MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Ind vs Afg T20 Series
Bengaluru Metro Stations
Karnataka Power Crisis
Belagavi Cantonment Board
Today's Horoscope in Kannada
Satish Jarkiholi ED Complaint
BRICS Summit 2026
Agumbe Ghat Road Development
SSLC Toppers Reward
Bengaluru Tunnel Road Project
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Ganesh Festival Restrictions
  • Home
  • Karnataka Districts
  • ಬಸ್ ಓಡಿಸುತ್ತಿದ್ದ ಬಾಳೇಶ್‌ಗೆ ಹೃದಯಾಘಾತ; ತಾನು ಓಡಿಸಿದ ಬಸ್‌ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ

ಬಸ್ ಓಡಿಸುತ್ತಿದ್ದ ಬಾಳೇಶ್‌ಗೆ ಹೃದಯಾಘಾತ; ತಾನು ಓಡಿಸಿದ ಬಸ್‌ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ

ಪ್ರಯಾಣಿಕರನ್ನ ಸುರಕ್ಷಿತವಾಗಿ ಮನೆ ತಲುಪಿಸುತ್ತಿದ್ದ ಸಾರಿಗೆ ಬಸ್ ಚಾಲಕ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ತಾನು ಚಲಾಯಿಸುತ್ತಿದ್ದ ಬಸ್‌ನಲ್ಲಿ ಶವವಾಗಿ ಮನೆ ತಲುಪಿದ ದೃಶ್ಯ ನೋಡುವವರ ಕಣ್ಣಾಲಿಗಳು ತುಂಬಿ ಬಂದವು. ಧಾರವಾಡ ಸಾರಿಗೆ ಸಿಬ್ಬಂದಿ ಏನು ಮಾಡಿದ್ರು ನೋಡಿ

1 Min read
Author : Ravi Janekal
Published : Sep 13 2026, 10:28 AM IST
Share this Photo Gallery
  • FB
  • TW
  • Linkdin
  • Whatsapp
14
ಹೃದಯಾಘಾತಕ್ಕೆ ಬಲಿಯಾದ ಧಾರವಾಡ ಬಸ್ ಚಾಲಕ!
Image Credit : Asianet News

ಹೃದಯಾಘಾತಕ್ಕೆ ಬಲಿಯಾದ ಧಾರವಾಡ ಬಸ್ ಚಾಲಕ!

ಧಾರವಾಡ ಬಸ್ ನಿಲ್ದಾಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ದಿಢೀರ್ ಹೃದಯಾಘಾತದಿಂದ ಸಾರಿಗೆ ಬಸ್ ಚಾಲಕ ಬಾಳೇಶ್ ತೇಲಿ(38) ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಾಲಕ ಸಾವನ್ನಪ್ಪಿದ ಬಳಿಕ ಮೃತದೇಹವನ್ನು ಹುಟ್ಟೂರಿಗೆ ಅಂಬುಲೆನ್ಸ್ ಬದಲು ಸಾರಿಗೆ ಬಸ್‌ನಲ್ಲೇ ರವಾನಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಬೆಳಗಾವಿ ಮೂಲದ ಬಾಳೇಶ್ ತೇಲಿ ಹೃದಯಾಘಾತ
Image Credit : Asianet News

ಬೆಳಗಾವಿ ಮೂಲದ ಬಾಳೇಶ್ ತೇಲಿ ಹೃದಯಾಘಾತ

ಮೃತ ಬಾಳೇಶ್ ತೇಲಿ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ನಿವಾಸಿಯಾಗಿದ್ದಾರೆ. ಹಲವು ವರ್ಷಗಳಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಕಲಘಟಗಿ ಡಿಪೋದಲ್ಲಿ ಬಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆದರೆ ಚಿಕ್ಕ ವಯಸ್ಸಿಗೆ ಹಠಾತ್ ಸಂಭವಿಸಿದ ಹೃದಯಾಘಾತದಿಂದ ಮೃತರಾಗಿದ್ದಾರೆ.

Related Articles

Related image1
ಅರುಣಾ ಇರಾನಿ ಪತಿ - ಖ್ಯಾತ ನಿರ್ದೇಶಕ ಇನ್ನಿಲ್ಲ, ಸ್ಟಂಟ್ ಹಾಕಿದ್ರೂ ಹೃದಯಾಘಾತ ಆಗಿದ್ದು ಏಕೆ? ಆ ಗುಟ್ಟು ಇಲ್ಲಿದೆ ನೋಡಿ!
Related image2
ಮಲಗಿದ್ದ ಪತ್ನಿಯ ಕುತ್ತಿಗೆ ಹಿಚುಕಿ ಜೀವ ತೆಗೆದ.. 'ಹೃದಯಾಘಾತ' ಎಂದು ಕತೆ ಕಟ್ಟಿದ್ದ ಪತಿ ಲಾಕ್ ಆಗಿದ್ದೇಗೆ?
34
ಸಾರಿಗೆ ಬಸ್‌ನಲ್ಲೇ ಮೃತದೇಹ ರವಾನಿಸಿದ ಸಿಬ್ಬಂದಿ
Image Credit : Asianet News

ಸಾರಿಗೆ ಬಸ್‌ನಲ್ಲೇ ಮೃತದೇಹ ರವಾನಿಸಿದ ಸಿಬ್ಬಂದಿ

ಸಾರಿಗೆ ಇಲಾಖೆ ಸಿಬ್ಬಂದಿ ಚಾಲಕನ ಅಕಾಲಿಕ ಮರಣಕ್ಕೆ ಮರುಗಿದ್ದಾರೆ. ಮೃತದೇಹ ಆಂಬುಲೆನ್ಸ್ ಬದಲು ತಾನು ಚಾಲನೆ ಮಾಡುತ್ತಿದ್ದ ಬಸ್‌ನಲ್ಲೇ ಅಂತಿಮ ಯಾತ್ರೆ ನಡೆಸಲು ವ್ಯವಸ್ಥೆ ಮಾಡಿದರು. ಅದರಂತೆ ಧಾರವಾಡದಿಂದ ಹುಟ್ಟೂರಿಗೆ ಸಾರಿಗೆ ಇಲಾಖೆ ಬಸ್‌ನಲ್ಲೇ ಬಾಳೇಶ್ ತೇಲಿ ಮೃತದೇಹ ತಂದು ಸಾರಿಗೆ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.

44
ಬಸ್ಸಿನಲ್ಲಿ ಮಗನ ಮೃತದೇಹ ಕಂಡು ತಾಯಿ ಕಣ್ಣೀರು
Image Credit : Asianet News

ಬಸ್ಸಿನಲ್ಲಿ ಮಗನ ಮೃತದೇಹ ಕಂಡು ತಾಯಿ ಕಣ್ಣೀರು

ಅಂತಿಮಯಾತ್ರೆ ವೇಳೆ ಬಾಳೇಶ್ ತೇಲಿ ಮೃತದೇಹ ಸಾರಿಗೆ ಬಸ್‌ನಲ್ಲಿಡುತ್ತಿದ್ದಂತೆ ಮಗನ ಶವ ಕಂಡು ಗೋಗರೆದು ಅತ್ತ ತಾಯಿ. ಪ್ರತಿದಿನ ಮಗ ಹುಮ್ಮಸಿನಿಂದ ಕೆಲಸಕ್ಕೆ ಹೋಗುತ್ತಿದ್ದ. ತಾನೇ ಓಡಿಸುತ್ತಿದ್ದ ಬಸ್‌ನಲ್ಲಿ ತಣ್ಣಗೆ ಮಲಗಿಬಿಟ್ಟ, ನಮ್ಮನ್ನೆಲ್ಲ ಬಿಟ್ಟುಹೋದ ಅಂತಾ ಒಂದೇ ಸಮನೆ ಮಗನ ಸಾವು ಅರಗಿಸಿಕೊಳ್ಳಲಾಗದೆ ಕಣ್ಣೀರಾಕಿದ ತಾಯಿ. ಈ ದೃಶ್ಯದಿಂದ ನೆರೆದವರ ಕಣ್ಣಗಳೂ ತೇವಗೊಂಡವು.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಹೃದಯಾಘಾತ
ಧಾರವಾಡ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಬೆಂಗಳೂರಿನ ಈ ರಸ್ತೆಯಲ್ಲಿ ಓಡಾಡೋಕೆ ಆಗ್ತಾನೇ ಇಲ್ಲ ಸ್ವಾಮಿ...! ದುರಸ್ತಿ ಮಾಡುವಂತೆ ಪಿಎಂ ಮೋದಿಗೆ ಪತ್ರ
Recommended image2
Ganesh Chaturthi 2026: ಗಣಪತಿ ಹಬ್ಬಕ್ಕೆ ಹೂ, ಹಣ್ಣು ತರಕಾರಿ ದುಬಾರಿ! ಇಂದಿನ ಬೆಲೆಗಳ ಪಟ್ಟಿ ಇಲ್ಲಿದೆ ನೋಡಿ
Recommended image3
ಹಾವು ಕಚ್ಚಿದಾಗ ಸೈಕಲ್ ತುಳಿದು ಆಸ್ಪತ್ರೆಗೆ ಹೋದ! 'ಇಂಥ ತಪ್ಪು ಜೀವಕ್ಕೆ ಕುತ್ತು' ಎಂದ ಉರಗ ತಜ್ಞ ಗೌರಿ ಕಾಳಿಂಗ
Related Stories
Recommended image1
ಅರುಣಾ ಇರಾನಿ ಪತಿ - ಖ್ಯಾತ ನಿರ್ದೇಶಕ ಇನ್ನಿಲ್ಲ, ಸ್ಟಂಟ್ ಹಾಕಿದ್ರೂ ಹೃದಯಾಘಾತ ಆಗಿದ್ದು ಏಕೆ? ಆ ಗುಟ್ಟು ಇಲ್ಲಿದೆ ನೋಡಿ!
Recommended image2
ಮಲಗಿದ್ದ ಪತ್ನಿಯ ಕುತ್ತಿಗೆ ಹಿಚುಕಿ ಜೀವ ತೆಗೆದ.. 'ಹೃದಯಾಘಾತ' ಎಂದು ಕತೆ ಕಟ್ಟಿದ್ದ ಪತಿ ಲಾಕ್ ಆಗಿದ್ದೇಗೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved