ ಮಾವನ ಸಾವಿಗೆ ಕಾರಣರಾದ ಪತ್ನಿ, ಪ್ರಿಯಕರ ಅರೆಸ್ಟ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved