MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಲಕ್ಕುಂಡಿ ಉತ್ಖನನ ಕೆಲಸಕ್ಕೆ ಅಡ್ಡಪಡಿಸಿದ ಕಾರ್ಮಿಕ ಮುಖಂಡ ಅಶ್ವಥ್: ಸ್ಥಳೀಯರ ತರಾಟೆ, ಎತ್ತಾಕೊಂಡೋದ ಪೊಲೀಸರು!

ಲಕ್ಕುಂಡಿ ಉತ್ಖನನ ಕೆಲಸಕ್ಕೆ ಅಡ್ಡಪಡಿಸಿದ ಕಾರ್ಮಿಕ ಮುಖಂಡ ಅಶ್ವಥ್: ಸ್ಥಳೀಯರ ತರಾಟೆ, ಎತ್ತಾಕೊಂಡೋದ ಪೊಲೀಸರು!

ಗದಗದ ಲಕ್ಕುಂಡಿ ಐತಿಹಾಸಿಕ ಉತ್ಖನನ ಸ್ಥಳದಲ್ಲಿ ಕಾರ್ಮಿಕರ ಹಿತದ ನೆಪದಲ್ಲಿ ಬೆಂಗಳೂರಿನ ಹೋರಾಟಗಾರರೊಬ್ಬರು ಕೆಲಸಕ್ಕೆ ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡ ಸ್ಥಳೀಯ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಹೋರಾಟಗಾರನನ್ನು ವಶಕ್ಕೆ ಪಡೆದರು.

1 Min read
Author : Sathish Kumar KH
Published : Jan 23 2026, 06:49 PM IST
Share this Photo Gallery
  • FB
  • TW
  • Linkdin
  • Whatsapp
15
ಲಕ್ಕುಂಡಿ ಉತ್ಖನನ ಜಾಗದಲ್ಲಿ ಕಾರ್ಮಿಕ ಮುಖಂಡನ ಹೈಡ್ರಾಮಾ
Image Credit : Asianet News

ಲಕ್ಕುಂಡಿ ಉತ್ಖನನ ಜಾಗದಲ್ಲಿ ಕಾರ್ಮಿಕ ಮುಖಂಡನ ಹೈಡ್ರಾಮಾ

ಗದಗ (ಜ.23): ದೇಶದ ಗಮನ ಸೆಳೆದಿರುವ ಲಕ್ಕುಂಡಿಯ ಐತಿಹಾಸಿಕ ಉತ್ಖನನ ಸ್ಥಳದಲ್ಲಿ ಇಂದು ತೀವ್ರ ಹೈಡ್ರಾಮಾ ನಡೆದಿದೆ. ಕಾರ್ಮಿಕರ ಹಿತರಕ್ಷಣೆಯ ನೆಪದಲ್ಲಿ ಉತ್ಖನನ ಕಾರ್ಯಕ್ಕೆ ಅಡ್ಡಿಪಡಿಸಲು ಯತ್ನಿಸಿದ ಬೆಂಗಳೂರು ಮೂಲದ ಹೋರಾಟಗಾರ ಅಶ್ವಥ್ ಮರಿಗೌಡರ್ ಎಂಬುವವರನ್ನು ಸ್ಥಳೀಯ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು, ನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

25
ಏಕಾಏಕಿ ಧರಣಿ ಮತ್ತು ಬೇಡಿಕೆಗಳು
Image Credit : Asianet News

ಏಕಾಏಕಿ ಧರಣಿ ಮತ್ತು ಬೇಡಿಕೆಗಳು

ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾರ್ಯ ಭರದಿಂದ ಸಾಗುತ್ತಿರುವಾಗಲೇ ಸ್ಥಳಕ್ಕೆ ಆಗಮಿಸಿದ ಅಶ್ವಥ್ ಮರಿಗೌಡರ್, ತಾನು 'ನೆರವು ಅಸಂಘಟಿತ ಕಾರ್ಮಿಕರ ಸಂಘಟನೆ'ಯ ರಾಜ್ಯಾಧ್ಯಕ್ಷ ಎಂದು ಪರಿಚಯಿಸಿಕೊಂಡರು. ಉತ್ಖನನದಲ್ಲಿ ತೊಡಗಿರುವ ಕಾರ್ಮಿಕರಿಗೆ ಕನಿಷ್ಠ ವೇತನ ನೀಡುತ್ತಿಲ್ಲ ಮತ್ತು ಅವರಿಗೆ ಯಾವುದೇ ಸುರಕ್ಷತಾ ಪರಿಕರಗಳನ್ನು (Safety Gears) ಒದಗಿಸಿಲ್ಲ ಎಂದು ಆರೋಪಿಸಿ, ಏಕಾಏಕಿ ಕೆಲಸ ನಿಲ್ಲಿಸುವಂತೆ ಒತ್ತಾಯಿಸಿ ಧರಣಿ ಕುಳಿತರು.

Related Articles

Related image1
ಲಕ್ಕುಂಡಿ ಉತ್ಖನನ: ನಿಗೂಢ ಲೋಹದ ಉಂಡೆ, ನಾಣ್ಯಾಕಾರದ ಬಿಲ್ಲೆ ಪತ್ತೆ! ಭೂಗರ್ಭದಲ್ಲಿ ಇನ್ನೆಷ್ಟಿದೆ ರಹಸ್ಯ!
Related image2
ಲಕ್ಕುಂಡಿ ಉತ್ಖನನದಲ್ಲಿ 'ಘಟಸರ್ಪ'ದ ಆತಂಕ: ನಿಧಿ ಕಾಯುವ ಹಾವುಗಳ ಬೆನ್ನತ್ತಿ ಬಂದ ಮೈಸೂರಿನ ಉರಗ ರಕ್ಷಕರು!
35
ಸ್ಥಳೀಯರ ಆಕ್ರೋಶ ಮತ್ತು ಕ್ಲಾಸ್
Image Credit : Asianet News

ಸ್ಥಳೀಯರ ಆಕ್ರೋಶ ಮತ್ತು ಕ್ಲಾಸ್

ಉತ್ಖನನಕ್ಕೆ ಅಡ್ಡಿಪಡಿಸುತ್ತಿರುವುದನ್ನು ಕಂಡ ಲಕ್ಕುಂಡಿಯ ಗ್ರಾಮಸ್ಥರು ಪ್ರತಿಭಟನಾಕಾರನ ವಿರುದ್ಧ ತಿರುಗಿಬಿದ್ದರು. 'ಹಲವು ದಶಕಗಳ ನಂತರ ನಮ್ಮೂರಿನ ಇತಿಹಾಸ ಹೊರಬರುತ್ತಿದೆ, ಇಂತಹ ಸಮಯದಲ್ಲಿ ಬೆಂಗಳೂರಿನಿಂದ ಬಂದು ಇಲ್ಲಿ ಯಾಕೆ ಹೈಡ್ರಾಮಾ ಮಾಡುತ್ತಿದ್ದೀರಿ?' ಎಂದು ಗ್ರಾಮಸ್ಥರು ಅಶ್ವಥ್‌ನನ್ನು ಪ್ರಶ್ನಿಸಿದರು. 

ಕಾರ್ಮಿಕರ ಪರ ಹೋರಾಟದ ಹೆಸರಲ್ಲಿ ಇತಿಹಾಸದ ಶೋಧಕ್ಕೆ ಅಡ್ಡಿ ಮಾಡುತ್ತಿರುವುದಕ್ಕೆ ತೀವ್ರ ಛೀಮಾರಿ ಹಾಕಿದರು. ಗ್ರಾಮಸ್ಥರು ಮತ್ತು ಹೋರಾಟಗಾರನ ನಡುವೆ ಕೆಲಕಾಲ ತೀವ್ರ ವಾಕ್ಸಮರ ನಡೆಯಿತು.

ನಿಧಿ ಹಿಂದಿರುಗಿಸಿದ ರಿತ್ತಿ ಕುಟುಂಬಕ್ಕೆ ಲಕ್ಕುಂಡಿ ಗ್ರಾಮ ಪಂಚಾಯತ್‌ನಿಂದ ಬಂಪರ್ ಕೊಡುಗೆ ಘೋಷಣೆ

45
ಪೊಲೀಸ್ ವಶಕ್ಕೆ
Image Credit : Asianet News

ಪೊಲೀಸ್ ವಶಕ್ಕೆ

ಇನ್ನು ಗ್ರಾಮಸ್ಥರು ಮತ್ತು ಕಾರ್ಮಿಕ ಮುಖಂಡನ ನಡುವಿನ ವಾಗ್ವಾದ ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸ್ಥಳದಲ್ಲಿದ್ದ ಗ್ರಾಮಾಂತರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾದರು. ಸಾರ್ವಜನಿಕ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ನಿಷೇಧಿತ ಪ್ರದೇಶದಲ್ಲಿ ಗಲಾಟೆ ಸೃಷ್ಟಿಸಿದ ಹಿನ್ನೆಲೆಯಲ್ಲಿ ಅಶ್ವಥ್ ಮರಿಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

55
ಕೆಲಸ ಪುನಾರಂಭ
Image Credit : Asianet News

ಕೆಲಸ ಪುನಾರಂಭ

ಇದರಿಂದಾಗಿ ಕೆಲಕಾಲ ಸ್ಥಗಿತಗೊಂಡಿದ್ದ ಉತ್ಖನನ ಕಾರ್ಯವು ಮತ್ತೆ ಸುಸೂತ್ರವಾಗಿ ಆರಂಭವಾಯಿತು. ಈ ಘಟನೆಯು ಸ್ಥಳೀಯರಲ್ಲಿ ಮಾತ್ರವಲ್ಲದೆ, ಇತಿಹಾಸ ಪ್ರೇಮಿಗಳಲ್ಲೂ ಅಸಮಾಧಾನ ಮೂಡಿಸಿದೆ. ಇತಿಹಾಸದ ಮಹತ್ವದ ಘಟ್ಟದಲ್ಲಿ ಅನಗತ್ಯ ವಿವಾದ ಸೃಷ್ಟಿಸದಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಗದಗ
ಲಕ್ಕುಂಡಿ

Latest Videos
Recommended Stories
Recommended image1
ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ MLA ಕ್ಯಾಂಡಿಡೇಟ್ ರಾಜೀವ್ ಗೌಡಗೆ ಪಕ್ಷದಿಂದಲೇ ಗೇಟ್ ಪಾಸ್!
Recommended image2
Photos: ಮಂತ್ರಾಲಯದ ಶ್ರೀ ಸುಜಯೀಂದ್ರ ತೀರ್ಥರ ಆರಾಧನಾ ಮಹೋತ್ಸವದ ಭವ್ಯ ಕ್ಷಣಗಳನ್ನು ಕಣ್ತುಂಬಿಕೊಳ್ಳಿ!
Recommended image3
ಮೈಸೂರಿನಲ್ಲಿ ದುರಂತ: ಬಹುಮಹಡಿ ಕಟ್ಟಡದಿಂದ ಬಿದ್ದು ಪೇಂಟರ್ ಸಾವು!
Related Stories
Recommended image1
ಲಕ್ಕುಂಡಿ ಉತ್ಖನನ: ನಿಗೂಢ ಲೋಹದ ಉಂಡೆ, ನಾಣ್ಯಾಕಾರದ ಬಿಲ್ಲೆ ಪತ್ತೆ! ಭೂಗರ್ಭದಲ್ಲಿ ಇನ್ನೆಷ್ಟಿದೆ ರಹಸ್ಯ!
Recommended image2
ಲಕ್ಕುಂಡಿ ಉತ್ಖನನದಲ್ಲಿ 'ಘಟಸರ್ಪ'ದ ಆತಂಕ: ನಿಧಿ ಕಾಯುವ ಹಾವುಗಳ ಬೆನ್ನತ್ತಿ ಬಂದ ಮೈಸೂರಿನ ಉರಗ ರಕ್ಷಕರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved