MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ದೇವಸ್ಥಾನದ ಹಿಂಭಾಗ ಐದು ಹೆಡೆ ನಾಗಮೂರ್ತಿ, ಶಿವಲಿಂಗ, ಶಾಸನ, ಸರ್ಪ ರೂಪದ ಶಿಲ್ಪ ಪತ್ತೆ

ದೇವಸ್ಥಾನದ ಹಿಂಭಾಗ ಐದು ಹೆಡೆ ನಾಗಮೂರ್ತಿ, ಶಿವಲಿಂಗ, ಶಾಸನ, ಸರ್ಪ ರೂಪದ ಶಿಲ್ಪ ಪತ್ತೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಭವಾನಿ ದೇಗುಲದ ಹಿಂಭಾಗದಲ್ಲಿ ಐದು ಹೆಡೆಯ ನಾಗಮೂರ್ತಿ, ಶಿವಲಿಂಗ, ಶಿಲಾ ಶಾಸನ ಹಾಗೂ ಸರ್ಪ ರೂಪದ ಶಿಲ್ಪ ಪತ್ತೆಯಾಗಿವೆ. ಈ ಹಿಂದೆ ಕೂಡ ಇಲ್ಲಿ ವಿಗ್ರಹಗಳು ಸಿಕ್ಕಿವೆ.

2 Min read
Author : Mahmad Rafik
Published : Feb 09 2026, 03:16 PM IST
Share this Photo Gallery
  • FB
  • TW
  • Linkdin
  • Whatsapp
16
ಐದು ಹೆಡೆ ನಾಗಮೂರ್ತಿ
Image Credit : Asianet News

ಐದು ಹೆಡೆ ನಾಗಮೂರ್ತಿ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ನಡೆಯುತ್ತಿದ್ರೆ, ಬಳ್ಳಾರಿಯ ತೆಕ್ಕಲಕೋಟೆ ಬಳಿ 5 ಸಾವಿರ ವರ್ಷ ಹಿಂದಿನ ಮಾನವನ ಪಳೆಯುಳಿಕೆ ಪತ್ತೆಯಾಗಿದೆ. ಈಗ ಗಡಿಜಿಲ್ಲೆಯಲ್ಲಿ ಐದು ಹೆಡೆ ನಾಗಮೂರ್ತಿ, ಶಿವಲಿಂಗ, ಶಿಲಾ ಶಾಸನ, ಸರ್ಪ ರೂಪದ ಶಿಲ್ಪ ಪತ್ತೆಯಾಗಿದೆ.

26
ದೇಗುಲದ ಹಿಂಭಾಗದಲ್ಲಿ ವಿಶೇಷ ಅವಶೇಷಗಳು ಪತ್ತೆ
Image Credit : Asianet News

ದೇಗುಲದ ಹಿಂಭಾಗದಲ್ಲಿ ವಿಶೇಷ ಅವಶೇಷಗಳು ಪತ್ತೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಅಚ್ಚರಿ ಅವಶೇಷಗಳು ಸಿಗಲಾರಂಭಿಸಿವೆ. ನಾರಾಯಣಪುರ ಗ್ರಾಮದ ಭವಾನಿ ದೇಗುಲದ ಹಿಂಭಾಗದಲ್ಲಿ ವಿಶೇಷ ಅವಶೇಷಗಳು ಪತ್ತೆಯಾಗಿವೆ.

Related Articles

Related image1
ಲಕ್ಕುಂಡಿಗೆ ರಾಜ್ಯ ಸರ್ಕಾರದಿಂದ 2.25 ಕೋಟಿ; 15 ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು?
Related image2
ಲಕ್ಕುಂಡಿಗೆ ಆಗಮಿಸಿದ ಇಟಲಿ-ಗ್ರೀಸ್ ಡೆಕ್ಕನ್ ಹೆರಿಟೇಜ್ ಫೌಂಡೇಶನ್: ಯಾಕೆ ಈ ಭೇಟಿ?
36
ಗ್ರಾಮಸ್ಥರಿಂದ ರಕ್ಷಣೆ
Image Credit : Asianet News

ಗ್ರಾಮಸ್ಥರಿಂದ ರಕ್ಷಣೆ

ಭವಾನಿ ದೇವಸ್ಥಾನದ ಹಿಂಭಾಗದಲ್ಲಿ ಅಡುಗೆ ಕಾರ್ಯಕ್ಕಾಗಿ ಜಾಗವನ್ನು ಸ್ವಚ್ಛಗೊಳಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಐದು ಹೆಡೆಯ ನಾಗಮೂರ್ತಿ, ಶಿವಲಿಂಗ, ಶಿಲಾ ಶಾಸನ ಹಾಗೂ ಸರ್ಪ ರೂಪದ ಶಿಲ್ಪ ಪತ್ತೆಯಾಗಿವೆ. ಇದರ ಜೊತೆಯಲ್ಲಿಯೇ ವಿವಿಧ ವಿನ್ಯಾಸದ ಕೆತ್ತನೆಯುಳ್ಳ ಶಿಲೆಗಳು ಲಭ್ಯವಾಗಿವೆ. ಗ್ರಾಮಸ್ಥರು ಎಲ್ಲಾ ಶಿಲೆಗಳನ್ನು ರಕ್ಷಣೆ ಮಾಡಿದ್ದಾರೆ.

46
ಉತ್ಖನನಕ್ಕೆ ಆಗ್ರಹ
Image Credit : Asianet News

ಉತ್ಖನನಕ್ಕೆ ಆಗ್ರಹ

ಈ ಹಿಂದೆ ಸುಮಾರು ಏಳೆಂಟು ವರ್ಷಗಳ ಹಿಂದೆ ನಾರಾಯಣಪುರ ಗ್ರಾಮದ ವ್ಯಾಪ್ತಿಯಲ್ಲಿ ವಿಷ್ಣು ಮತ್ತು ಕಾಳಿಕಾ ದೇವಿಯ ವಿಗ್ರಹಗಳು ಪತ್ತೆಯಾಗಿದ್ದವು. ಇದೀಗ ಮತ್ತೆ ಶಿಲೆಗಳು ಸಿಕ್ಕಿದ್ದು, ಗ್ರಾಮಸ್ಥರಲ್ಲಿ ಅಚ್ಚರಿಯನ್ನುಂಟು ಮಾಡಿದೆ. ಪುರುತಾತ್ವ ಇಲಾಖೆ ಸರಿಯಾಗಿ ಉತ್ಖನನ ನಡೆಸಿದ್ರೆ ಮತ್ತಷ್ಟು ಐತಿಹಾಸಿಕ ಅವಶೇಷಗಳು ಸಿಗುತ್ತವೆ ಎಂದು ಗ್ರಾಮಸ್ಥರು ಹೇಳುತ್ತಾರೆ.

56
108 ದೇವಸ್ಥಾನಗಳು ಹೊಂದಿರುವ ಗ್ರಾಮ!
Image Credit : Asianet News

108 ದೇವಸ್ಥಾನಗಳು ಹೊಂದಿರುವ ಗ್ರಾಮ!

ಕಲ್ಯಾಣಿ ಚಾಳುಕ್ಯರ ನಿರ್ಮಿಸಿದ ಐತಿಹಾಸಿಕ ಶಿವನ ದೇವಸ್ಥಾನ ಈ ಗ್ರಾಮದಲ್ಲಿದೆ. 108 ದೇವಸ್ಥಾನಗಳು ಹೊಂದಿರುವ ಗ್ರಾಮ ಪ್ರತೀತಿಯನ್ನು ಈ ಗ್ರಾಮ ಹೊಂದಿದೆ. ನೂತನ ಕಟ್ಟಡ, ಮನೆ ನಿರ್ಮಾಣ ಸಮಯದಲ್ಲಿ ಶಿಲೆಗಳು ಪತ್ತೆಯಾಗುತ್ತಿರುತ್ತವೆ. ಗ್ರಾಮದ ವ್ಯಾಪ್ತಿಯ ಪ್ರದೇಶದಲ್ಲಿ ಪುರಾತನ ಶಿಲ್ಪಕಲೆಗಳು, ವಿಗ್ರಹಗಳಿವೆ. ಆದ್ದರಿಂದ ವೈಜ್ಞಾನಿಕವಾಗಿ ಉತ್ಖನನ ನಡೆಯಬೇಕಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸಿಕ್ಕಿರುವ ಅವಶೇಷಗಳನ್ನು ನೋಡಲು ಜನರು ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ಲಕ್ಕುಂಡಿ ಉತ್ಖನನ: ಕಲ್ಯಾಣಿ ಚಾಲುಕ್ಯರ ಕಾಲದ ಮಹತ್ವದ ಕುರುಹುಗಳು ಪತ್ತೆ, ಭಾನುವಾರ ಪದೇ ಪದೇ ಕಾಣಿಸಿಕೊಂಡ ಹಾವು!

66
ಮಾನವನ ಪಳೆಯುಳಿಕೆ ಪತ್ತೆ
Image Credit : Asianet News

ಮಾನವನ ಪಳೆಯುಳಿಕೆ ಪತ್ತೆ

ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಪಶ್ಚಿಮ ನೈರುತ್ಯ ಭಾಗದಲ್ಲಿ ವಿಸ್ತಾರವಾಗಿ ಆವೃತವಾಗಿರುವ ಬೆಟ್ಟ ಗುಡ್ಡಗಳ 'ಗೌಡ್ರ ಮೂಲೆ'ಯಲ್ಲಿ ಸುಮಾರು 5 ಸಾವಿರ ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ, ಮಡಿಕೆಗಳು ಹಾಗೂ ಇತರೆ ವಸ್ತುಗಳು ಪತ್ತೆಯಾಗಿವೆ ಎಂದು ಅಮೆರಿಕದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ ಎಸ್. ಸುಗಂಧಿ ತಿಳಿಸಿದ್ದಾರೆ.

ಇದನ್ನೂ ಓದಿ: 16ನೇ ದಿನದ ಲಕ್ಕುಂಡಿ ಉತ್ಖನನ ವರದಿ: ವೀರಭದ್ರೇಶ್ವರ ದೇವಸ್ಥಾನದ ಐತಿಹಾಸಿಕ ರಹಸ್ಯ!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೀದರ್
ದೇವಸ್ಥಾನ

Latest Videos
Recommended Stories
Recommended image1
ಸರಣಿ ಕಾಮದಾಟದ 'ಕಲಾಕಾರ' ಈ ಕಮಲಾಕರ ಭಟ್: ಸುಚಿತ್ರಾಗೂ ಮೊದಲೇ, ಮುಸ್ಲಿಂ ಮಹಿಳೆ ಸೇರಿ ನಾಲ್ವರೊಂದಿಗೆ ಪಲ್ಲಂಗದಾಟ!
Recommended image2
Mandya: ಎರಡು ಮಕ್ಕಳ ತಂದೆಯೊಂದಿಗೆ 19ರ ಯುವತಿ ಲವ್; ಮಗಳೊಂದಿಗೆ ನೇಣು ಬಿಗಿದುಕೊಂಡ ಅಮ್ಮ
Recommended image3
ಮುರಿದ ಬಿದ್ದ ಮದುವೆ, ಮತ್ತೆ ತಗ್ಲಾಕ್ಕೊಂಡ ಹರಿಪ್ರಸಾದ; ಮೊದಲ ಪತ್ನಿಯಾಯ್ತು, ಈಗ ಮಂಡ್ಯ ಹುಡುಗಿಯಿಂದಲೂ ಮತ್ತೊಂದು ಶಾಕ್!
Related Stories
Recommended image1
ಲಕ್ಕುಂಡಿಗೆ ರಾಜ್ಯ ಸರ್ಕಾರದಿಂದ 2.25 ಕೋಟಿ; 15 ದಿನದ ಉತ್ಖನನದಲ್ಲಿ ಸಿಕ್ಕಿದ್ದೇನು?
Recommended image2
ಲಕ್ಕುಂಡಿಗೆ ಆಗಮಿಸಿದ ಇಟಲಿ-ಗ್ರೀಸ್ ಡೆಕ್ಕನ್ ಹೆರಿಟೇಜ್ ಫೌಂಡೇಶನ್: ಯಾಕೆ ಈ ಭೇಟಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved