MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಧರ್ಮಸ್ಥಳ ಗುಂಪು ಘರ್ಷಣೆ; 6 ಜನರ ಬಂಧನ, ಬಂಧಿತರ ಹೆಸರು ಏನು?

ಧರ್ಮಸ್ಥಳ ಗುಂಪು ಘರ್ಷಣೆ; 6 ಜನರ ಬಂಧನ, ಬಂಧಿತರ ಹೆಸರು ಏನು?

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಮತ್ತು ನಂತರದ ಗಲಭೆಯ ನಂತರ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಉಳಿದ 27 ಜನರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

1 Min read
Mahmad Rafik
Published : Aug 10 2025, 09:03 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪು ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ಧರ್ಮಸ್ಥಳದ ಪಾಂಗಳ ಕ್ರಾಸ್ ಗಂಪು ಘರ್ಷಣೆ ಉಂಟಾಗಿತ್ತು. ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದರು.

25
Image Credit : Asianet News

ಈ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದು, ಇನ್ನುಳಿದ 27 ಜನರಿಗಾಗಿ ಹುಡುಕಾಟ ನಡೆಸಿದ್ದಾರೆ. ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತರಾಗಿದ್ದಾರೆ. ಸುಮೋಟೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇನ್ನುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

35
Image Credit : Asianet News

ಅನಾಮಿಕ ತೋರಿಸಿದ ಸ್ಥಳದಲ್ಲಿ ಎಸ್‌ಐಟಿ ಶೋಧಕಾರ್ಯ ನಡೆಸುತ್ತಿದೆ. ಈ ಹಿನ್ನೆಲೆ ಶೋಧಕಾರ್ಯ ನಡೆಯುತ್ತಿರುವ ಸ್ಥಳದಿಂದಲೇ ಮಾಧ್ಯಮಗಳು ನೇರ ವರದಿಯನ್ನು ಪ್ರಕಟಿಸುತ್ತಿವೆ. ಆದರೆ ಯೂಟ್ಯೂಬರ್ ವರದಿ, ನಡೆ ಕುರಿತು ಧರ್ಮಸ್ಥಳ ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಪರಿಣಾಮ ನೂಕಾಟ, ತಳ್ಳಾಟ ನಡೆದು ಉದ್ವಿಘ್ನ ಪರಿಸ್ಥಿತಿ ಸೃಷ್ಟಿಯಾಗಿದ್ದರಿಂದ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದಿತ್ತು. ನಂತರ ಗಾಯಾಳು ಯೂಟ್ಯೂಬರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

45
Image Credit : Asianet News

ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಗಾಯಗೊಂಡ ಯುಟ್ಯೂಬರ್ ಗಳನ್ನು SDPI ಕಾರ್ಯಕರ್ತರು ಭೇಟಿ ಮಾಡಿದ್ದಾರೆ. ಧರ್ಮಸ್ಥಳ ಹೋರಾಟಗಾರರಿಗೂ SDPI ಏನು ಸಂಬಂಧ?ಏನಿದರಮರ್ಮ?ಈ ಹೋರಾಟದಲ್ಲಿರುವವರನ್ನು ಸೂಕ್ಷ್ಮವಾಗಿ ಗಮನಿಸಿ,ಎಡಪಂಥೀಯರು,ನಗರ ನಕ್ಸಲರು,SDPI,ಜಿಹಾದಿಗ್ಯಾಂಗ್,ಕಾನೂನು ಕೈಗೆತ್ತಿಕೊಳ್ಳುವವರೇ ತುಂಬಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರಶ್ನೆ ಮಾಡಿದ್ದಾರೆ

55
Image Credit : Asianet News

ಎಸ್‌ಐಟಿ ತನಿಖೆ ಸ್ವಾಗತಾರ್ಹ, ಈ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಎಸ್‌ಐಟಿಯನ್ನು ಬಳಸಿಕೊಳ್ತಿದೆ. ಎಸ್‌ಐಟಿ ತನಿಖೆಯ ದಿಕ್ಕು ತಪ್ಪುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮಾನ ವ್ಯಕ್ತಪಡಿಸಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಧರ್ಮಸ್ಥಳ
ದಕ್ಷಿಣ ಕನ್ನಡ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved