MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
IPL Auction Update
Karnataka Weather Update
PM Narendra Modi Birthday
Karnataka Cabinet Meeting
UPI Payment Charges
Nelamangala Metro Connectivity
Karnataka Congress District Presidents
Dharwad Tehsildar
Bengaluru PVR INOX Fined 75K
Gadag's Bhishma Lake
Koppal Ancient Inscription
Coastal Karnataka Railway Connectivity
Sakleshpur Railway Project
  • Home
  • Karnataka Districts
  • ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ; ಬೆಳಗ್ಗೆ ಜನರು ನೋಡುವ ಮುನ್ನವೇ ತೆರವು ಮಾಡಿದ ಪಾಲಿಕೆ!

ರಾತ್ರೋರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ; ಬೆಳಗ್ಗೆ ಜನರು ನೋಡುವ ಮುನ್ನವೇ ತೆರವು ಮಾಡಿದ ಪಾಲಿಕೆ!

ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಅಭಿಮಾನಿಗಳು ರಾತ್ರೋರಾತ್ರಿ ಅನಧಿಕೃತವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಿದ್ದರು. ವಿಷಯ ತಿಳಿದ ತಕ್ಷಣ ಎಚ್ಚೆತ್ತ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಬೆಳಗಿನ ಜಾವವೇ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.

2 Min read
Author : Sathish Kumar KH
Published : Sep 17 2026, 01:32 PM IST
Share this Photo Gallery
  • FB
  • TW
  • Linkdin
  • Whatsapp
15
ರಾತ್ರೋ ರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ
Image Credit : Asianet News

ರಾತ್ರೋ ರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ

ಕಲ್ಯಾಣ ಕರ್ನಾಟಕದ ಅತಿದೊಡ್ಡ ನಗರ ಕಲಬುರಗಿಯ ಪ್ರಮುಖ ವೃತ್ತವೊಂದರಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೆ, ರಾತ್ರೋರಾತ್ರಿ ಸ್ಥಾಪಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮಾಜಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಸದ್ಯ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ, ಅಭಿಮಾನಿಗಳು ಈ ರೀತಿ ಮೂರ್ತಿ ಪ್ರತಿಷ್ಠಾಪಿಸಿರುವುದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ರಾತ್ರೋರಾತ್ರಿ ಪ್ರತಿಷ್ಠಾಪನೆಗೊಂಡ 9 ಅಡಿ ಮೂರ್ತಿ:
Image Credit : Asianet News

ರಾತ್ರೋರಾತ್ರಿ ಪ್ರತಿಷ್ಠಾಪನೆಗೊಂಡ 9 ಅಡಿ ಮೂರ್ತಿ:

ಕಲಬುರಗಿ ನಗರದ ಜನನಿಬಿಡ ಹೈಕೋರ್ಟ್ ಕ್ರಾಸ್ (ವೃತ್ತ) ಬಳಿ ಗುರುವಾರ ಮುಂಜಾನೆ ಸುಮಾರು 9 ಅಡಿ ಎತ್ತರದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಮೆ ಕಾಣಿಸಿಕೊಂಡಿತ್ತು. ಏಳೆಂಟು ಜನರ ಅಭಿಮಾನಿಗಳ ಗುಂಪು ರಾತ್ರೋರಾತ್ರಿ ಯಾವುದೇ ಅಧಿಕೃತ ಅನುಮತಿಯನ್ನು ಪಡೆಯದೆ ಈ ಪ್ರತಿಮೆಯನ್ನು ರಹಸ್ಯವಾಗಿ ಪ್ರತಿಷ್ಠಾಪಿಸಿತ್ತು. ಇದರೊಂದಿಗೆ ಈ ಹಿಂದೆ ಯಾವುದೇ ಅಧಿಕೃತ ಅನುಮತಿ ಇಲ್ಲದೆಯೇ 'ಸಿದ್ದರಾಮಯ್ಯ ಸರ್ಕಲ್' ಹೆಸರಿನ ಬ್ಯಾನರ್ ಅಳವಡಿಸಲಾಗಿತ್ತು ಎಂಬ ಅಂಶವೂ ಮುನ್ನೆಲೆಗೆ ಬಂದಿದೆ.

Related Articles

Related image1
ಡಿಕೆಶಿ 100 ದಿನದ ಸರ್ಕಾರ ಸರಿದಾರಿಯಲ್ಲಿದೆ, ಬರ ನಿರ್ವಹಣೆಗೆ ಕೇಂದ್ರದ ಹಣ ಕಾಯಬೇಡಿ: ಮಾಜಿ ಸಿಎಂ ಸಿದ್ದರಾಮಯ್ಯ
Related image2
ಸಿದ್ದರಾಮಯ್ಯ ಕುಟುಂಬ ಹೊಸ ಬಂಗಲೆಗೆ ಶಿಫ್ಟ್: ಗಣ್ಯರನ್ನು ಆಹ್ವಾನಿಸದೇ ಪೆಂಡಾಲ್ ಮುಚ್ಚಿ ಹೊಸ ಮನೆ ಗೃಹಪ್ರವೇಶ!
35
ಜನರು ನೋಡುವ ಮುನ್ನವೇ ಮುಖ ಮುಚ್ಚಿದ ಪಾಲಿಕೆ:
Image Credit : Asianet News

ಜನರು ನೋಡುವ ಮುನ್ನವೇ ಮುಖ ಮುಚ್ಚಿದ ಪಾಲಿಕೆ:

ಇನ್ನು ರಾತ್ರಿ ವೇಳೆ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ ನಂತರ, ರಾತ್ರಿಯೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ವೈರಲ್ ಆಗಿದ್ದವು. ಆದರೆ, ಈ ಬಗ್ಗೆ ಹಿರಿಯ ಅಧಿಕಾರಿಗಳು ಅನುಮತಿ ಕೊಟ್ಟಿದ್ದಾದರೂ ಯಾರು ಎಂದು ಪ್ರಶ್ನೆ ಮಾಡಿದಾಗ ಅನುಮತಿ ಪಡೆಯದೇ ಅನಧಿಕೃತವಾಗಿ ಪ್ರತಿಮೆ ನಿಲ್ಲಿಸಿರುವುದು ತಿಳಿದುಬಂದಿದೆ. ಹೀಗಾಗಿ, ಬೆಳಗ್ಗೆ ಜನರು ಬಂದು ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ನೋಡುವ ಮುನ್ನವೇ ಪಾಲಿಕೆ ಸಿಬ್ಬಂದಿ ಪ್ರತಿಮೆಯ ಮುಖವನ್ನು ಮುಚ್ಚಿದ್ದರು.

45
ಪಾಲಿಕೆ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ:
Image Credit : Asianet News

ಪಾಲಿಕೆ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ:

ಅನುಮತಿಯಿಲ್ಲದೆ ಪ್ರತಿಮೆ ಸ್ಥಾಪಿಸಿರುವ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ, ಪಾಲಿಕೆ ಸಿಬ್ಬಂದಿ ಹೈಕೋರ್ಟ್ ವೃತ್ತದಲ್ಲಿ ಅಳವಡಿಸಿದ್ದ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಬೆಳಗಿನ ಜಾವವೇ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

55
ರಾಜ್ಯಮಟ್ಟದಲ್ಲಿ ಚರ್ಚೆಗೆ ಕಾರಣ:
Image Credit : Asianet News

ರಾಜ್ಯಮಟ್ಟದಲ್ಲಿ ಚರ್ಚೆಗೆ ಕಾರಣ:

ವಿಶೇಷವೆಂದರೆ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳು ಹಾಗೂ ಗಣ್ಯರು ಕಲಬುರಗಿ ಪ್ರವಾಸದಲ್ಲಿದ್ದಾರೆ. ಸಿದ್ದರಾಮಯ್ಯ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿರುವ ಅದೇ ವೃತ್ತದ ಮೂಲಕ ಅಫಜಲಪುರಕ್ಕೆ ತೆರಳಬೇಕಿದ್ದ ಈ ಸಂದರ್ಭದಲ್ಲಿ, ಈ ಅಕ್ರಮ ಪ್ರತಿಮೆ ತೆರವು ಕಾರ್ಯಾಚರಣೆ ನಡೆದಿರುವುದು ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ. ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮೂರ್ತಿಗಳನ್ನು ಸ್ಥಾಪಿಸುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಸಿದ್ದರಾಮಯ್ಯ
ಕಲಬುರಗಿ
ಕರ್ನಾಟಕ ರಾಜಕೀಯ
 

Latest Videos
Recommended Stories
Recommended image1
Bengaluru: ಪತ್ನಿಗೆ ಆಸಿಡ್‌ ಹಾಕಿ ಮಚ್ಚಿನಿಂದ ಮನಬಂದಂತೆ ಕೊಚ್ಚಿದ ಪತಿ; ಬೆಂಗಳೂರಿನಲ್ಲಿ ಭೀಕರ ಘಟನೆ
Recommended image2
ಮಸೀದಿಯಲ್ಲಿ ಗಣೇಶ ಪ್ರತಿಷ್ಠಾಪನೆ; ಚಾದರ್ ಮೇಲೆ ಕೂರಿಸಿದ ಗಣಪತಿಗೆ ಮುಸ್ಲಿಂ ಯುವಕರಿಂದಲೇ ಪೂಜೆ!
Recommended image3
E-KYC ಮಾಡದಿದ್ರೆ ರೇಷನ್ ಬಂದ್​​! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
Related Stories
Recommended image1
ಡಿಕೆಶಿ 100 ದಿನದ ಸರ್ಕಾರ ಸರಿದಾರಿಯಲ್ಲಿದೆ, ಬರ ನಿರ್ವಹಣೆಗೆ ಕೇಂದ್ರದ ಹಣ ಕಾಯಬೇಡಿ: ಮಾಜಿ ಸಿಎಂ ಸಿದ್ದರಾಮಯ್ಯ
Recommended image2
ಸಿದ್ದರಾಮಯ್ಯ ಕುಟುಂಬ ಹೊಸ ಬಂಗಲೆಗೆ ಶಿಫ್ಟ್: ಗಣ್ಯರನ್ನು ಆಹ್ವಾನಿಸದೇ ಪೆಂಡಾಲ್ ಮುಚ್ಚಿ ಹೊಸ ಮನೆ ಗೃಹಪ್ರವೇಶ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved