MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿ, ಸಾರ್ವಕಾಲಿಕ ದಾಖಲೆ ಬರೆದ ಮಾದಪ್ಪನ ಬೆಟ್ಟದ ಹುಂಡಿ ಕಾಣಿಕೆ ಸಂಗ್ರಹ

ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿ, ಸಾರ್ವಕಾಲಿಕ ದಾಖಲೆ ಬರೆದ ಮಾದಪ್ಪನ ಬೆಟ್ಟದ ಹುಂಡಿ ಕಾಣಿಕೆ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ, ಇತಿಹಾಸದಲ್ಲೇ ಮೊದಲ ಬಾರಿಗೆ 28 ದಿನಗಳಲ್ಲಿ ದಾಖಲೆಯ ಹಣ ಸಂಗ್ರಹವಾಗಿದೆ. ಮಹಾಶಿವರಾತ್ರಿ ಜಾತ್ರೆ ಹಾಗೂ ಶಕ್ತಿ ಯೋಜನೆಯಿಂದಾಗಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದೇ ಈ ದಾಖಲೆಗೆ ಕಾರಣವಾಗಿದೆ.

1 Min read
Author : Mahmad Rafik
Published : Mar 05 2026, 11:14 AM IST
Share this Photo Gallery
  • FB
  • TW
  • Linkdin
  • Whatsapp
15
ದಾಖಲೆ ಬರೆದ ಹುಂಡಿ ಎಣಿಕೆ ಕಾರ್ಯ
Image Credit : Asianet News

ದಾಖಲೆ ಬರೆದ ಹುಂಡಿ ಎಣಿಕೆ ಕಾರ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ 28 ದಿನಗಳ ಅವಧಿಯಲ್ಲಿ ದಾಖಲೆಯ 3.41 ಕೋಟಿ ರು. ಸಂಗ್ರಹವಾಗಿದೆ. ಜಾತ್ರೆ, ಶಿವರಾತ್ರಿ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಳವಾಗಿತ್ತು.

25
ಸಿಸಿಟಿವಿ ಕಣ್ಣಾವಲಿನಲ್ಲಿ ಎಣಿಕೆ
Image Credit : Asianet News

ಸಿಸಿಟಿವಿ ಕಣ್ಣಾವಲಿನಲ್ಲಿ ಎಣಿಕೆ

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ. ಇ, ರಘು ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಸಿಸಿಟಿವಿ ಕಣ್ಣಾವಲಿನಲ್ಲಿ ಎಣಿಕೆ ನಡೆಸಲಾಗಿದೆ. 3,41,44,208 ರು. ಸಂಗ್ರಹವಾಗಿದೆ. ಜೊತೆಗೆ, 71 ಗ್ರಾಂ ಚಿನ್ನ ಹಾಗೂ 2 ಕೆಜಿ ಬೆಳ್ಳಿ ಪದಾರ್ಥಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ ಎಂದು ಕಾರ್ಯದರ್ಶಿ ರಘು ತಿಳಿಸಿದ್ದಾರೆ.

Related Articles

Related image1
ಪಂಕಾ ಮಸೀದಿ, ಮುಸ್ಲಿಮರಿಗೆ ಸೇರಿದ ಅಂಗಡಿಗಳು ಕಾಣದಂತೆ ಬೃಹತ್ ಪರದೆ ಹಾಕಿ RSS ಶೋಭಾಯಾತ್ರೆ
Related image2
80 ಕೆಜಿ ಭಾರ ಜಗ್ಗುವ ಪುಟಾಣಿ ಟ್ರ್ಯಾಕ್ಟರ್ ಕಂಡು ಹಿಡಿದ 8ನೇ ಕ್ಲಾಸ್‌ ಬಾಲ ವಿಜ್ಞಾನಿ
35
ಲಕ್ಷಾಂತರ ಭಕ್ತರ ಆಗಮನ
Image Credit : Asianet News

ಲಕ್ಷಾಂತರ ಭಕ್ತರ ಆಗಮನ

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ದಾಖಲೆ ಮಟ್ಟದಲ್ಲಿ ಹುಂಡಿಹಣ ಸಂಗ್ರಹವಾಗಿದೆ.

45
6 ಲಕ್ಷಕ್ಕೂ ಅಧಿಕ ಲಾಡು ಪ್ರಸಾದ
Image Credit : Asianet News

6 ಲಕ್ಷಕ್ಕೂ ಅಧಿಕ ಲಾಡು ಪ್ರಸಾದ

ಶಿವರಾತ್ರಿ ಜಾತ್ರೆಯಲ್ಲಿ ಕ್ಷೇತ್ರಕ್ಕೆ ಕಳೆದ ಒಂದು ವಾರದಿಂದ 9 ರಿಂದ 10 ಲಕ್ಷಕ್ಕೂ ಹೆಚ್ಚು ಅಧಿಕ ಭಕ್ತರು ಮಾದಪ್ಪನ ದರ್ಶನ ಪಡೆದಿದ್ದು, ತಮಿಳುನಾಡು ಸೇರಿದಂತೆ ಹೊರರಾಜ್ಯಗಳ ಭಕ್ತರೂ ಸಹ ದರ್ಶನ ಪಡೆದಿದ್ದಾರೆ. 6 ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಸಹ ಈ ಜಾತ್ರೆಯಲ್ಲಿ ಮಾರಾಟ ಮಾಡಲಾಗಿದೆ.

ಇದನ್ನೂ ಓದಿ: 2 ಹಳ್ಳಿಗೆ ಇರೋದು ಒಂದೇ ಟ್ಯಾಂಕ್, 15 ದಿನಕೊಮ್ಮೆ ನೀರು; ಬತ್ತಿದ ನಲ್ಲಿ, ಬರಿದಾದ ಭರವಸೆ

55
2.14 ಕೋಟಿ ರು. ಸಂಗ್ರಹ
Image Credit : Asianet News

2.14 ಕೋಟಿ ರು. ಸಂಗ್ರಹ

ಫೆಬ್ರವರಿ 4ರಂದು ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 27 ದಿನಗಳ ಅವಧಿಯೊಳಗೆ 2.14 ಕೋಟಿ ರು. ಸಂಗ್ರಹವಾಗಿತ್ತು. ಭಕ್ತರು ಹರಕೆಯ ರೂಪದಲ್ಲಿ 2,14,40,939 ನಗದು 45 ಗ್ರಾಂ ಚಿನ್ನ ಹಾಗೂ 2.320 ಕೆ. ಜಿ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು. ಹುಂಡಿಗೆ ₹6,15,376 ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು, ವಿದೇಶಿ 9 ನೋಟುಗಳನ್ನು ಹಾಕಲಾಗಿತ್ತು.

ಇದನ್ನೂ ಓದಿ: ಶಾಲೆಯಲ್ಲಿ ಮಕ್ಕಳಿಗೆ ಬಾಣೆಹಣ್ಣಿನ ಆಸೆ ತೋರಿಸಿ 'ಟಾಯ್ಲೆಟ್ ಕ್ಲೀನ್' ಮಾಡಿಸಿದ ಮುಖ್ಯ ಶಿಕ್ಷಕ!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಚಾಮರಾಜನಗರ
ದೇವಸ್ಥಾನ

Latest Videos
Recommended Stories
Recommended image1
ಶಾಲೆಯಲ್ಲಿ ಮಕ್ಕಳಿಗೆ ಬಾಣೆಹಣ್ಣಿನ ಆಸೆ ತೋರಿಸಿ 'ಟಾಯ್ಲೆಟ್ ಕ್ಲೀನ್' ಮಾಡಿಸಿದ ಮುಖ್ಯ ಶಿಕ್ಷಕ!
Recommended image2
ಸತತ ನಾಲ್ಕನೇ ದಿನವೂ ಚಿನ್ನದ ಬೆಲೆಯಲ್ಲಿ ಮತ್ತೆ ಮಹಾ ಕುಸಿತ! ಇವತ್ತಿನ ಗೋಲ್ಡ್ ರೇಟ್ ಎಷ್ಟು?
Recommended image3
ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ: ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!
Related Stories
Recommended image1
ಪಂಕಾ ಮಸೀದಿ, ಮುಸ್ಲಿಮರಿಗೆ ಸೇರಿದ ಅಂಗಡಿಗಳು ಕಾಣದಂತೆ ಬೃಹತ್ ಪರದೆ ಹಾಕಿ RSS ಶೋಭಾಯಾತ್ರೆ
Recommended image2
80 ಕೆಜಿ ಭಾರ ಜಗ್ಗುವ ಪುಟಾಣಿ ಟ್ರ್ಯಾಕ್ಟರ್ ಕಂಡು ಹಿಡಿದ 8ನೇ ಕ್ಲಾಸ್‌ ಬಾಲ ವಿಜ್ಞಾನಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved