MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • PHOTOS: ಗಣೇಶ ಭಕ್ತರ ಮೇಲೆ ಸಾವಿನಂತೆ ಎರಗಿದ ಕ್ಯಾಂಟರ್‌, ರಸ್ತೆಯಲ್ಲೇ ಹೆಣವಾದ 8 ಮಂದಿ!

PHOTOS: ಗಣೇಶ ಭಕ್ತರ ಮೇಲೆ ಸಾವಿನಂತೆ ಎರಗಿದ ಕ್ಯಾಂಟರ್‌, ರಸ್ತೆಯಲ್ಲೇ ಹೆಣವಾದ 8 ಮಂದಿ!

hassan truck crashes ganesha procession ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕ್ಯಾಂಟರ್‌ ನುಗ್ಗಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಕ್‌ ಸವಾರನನ್ನು ರಕ್ಷಿಸಲು ಹೋಗಿ ಚಾಲಕ ನಿಯಂತ್ರಣ ತಪ್ಪಿದ್ದೇ ದುರಂತಕ್ಕೆ ಕಾರಣ.

2 Min read
Santosh Naik
Published : Sep 12 2025, 10:26 PM IST
Share this Photo Gallery
  • FB
  • TW
  • Linkdin
  • Whatsapp
110
Image Credit : Asianet News

ಗಣೇಶ ಮೆರವಣಿಗೆ ಮೇಲೆ ಭಾರೀ ಕ್ಯಾಂಟರ್‌ ನುಗ್ಗಿದ ಪರಿಣಾಮದಿಂದಾಗಿ 5 ಮಂದಿ ಸ್ಥಳದಲ್ಲಿಯೇ ಸಾವು ಕಂಡಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

210
Image Credit : Asianet News

ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ಈ ಘನಘೋರ ದುರಂತ ಸಂಭವಿಸಿದೆ.

Related Articles

Related image1
ಹಾಸನ ಗಣೇಶ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್; 6 ಮಂದಿ ದಾರುಣ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
Related image2
ಗಣೇಶ ವಿಸರ್ಜನೆ ಗಲಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿ.ಎಸ್. ಪುಟ್ಟರಾಜು ಆಕ್ರೋಶ
310
Image Credit : Asianet News

ಒಂದೆಡೆ ಮೆರವಣಿಗೆ ಸಾಗುತ್ತಿದ್ದರೆ, ಎದುರಿಗೆ ಬಂದ ಬೈಕ್‌ ಸವಾರನ ರಕ್ಷಣೆ ಮಾಡಲು ಹೋದ ಕ್ಯಾಂಟರ್‌ ಚಾಲಕ ಭಾರೀ ವಾಹನವನ್ನು ಮೆರವಣಿಗೆ ಮೇಲೆ ಹರಿಸಿದ್ದಾನೆ. ಇದರಿಂದಾಗಿ ಘನಘೋರ ದುರಂತ ಸಂಭವಿಸಿದೆ.

410
Image Credit : Asianet News

ಘಟನೆಯಲ್ಲಿ ಮೂರು ಮಂದಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಡಿಸಿ ಹಾಗೂ ಎಸ್‌ಪಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳೀಯ ಗ್ರಾಮಸ್ಥರು ಕೂಡ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

510
Image Credit : Asianet News

ಆಸ್ಪತ್ರೆಗಳಿಗೆ ಸಾಲು ಸಾಲು ಆಂಬ್ಯುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಸಾಗಿಸಲಾಗಿದೆ. ಘಟನಾ ಸ್ಥಳದಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬದುಕುಳಿದವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ.

610
Image Credit : Asianet News

ಘಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್‌ಡಿ ರೇವಣ್ಣ ಇಡೀ ಘಟನೆಗೆ ಸರ್ಕಾರವೇ ಕಾರಣ ಎಂದು ಹೇಳಿದರು. ರಸ್ತೆಯಲ್ಲಿ ಮೆರವಣಿಗೆ ಹೋಗುವಾಗ ಸಾಕಷ್ಟಯ ಭದ್ರತೆಯನ್ನು ನೀಡಲು ಪೊಲೀಸರು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

710
Image Credit : Asianet News

ಘಟನಾ ಸ್ಥಳದಲ್ಲಿ ಎಲ್ಲಿಯೂ ಪೊಲೀಸರೇ ಇದ್ದಿರಲಿಲ್ಲ. ಕೆಲ ಬ್ಯಾರಿಕೇಡ್‌ಗಳನ್ನು ಹಾಕಿದ್ದರೆ, ಈ ಅಪಾಯವನ್ನು ತಪ್ಪಿಸಬಹುದಿತ್ತು ಎಂದು ಎಚ್‌ಡಿ ರೇವಣ್ಣ ಹೇಳಿದ್ದಾರೆ.

810
Image Credit : Asianet News

ಶರವೇಗದಲ್ಲಿ ಇದ್ದ ಕ್ಯಾಂಟರ್‌ ಏಕಾಏಕಿಯಾಗಿ ಮೆರವಣಿಗೆ ಮೇಲೆ ನುಗ್ಗಿದ್ದೇ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ಎನ್ನಲಾಗಿದೆ. ಮೆರವಣಿಗೆ ಮೇಲೆ ಅಂದಾಜು 20 ಮೀಟರ್‌ವರೆಗ ಕ್ಯಾಂಟರ್‌ ಚಲಿಸಿದ್ದರಿಂದ ಭಾರೀ ಅವಘಢ ಎದುರಾಗಿದೆ.

910
Image Credit : Asianet News

ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

1010
Image Credit : Asianet News

ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಹಾಸನ
ಅಪಘಾತ
ಕರ್ನಾಟಕ ಸುದ್ದಿ
ಗಣೇಶ ಚತುರ್ಥಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved