MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಅವನಿಗೆ ಐಶ್ವರ್ಯಾ, ಇವನಿಗೆ ರೇಣುಕಾ, ಮತ್ತೊಬ್ಬನಿಗೆ ಆರೋಹಿ: ಮೂರು ಹೆಸರಿನ ಧಾರವಾಡದ ಸುಂದ್ರಿ

ಅವನಿಗೆ ಐಶ್ವರ್ಯಾ, ಇವನಿಗೆ ರೇಣುಕಾ, ಮತ್ತೊಬ್ಬನಿಗೆ ಆರೋಹಿ: ಮೂರು ಹೆಸರಿನ ಧಾರವಾಡದ ಸುಂದ್ರಿ

ಧಾರವಾಡದ ಯುವತಿಯೊಬ್ಬಳು ಐಶ್ವರ್ಯಾ, ರೇಣುಕಾ, ಆರೋಹಿ ಎಂದು ಹೆಸರು ಬದಲಾಯಿಸಿಕೊಂಡು ಯುವಕರಿಗೆ ಪ್ರೀತಿಯ ನಾಟಕವಾಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ. ಈಕೆಯ ಮೋಸದಿಂದ ನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಯುವತಿಯನ್ನು ಪೊಲೀಸರ ವಶಕ್ಕೆ ನೀಡಲಾಗಿದೆ.

1 Min read
Author : Mahmad Rafik
Published : Feb 17 2026, 08:43 AM IST
Share this Photo Gallery
  • FB
  • TW
  • Linkdin
  • Whatsapp
15
ಧಾರವಾಡದ ಯುವತಿ
Image Credit : Asianet News

ಧಾರವಾಡದ ಯುವತಿ

ಧಾರವಾಡದ ಯುವತಿಯೊಬ್ಬಳು ಹೆಸರು ಬದಲಾಯಿಸಿಕೊಂಡು ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸುಂದ್ರಿಯ ವೈಯ್ಯಾರಕ್ಕೆ ಮನಸೋತ ಓರ್ವ ಯುವಕ ವಿಷ ಸೇವಿಸಿ ಪ್ರಾಣ ಕಳೆದುಕೊಳ್ಳಲು ಮುಂದಾಗಿದ್ದನು. ಪೋಷಕರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಯುವಕ ಬದುಕುಳಿದಿದ್ದಾನೆ.

25
ಹೆಸ್ರು ಬದಲಿಸಿಕೊಂಡು ಮೋಸ
Image Credit : Asianet News

ಹೆಸ್ರು ಬದಲಿಸಿಕೊಂಡು ಮೋಸ

ಈ ಯುವತಿ ಐಶ್ವರ್ಯಾ, ರೇಣುಕಾ ಮತ್ತು ಆರೋಹಿ ಎಂಬ ಮೂರು ಹೆಸರುಗಳನ್ನಿಟ್ಟುಕೊಂಡು ಯುವಕರನ್ನು ಟಾರ್ಗೆಟ್ ಮಾಡುತ್ತಿದ್ದಳು. ಪ್ರೀತಿಯ ಹೆಸರಿನಲ್ಲ ಯುವಕರಿಂದ ಹಣ ಪಡೆದುಕೊಳ್ಳುತ್ತಿದ್ದಳು. ಮದುವೆಯಾಗೋದಾಗಿ ನಂಬಿಸಿ ಯುವಕರಿಂದ ಲಕ್ಷ ಲಕ್ಷ ಹಣ ಪೀಕಿದ್ದಾಳೆ. ಈಕೆಯ ನಕಲಿ ಪ್ರೀತಿಯಲ್ಲಿ ಅಂಧನಾದ ಗುರು ವಕ್ಕಂದ್ ಎಂಬಾತ ಐಶ್ವರ್ಯನೇ ಬೇಕು ಎಂದು ಮನನೊಂದು ವಿಷ ಸೇವಿಸಿದ್ದನು.

Related Articles

Related image1
ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌
Related image2
ಹಾಸನ ನಿವೇಶನ ಒತ್ತುವರಿ ಪ್ರಕರಣ: ಪುಷ್ಪಾ ಅರುಣ್‌ಕುಮಾರ್‌ಗೆ ಮೊದಲ ಹಂತದ ಗೆಲುವು
35
 7 ಲಕ್ಷ ರೂಪಾಯಿ
Image Credit : Asianet News

7 ಲಕ್ಷ ರೂಪಾಯಿ

ಇಷ್ಟು ಮಾತ್ರವಲ್ಲ ಮದುವೆಯಾಗೋದಾಗಿ ಹೇಳಿ ಗುರು ಬಳಿಯಲ್ಲಿ 7 ಲಕ್ಷ ರೂಪಾಯಿ ತೆಗೆದುಕೊಂಡಿದ್ದಳು. ಹಣ ಬರುತ್ತಿದ್ದಂತೆ ಐಶ್ವರ್ಯಾ ವರಸೆ ಬದಲಿಸಿದ್ದಳು. ಇದರಿಂದ ನೊಂದ ಗುರು, ವಿಷ ಸೇವಿಸಿದ್ದನು. ಈ ವಿಷಯ ತಿಳಿದು ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಾಗ ಗುರು ಕುಟುಂಬಸ್ಥರು ಐಶ್ವರ್ಯಾಳನ್ನು ಲಾಕ್ ಮಾಡಿದ್ದಾರೆ. ಓಡಿ ಹೋಗ್ತಿದ್ದಾಕೆಯನ್ನು ಹಿಡಿದು ಥಳಿಸಿದ್ದಾರೆ.

45
ಗಂಡನಿಂದ ಡಿವೋರ್ಸ್
Image Credit : Asianet News

ಗಂಡನಿಂದ ಡಿವೋರ್ಸ್

ನನ್ನ ಮಗನನ್ನು ಮದುವೆ ಆಗಬೇಕು ಇಲ್ಲಾಂದ್ರೆ 7 ಲಕ್ಷ ರೂಪಾಯಿ ವಾಪಸ್ ಕೊಡಬೇಕು ಎಂದು ಗುರು ತಾಯಿ ರತ್ನವ್ವ ಹೇಳಿದ್ದಾರೆ. ಇನ್ನು ರತ್ನವ್ವ ಹೇಳುವ ಪ್ರಕಾರ, ಐಶ್ವರ್ಯಾಗೆ ಮದುವೆಯಾಗಿ ಒಂದು ಮಗುವಿದೆ. ಈಗ ಗಂಡನಿಂದ ಡಿವೋರ್ಸ್ ಪಡೆದುಕೊಂಡಿದ್ದಾಳೆ. ಹೆಸರು ಬದಲಿಸಿಕೊಂಡು ಮೋಸ ಮಾಡ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ: ರಾತ್ರೋರಾತ್ರಿ ನಡೆದಿದ್ದೇನು?

55
 ಪೊಲೀಸರ ವಶಕ್ಕೆ
Image Credit : Asianet News

ಪೊಲೀಸರ ವಶಕ್ಕೆ

ಸಂಜು ದೊಡ್ಡಮನಿ ಎಂಬ ಯುವಕನಿಗೂ ಐಶ್ವರ್ಯಾ ಮೋಸ ಮಾಡಿದ್ದಾಳೆ. ಸದ್ಯ ಐಶ್ವರ್ಯಾಳನ್ನು ಗುರು ಪೋಷಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ತಾನೇ ಹೆಣೆದ ಬಲೆಯಲ್ಲಿ ಸಿಲುಕಿದ್ದೇಗೆ ಐನಾತಿ ಪ್ರಿಯಾಂಕಾ ಆಂಟಿ? ನೌಟಂಕಿ ಲೇಡಿ ಎಡವಿದ್ದೆಲ್ಲಿ?

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಧಾರವಾಡ
ಪ್ರೀತಿ

Latest Videos
Recommended Stories
Recommended image1
'ಬೇರೆಯವರಿಗೂ ಮಕ್ಕಳಿದ್ದಾರೆ..' : ಮಗಳ ಪರೀಕ್ಷೆಗಾಗಿ 20 ದಿನ ಬೇಲ್ ಕೋರಿದ್ದ ಪವಿತ್ರಾಗೌಡ ಅರ್ಜಿ ವಜಾ
Recommended image2
ಮಣ್ಣಾಗಿದ್ದ ಗೋಡೆಗಳಿಗೆ ಸ್ವಂತ ಹಣದಲ್ಲೇ ಬಣ್ಣ ತುಂಬಿದ ಕನಕಗಿರಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು!
Recommended image3
ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ: ರಾತ್ರೋರಾತ್ರಿ ನಡೆದಿದ್ದೇನು?
Related Stories
Recommended image1
ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌
Recommended image2
ಹಾಸನ ನಿವೇಶನ ಒತ್ತುವರಿ ಪ್ರಕರಣ: ಪುಷ್ಪಾ ಅರುಣ್‌ಕುಮಾರ್‌ಗೆ ಮೊದಲ ಹಂತದ ಗೆಲುವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved