MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಲಿರುವ ಚಿನ್ನಯ್ಯ, ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿಗೆ ಕರೆತಂದ ಪೊಲೀಸರು

ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಲಿರುವ ಚಿನ್ನಯ್ಯ, ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿಗೆ ಕರೆತಂದ ಪೊಲೀಸರು

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆರೋಪಿ ಚಿನ್ನಯ್ಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮಾನವ ಮೂಳೆಗಳ ಅವಶೇಷಗಳು ಪತ್ತೆಯಾಗಿದ್ದು, ತನಿಖೆಯನ್ನು ದಾರಿತಪ್ಪಿಸುತ್ತಿರುವ ಆರೋಪದ ಮೇಲೆ ಹೊಸ ದೂರುಗಳು ದಾಖಲಾಗಿವೆ.

2 Min read
Author : Gowthami K
Published : Sep 18 2025, 03:24 PM IST
Share this Photo Gallery
  • FB
  • TW
  • Linkdin
  • Whatsapp
15
ಬೆಳ್ತಂಗಡಿಗೆ ಚಿನ್ನಯ್ಯ ವಾಪಸ್
Image Credit : Asianet News

ಬೆಳ್ತಂಗಡಿಗೆ ಚಿನ್ನಯ್ಯ ವಾಪಸ್

ಬೆಳ್ತಂಗಡಿ: ಹಲವು ವರ್ಷಗಳಿಂದ ಧರ್ಮಸ್ಥಳ ಪ್ರದೇಶದಲ್ಲಿ ನಡೆದಿರುವ ಅಸಹಜ ಸಾವುಗಳ ತನಿಖೆಯ ಭಾಗವಾಗಿ, ಧರ್ಮಸ್ಥಳ ಬುರುಡೆ ಪ್ರಕರಣ ಮತ್ತೊಮ್ಮೆ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಆರೋಪಿ ಚಿನ್ನಯ್ಯನನ್ನು ಪೊಲೀಸರು ಇಂದು ಬೆಳ್ತಂಗಡಿಗೆ ಕರೆದುಕೊಂಡು ಬಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಪೊಲೀಸರ ತಂಡ ಸೆಪ್ಟೆಂಬರ್ 6 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶ ವಿಜಯೇಂದ್ರ ಅವರ ಮುಂದೆ ಹಾಜರುಪಡಿಸಲಾಗುತ್ತಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಚಿನ್ನಯ್ಯನನ್ನು ಕೋರ್ಟ್ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದ್ದು, ತಪ್ಪೊಪ್ಪಿಗೆ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ. ಈ ವೇಳೆ ಚಿನ್ನಯ್ಯ ಈಗಲೂ ಪೊಲೀಸ್ ವಾಹನದಲ್ಲೇ ಕೋರ್ಟ್ ಆವರಣದಲ್ಲಿ ಕುಳಿತಿರುವುದಾಗಿ ಮೂಲಗಳು ತಿಳಿಸಿವೆ.

25
ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್ಐಟಿ ಶೋಧ
Image Credit : Asianet News

ಬಂಗ್ಲೆಗುಡ್ಡ ಕಾಡಿನಲ್ಲಿ ಎಸ್ಐಟಿ ಶೋಧ

ಪ್ರಕರಣದ ತನಿಖೆಗಾಗಿ ಎಸ್ಐಟಿ ಬಂಗ್ಲೆಗುಡ್ಡ ಕಾಡಿನಲ್ಲಿ ಶೋಧ ಕಾರ್ಯ ಮುಂದುವರೆಸಿದ್ದು, ಅಲ್ಲಿಂದ ಮತ್ತೆರಡು ಜಾಗಗಳಲ್ಲಿ ಮಾನವ ಮೂಳೆಗಳ ಅವಶೇಷಗಳು ಪತ್ತೆಯಾಗಿವೆ. ಬುರುಡೆ ಸೇರಿದಂತೆ ಹಲವು ಮೂಳೆಗಳನ್ನು ಫಾರೆನ್ಸಿಕ್ ತಜ್ಞರು ಪರಿಶೀಲನೆ ನಡೆಸಿದ್ದಾರೆ. ಸೋಕೋ ತಂಡ ಮಣ್ಣು ಹಾಗೂ ಮೂಳೆಗಳ ಮಾದರಿಗಳನ್ನು ಸಂಗ್ರಹಿಸಿದ್ದು, ಅವುಗಳನ್ನು ಫರೆನ್ಸಿಕ್ ಸೈನ್ಸ್ ಲ್ಯಾಬ್ (FSL) ಗೆ ಕಳುಹಿಸಲು ತಯಾರಿ ನಡೆದಿದೆ. ಭೂಮಿಯ ಮೇಲೆ ಚದುರಿಕೊಂಡ ಸ್ಥಿತಿಯಲ್ಲಿ ಅವಶೇಷಗಳು ಪತ್ತೆಯಾಗಿದ್ದು, ಅವುಗಳ ಮಹಜರು ಪ್ರಕ್ರಿಯೆಯನ್ನೂ ನಡೆಸಲಾಗಿದೆ.

Related Articles

Related image1
ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ, NIA ತನಿಖೆಗೆ ಮಂಡ್ಯ ಬಿಜೆಪಿ ಆಗ್ರಹ
Related image2
ಧರ್ಮಸ್ಥಳ ಪ್ರಕರಣದಲ್ಲಿ ಹೊಸ ತಿರುವು: ಬಂಗ್ಲೆಗುಡ್ಡೆಯ 5 ಕಡೆ 5 ತಲೆಬುರುಡೆ, 100 ಮೂಳೆ ಪತ್ತೆ
35
ಅಸಹಜ ಸಾವುಗಳ ಕುರಿತು ದೂರು
Image Credit : stockPhoto

ಅಸಹಜ ಸಾವುಗಳ ಕುರಿತು ದೂರು

ಈ ನಡುವೆ ಸಿಪಿಐಎಂ ಮುಖಂಡ ಬಿ.ಎಂ. ಭಟ್ ಅವರು ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ನಡೆದ ಅಸಹಜ ಸಾವುಗಳ ಕುರಿತು ತನಿಖೆ ನಡೆಸಬೇಕೆಂದು ಎಸ್ಐಟಿಗೆ ದೂರು ನೀಡಿದ್ದಾರೆ. ಎಸ್ಐಟಿ ಆದೇಶದಲ್ಲೇ ಇಂತಹ ಪ್ರಕರಣಗಳ ತನಿಖೆಯ ಉಲ್ಲೇಖ ಇರುವುದರಿಂದ, ದೂರು ಆಧರಿಸಿ ಅಧಿಕಾರಿಗಳು ಮುಂದಿನ ತನಿಖಾ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

45
ವಿಠಲ ಗೌಡ ವಿರುದ್ಧ ದೂರು
Image Credit : stockPhoto

ವಿಠಲ ಗೌಡ ವಿರುದ್ಧ ದೂರು

ಇದರ ಜೊತೆಗೆ, ಧರ್ಮಸ್ಥಳ ಗ್ರಾಮಸ್ಥರಾದ ಸಂದೀಪ್ ರೈ ಅವರು ಚಿನ್ನಯ್ಯನ ಮಾವ ವಿಠಲ ಗೌಡ ವಿರುದ್ಧ ಹೊಸದಾಗಿ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ವಿಠಲ ಗೌಡ ತನಿಖೆಯನ್ನು ತಪ್ಪು ದಾರಿಗೆ ಎಳೆದುಕೊಂಡು ಹೋಗುವ ಪ್ರಯತ್ನ ನಡೆಸಿದ್ದಾರೆ ಎಂಬ ಆರೋಪ ಇದಾಗಿದೆ. ವಿಚಾರಣೆ ಮುಗಿದ ಬಳಿಕ ವಿಠಲ ಗೌಡ ಯೂಟ್ಯೂಬ್ ಚಾನೆಲ್‌ಗಳಿಗೆ ಸಂದರ್ಶನ ನೀಡಿ, ತನಿಖೆಯ ಹಾದಿಯನ್ನು ತಪ್ಲಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರುದಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದರ ಮೇಲೂ ಗಂಭೀರ ಆರೋಪ ಕೇಳಿಬಂದಿದೆ. ಎಸ್ಐಟಿ ಅಧಿಕಾರಿಗಳು ಈ ದೂರು ಸ್ವೀಕರಿಸಿದ್ದು, ವಿಠಲ ಗೌಡನ ವಿರುದ್ಧ ತನಿಖೆ ನಡೆಸುವ ಸಾಧ್ಯತೆ ಇದೆ.

55
ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆ ಅವಶೇಷಗಳ ಪತ್ತೆ
Image Credit : Asianet News

ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆ ಅವಶೇಷಗಳ ಪತ್ತೆ

ಧರ್ಮಸ್ಥಳ ಬುರುಡೆ ಪ್ರಕರಣವು ದಿನೇದಿನೇ ಹೊಸ ತಿರುವು ಪಡೆಯುತ್ತಿದ್ದು, ಆರೋಪಿ ಚಿನ್ನಯ್ಯ ವಿಚಾರಣೆ, ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆ ಅವಶೇಷಗಳ ಪತ್ತೆ, ಹಾಗೂ ಗ್ರಾಮಸ್ಥರಿಂದ ಬಂದಿರುವ ಹೊಸ ದೂರುಗಳ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತಿದೆ. ಮುಂದಿನ ದಿನಗಳಲ್ಲಿ ಎಸ್ಐಟಿ ತನಿಖೆಯ ಫಲಿತಾಂಶ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದರ ಮೇಲೆ ಸಾರ್ವಜನಿಕರ ಕಣ್ಣು ನೆಟ್ಟಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಧರ್ಮಸ್ಥಳ
ಎಸ್.ಐ.ಟಿ.
ದಕ್ಷಿಣ ಕನ್ನಡ
ಸುದ್ದಿ

Latest Videos
Recommended Stories
Recommended image1
'ನಮ್ಮ ಹನುಮ ಕನ್ನಡಿಗ' : ರಿಷಬ್ ಮಾತಿಗೆ ಜಗ್ಗೇಶ್ ರೋಮಾಂಚನ, ಏನು ಹೇಳಿದ್ರು ನೋಡಿ!
Recommended image2
Bengaluru Crime: ಕೈಮುಗಿದ್ರೂ ಬಿಡಲಿಲ್ಲ.. ತಲೆಗೆ ಹೊಡೆದು ಮದ್ಯ ಸುರಿದು ವಿಕೃತಿ! ಏನಾಗ್ತಿದೆ ರಾಜ್ಯದಲ್ಲಿ?
Recommended image3
ರಾಯರ ಸನ್ನಿಧಿಯಲ್ಲಿ ಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ ಕಿಡಿ: ದೇಶದಲ್ಲೇ ನಂಬರ್ 1 ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ!
Related Stories
Recommended image1
ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ, NIA ತನಿಖೆಗೆ ಮಂಡ್ಯ ಬಿಜೆಪಿ ಆಗ್ರಹ
Recommended image2
ಧರ್ಮಸ್ಥಳ ಪ್ರಕರಣದಲ್ಲಿ ಹೊಸ ತಿರುವು: ಬಂಗ್ಲೆಗುಡ್ಡೆಯ 5 ಕಡೆ 5 ತಲೆಬುರುಡೆ, 100 ಮೂಳೆ ಪತ್ತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved