MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮದುವೆಯಾದ ಕೆಲ ವರ್ಷಗಳಲ್ಲೇ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರ ಜೊತೆ ಸೇರಿದ ಹತ್ಯೆ ಮಾಡಿದ್ದಳು. ಈ ಪ್ರಕರಣದ ತೀರ್ಪು ಇದೀಗ ಹೊರಬಿದ್ದಿದೆ.ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2 Min read
Author : Chethan Kumar
Published : May 11 2026, 12:14 PM IST
Share this Photo Gallery
  • FB
  • TW
  • Linkdin
  • Whatsapp
15
ಪತಿಯ ಹತ್ಯೆ ಕೇಸ್ ತೀರ್ಪು
Image Credit : Asianet News

ಪತಿಯ ಹತ್ಯೆ ಕೇಸ್ ತೀರ್ಪು

ಅಕ್ರಮ ಸಂಬಂಧ ಹಲವು ಸಂಸಾರಗಳನ್ನು ಹಾಳು ಮಾಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುವ ಪತಿ ಅಥವಾ ಪತ್ನಿಯನ್ನು ಹತ್ಯೆ ಮಾಡಿದ ಹಲವು ಘಟನೆಗಳು ನಡೆದಿದೆ. ಹೀಗೆ ಶಿವಮೊಗ್ಗದ ಭದ್ರಾವತಿಯ ಪೇಪರ್‌ಟೌನ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆ ಘಟನೆ ನಡೆದಿತ್ತು. ಪತ್ನಿ ಹಾಗೂ ಆಕೆಯ ಪ್ರಿಯಕರ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದರು. ಇದೀಗ ಈ ಪ್ರಕರಣ ಸಂಬಂಧ ತೀರ್ಪು ಪ್ರಕಟಗೊಂಡಿದೆ. ಪತ್ನಿ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

Add Asianetnews Kannada as a Preferred SourcegooglePreferred
25
ಏನಿದು ಘಟನೆ?
Image Credit : Asianet News

ಏನಿದು ಘಟನೆ?

ಖಾಸಗಿ ನರ್ಸಿಂಗ್ ಹೋಂನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಫ್ಲೋರಾ ನ್ಯಾನ್ಸಿ 2020ರಲ್ಲಿ ಟ್ಯಾಕ್ಸಿ ಚಾಲಕ ಬಿ.ಎಸ್.ಪ್ರಕಾಶ್ ಬಾಬು ಎಂಬುವರ ಜತೆ ವಿವಾಹವಾಗಿದ್ದಳು. ಕೆಲವೇ ವರ್ಷದಲ್ಲಿ ನ್ಯಾನ್ಸಿಗೆ ರಾಜಶೇಕರಯ್ಯ ಜೊತೆ ಅನೈತಿಕ ಸಂಬಂಧ ಹುಟ್ಟಿತ್ತು. ಇದು ತೀವ್ರಗೊಂಡಿತ್ತು. ಇದಕ್ಕೆ ಪತಿ ಪ್ರಕಾಶ್ ಬಾಬು ಅಡ್ಡಿಯಾಗಿದ್ದ. ಈ ಸಂಬಂಧ ಇಬ್ಬರಿಗೂ ಜಗಳವಾಗಿದೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ.

Related Articles

Related image1
ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ್ ಕುರುಬ ಹತ್ಯೆ ಪ್ರಕರಣ: 6 ಕ್ರೂರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ!
Related image2
Karwar: ತಲೆಮರೆಸಿಕೊಂಡಿದ್ದ ಆರೋಪಿಗೆ 33 ವರ್ಷಗಳ ಬಳಿಕ 5 ವರ್ಷ ಜೈಲು ಶಿಕ್ಷೆ, ದಂಡ
35
ಹತ್ಯೆಗೆ ಭರ್ಜರಿ ಪ್ಲಾನ್ ಮಾಡಿದ್ದ ಪತ್ನಿ
Image Credit : Asianet News

ಹತ್ಯೆಗೆ ಭರ್ಜರಿ ಪ್ಲಾನ್ ಮಾಡಿದ್ದ ಪತ್ನಿ

2020ನೇ ಜ.15ರ ರಾತ್ರಿ ಸುರಗಿತೋಪಿನಲ್ಲಿರುವ ತನ್ನ ಮನೆಯಲ್ಲಿ ಪತಿಗೆ ಹಾಗಲಕಾಯಿ ಜ್ಯೂಸ್‌ನಲ್ಲಿ ಮತ್ತು ಭರಿಸುವ ಮಾತ್ರೆ ಬೆರೆಸಿ ಕುಡಿಸಿದ್ದಳು. ನಿದ್ರೆಗೆ ಜಾರಿದ್ದ ಪ್ರಕಾಶ್‌ಬಾಬುನ ಕತ್ತು ಹಿಸುಕಿ ರಾಜಶೇಖರಯ್ಯ ಹಾಗೂ ಫ್ಲೋರಾ ನ್ಯಾನ್ಸಿ ಸೇರಿ ಕೊಲೆ ಮಾಡಿದ್ದರು. ಬಳಿಕ ಇಬ್ಬರೂ ಪ್ರಕಾಶ್‌ಬಾಬು ಶವವನ್ನು ಆತನ ಕಾರಿನಲ್ಲಿ ತೆಗೆದುಕೊಂಡು ಹೋಗಿ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಭದ್ರಾ ನಾಲೆಗೆ ಎಸೆದಿದ್ದರು.

45
ವಿಚಾರಣೆಯಲ್ಲಿ ಹೊರಬಂದ ಸತ್ಯ
Image Credit : Asianet News

ವಿಚಾರಣೆಯಲ್ಲಿ ಹೊರಬಂದ ಸತ್ಯ

ಘಟನೆ ನಡೆದ ಮೂರು ದಿನ ಬಳಿಕ ಶವ ದೊರಕಿದ್ದು, ಆರಂಭದಲ್ಲಿ ಪ್ರಕಾಶ್ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಮೃತನ ಸಹೋದರ ಫ್ರಾನ್ಸಿಸ್ ನೀಡಿದ ದೂರಿನ ಮೇಲೆ ತನಿಖೆ ಆರಂಭಿಸಿದ ಪೇಪರ್‌ಟೌನ್ ಠಾಣೆ ಪೊಲೀಸರು, ಫ್ಲೋರಾ ನ್ಯಾನ್ಸಿ ಹಾಗೂ ಆಕೆ ಪ್ರಿಯಕರನನ್ನು ವಿಚಾರಣೆ ನಡೆಸಿದಾಗ ಸತ್ಯ ಹೊರಬಂದಿದೆ.

55
ಇಬ್ಬರಿಗೂ ಗಲ್ಲು ಶಿಕ್ಷೆ
Image Credit : Asianet News

ಇಬ್ಬರಿಗೂ ಗಲ್ಲು ಶಿಕ್ಷೆ

ಇಬ್ಬರ ವಿರುದ್ಧ ಐಪಿಸಿ ಕಲಂ 302 ಹಾಗು 201ರಡಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಇಬ್ಬರಿಗೂ ಗಲ್ಲುಶಿಕ್ಷೆ ಹಾಗೂ 14 ಲಕ್ಷ ರೂ. ದಂಡ ವಿಧಿಸಿದ್ದಾರೆ. ಮೃತನ ಸಹೋದರ ಫ್ರಾನ್ಸಿಸ್‌ಗೆ ಐದು ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಇಬ್ಬರಿಗೂ ಗಲ್ಲು ಶಿಕ್ಷೆ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ನ್ಯಾಯಾಲಯ
ಶಿವಮೊಗ್ಗ
ಗಂಡ
ಪತ್ನಿ
ಪೊಲೀಸ್

Latest Videos
Recommended Stories
Recommended image1
ಚಿರತೆ ದಾಳಿಗೆ ಬಲಿಯಾದ ಬಾಲಕನ ಕುಟುಂಬಕ್ಕೆ 20 ಲಕ್ಷ ರೂ ಪರಿಹಾರ ಘೋಷಿಸಿ ಅರಣ್ಯ ಇಲಾಖೆ
Recommended image2
ಮೋದಿ ಕರೆ ಕೊಟ್ಟ ಬೆನ್ನಲ್ಲೇ ಇಂಧನ ಕೊರತೆ ಆತಂಕ, ಲಗ್ಗೆರೆ ಬಂಕ್‌ನಲ್ಲಿ ಪೆಟ್ರೋಲ್, ಡೀಸೆಲ್ ಖಾಲಿ
Recommended image3
ರಾಯಚೂರಿನಲ್ಲೂ ಘರ್ಜಿಸಿದ ಆರ್‌ಸಿಬಿ, ಎಡವಟ್ಟು ಮಾಡಿ ತಕ್ಷಣವೇ ತಿದ್ದಿ ಮನಗೆದ್ದ ವಿಜಯ್ ಮಲ್ಯ
Related Stories
Recommended image1
ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ್ ಕುರುಬ ಹತ್ಯೆ ಪ್ರಕರಣ: 6 ಕ್ರೂರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ!
Recommended image2
Karwar: ತಲೆಮರೆಸಿಕೊಂಡಿದ್ದ ಆರೋಪಿಗೆ 33 ವರ್ಷಗಳ ಬಳಿಕ 5 ವರ್ಷ ಜೈಲು ಶಿಕ್ಷೆ, ದಂಡ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved