MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru ಲಾಲ್‌ಬಾಗ್‌ನಲ್ಲಿ ಕಲ್ಲಂಗಡಿ, ದ್ರಾಕ್ಷಿ ಮೇಳಕ್ಕೆ ಚಾಲನೆ

Bengaluru ಲಾಲ್‌ಬಾಗ್‌ನಲ್ಲಿ ಕಲ್ಲಂಗಡಿ, ದ್ರಾಕ್ಷಿ ಮೇಳಕ್ಕೆ ಚಾಲನೆ

ಬೆಂಗಳೂರು(ಮಾ.04): ರೈತರಿಗೆ(Farmers) ಹೆಚ್ಚಿನ ಅನುಕೂಲ ಕಲ್ಪಿಸಲು ಹಾಪ್‌ಕಾಮ್ಸ್‌ ಮಳಿಗೆಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ(Munirathna) ಹೇಳಿದ್ದಾರೆ.

1 Min read
Kannadaprabha News | Asianet News
Published : Mar 04 2022, 05:26 AM IST
Share this Photo Gallery
  • FB
  • TW
  • Linkdin
  • Whatsapp
15

ಲಾಲ್‌ಬಾಗ್‌ನ ಹಾಪ್‌ಕಾಮ್ಸ್‌ನಲ್ಲಿ ಕರ್ನಾಟಕ ತೋಟಗಾರಿಕೆ ಇಲಾಖೆ(Karnataka Horticulture Department) ಆಯೋಜಿಸಿರುವ ದ್ರಾಕ್ಷಿ-ಕಲ್ಲಂಗಡಿ ಮೇಳ(Grape-Watermelon Fair) ಉದ್ಘಾಟಿಸಿ ಮಾತನಾಡಿದ ಅವರು, ಬೆಲೆ ಕುಸಿತವಾದಾಗ ರೈತರ ಉತ್ಪನ್ನಗಳನ್ನು ದಾಸ್ತಾನು ಮಾಡಲು ಅನುಕೂಲವಾಗುವಂತೆ 10 ಟನ್‌ ಸಾಮರ್ಥ್ಯದ ಎರಡು ಶೀತಲ ಸಂಗ್ರಹಗಾರ ಸ್ಥಾಪಿಸಲಾಗಿದೆ. ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಸಚಿವರು ಹೇಳಿದರು.

25

ಇನ್ನೂ ಅನೇಕ ಕಡೆ ಶೀತಲ ಸಂಗ್ರಹಕಗಳನ್ನು ನಿರ್ಮಿಸಿ ರೈತರಿಗೆ ನೆರವು ನೀಡುವ ಉದ್ದೇಶ ಹೊಂದಿದ್ದು, ಬಜೆಟ್‌ನಲ್ಲಿ(Budget) ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದೇವೆ. ಹಾಪ್‌ಕಾಮ್ಸ್‌ ಸಂಸ್ಥೆ ರೈತರೊಂದಿಗೆ ನೇರ ಸಂಪರ್ಕ ಹೊಂದಿರುವುದರಿಂದ ಸಂಸ್ಥೆಯ ಅಭಿವೃದ್ಧಿಯು ರೈತರ ಮೇಲೆ ಸಕಾರಾತ್ಮಕ ಪ್ರಭಾವ ಬೀರಲಿದೆ ಎಂದು ತಿಳಿಸಿದ ಸಚಿವರು

35

ಈ ವರ್ಷವು ರೈತರಿಗೆ ಉತ್ತಮ ಮಾರುಕಟ್ಟೆಕಲ್ಪಿಸಲು ಮತ್ತು ಗ್ರಾಹಕರಿಗೆ ರೈತರಿಗೆ ರಿಯಾಯಿತಿ ದರದಲ್ಲಿ ದ್ರಾಕ್ಷಿ, ಕಲ್ಲಂಗಡಿ ಒದಗಿಸಲು ಮೇಳ ಆಯೋಜಿಸಲಾಗಿದೆ. ಸುಮಾರು 10 ಬಗೆಯ ದ್ರಾಕ್ಷಿ, 2 ತಳಿಯ ಕಲ್ಲಂಗಡಿ ಹಣ್ಣನ್ನು ಮಾರಾಟಕ್ಕೆ ಇಡಲಾಗಿದೆ ಎಂದು ಸಚಿವರು ಹೇಳಿದರು. ಹಾಪ್‌ಕಾಮ್ಸ್‌ ಅಧ್ಯಕ್ಷ ಎನ್‌. ದೇವರಾಜ್‌, ವ್ಯವಸ್ಥಾಪಕ ನಿರ್ದೇಶಕ ಉಮೇಶ್‌ ಶಂಕರ್‌ ಮಿರ್ಜಿ, ನಿರ್ದೇಶಕ ಶಿವಮಾದು ಮುಂತಾದವರು ಉಪಸ್ಥಿತರಿದ್ದರು.

45

ಮೇ ತಿಂಗಳ ಅಂತ್ಯದವರೆಗೆ ಮೇಳ ಇರಲಿದೆ. ಮಾ.10ರ ವರೆಗೆ ಗ್ರಾಹಕರಿಗೆ ಕೆ.ಜಿ. ಹಣ್ಣಿನ ದರದ ಮೇಲೆ ಶೇ.5ರಷ್ಟುರಿಯಾಯಿತಿ ಸಿಗಲಿದೆ. ಮೇಳದಲ್ಲಿ ಅಂದಾಜು 400ರಿಂದ 500 ಮೆಟ್ರಿಕ್‌ ಟನ್‌ ದ್ರಾಕ್ಷಿ ಹಾಗೂ 800ರಿಂದ 1000 ಮೆಟ್ರಿಕ್‌ ಟನ್‌ ಕಲ್ಲಂಗಡಿ ಹಣ್ಣಿನ ವಾಹಿವಾಟು ನಡೆಸುವ ಗುರಿಯನ್ನು ಹೊಂದಲಾಗಿದೆ.

55

ಕೃಷ್ಣ ಶರದ್‌, ಜಂಬೂ ಶರದ್‌, ಸೋನಾಕ, ನೀಲಿ, ಟಿ.ಜಿ., ಕೃಷ್ಣ ಶರದ್‌ ಸೂಪರ್‌, ಟಿ.ಎಸ್‌., ಸೂಪರ್‌ ಸೋನಾಕ, ಶರದ್‌, ಆಸ್ಪ್ರೇಲಿಯಾ ರೇಡ್‌ ಗ್ಲೋಬ್‌, ಇಂಡಿಯನ್‌ ರೇಡ್‌ ಗ್ಲೋಬ್‌ ದ್ರಾಕ್ಷಿ ಹಾಗೂ ಕಲ್ಲಂಗಡಿಯಲ್ಲಿ ಕಿರಣ್‌, ನಾಮಧಾರಿ, ಹಳದಿ ಬಣ್ಣ ಕಲ್ಲಂಗಡಿ, ಬೀಜ ರಹಿತ ಕಲ್ಲಂಗಡಿ ಸೇರಿದಂತೆ ಇತರೆ ತಳಿಯ ಕಲ್ಲಂಗಡಿಯ ಮಾರಾಟ ಹಾಗೂ ಪ್ರದರ್ಶನ ಮೇಳದಲ್ಲಿ ಇರಲಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved