MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Karnataka Districts
  • ಯೋಗೇಶ ಗೌಡ ಹತ್ಯೆ: ಕುಲಕರ್ಣಿಗೆ ಪರಮಾಪ್ತನೇ ತಿರುಗಿ ಬಿದ್ದ! ಮಾತು ಬದಲಿಸಿ ಕಾಂಗ್ರೆಸ್ ಸೇರಿದ್ದ ಯೋಗೇಶ್ ಪತ್ನಿ!

ಯೋಗೇಶ ಗೌಡ ಹತ್ಯೆ: ಕುಲಕರ್ಣಿಗೆ ಪರಮಾಪ್ತನೇ ತಿರುಗಿ ಬಿದ್ದ! ಮಾತು ಬದಲಿಸಿ ಕಾಂಗ್ರೆಸ್ ಸೇರಿದ್ದ ಯೋಗೇಶ್ ಪತ್ನಿ!

ವರದಿ: ಶಿವಾನಂದ ಗೊಂಬಿಬರೋಬ್ಬರಿ 10 ವರ್ಷಗಳ ಬಳಿಕಯೋಗೇಶಗೌಡ ಹತ್ಯೆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ಈ ಕೊಲೆಯು ಸಿಬಿಐ ತನಿಖೆಯಿಂದಾಗಿ ತಾರ್ಕಿಕ ಅಂತ್ಯ ಕಂಡಿದೆ.

3 Min read
Author : Gowthami K
Published : Apr 16 2026, 05:49 PM IST
Share this Photo Gallery
  • FB
  • TW
  • Linkdin
  • Whatsapp
18
 ವಿನಯ್‌ಗೆ ರಾಜಕೀಯ ಸಂಕಷ್ಟ
Image Credit : Asianet News

ವಿನಯ್‌ಗೆ ರಾಜಕೀಯ ಸಂಕಷ್ಟ

ಹುಬ್ಬಳ್ಳಿ: ಇಡೀ ರಾಜ್ಯ ರಾಜಕೀಯದಲ್ಲೇ ತೀವ್ರ ಸಂಚಲನ ಉಂಟು ಮಾಡಿದ್ದ ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ತೀರ್ಫು ಬರೋಬ್ಬರಿ 10 ವರ್ಷದ ಬಳಿಕ ಹೊರಬಂದಿದ್ದು, ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ 17 ಜನ ಆರೋಪಿಗಳು ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ಇದರಿಂದಾಗಿ ವಿನಯ್‌ಗೆ ಸಂಕಷ್ಟ ಎದುರಾಗಿದೆ. ರಾಜಕೀಯವಾಗಿ ಯೋಗೇಶಗೌಡ ಬೆಳೆಯುತ್ತಿರುವುದನ್ನು ಸಹಿಸದೇ ಸುಪಾರಿ ಕೊಟ್ಟು ಮಾಡಿಸಿದ್ದ ಕೊಲೆ ಇದೀಗ ವಿನಯ್‌ ಕುಲಕರ್ಣಿ ರಾಜಕೀಯ ಭವಿಷ್ಯಕ್ಕೆ ಕಂಟಕವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28
ಏನೇನಾಗಿತ್ತು?
Image Credit : Asianet News

ಏನೇನಾಗಿತ್ತು?

ಬಿಜೆಪಿಯಿಂದ ಜಿಪಂ ಸದಸ್ಯನಾಗಿದ್ದ ಯೋಗೇಶಗೌಡ ರಾಜಕೀಯವಾಗಿ ಹಂತ ಹಂತವಾಗಿ ಬೆಳೆಯುತ್ತಿದ್ದ. ಇದನ್ನು ಆಗ ಮಂತ್ರಿಯಾಗಿದ್ದ ವಿನಯ್‌ ಕುಲಕರ್ಣಿಗೆ ಸಹಿಸಲು ಆಗದೇ ಮುಂದೆ ತಮ್ಮ ರಾಜಕೀಯ ಎದುರಾಳಿಯಾಗಬಹುದು ಎಂದು ದ್ವೇಷ ಸಾಧಿಸುತ್ತಿದ್ದರಂತೆ. 2016ರ ಜೂನ್‌ 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ತಮ್ಮದೇ ಮಾಲೀಕತ್ವದ ಉದಯ್ ಜಿಮ್‌ನಲ್ಲಿ ಯೋಗೇಶಗೌಡ ಅವರ ಹತ್ಯೆ ನಡೆದಿತ್ತು. ಇದೊಂದು ಜಮೀನಿನ ವಿವಾದದ ಪ್ರಕರಣವೆಂದು ಪೊಲೀಸರು ತನಿಖೆ ನಡೆಸಿ ಎರಡೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ್ದರು.

ಇದು ರಾಜಕೀಯ ದ್ವೇಷದಿಂದ ಆದಂತಹ ಕೊಲೆ ಸಿಬಿಐಗೆ ವಹಿಸಿ ಎಂದು ಯೋಗೇಶಗೌಡ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದರು. 2018ರ ವರೆಗೂ ಇದೇ ಆಗಿತ್ತು. ಮುಂದೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಬದಲಾಗಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಬಳಿಕ ಈ ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು.

Related Articles

Related image1
ಯೋಗೇಶ್ ಗೌಡ ಹತ್ಯೆ ಪ್ರಕರಣ, ಕಠಿಣ ಶಿಕ್ಷೆಗೆ ಸಿಬಿಐ ಮನವಿ, ಕಡಿಮೆಗೊಳಿಸುವಂತೆ ಜಡ್ಜ್‌ ಮುಂದೆ ಅಪರಾಧಿಗಳ ಕಣ್ಣೀರು!
Related image2
ಯೋಗೇಶ್ ಗೌಡ ಹತ್ಯೆ: ಪಾಪಪ್ರಜ್ಞೆ ಕಾಡ್ತಿತ್ತು ಹೀಗಾಗಿ ಕೋರ್ಟ್‌ನಲ್ಲಿ ಸತ್ಯ ಹೇಳಿದೆ, ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ
38
ವಿನಯ್‌ ಬಂಧನ, ಬಿಡುಗಡೆ
Image Credit : Asianet News

ವಿನಯ್‌ ಬಂಧನ, ಬಿಡುಗಡೆ

2019 ಸೆಪ್ಟೆಂಬರ್‌ನಲ್ಲಿ ತನಿಖೆಯ ಜವಾಬ್ದಾರಿ ಹೊತ್ತುಕೊಂಡ ಸಿಬಿಐ, ಮೊದಲಿದ್ದ 6 ಜನ ಆರೋಪಿಗಳ ಜತೆಗೆ ಮತ್ತೆ 15 ಜನ ಹೊಸ ಆರೋಪಿಗಳನ್ನು ಸೇರಿಸಿತ್ತು. ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ಹೆಸರು ಪ್ರಬಲವಾಗಿತ್ತು. ಸಾಕ್ಷಿ ನಾಶದ ಆರೋಪದ ಹಿನ್ನೆಲೆಯಲ್ಲಿ 2020ರಲ್ಲಿ ನವೆಂಬರ್‌ನಲ್ಲಿ ವಿನಯ್‌ ಬಂಧನವಾಗಿತ್ತು. 2021ರ ಆಗಸ್ಟ್‌ನಲ್ಲಿ ಅಂದರೆ ಬರೋಬ್ಬರಿ 9 ತಿಂಗಳ ಬಳಿಕ ವಿನಯ್‌ಗೆ ಜಾಮೀನು ಸಿಕ್ಕಿತ್ತಾದರೂ ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿಷೇಧ ಹೇರಿತ್ತು. ಅಂದಿನಿಂದ ಈವರೆಗೂ ವಿನಯ್‌ ಧಾರವಾಡ ಜಿಲ್ಲೆಗೆ ಪ್ರವೇಶವೇ ಪಡೆದಿಲ್ಲ. 2023ರ ಚುನಾವಣೆಯನ್ನು ಜಿಲ್ಲೆಯ ಹೊರಗಿದ್ದುಕೊಂಡೇ ವಿನಯ್‌ ಗೆದ್ದಿದ್ದಾರೆ. ಸಿಬಿಐ ತನಿಖೆಯಿಂದ ನಿಜವಾದ ಆರೋಪಿಗಳ ಬಂಧನವೂ ಆಯಿತು. ಮೊದಲು ತನಿಖೆ ಮಾಡಿ ಪ್ರಕರಣದ ದಿಕ್ಕನೇ ತಪ್ಪಿಸಿದ್ದ ಪೊಲೀಸ್‌ ಅಧಿಕಾರಿಗಳೂ ವಿಚಾರಣೆ ಎದುರಿಸಿದ್ದರು. ಆರೋಪಿಗಳೂ ಆಗಿದ್ದು ಈ ಪ್ರಕರಣದ ವಿಶೇಷ.

48
ಪರಮಾಪ್ತನೇ ತಿರುಗಿ ಬಿದ್ದ!
Image Credit : Asianet News

ಪರಮಾಪ್ತನೇ ತಿರುಗಿ ಬಿದ್ದ!

ವಿನಯ್‌ ಕುಲಕರ್ಣಿ ಪರಮಾಪ್ತ, ಪೊಲೀಸರು ನಡೆಸಿದ್ದ ತನಿಖೆಯಲ್ಲಿ ಮೊದಲ ಆರೋಪಿಯಾಗಿದ್ದ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗುವ ಮೂಲಕ ವಿನಯ್‌ ವಿರುದ್ಧವೇ ತಿರುಗಿ ಬಿದ್ದಿದ್ದರು. ಹಾಗೆ ನೋಡಿದರೆ ಮೊದಲಿಗೆ ಮುತ್ತಗಿ ವಿನಯ್‌ಗೆ ನಿಷ್ಠವಾಗಿಯೇ ಇದ್ದ. ಯಾವಾಗ ಸಿಬಿಐ ವಿಚಾರಣೆ ಒಂದು ಹಂತಕ್ಕೆ ಬರುತ್ತಿದ್ದಂತೆ ಮುತ್ತಗಿಯನ್ನೇ ಮುಗಿಸಲು ವಿನಯ್‌ ಕುಲಕರ್ಣಿ ಸುಪಾರಿ ಕೊಟ್ಟಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದರಿಂದ ರೊಚ್ಚಿಗೆದ್ದ ಮುತ್ತಗಿ ತನ್ನ ಗುರು ವಿನಯ್‌ ವಿರುದ್ಧ ಸಾಕ್ಷಿಯಾದರು. ಜತೆಗೆ ಮಾಫಿ ಸಾಕ್ಷಿಯಾಗುವುದಾಗಿ ಲಿಖಿತ ಅರ್ಜಿ ಕೂಡ ಸಲ್ಲಿಸಿದ್ದನು.

58
ಸಾಕ್ಷಿಗಳ ಮೇಲೆ ಪ್ರಭಾವ , ಜೈಲು ಪಾಲಾಗಿದ್ದ ವಿನಯ್‌ ಕುಲಕರ್ಣಿ
Image Credit : Asianet News

ಸಾಕ್ಷಿಗಳ ಮೇಲೆ ಪ್ರಭಾವ , ಜೈಲು ಪಾಲಾಗಿದ್ದ ವಿನಯ್‌ ಕುಲಕರ್ಣಿ

ಈ ಎಲ್ಲದರ ನಡುವೆಯೇ 2025ರಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ಸುಪ್ರೀಂ ಕೋರ್ಟ್‌ ವಿನಯ್‌ಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಿತ್ತು. ಇದರಿಂದಾಗಿ 2025ರ ಜೂನ್‌ನಲ್ಲಿ ಮತ್ತೆ ಜೈಲು ಪಾಲಾಗಿದ್ದ ವಿನಯ್‌ ಕುಲಕರ್ಣಿಗೆ 2026ರ ಫೆಬ್ರವರಿಯಲ್ಲಷ್ಟೇ ಮತ್ತೆ ಜಾಮೀನು ಮಂಜೂರಾಗಿ ಹೊರಬಂದಿದ್ದರು. ಇದರಿಂದಾಗಿ ಪ್ರಕರಣದಲ್ಲಿ 2 ಬಾರಿ ಆರೋಪಿಯಾಗಿ ಜೈಲುವಾಸ ಅನುಭವಿಸಿದ್ದ ವಿನಯ್‌ ಇದೀಗ, ಅಪರಾಧಿಯಾಗಿ ಜೈಲು ಸೇರಿದ್ದಾರೆ. ರಾಜಕೀಯವಾಗಿ ಮುಳುವಾಗುತ್ತಾನೆ ಎಂದು ಸುಪಾರಿ ಕೊಟ್ಟು ಮಾಡಿಸಿದ ಕೊಲೆ, ಇದೀಗ ವಿನಯ್‌ ರಾಜಕೀಯ ಭವಿಷ್ಯಕ್ಕೆ ಮುಳುವಾದಂತಾಗಿದೆ.

68
123 ಸಾಕ್ಷಿ
Image Credit : Asianet News

123 ಸಾಕ್ಷಿ

ಈ ಪ್ರಕರಣದಲ್ಲಿ ಒಟ್ಟು 123 ಸಾಕ್ಷಿಗಳಿದ್ದಾರೆ. ಈ ಮುಂಚೆ ಪ್ರಮುಖ ಆರೋಪಿಗಳ ಪೈಕಿ ಮೊದಲ ಆರೋಪಿ ಬಸವರಾಜ ಮುತ್ತಗಿ ಸೇರಿದಂತೆ ಇಬ್ಬರು ಹಾಗೂ ಓರ್ವ ಪೊಲೀಸ್ ಅಧಿಕಾರಿ ಮಾಫಿ ಸಾಕ್ಷಿಯಾಗಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿ ಕೂಡ ಆರೋಪಿಗಳಲ್ಲೊಬ್ಬರು ಆಗಿರುವುದು ಗಮನಾರ್ಹ. ಇವರು ಯೋಗೇಶಗೌಡ ಸಹೋದರ ಗುರುನಾಥಗೌಡ ಅವರಿಗೆ ಆಮಿಷ ಒಡ್ಡಿ ಪ್ರಕರಣ ಹಿಂಪಡೆಯುವಂತೆ ಪ್ರಯತ್ನಿಸಿದ್ದರು. ಈ ಮೂಲಕ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದರು ಎಂಬ ಆರೋಪ ಇದೆ.

78
ಮಾತು ಬದಲಿಸಿದ್ದ ಪತ್ನಿ:
Image Credit : Asianet News

ಮಾತು ಬದಲಿಸಿದ್ದ ಪತ್ನಿ:

ಯೋಗೇಶಗೌಡ ಪತ್ನಿ ಮಲ್ಲಮ್ಮ ಮೊದಲಿಗೆ ಆರೋಪಿಗಳ ವಿರುದ್ಧ ಹೋರಾಟ ನಡೆಸಿ ಸಿಬಿಐಗೆ ತನಿಖೆ ವಹಿಸಬೇಕು ಎಂದು ಒತ್ತಾಯಿಸಿದ್ದುಂಟು. ಆದರೆ ಮುಂದೆ ಏನಾಯಿತೋ ತನ್ನ ಹೇಳಿಕೆ ಬದಲಿಸಿ, ವಿನಯ್‌ ಕುಲಕರ್ಣಿ ಅವರೊಂದಿಗೆ ಗುರುತಿಸಿಕೊಂಡಿದ್ದರು. ಅಲ್ಲದೇ, 2019 ಲೋಕಸಭೆ ಚುನಾವಣೆಯಲ್ಲಿ ವಿನಯ್‌ ಕುಲಕರ್ಣಿ ಪರವಾಗಿ ಪ್ರಚಾರದಲ್ಲಿ ತೊಡಗುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದರು. ಆದರೆ ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಯೋಗೇಶಗೌಡ ಸಹೋದರ ಗುರುನಾಥಗೌಡ ಕೊನೆವರೆಗೂ ಸಹೋದರನ ಸಾವಿಗೆ ನ್ಯಾಯ ಒದಗಿಸಲು ಹೋರಾಟ ನಡೆಸಿದರು.

88
ಜೀವ ಬೆದರಿಕೆಗೆ ಭದ್ರತೆ:
Image Credit : Asianet News

ಜೀವ ಬೆದರಿಕೆಗೆ ಭದ್ರತೆ:

ಈ ಮಧ್ಯೆ, ತನಗೆ ಹಾಗೂ ತನ್ನ ಕುಟುಂಬಕ್ಕೆ ಪ್ರಕರಣದ 9ನೇ ಆರೋಪಿ ಅಶ್ವತ್ಥನಿಂದ ಜೀವ ಬೆದರಿಕೆ ಇದೆ ಎಂದು ಬಸವರಾಜ ಮುತ್ತಗಿ ನ್ಯಾಯಾಲಯಕ್ಕೆ ಹೇಳಿದ್ದನು. ಇದೇ ವೇಳೆ ತಾನು ತಪ್ಯೂಪ್ಪಿಗೆ ನೀಡುತ್ತೇನೆ ಎಂದು ಹೇಳಿದ ಬಳಿಕ ಜೀವ ಬೆದರಿಕೆ ಹೆಚ್ಚುತ್ತಿದೆ. ಇದೇ ಕಾರಣಕ್ಕೆ ನ್ಯಾಯಾಲಯದ ಆದೇಶದಂತೆ ಬಸವರಾಜ ಮುತ್ತಗಿ ಹಾಗೂ ಆತನ ಕುಟುಂಬಕ್ಕೆ ಪೊಲೀಸರು ಭದ್ರತೆ ನೀಡಿದ್ದರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ವಿನಯ್ ಕುಲಕರ್ಣಿ
ಯೋಗೇಶ್ ಗೌಡ
ಧಾರವಾಡ
ಸುದ್ದಿ
ರಾಜಕೀಯ ಸುದ್ದಿ

Latest Videos
Recommended Stories
Recommended image1
Karnataka News Live: ಡಿಕೆಶಿ ಸರ್ಕಾರಕ್ಕೆ 100 ದಿನ, ರಾಜ್ಯದ ಜನತೆಗೆ 8 ವಾಗ್ದಾನ; ಉಚಿತ ಭೂಮಿ ಉಳುಮೆ ರೈತರಿಗೆ ವರದಾನ!
Recommended image2
ಜೈಲಲ್ಲಿ ಕಂಬಿ ಎಣಿಸುತ್ತಿರುವ ದರ್ಶನ್‌ಗೆ ಬಂತು ಮತ್ತೊಂದು ಕೋರ್ಟ್‌ ಸಮನ್ಸ್‌, ನಿಂತಲ್ಲೇ ನಡುಗಿದ ದಾಸ
Recommended image3
ಆಧಾರ್‌ ಸೃಷ್ಟಿಕರ್ತ ನಂದನ್‌ ನಿಲೇಕಣಿ ಇಡೀ ಕುಟುಂಬಕ್ಕೆ SIR ನೋಟಿಸ್‌ ಜಾರಿಯಾಗುವ ಸಾಧ್ಯತೆ
Related Stories
Recommended image1
ಯೋಗೇಶ್ ಗೌಡ ಹತ್ಯೆ ಪ್ರಕರಣ, ಕಠಿಣ ಶಿಕ್ಷೆಗೆ ಸಿಬಿಐ ಮನವಿ, ಕಡಿಮೆಗೊಳಿಸುವಂತೆ ಜಡ್ಜ್‌ ಮುಂದೆ ಅಪರಾಧಿಗಳ ಕಣ್ಣೀರು!
Recommended image2
ಯೋಗೇಶ್ ಗೌಡ ಹತ್ಯೆ: ಪಾಪಪ್ರಜ್ಞೆ ಕಾಡ್ತಿತ್ತು ಹೀಗಾಗಿ ಕೋರ್ಟ್‌ನಲ್ಲಿ ಸತ್ಯ ಹೇಳಿದೆ, ಮಾಫಿ ಸಾಕ್ಷಿ ಬಸವರಾಜ್ ಮುತ್ತಗಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved