MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಅರ್ಜಿ ಹಾಕುವವರೆಗೂ ಗೃಹಲಕ್ಷ್ಮಿ, ಗೃಹಜ್ಯೋತಿ ನಿಲ್ಲತ್ತಾ? ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದ ಸ್ಪಷ್ಟನೆ

ಅರ್ಜಿ ಹಾಕುವವರೆಗೂ ಗೃಹಲಕ್ಷ್ಮಿ, ಗೃಹಜ್ಯೋತಿ ನಿಲ್ಲತ್ತಾ? ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದ ಸ್ಪಷ್ಟನೆ

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿನ ಅಕ್ರಮಗಳನ್ನು ತಡೆಯಲು ಸರ್ಕಾರವು ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಸದ್ಯದ ಫಲಾನುಭವಿಗಳಿಗೆ ಸೌಲಭ್ಯಗಳು ಮುಂದುವರೆಯಲಿವೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸ್ಪಷ್ಟಪಡಿಸಿದ್ದಾರೆ.

1 Min read
Author : Suchethana D
Published : Jun 22 2026, 06:05 PM IST
Share this Photo Gallery
  • FB
  • TW
  • Linkdin
  • Whatsapp
16
ಭಾರಿ ಅಕ್ರಮ
Image Credit : Asianet News

ಭಾರಿ ಅಕ್ರಮ

ಗೃಹಜ್ಯೋತಿ, ಗೃಹಲಕ್ಷ್ಮಿ (Gruhalakshmi scheme) ಯೋಜನೆಗಳಲ್ಲಿ ಭಾರಿ ಅಕ್ರಮ ನಡೆದಿರುವುದು ಇದಾಗಲೇ ಬೆಳಕಿಗೆ ಬಂದಿದೆ. ಇದರ ಅರ್ಥ ಗೃಹಲಕ್ಷ್ಮಿ ಯೋಜನೆ ಅನರ್ಹರಿಗೂ ಸಿಗುತ್ತಿದೆ. ಒಂದೇ ಮನೆಯಲ್ಲಿ ಇಬ್ಬರು, ಮೂವರು, ಆದಾಯ ತೆರಿಗೆ ಪಾವತಿದಾರರು, ಶ್ರೀಮಂತರು ಎಲ್ಲರೂ ಇದನ್ನು ಪಡೆಯುತ್ತಿದ್ದರೆ, ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ವಾಣಿಜ್ಯ ಬಳಕೆಗೆ ಉದ್ದೇಶಕ್ಕೂ ಗೃಹ ಬಳಕೆಯ ಸೌಲಭ್ಯ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಅನರ್ಹರು ಎಂಜಾಯ್​
Image Credit : Social Media

ಅನರ್ಹರು ಎಂಜಾಯ್​

ಇದಾಗಲೇ ಮೂರು ವರ್ಷಗಳವರೆಗೆ ಅನರ್ಹರು ಕೂಡ ಈ ಎಲ್ಲಾ ಸೌಲಭ್ಯಗಳನ್ನು ಎಂಜಾಯ್​ ಮಾಡುತ್ತಲೇ ಬಂದಿದ್ದಾರೆ. ಇದೇ ಕಾರಣಕ್ಕೆ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ಹೊಸ ಅರ್ಜಿಯನ್ನು ಕರೆದಿದೆ. ಇದರ ಬಗ್ಗೆ ಇದಾಗಲೇ ಜನಸಾಮಾನ್ಯರಿಗೆ ಸಾಕಷ್ಟು ಗೊಂದಲಗಳು ಉಂಟಾಗಿವೆ.

Related Articles

Related image1
ಬಿಎಂಟಿಎಸಿ, ಕೆಎಸ್​ಆರ್​ಟಿಸಿ ಟಿಕೆಟ್​ ದರ ಮತ್ತಷ್ಟು ಏರಿಕೆ? ಹಿಂದಿಗಿಂತಲೂ ದುಬಾರಿ? ಎಷ್ಟಾಗಲಿದೆ ರೇಟ್​
Related image2
ಶಿಶುಗಳಿಗೆ ಟ್ಯಾಗ್​ ಹಾಕಿ ಮಾರಾಟ: ಬೆಚ್ಚಿ ಬೀಳಿಸೋ 'ಬೇಬಿ ಬಜಾರ್'​ ಮಾರುಕಟ್ಟೆ ಬಯಲಿಗೆ- ಗಂಡಿಗೆ 8, ಹೆಣ್ಣಿಗೆ 4 ಲಕ್ಷ
36
ಸೌಲಭ್ಯಗಳು ಸಿಗಲ್ವಾ?
Image Credit : Social Media

ಸೌಲಭ್ಯಗಳು ಸಿಗಲ್ವಾ?

ಒಂದು ವೇಳೆ ಅರ್ಜಿ ಸಲ್ಲಿಸದೇ ಹೋದರೆ ಅಲ್ಲಿಯವರೆಗೂ ಈ ಸೌಲಭ್ಯಗಳು ತಮಗೆ ಸಿಗಲ್ವಾ, ಅರ್ಜಿ ಸಲ್ಲಿಕೆ ಯಾವಾಗ, ಎಂದು ಎಂಬೆಲ್ಲಾ ಕನ್​ಫ್ಯೂಸನ್​ ಕಾಡತೊಡಗಿದೆ. ಇದಕ್ಕೆಲ್ಲಕ್ಕೂ ಇದೀಗ ಗ್ಯಾರಂಟಿ ಯೋಜನಾ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

46
ಭಯ ಪಡುವ ಅಗತ್ಯವಿಲ್ಲ
Image Credit : our own

ಭಯ ಪಡುವ ಅಗತ್ಯವಿಲ್ಲ

ಸದ್ಯ ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ. ಏಕೆಂದರೆ, ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಸದ್ಯಕ್ಕೆ ಹೊಸ ಅರ್ಜಿ ಸಲ್ಲಿಸುವ ಅವಕಾಶ ಇಲ್ಲ. ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ ಜೊತೆ ಹೊಸ ಅರ್ಜಿ ಸಲ್ಲಿಕೆ ಕೂಡ ವಿಳಂಬವಾಗುತ್ತಿದೆ. ಆದ್ದರಿಂದ ಈಗ ಸಿಗುತ್ತಿರುವ ಸೌಲಭ್ಯಗಳು ನಿಲ್ಲುವುದಿಲ್ಲ, ಮುಂದುವರೆಯಲಿದೆ ಎಂದಿದ್ದಾರೆ.

56
ದಿನಾಂಕ ನಿಗದಿಯಾಗಿಲ್ಲ
Image Credit : our own

ದಿನಾಂಕ ನಿಗದಿಯಾಗಿಲ್ಲ

ಸದ್ಯದ ಮಟ್ಟಿಗೆ ಈ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ನಿಗದಿಯಾಗಿಲ್ಲ. ಅರ್ಹ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಮಾಡಬೇಕಿದೆ. ಅದು ಆದ ಮೇಲೆ ಮುಂದಿನ ಕೆಲಸ. ಅಲ್ಲಿಯವರೆಗೂ ಅರ್ಜಿ ಸಲ್ಲಿಕೆಗೆ ದಿನಾಂಕ ಘೋಷಣೆಯಾಗೋದಿಲ್ಲ. ಈ ಹಿನ್ನೆಲೆಯಲ್ಲಿ ಅಲ್ಲಿಯವರೆಗೂ ಗ್ಯಾರೆಂಟಿ ನಿಲ್ಲಲ್ಲ ಎಂದಿದ್ದಾರೆ ರೇವಣ್ಣನವರು.

66
ಆ್ಯಪ್ ಮೂಲಕ ಗ್ಯಾರಂಟಿ ಪರಿಷ್ಕರಣೆ
Image Credit : our own

ಆ್ಯಪ್ ಮೂಲಕ ಗ್ಯಾರಂಟಿ ಪರಿಷ್ಕರಣೆ

ಈ ಕುರಿತು ನಡೆದಿರುವ ಸಭೆಯಲ್ಲಿ, ಪರಿಷ್ಕರಣೆ ಮುಗಿಯುವವರೆಗೂ ಅರ್ಜಿ ಆಹ್ವಾನ ಮಾಡದಿರಲು ತೀರ್ಮಾನ ಮಾಡಲಾಗಿದೆ. ಈ ಹಿನ್ನೆಲೆ ಅರ್ಜಿ ಸಲ್ಲಿಕೆಗೆ ಜನರು ಇನ್ನೂ ಕಾಯಬೇಕಾಗಿದೆ. ಆ್ಯಪ್ ಮೂಲಕ ಗ್ಯಾರಂಟಿ ಪರಿಷ್ಕರಣೆ ನಡೆಸಲು ಸರ್ಕಾರ ನಿರ್ಧರಿಸಿದ್ದು, ಒಂದು ವಾರದಲ್ಲಿ ಮರು ಪರಿಶೀಲನೆ ಸರ್ವೆ ಶುರುವಾಗಲಿದೆ ಎಂದು ಮಾಧ್ಯಮಗಳಿಗೆ ಅವರು ವಿವರಣೆ ನೀಡಿದ್ದಾರೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಗೃಹಲಕ್ಷ್ಮಿ ಯೋಜನೆ
ಸರ್ಕಾರಿ ಯೋಜನೆಗಳು
ಕರ್ನಾಟಕ ಸರ್ಕಾರ

Latest Videos
Recommended Stories
Recommended image1
Anekal: ಸಿನಿಮಾ ಸ್ಟೈಲ್‌ನಲ್ಲಿ ಲಾರಿ ದರೋಡೆ: 24 ಗಂಟೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಹೇಗೆ?
Recommended image2
ಕಾಗದದ ಮೇಲಷ್ಟೇ ಉಳಿದ ಯೋಜನೆಗಳು: ಸಣ್ಣ ಜಲವಿದ್ಯುತ್ ವಲಯದಲ್ಲಿ ಕರ್ನಾಟಕ ನಂ.1 ಆಗಿದ್ದರೂ ನೂರಾರು ಪ್ರಾಜೆಕ್ಟ್ ರದ್ದು!
Recommended image3
ಅನ್ನಭಾಗ್ಯ ಯೋಜನೆಗೂ ‘ಸರ್ಜರಿ’: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು? ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟನೆ
Related Stories
Recommended image1
ಬಿಎಂಟಿಎಸಿ, ಕೆಎಸ್​ಆರ್​ಟಿಸಿ ಟಿಕೆಟ್​ ದರ ಮತ್ತಷ್ಟು ಏರಿಕೆ? ಹಿಂದಿಗಿಂತಲೂ ದುಬಾರಿ? ಎಷ್ಟಾಗಲಿದೆ ರೇಟ್​
Recommended image2
ಶಿಶುಗಳಿಗೆ ಟ್ಯಾಗ್​ ಹಾಕಿ ಮಾರಾಟ: ಬೆಚ್ಚಿ ಬೀಳಿಸೋ 'ಬೇಬಿ ಬಜಾರ್'​ ಮಾರುಕಟ್ಟೆ ಬಯಲಿಗೆ- ಗಂಡಿಗೆ 8, ಹೆಣ್ಣಿಗೆ 4 ಲಕ್ಷ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved