MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಮುಂದಿನ 7 ದಿನ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ; ಬೆಂಗಳೂರಿನಲ್ಲಿಯೂ ವರುಣನ ಆರ್ಭಟ

ಮುಂದಿನ 7 ದಿನ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ; ಬೆಂಗಳೂರಿನಲ್ಲಿಯೂ ವರುಣನ ಆರ್ಭಟ

ಮುಂದಿನ 7 ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದ್ದು, ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಧಾರಾಕಾರ ಮಳೆಯಿಂದ ಪ್ರವಾಸಿಗರಿಗೆ ತೊಂದರೆಯಾಗಿದೆ. ರಾಜ್ಯದ ಹಲವೆಡೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

2 Min read
Author : Mahmad Rafik
Published : May 25 2026, 08:53 AM IST
Share this Photo Gallery
  • FB
  • TW
  • Linkdin
  • Whatsapp
15
7 ದಿನಗಳ ಕಾಲ ಗುಡುಗು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ
Image Credit : stockPhoto

7 ದಿನಗಳ ಕಾಲ ಗುಡುಗು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಮುಂದಿನ 7 ದಿನಗಳ ಕಾಲ ಗುಡುಗು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಜಂಟಿಯಾಗಿ ರಾಜ್ಯಕ್ಕೆ ಮಳೆಯ ಮುನ್ಸೂಚನೆ ನೀಡಿವೆ.

Add Asianetnews Kannada as a Preferred SourcegooglePreferred
25
ಉತ್ತರ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ
Image Credit : stockPhoto

ಉತ್ತರ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೇ 25ರಂದು ಉತ್ತರ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನದ ವೈಪರೀತ್ಯದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯದಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಆದರೆ, ಮೇ 28 ಮತ್ತು 30ರಂದು ರಾಜ್ಯದಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ.

Related Articles

Related image1
ಹಂಪಿಯಲ್ಲಿ ಮತ್ತೆರಡು ಆಳ್ವರ್‌ ವಿಗ್ರಹ, 23 ಮೀಟರ್‌ ಉದ್ದದ ಕಲ್ಲಿನ ಕಾಲುವೆ ಪತ್ತೆ
Related image2
ನೀತಾ ಅಂಬಾನಿಯನ್ನು ರೋಸ್ಟ್ ಮಾಡಿದ ವಿದ್ಯಾರ್ಥಿ; ಮುಖ ಮುಚ್ಚಿಕೊಂಡ ನಕ್ಕ ಮುಕೇಶ್ ಮಡದಿ
35
ಬೆಂಗಳೂರಿನ ಹವಾಮಾನ ವರದಿ
Image Credit : stockPhoto

ಬೆಂಗಳೂರಿನ ಹವಾಮಾನ ವರದಿ

ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ನಗರದಲ್ಲಿ ಪ್ರತಿದಿನ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮೋಡಗಳು ದಟ್ಟವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

45
ಗರಿಷ್ಠ ಉಷ್ಣಾಂಶ 32°C
Image Credit : stockPhoto

ಗರಿಷ್ಠ ಉಷ್ಣಾಂಶ 32°C

ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮಳೆ ಬರುವ ಸಮಯದಲ್ಲಿ ನಗರದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಬಹುದು. ಮುಂದಿನ 2 ದಿನಗಳ ಕಾಲ ಬೆಂಗಳೂರಿನ ಗರಿಷ್ಠ ಉಷ್ಣಾಂಶ 32°C ಹಾಗೂ ಕನಿಷ್ಠ ಉಷ್ಣಾಂಶ 22°C ಆಸುಪಾಸಿನಲ್ಲಿ ದಾಖಲಾಗುವ ಸಾಧ್ಯತೆಯಿದೆ.

55
ವಿಜಯನಗರ ಜಿಲ್ಲೆಯಲ್ಲಿ ಮಳೆ
Image Credit : stockPhoto

ವಿಜಯನಗರ ಜಿಲ್ಲೆಯಲ್ಲಿ ಮಳೆ

ಜಿಲ್ಲೆಯಲ್ಲಿ ಶನಿವಾರ ರಾತ್ರಿ, ಭಾನುವಾರ ಬೆಳಗಿನಜಾವ ಸುರಿದ ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಶ್ವವಿಖ್ಯಾತ ಹಂಪಿಯಲ್ಲಿ ಸಹ ಭಾರೀ ಮಳೆಯಿಂದಾಗಿ ಸ್ಮಾರಕಗಳ ಮುಂದೆ ಹಾಗೂ ಸ್ಮಾರಕಗಳಿಗೆ ತೆರಳುವ ರಸ್ತೆಯಲ್ಲಿ ಮಳೆ ನೀರು ನಿಂತು ಪ್ರವಾಸಿಗರ ಸಂಚಾರ ಅಡಚಣೆಯಾಯಿತು. ಹಂಪಿಯಲ್ಲಿ ಪ್ರವಾಸಿಗರು ಮಳೆ ನೀರಿನಲ್ಲಿ ಸಂಚರಿಸಿ ಹಂಪಿಯ ಸ್ಮಾರಕಗಳನ್ನು ವೀಕ್ಷಿಸಿದರು. ಹಂಪಿಯ ಸ್ಮಾರಕಗಳ ಬಳಿ ನೀರು ನಿಲ್ಲದೇ ಹರಿದು ಹೋಗುವಂತಹ ವ್ಯವಸ್ಥೆ ಕಲ್ಪಿಸಬೇಕಾಗಿತ್ತು. ಹಂಪಿಯ ರಸ್ತೆಗಳಲ್ಲಿ ತಗ್ಗುಗಳು ಬಿದ್ದು ರಸ್ತೆಯಲ್ಲಿ ಮಳೆ ನೀರು ನಿಲ್ಲುತ್ತಿರುವುದರಿಂದ ಕೆಲ ಪ್ರವಾಸಿಗರು ಬೇಸತ್ತು ಪ್ರವಾಸೋದ್ಯಮ ಮತ್ತು ಜಿಲ್ಲಾಡಳಿಕ್ಕೆ ಶಪಿಸಿಕೊಳ್ಳುತ್ತಿದ್ದರು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕರ್ನಾಟಕ ಮಳೆ
ಬೆಂಗಳೂರು ಮಳೆ

Latest Videos
Recommended Stories
Recommended image1
ಭಟ್ಕಳದ ಮೂರಿನಕಟ್ಟೆ ವಿವಾದ ಹಿನ್ನೆಲೆ 3 ದಿನ ನಿಷೇಧಾಜ್ಞೆ ಜಾರಿ! ಅಷ್ಟಕ್ಕೂ ಮಧ್ಯರಾತ್ರಿ ನಡೆದಿದ್ದೇನು?
Recommended image2
ಹಂಪಿಯಲ್ಲಿ ಮತ್ತೆರಡು ಆಳ್ವರ್‌ ವಿಗ್ರಹ, 23 ಮೀಟರ್‌ ಉದ್ದದ ಕಲ್ಲಿನ ಕಾಲುವೆ ಪತ್ತೆ
Recommended image3
Shivamogga: ಮಾಲ್ಗುಡಿ ಡೇಸ್ ಖ್ಯಾತಿಯ ಅರಸಾಳು ರೈಲ್ವೆ ನಿಲ್ದಾಣದ ಕತ್ತಲೆಯ ಕಥೆ
Related Stories
Recommended image1
ಹಂಪಿಯಲ್ಲಿ ಮತ್ತೆರಡು ಆಳ್ವರ್‌ ವಿಗ್ರಹ, 23 ಮೀಟರ್‌ ಉದ್ದದ ಕಲ್ಲಿನ ಕಾಲುವೆ ಪತ್ತೆ
Recommended image2
ನೀತಾ ಅಂಬಾನಿಯನ್ನು ರೋಸ್ಟ್ ಮಾಡಿದ ವಿದ್ಯಾರ್ಥಿ; ಮುಖ ಮುಚ್ಚಿಕೊಂಡ ನಕ್ಕ ಮುಕೇಶ್ ಮಡದಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved