MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ; ಹಬ್ಬ ಮುಗಿಸಿ ಬರ್ತಿದ್ದ ನಾಲ್ವರ ದುರ್ಮರಣ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ; ಹಬ್ಬ ಮುಗಿಸಿ ಬರ್ತಿದ್ದ ನಾಲ್ವರ ದುರ್ಮರಣ

ಇಂದು ಮುಂಜಾನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಚಾಲಕನ ನಿದ್ದೆ ಮಂಪರಿನಿಂದ ಡಿವೈಡರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಬಳಿ ನಡೆದಿದೆ.

1 Min read
Author : Mahmad Rafik
Published : Mar 23 2026, 07:57 AM IST
Share this Photo Gallery
  • FB
  • TW
  • Linkdin
  • Whatsapp
15
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ
Image Credit : Asianet News

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಅಪಘಾತಕ್ಕೊಳಗಾದ ಬಸ್ ಕೇರಳದಿಂದ ಬೆಂಗಳೂರಿಗೆ ಬರುತ್ತಿತ್ತು. ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಅಪಘಾತ ನಡೆದಿದೆ.

25
ಡಿವೈಡರ್‌ಗೆ ಡಿಕ್ಕಿ
Image Credit : Asianet News

ಡಿವೈಡರ್‌ಗೆ ಡಿಕ್ಕಿ

ಚಾಲಕ ನಿದ್ದೆ ಮಂಪರಿನಲ್ಲಿ ಬಸ್, ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರ ಪ್ರಾಣಪಕ್ಷಿ ಹಾರಿ ಹೋಗಿದೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೊಳಗಾದ ಬಸ್‌ ಕೇರಳ ಮೂಲದ Pk ಟ್ರಾವೆಲ್ಸ್ ಗೆ ಸೇರಿದ್ದಾಗಿದೆ.

Related Articles

Related image1
Karnataka: ರಾಜ್ಯದಲ್ಲಿ ಬ್ಲ್ಯಾಕ್‌ ಸಂಡೇ : ಪ್ರತ್ಯೇಕ ಅವಘಡಗಳಿಗೆ 10 ಜನರು ಸಾವು
Related image2
ಬೆಂಗಳೂರು ಬಳಿ ಭೀಕರ ಅಪಘಾತ, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಎಸ್‌ ಡಿಕ್ಕಿಯಾಗಿ ಮೂವರು ಸಾವು
35
ಚಾಲಕನ ಅಜಾಗರೂಕತೆ
Image Credit : Asianet News

ಚಾಲಕನ ಅಜಾಗರೂಕತೆ

ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ವಾಹನ ತೆರವುಗೊಳಿಸಿ ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಅಪಘಾತದಲ್ಲಿ ಕೆಲ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಹ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

45
ಮೃತರು ಕೇರಳ- ಬೆಂಗಳೂರು ಮೂಲದವರು
Image Credit : Asianet News

ಮೃತರು ಕೇರಳ- ಬೆಂಗಳೂರು ಮೂಲದವರು

ಮೃತರನ್ನು ಮಹಮ್ಮದ್ ಪರಾನ್ (22), ರಫೀಜ್ (45) ಇಬ್ಬರೂ ಕೇರಳ ಮೂಲದವರು ಮತ್ತಿಬ್ಬರು ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ರಾತ್ರಿ ಕೇರಳದಿಂದ ಹೊರಟಿದ್ದು ಬಸ್ ಇಂದು ಬೆಳಗ್ಗೆ ಬೆಂಗಳೂರು ತಲುಪಬೇಕಿತ್ತು.

ಇದನ್ನೂ ಓದಿ: ದೇವಸ್ಥಾನದ ನಿಧಿ ದೋಚಿದವನಿಗೆ ಪಾಪಪ್ರಜ್ಞೆ: ಪೊಲೀಸ್ ಠಾಣೆಗೆ ಬಂದು ಶರಣಾದ ಇಳಕಲ್‌ ವ್ಯಕ್ತಿ

55
ಖಾಸಗಿ ಬಸ್
Image Credit : Asianet News

ಖಾಸಗಿ ಬಸ್

ಅಪಘಾತದಲ್ಲಿ ಅಬ್ದುಲ್ ಹಾಗೂ ಅಲೇಸ್ ಎಂಬವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪ್ರಕರಣ ದಾಖಲಾಗಿದೆ. ಬಸ್‌ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ರು ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಸಚಿವ ಶಿವರಾಜ್ ತಂಗಡಗಿಗೆ ಎದೆನೋವು: ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲು

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಪಘಾತ
ಬೆಂಗಳೂರು
Latest Videos
Recommended Stories
Recommended image1
ದೇವಸ್ಥಾನದ ನಿಧಿ ದೋಚಿದವನಿಗೆ ಪಾಪಪ್ರಜ್ಞೆ: ಪೊಲೀಸ್ ಠಾಣೆಗೆ ಬಂದು ಶರಣಾದ ಇಳಕಲ್‌ ವ್ಯಕ್ತಿ
Recommended image2
ಯುದ್ಧದ ಬಳಿಕ ಮಂಗಳೂರಿಗೆ ಬಂತು ಪ್ರಥಮ ಎಲ್‌ಪಿಜಿ ಹಡಗು
Recommended image3
ಒಮ್ಮೆ ಅಖಾಡಕ್ಕಿಳಿದ್ರೆ ಆನೆ ಬಂದ್ರೂ ಹಿಂದೆ ಸರಿಯಲ್ಲ - ನನಗೆ ಕಾಂಗ್ರೆಸ್ಸೇ ಇಲ್ಲಿ ಎದುರಾಳಿ
Related Stories
Recommended image1
Karnataka: ರಾಜ್ಯದಲ್ಲಿ ಬ್ಲ್ಯಾಕ್‌ ಸಂಡೇ : ಪ್ರತ್ಯೇಕ ಅವಘಡಗಳಿಗೆ 10 ಜನರು ಸಾವು
Recommended image2
ಬೆಂಗಳೂರು ಬಳಿ ಭೀಕರ ಅಪಘಾತ, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಎಸ್‌ ಡಿಕ್ಕಿಯಾಗಿ ಮೂವರು ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved