MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಭದ್ರಾವತಿಯಲ್ಲಿ ಅಪ್ಪು, ಅಣ್ಣಾವ್ರಿಗೆ ದೇಗುಲ ನಿರ್ಮಿಸಿದ ಅಭಿಮಾನಿಗಳು; ಅಶ್ವಿನಿ ಪುನೀತ್ ರಾಜ್‌ ಕುಮಾರ್ ಲೋಕಾರ್ಪಣೆ!

ಭದ್ರಾವತಿಯಲ್ಲಿ ಅಪ್ಪು, ಅಣ್ಣಾವ್ರಿಗೆ ದೇಗುಲ ನಿರ್ಮಿಸಿದ ಅಭಿಮಾನಿಗಳು; ಅಶ್ವಿನಿ ಪುನೀತ್ ರಾಜ್‌ ಕುಮಾರ್ ಲೋಕಾರ್ಪಣೆ!

ಭದ್ರಾವತಿಯಲ್ಲಿ ಅಭಿಮಾನಿಗಳು ನಿರ್ಮಿಸಿದ ಡಾ. ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಗಳಿರುವ ದೇಗುಲವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿದರು. ಈ ದೇಗುಲದಲ್ಲಿ, ಇಬ್ಬರು ನಟರಿಗೆ ವರ್ಷಪೂರ್ತಿ ಪೂಜೆ ಸಲ್ಲಿಸಲು ಅಭಿಮಾನಿಗಳು ಸಂಕಲ್ಪ ಮಾಡಿದ್ದಾರೆ.

2 Min read
Author : Sathish Kumar KH
Published : Jan 22 2026, 07:30 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಉಕ್ಕಿನ ನಗರಿ ಭದ್ರಾವತಿಯಲ್ಲಿ ಅಭಿಮಾನಿಗಳಿಂದ ವರನಟ ರಾಜಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ನಿರ್ಮಿಸಿದ ಕಂಚಿನ ಪ್ರತಿಮೆ ಹಾಗೂ ದೇಗುಲವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿದರು. 35 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ದೇಗುಲ ಮತ್ತು ಪ್ರತಿಮೆಗಳ ಮೂಲಕ ಅಭಿಮಾನಿಗಳು ಅಭಿಮಾನ ಮೆರೆದರು.

26
Image Credit : Asianet News

ಶಿವಮೊಗ್ಗ ಜಿಲ್ಲೆಯ ಉಕ್ಕಿನ ನಗರಿ ಎಂದೇ ಪ್ರಸಿದ್ಧವಾದ ಭದ್ರಾವತಿಯಲ್ಲಿ ಇಂದು ಸಂಭ್ರಮವು ಸಂಭ್ರಮ. ಕರ್ನಾಟಕದಲ್ಲಿ ಮನೆ ಮಾತಾಗಿರುವ ವರನಟ ಡಾ. ರಾಜಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳು ಅಭಿಮಾನದಿಂದ ಕಟ್ಟಿದ ರಾಜ್ಯದ ಮೊಟ್ಟ ಮೊದಲ ದೇಗುಲದ ಲೋಕಾರ್ಪಣೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು.

Related Articles

Related image1
ರಕ್ಷಿತಾ ಶೆಟ್ಟಿ ನಿಷ್ಕಲ್ಮಶ ನಗುವಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕಂಡ ಅಭಿಮಾನಿಗಳು
Related image2
BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
36
Image Credit : Asianet News

ಭದ್ರಾವತಿ ನಗರದ ರೈಲು ನಿಲ್ದಾಣ ಬಳಿಯ ಚಾಮೇಗೌಡ ಬಡಾವಣೆಯಲ್ಲಿ ಡಾ. ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾ‌ರ್ ಅಭಿಮಾನಿಗಳ ಸಂಘದಿಂದ ಡಾ. ರಾಜ್ ಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ತಲಾ ಮೂರು ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಿ ನಿರ್ಮಿಸಿದ ದೇಗುಲವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿದರು.

46
Image Credit : Asianet News

ಅತ್ಯಂತ ಸುಂದರವಾದ ವರನಟ ಹಾಗೂ ಪವರ್ ಸ್ಟಾರ್ ಕಂಚಿನ ಪ್ರತಿಮೆಯನ್ನು ಶಿವಮೊಗ್ಗದ ಮಲಗೊಪ್ಪದ ಶಿಲ್ಪಿ ವಿಷ್ಣು ಸುಂದರವಾಗಿ ಕೆತ್ತಿದ್ದಾರೆ.ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಕಂಚಿನ ಪ್ರತಿಮೆಗಳಿಗೆ ತಲಾ 5 ಲಕ್ಷ ವೆಚ್ಚದಲ್ಲಿ ಕೆತ್ತಲಾಗಿದ್ದು ದೇಗುಲ ನಿರ್ಮಾಣಕ್ಕೆ 25 ಲಕ್ಷ ರೂ ವೆಚ್ಚ ಸೇರಿದಂತೆ ಒಟ್ಟು 35 ಲಕ್ಷ ರೂ ವೆಚ್ಚದಲ್ಲಿ ದೇಗುಲ ಮತ್ತು ಪ್ರತಿಮೆಗಳ ನಿರ್ಮಾಣ ಮಾಡಲಾಗಿದೆ.

56
Image Credit : Asianet News

ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಭದ್ರಾವತಿಯ ಜನತೆಗೆ ಅನಂತ ಧನ್ಯವಾದಗಳು ಎಂದು ತಮ್ಮ ಎರಡೇ ಮಾತುಗಳ ಮೂಲಕ ಮಿತ ಬಾ ಭಾಷಣ ಮುಗಿಸಿದರೆ ಶಾಸಕ ಸಂಗಮೇಶ್ ಸಹೋದರ ಮಾಜಿ ನಗರಸಭಾ ಅಧ್ಯಕ್ಷ ಮೋಹನ್ ಪುನೀತ್ ರಾಜಕುಮಾರ್ ನೆನೆದು ಕಂಬನಿ ಗೆರೆದರು.

66
Image Credit : Asianet News

ಒಟ್ಟಿನಲ್ಲಿ ಭದ್ರಾವತಿಯಲ್ಲಿ ವರನಟ ರಾಜಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರತಿಮೆಗಳ ಅನಾವರಣದೊಂದಿಗೆ ವರ್ಷಪೂರ್ತಿ ಪೂಜೆ ನಡೆಯುವ ಹಾಗೂ ಪುನೀತ್ ರಾಜಕುಮಾರ್ ರವರಂತೆ ಕಷ್ಟದಲ್ಲಿದ್ದವರಿಗೆ ನೆರವಿನ ಸಹಾಯದಿಂದ ನೀಡುವ ಸಂಕಲ್ಪ ಅಭಿಮಾನಿಗಳು ಮಾಡಿದ್ದು ವಿಶೇಷವಾಗಿತ್ತು.

ವರದಿ- ರಾಜೇಶ್ ಏಷ್ಯಾನೆಟ್ ಸುವರ್ಣ ನ್ಯೂಸ್

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಶಿವಮೊಗ್ಗ
ಪುನೀತ್ ರಾಜ್‌ಕುಮಾರ್
ಡಾ. ರಾಜ್‌ಕುಮಾರ್

Latest Videos
Recommended Stories
Recommended image1
ರಾಜಧಾನಿಯಲ್ಲಿ ನಿಲ್ಲದ ಡ್ರಗ್ಸ್ ದಂಧೆ : ಪೊಲೀಸರಿಂದ ₹24.5 ಕೋಟಿಯ ಗಾಂಜಾ ಜಪ್ತಿ
Recommended image2
ಪುಲ್ವಾಮಾ ದಾಳಿಗೆ ಸೈಲೆಂಟ್, ಖಮೇನಿ ಸಾವಿಗೆ ವೈಲೆಂಟ್; ಇನ್‌ಸ್ಟಾ ಪೋಸ್ಟ್ ಹಾಕಿದ ಹಿಂದೂ ಯುವಕನಿಗೆ ಬಿತ್ತು ಗೂಸಾ!
Recommended image3
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
Related Stories
Recommended image1
ರಕ್ಷಿತಾ ಶೆಟ್ಟಿ ನಿಷ್ಕಲ್ಮಶ ನಗುವಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕಂಡ ಅಭಿಮಾನಿಗಳು
Recommended image2
BBK 12 ಗಿಲ್ಲಿ ನಟನ ಗುಣ ಹೇಳುತ್ತಲೇ Bigg Boss Winner ಯಾರೆಂದು​ ಹಿಂಟ್​ ಕೊಟ್ಟೇ ಬಿಟ್ರು ಶಿವರಾಜ್​ ಕುಮಾರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved