ಕೊರೋನಾ ವಿರುದ್ಧ ಹೋರಾಟ: ಜೆಡಿಎಸ್ ಪಕ್ಷದ ಬಿಬಿಎಂಪಿ ಸದಸ್ಯರ ಜೊತೆ HDK ವಿಡಿಯೋ ಸಂವಾದ
ಬೆಂಗಳೂರು(ಜೂ.03): ಕೊರೋನಾ ವೈರಸ್ ಹಾವಳಿಯಿಂದ ವಿಶ್ವಾದ್ಯಂತ ಜನರ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಜನರ ರಕ್ಷಣೆಗೆ ಸರ್ಕಾರಗ ಇನ್ನಿಲ್ಲದ ಕಸರತ್ತನ್ನು ಮಾಡುತ್ತಿವೆ. ಅದರೂ ಕೂಡ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕೋವಿಡ್ ರಕ್ಷಣೆಗೆ ಸರ್ಕಾರದ ಜೊತೆಗೆ ಪ್ರತಿಪಕ್ಷಗಳೂ ಕೂಡ ಕೈಜೋಡಿಸಬೇಕು.ಈ ನಿಟ್ಟಿನಲ್ಲಿ ಪ್ರತಿಪಕ್ಷ ಜೆಡಿಎಸ್ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.
ಜೆಡಿಎಸ್ ಪಕ್ಷದ ಬಿಬಿಎಂಪಿ ಸದಸ್ಯರ ಜೊತೆ ವಿಡಿಯೋ ಸಂವಾದ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ಕುಮಾರಸ್ವಾಮಿ
ಕೊರೋನಾ ವಿಚಾರದಲ್ಲಿ ನಡೆಯುತ್ತಿರುವ ಕಾರ್ಯಗಳ ಬಗ್ಗೆ ಸಂವಾದದಲ್ಲಿ ಚರ್ಚೆ
ವಾರ್ಡ್ಗಳಲ್ಲಿ ಕೋರೋನಾ ನಿಯಂತ್ರಣ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ
ಸರ್ಕಾರದ ಕಾರ್ಯಕ್ರಮಗಳು, ಬಿಬಿಎಂಪಿ ಸದಸ್ಯರು ಮಾಡುತ್ತಿರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದ ಎಚ್ಡಿಕೆ
ಲಾಕ್ಡೌನ್ನಿಂದ ಸಂಕಷ್ಟ ಸಿಲುಕಿದ್ದ ಜನರಿಗೆ ದಿನಸಿ ಕಿಟ್ ವಿತರಿಸಿದ್ದ ಜೆಡಿಎಸ್
ಕೋವಿಡ್ ವಿರುದ್ಧ ಹೋರಾಡಲು ಕೊರೋನಾ ವಾರಿಯರ್ಸ್ಗಳಿಗೆ ಹ್ಯಾಂಡ್ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಿದ್ದ ಹೆಚ್.ಡಿ.ಕುಮಾರಸ್ವಾಮಿ