MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Tumakuru: ಚೆಂದದ ಮಂಟಪ, ಸುತ್ತಲೂ ಮಂತ್ರಘೋಷ; ತಾಳಿ ಕಟ್ಟುವ ಹೊತ್ತಿಗೆ ವರನಿಗೆ ಬಿಗ್‌ ಶಾಕ್

Tumakuru: ಚೆಂದದ ಮಂಟಪ, ಸುತ್ತಲೂ ಮಂತ್ರಘೋಷ; ತಾಳಿ ಕಟ್ಟುವ ಹೊತ್ತಿಗೆ ವರನಿಗೆ ಬಿಗ್‌ ಶಾಕ್

ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯದೆ ಎರಡನೇ ಮದುವೆಗೆ ಸಿದ್ಧನಾಗಿದ್ದ ಹರಿಪ್ರಸಾದ್‌ಗೆ ಆತನ ಮೊದಲ ಪತ್ನಿ ಲೇಪಾಕ್ಷಿ ಶಾಕ್ ನೀಡಿದ್ದಾರೆ. ತಾಳಿ ಕಟ್ಟುವ ಸಮಯದಲ್ಲಿ ಪೊಲೀಸರೊಂದಿಗೆ ಕಲ್ಯಾಣಮಂಟಪಕ್ಕೆ ಆಗಮಿಸಿದ ಆಕೆ, ನಡೆಯುತ್ತಿದ್ದ ಮೋಸದ ಮದುವೆಯನ್ನು ತಡೆದಿದ್ದಾರೆ.

1 Min read
Author : Mahmad Rafik
Published : Feb 08 2026, 02:38 PM IST
Share this Photo Gallery
  • FB
  • TW
  • Linkdin
  • Whatsapp
15
ಮೋಸದ ಮದುವೆ
Image Credit : Asianet News

ಮೋಸದ ಮದುವೆ

ಮದುವೆಯನ್ನು ಕಾನೂನಾತ್ಮಕವಾಗಿ ಇತ್ಯರ್ಥ ಮಾಡಿಕೊಳ್ಳದೇ ಎರಡನೇ ಕಲ್ಯಾಣಕ್ಕೆ ಸಿದ್ಧವಾಗಿದ್ದ ವರನಿಗೆ ಮೊದಲ ಪತ್ನಿ ಶಾಕ್ ಕೊಟ್ಟಿದ್ದಾಳೆ. ತಾಳಿ ಕಟ್ಟುವ ಸಮಯಕ್ಕೆ ಬಂದ ಪತ್ನಿ ಮದುವೆ ನಿಲ್ಲಿಸಿದ್ದಾರೆ. ನಡೆಯುತ್ತಿದ್ದ ಮೋಸದ ಮದುವೆಯನ್ನು ನಿಲ್ಲಿಸಿದ್ದರಿಂದ ಇಡೀ ಕಲ್ಯಾಣಮಂಟಪದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

25
 8ನೇ ಕ್ಲಾಸ್‌ನಿಂದಲೇ ಲವ್
Image Credit : Asianet News

8ನೇ ಕ್ಲಾಸ್‌ನಿಂದಲೇ ಲವ್

ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿಯಾಗಿರುವ ಹರಿಪ್ರಸಾದ್, 2014ರಲ್ಲಿ ಲೇಪಾಕ್ಷಿ ಎಂಬವರನ್ನು ಮದುವೆಯಾಗಿದ್ದನು. 8ನೇ ಕ್ಲಾಸ್‌ನಿಂದಲೇ ಲೇಪಾಕ್ಷಿ ಮತ್ತು ಹರಿಪ್ರಸಾದ್ ಪ್ರೀತಿಸುತ್ತಿದ್ದರು. ನಂತರ ಮದುವೆಯಾಗಿದ್ದ ಇಬ್ಬರು, 10 ವರ್ಷ ಸಂಸಾರ ನಡೆಸಿದ್ದರು. ನಂತರ ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರು ಬೇರೆಯಾಗಿದ್ದರು.

Related Articles

Related image1
ಮನೆಗೆ ಗಂಡ ತಡವಾಗಿ ಬರ್ತಿದ್ದಕ್ಕೆ ನೇಣು ಬಿಗಿದುಕೊಂಡ 22 ವರ್ಷದ ಗೃಹಿಣಿ; ತಬ್ಬಲಿಯಾದ 10 ತಿಂಗಳ ಕಂದಮ್ಮ
Related image2
Bengaluru: ಅಸಭ್ಯ ಸನ್ನೆ, ಅವಾಚ್ಯ ಪದ; ಕೈಗೆ ಚೈನ್ ಸುತ್ಕೊಂಡು ಯುವತಿಯರಿಂದ ಚಾಲಕನ ಮೇಲೆ ಹಲ್ಲೆ
35
ಎರಡನೇ ಮದುವೆ
Image Credit : Asianet News

ಎರಡನೇ ಮದುವೆ

ಇದೀಗ ಡಿವೋರ್ಸ್ ಪಡೆದುಕೊಳ್ಳದೇ ಹರಿಪ್ರಸಾದ್ ಎರಡನೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ಇಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಗ್ರಾಮದ ಪುಣ್ಯಶ್ರೀ ಎಂಬಾಕೆ ಜೊತೆ ಹರಿಪ್ರಸಾದ್ ಸಪ್ತಪದಿ ತುಳಿಯಲು ಸಿದ್ಧತೆ ಮಾಡಿಕೊಂಡಿದ್ದನು. ಇಂದು ಎಡೆಯೂರಿನ ಎಸ್‌ಎಲ್‌ ಎನ್ ಕಲ್ಯಾಣ ಮಂಟಪದಲ್ಲಿ ಹರಿಪ್ರಸಾದ್ ಮದುವೆ ನಡೆಯುತ್ತಿತ್ತು.

45
ಪೊಲೀಸರ ಜೊತೆ ಕಲ್ಯಾಣಮಂಟಪಕ್ಕೆ ಬಂದ ಲೇಪಾಕ್ಷಿ
Image Credit : Asianet News

ಪೊಲೀಸರ ಜೊತೆ ಕಲ್ಯಾಣಮಂಟಪಕ್ಕೆ ಬಂದ ಲೇಪಾಕ್ಷಿ

ಹರಿಪ್ರಸಾದ್ ಮದುವೆಯ ವಿಷಯ ತಿಳಿದ ಲೇಪಾಕ್ಷಿ ಕಲ್ಯಾಣಮಂಟಪಕ್ಕೆ ಕುಣಿಗಲ್ ತಾಲ್ಲೂಕಿನ ಅಮೃತೂರು ಪೊಲೀಸರ ಜೊತೆ ಆಗಮಿಸಿದ್ದರು. ತಮಗೆ ಡಿವೋರ್ಸ್ ನೀಡದೇ ಮದುವೆಯಾಗುತ್ತಿರುವ ವಿಷಯವನ್ನು ವಧುವಿನ ಪೋಷಕರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ವಧುವಿನ ಪೋಷಕರು ಸಹ ಮದುವೆ ನಿಲ್ಲಿಸಿದ್ದಾರೆ.

ಇದನ್ನೂ ಓದಿ: Special Marriage: ಭಾವನೆಗಳ ಮೂಲಕವೇ ನಡೆದ ಅಪರೂಪದ ಮದುವೆ: ಹೃದಯದ ಭಾಷೆ, ಮೌನವೇ ಸಂಭಾಷಣೆ

55
ನಿಂತ ಮದುವೆ
Image Credit : Asianet News

ನಿಂತ ಮದುವೆ

ಈ ಕುರಿತು ಮಾತನಾಡಿರುವ ಲೇಪಾಕ್ಷಿ, ಕೌಟುಂಬಿಕ ಕಲಹ ಹಿನ್ನೆಲೆ ಹರಿಪ್ರಸಾದ್‌ನಿಂದ ದೂರವಾಗಿದ್ದೆ. ಆದ್ರೆ ಇದೀಗ ನನಗೆ ಡಿವೋರ್ಸ್ ನೀಡದೇ ಎರಡನೇ ಮದುವೆಯಾಗಲು ಮುಂದಾಗಿದ್ದರು. ಇಂದು ಮದುವೆಯನ್ನು ನಿಲ್ಲಿಸಿ ಪೊಲೀಸ್ ಠಾಣೆಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮದುವೆ ನಿಂತಿದ್ದರಿಂದ ಬಂದಿದ್ದ ಅತಿಥಿಗಳೆಲ್ಲಾ ಹಿಂದಿರುಗಿದ್ದಾರೆ.

ಇದನ್ನೂ ಓದಿ: ರಾಜ್ ವರ್ಲ್ಡ್ ಶಾಪಿಂಗ್ ಸೆಂಟರ್‌ನ ಸ್ಪಾನಲ್ಲಿ ಗುಡ್ಡೆ ಗುಡ್ಡೆ ಕಾಂಡೋಮ್ ರಾಶಿ ನೋಡಿ ಪೊಲೀಸರೇ ಶಾಕ್

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮದುವೆ
ತುಮಕೂರು
ವಿಚ್ಛೇದನ

Latest Videos
Recommended Stories
Recommended image1
ಮೆಟ್ರೋ ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ: Mr. CM Cut the Drama ಎಂದು ಬರೆದ ಕಪ್ಪು ಟೀ ಶರ್ಟ್ ಧರಿಸಿ ವಿನೂತನ ಪ್ರತಿಭಟನೆ!
Recommended image2
Koppal: ಕುಕನೂರಿನ ಶಾಲೆಯಲ್ಲಿ ಟೀಚರ್ಸ್ ಬಂದಿಲ್ಲ ಅಂದ್ರೆ ಅಡುಗೆಯವರೇ ಪ್ರಭಾರಿ ಶಿಕ್ಷಕರು
Recommended image3
Karnataka Politics: ಯಾವ ಯತೀಂದ್ರನೂ ಇಂಪಾರ್ಟೆಂಟ್ ಅಲ್ಲ, ಹೈಕಮಾಂಡ್ ಏನು ಹೇಳುತ್ತೋ ಅದೇ ಫೈನಲ್: ಎಂಬಿ ಪಾಟೀಲ್
Related Stories
Recommended image1
ಮನೆಗೆ ಗಂಡ ತಡವಾಗಿ ಬರ್ತಿದ್ದಕ್ಕೆ ನೇಣು ಬಿಗಿದುಕೊಂಡ 22 ವರ್ಷದ ಗೃಹಿಣಿ; ತಬ್ಬಲಿಯಾದ 10 ತಿಂಗಳ ಕಂದಮ್ಮ
Recommended image2
Bengaluru: ಅಸಭ್ಯ ಸನ್ನೆ, ಅವಾಚ್ಯ ಪದ; ಕೈಗೆ ಚೈನ್ ಸುತ್ಕೊಂಡು ಯುವತಿಯರಿಂದ ಚಾಲಕನ ಮೇಲೆ ಹಲ್ಲೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved