MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Channakeshava temple donation theft: ಹಾಸನದ ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ದೇಗುಲದಲ್ಲೂ ಲಕ್ಷ ಲಕ್ಷ ಹುಂಡಿ ಹಣ ಕಳವು!

Channakeshava temple donation theft: ಹಾಸನದ ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ದೇಗುಲದಲ್ಲೂ ಲಕ್ಷ ಲಕ್ಷ ಹುಂಡಿ ಹಣ ಕಳವು!

Hassan world famous belur channakeshava temple donation theft:  ಹಾಸನ ಪಟ್ಟಣದ ಶ್ರೀ ಚನ್ನಕೇಶವ ದೇಗುಲದ ಹುಂಡಿ ಹಣ ಎಣಿಕೆ ಮಾಡುವ ವೇಳೆ ₹1.98 ಲಕ್ಷ ನಗದು ಕಳ್ಳತನ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ವಿಡಿಯೋ ಗ್ರಾಫರ್ ನೀಲಕಂಠ ಸಿಕ್ಕಿಬಿದ್ದಿದ್ದು ಹೇಗೆ?

2 Min read
Author : Ravi Janekal
Published : Jul 09 2026, 10:46 AM IST
Share this Photo Gallery
  • FB
  • TW
  • Linkdin
  • Whatsapp
15
ವಿಶ್ವ ವಿಖ್ಯಾತ ಹಾಸನದ ಚನ್ನಕೇಶವ ದೇಗುಲದಲ್ಲಿ ದೇಣಿಗೆ ಕಳ್ಳತನ
Image Credit : Asianet News

ವಿಶ್ವ ವಿಖ್ಯಾತ ಹಾಸನದ ಚನ್ನಕೇಶವ ದೇಗುಲದಲ್ಲಿ ದೇಣಿಗೆ ಕಳ್ಳತನ

ಅಯೋಧ್ಯೆ ರಾಮ ಮಂದಿರ, ಬದರಿನಾಥ ದೇಗುಲದಲ್ಲಿ ದೇಣಿಗೆ ಕಳವು ಪ್ರಕರಣದಲ್ಲಿ ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಇದೀಗ ಕರ್ನಾಟಕದ ಹಾಸನ ಜಿಲ್ಲೆಯ ವಿಶ್ವ ವಿಖ್ಯಾತ ಚನ್ನಕೇಶವ ದೇಗುಲ(Channakeshava Temple)ದಲ್ಲಿಯೂ ಹುಂಡಿ ಎಣಿಕೆ ವೇಳೆ ಲಕ್ಷ ಲಕ್ಷ ಹಣ ಎಗರಿಸಿದ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಬೇಲೂರು ಚನ್ನಕೇಶವ ದೇವಾಲಯದಲ್ಲಿ ಕಳ್ಳತನ ಆರೋಪಿ ವಶಕ್ಕೆ
Image Credit : Asianet News

ಬೇಲೂರು ಚನ್ನಕೇಶವ ದೇವಾಲಯದಲ್ಲಿ ಕಳ್ಳತನ ಆರೋಪಿ ವಶಕ್ಕೆ

ಗರ್ಭಗುಡಿಯ ಹುಂಡಿ ತೆಗೆದು ಹಣವನ್ನು ಎಣಿಸಲು ದೇಗುಲದ ಹಿಂಭಾಗದ ಕಲ್ಯಾಣ ಮಂಟಪಕ್ಕೆ ತಂದು ಸುರಿಯುತ್ತಿದ್ದ ಸಂದರ್ಭದಲ್ಲಿ ಅಲ್ಲಿ ವಿಡಿಯೋ ಚಿತ್ರೀಕರಣ ಮಾಡಲು ನಿಯೋಜಿಸಿದ್ದ ನೀಲಕಂಠ ಎಂಬಾತ ಹಣ ಕಳವು ಮಾಡಿದ್ದು, ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಳ್ಳತನದ ಯತ್ನ ವಿಫಲವಾಗಿದೆ. ಆರೋಪಿ ಹುಂಡಿಯಿಂದ ತೆಗೆದ ಕಳವು ಮಾಡಲು ಯತ್ನಿಸಿದ್ದ ವೇಳೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Related Articles

Related image1
ತಿರುಪತಿ, ಶಿರಡಿ ಸಾಯಿಬಾಬಾ ಮಂದಿರದಲ್ಲಿ ದೇಣಿಗೆ ಹೇಗೆ ಲೆಕ್ಕ ಹಾಕಲಾಗುತ್ತೆ ಗೊತ್ತಾ?
Related image2
Badarinath Temple: ಅಯೋಧ್ಯೆ ಬಳಿಕ ಬದರೀನಾಥ ದೇಗುಲದಲ್ಲೂ ಹುಂಡಿ ಅಕ್ರಮ, ತನಿಖೆಗೆ ಆದೇಶ
35
ವಿಡಿಯೋ ಗ್ರಾಫರ್ ನೀಲಕಂಠನಿಂದ ನಿಂದ ಕೃತ್ಯ
Image Credit : Asianet News

ವಿಡಿಯೋ ಗ್ರಾಫರ್ ನೀಲಕಂಠನಿಂದ ನಿಂದ ಕೃತ್ಯ

ದೇಣಿಗೆ ಹಣ ಕಳ್ಳತನವಾಗಬಾರದು ಎಲ್ಲವೂ ಪಾರದರ್ಶಕವಾಗಿಡಲು ವಿಡಿಯೋ ರೆಕಾರ್ಡ್ ಮಾಡಲು ನೀಲಕಂಠನನ್ನು ಕರೆಸಲಾಗಿತ್ತು. ಆದರೆ ಘಟನೆ ಬಳಿಕ ವಿಡಿಯೋ ಮಾಡಲು ಕರೆಸಿದರೋ, ವಿಡಿಯೋ ಮಾಡುವ ನೆಪದಲ್ಲಿ ದೇಗುಲದ ಹಣ ಎಗರಿಸಲು ಕರೆಸಿದರೋ ಎಂದು ಸ್ಥಳೀಯರು, ಭಕ್ತರು ಅನುಮಾನ ವ್ಯಕ್ತಪಡಿಸಿದ್ದಾರೆ. 

ವಿಡಿಯೋ ಗ್ರಾಫರ್ ನೀಲಕಂಠ ಸಾವಿರೋ ಎರಡು ಸಾವಿರೋ ಕದ್ದಿದ್ದಲ್ಲ. ಈ ಭೂಪ ಬರೋಬ್ಬರಿ 1.98 ಲಕ್ಷ ಹಣ ಎಗರಿಸಿದ್ದಾನೆ ಊಹಿಸಿಕೊಳ್ಳಿ. ಇಷ್ಟೊಂದು ಹಣ ಸಿಬ್ಬಂದಿ ನಡುವೆ ಕದಿಯಲು ಹೇಗೆ ಸಾಧ್ಯ?

45
ಚನ್ನಕೇಶವ ದೇವಾಲಯ ಹುಂಡಿ ಹಣ ಕಳವು: ಆಡಳಿತ ಮಂಡಳಿ ಕೈವಾಡ?
Image Credit : Asianet News

ಚನ್ನಕೇಶವ ದೇವಾಲಯ ಹುಂಡಿ ಹಣ ಕಳವು: ಆಡಳಿತ ಮಂಡಳಿ ಕೈವಾಡ?

ಕಾರ್ಯಾಚರಣೆಯ ವೇಳೆ ಒಟ್ಟು 1,98,000 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಕಳ್ಳತನದ ಯತ್ನದ ಹಿಂದಿನ ಉದ್ದೇಶ ಹಾಗೂ ಇತರರ ಕೈವಾಡವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದರೂ, ತ್ವರಿತವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಯ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

55
ಚನ್ನಕೇಶವ ದೇಗುಲ ಹುಂಡಿ ಎಣಿಕೆ ಕಳ್ಳತನ ಪ್ರಕರಣ ತನಿಖೆ
Image Credit : Asianet News

ಚನ್ನಕೇಶವ ದೇಗುಲ ಹುಂಡಿ ಎಣಿಕೆ ಕಳ್ಳತನ ಪ್ರಕರಣ ತನಿಖೆ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ಅಲ್ಲೇ ಇದ್ದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ತಿಳಿಸಿದರು.

ತನಿಖೆಗೆ ಸ್ಥಳೀಯರ ಆಗ್ರಹ 

ದೇವಾಲಯ ಆಡಳಿತ ಮಂಡಳಿ, ಸಿಬ್ಬಂದಿ, ಅಧಿಕಾರಿಗಳ ಕೈವಾಡವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಧಿಕಾರಿಗಳ ಶಾಮೀಲಿನಿಂದ ಹಲವು ಬಾರಿ ಕಳ್ಳತನ ಮಾಡಿರುವ ಆರೋಪ ಕೇಳಿಬಂದಿದೆ ಎಂದರು. ಈ ಬಗ್ಗೆ ಸಹ ತನಿಖೆಯಾಗಬೇಕು, ಅಧಿಕಾರಿಗಳ ಪಾತ್ರವನ್ನ ಪತ್ತೆಹಚ್ಚಬೇಕು ಎಂಬುದು ಸ್ಥಳೀಯರು ಆಗ್ರಹಿಸಿದರು.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಹಾಸನ
ಕಳ್ಳತನ ಪ್ರಕರಣ
ದೇವಸ್ಥಾನ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಹಾರೋಹಳ್ಳಿಯಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ? ಹೊಸ ಸ್ಥಳದತ್ತ ಸರ್ಕಾರದ ಚಿಂತನೆ
Recommended image2
ಬೆಂಗಳೂರು ನಿವಾಸಿಗಳೇ ಗಮನಿಸಿ, ಬಿಡಾಡಿ ವಾಹನಗಳ ತೆರವಿಗೆ ಜಿಬಿಎ ಮಹಾ ಕಾರ್ಯಾಚರಣೆ, ಈ ಆ್ಯಪ್‌ ಡೌನ್‌ಲೋಡ್ ಮಾಡಿಕೊಳ್ಳಿ
Recommended image3
ಬಾಗಲಕೋಟೆ: ಘಟಪ್ರಭಾ ನದಿಗೆ ಅಡ್ಡಲಾಗಿ ರೈಲ್ವೆ ಸೇತುವೆ, ರೈತರ ಹಿತಾಸಕ್ತಿ ರಕ್ಷಣೆಗೆ ವೈಜ್ಞಾನಿಕವಾಗಿ ನಿರ್ಮಾಣ
Related Stories
Recommended image1
ತಿರುಪತಿ, ಶಿರಡಿ ಸಾಯಿಬಾಬಾ ಮಂದಿರದಲ್ಲಿ ದೇಣಿಗೆ ಹೇಗೆ ಲೆಕ್ಕ ಹಾಕಲಾಗುತ್ತೆ ಗೊತ್ತಾ?
Recommended image2
Badarinath Temple: ಅಯೋಧ್ಯೆ ಬಳಿಕ ಬದರೀನಾಥ ದೇಗುಲದಲ್ಲೂ ಹುಂಡಿ ಅಕ್ರಮ, ತನಿಖೆಗೆ ಆದೇಶ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved