MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕೋಮಲಾಪುರ ಸರ್ಕಾರಿ ಶಾಲೆಯಲ್ಲಿ ಕೋಲಾಹಲ ಎಬ್ಬಿಸಿದ ಹೆಡ್ ಮಾಸ್ಟರ್ 2ನೇ ಹೆಂಡ್ತಿ; ಮಕ್ಕಳಿಲ್ಲದ ರೂಮಿನಲ್ಲಿ ರಂಪಾಟ!

ಕೋಮಲಾಪುರ ಸರ್ಕಾರಿ ಶಾಲೆಯಲ್ಲಿ ಕೋಲಾಹಲ ಎಬ್ಬಿಸಿದ ಹೆಡ್ ಮಾಸ್ಟರ್ 2ನೇ ಹೆಂಡ್ತಿ; ಮಕ್ಕಳಿಲ್ಲದ ರೂಮಿನಲ್ಲಿ ರಂಪಾಟ!

ಕೊಪ್ಪಳ ಜಿಲ್ಲೆಯ ಕೋಮಲಾಪುರ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ಕೌಟುಂಬಿಕ ಕಲಹವು ಶಾಲೆಯವರೆಗೂ ತಲುಪಿದೆ. ಅವರ ಎರಡನೇ ಪತ್ನಿ ನಿತ್ಯವೂ ಶಾಲೆಗೆ ಬಂದು ಗಲಾಟೆ ಮಾಡುತ್ತಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು, ಗ್ರಾಮಸ್ಥರು ಹಾಗೂ ಪೋಷಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.

2 Min read
Author : Sathish Kumar KH
Published : Mar 04 2026, 06:28 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಕೊಪ್ಪಳ (ಮಾ.04): ವಿದ್ಯಾ ದೇಗುಲವಾಗಬೇಕಿದ್ದ ಶಾಲಾ ಆವರಣವೊಂದು ಈಗ ಕೌಟುಂಬಿಕ ಕಲಹದ ರಣರಂಗವಾಗಿ ಮಾರ್ಪಟ್ಟಿದೆ. ಶಾಲೆಯ ಮುಖ್ಯ ಶಿಕ್ಷಕನ ವೈಯಕ್ತಿಕ ಬದುಕಿನ ಜಗಳ ಬೀದಿಗೆ ಬಂದಿದ್ದು, ಅವರ ಎರಡನೇ ಪತ್ನಿ ಪ್ರತಿದಿನ ಶಾಲೆಗೆ ಬಂದು ರಂಪಾಟ ಮಾಡುತ್ತಿರುವುದು ಮಕ್ಕಳ ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಆತಂಕಕಾರಿ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ನಡೆದಿದೆ.

25
Image Credit : Asianet News

ಘಟನೆಯ ವಿವರ:

ಕೋಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಸಿದ್ದೇಶ ಶೆಟ್ಟರ್ ಈ ವಿವಾದದ ಕೇಂದ್ರಬಿಂದು. ಸಿದ್ದೇಶ ಅವರಿಗೆ ಈಗಾಗಲೇ ಮೊದಲ ಪತ್ನಿ ಇದ್ದಾರೆ ಎನ್ನಲಾಗಿದ್ದರೂ, ಕಳೆದ ನಾಲ್ಕು ವರ್ಷಗಳ ಹಿಂದೆ ಚನ್ನಮ್ಮ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸಂಸಾರ ಸುಗಮವಾಗಿಯೇ ಸಾಗಿತ್ತು. ಆದರೆ, ಕಳೆದ ನಾಲ್ಕೈದು ತಿಂಗಳಿಂದ ದಂಪತಿಗಳ ನಡುವೆ ಬಿರುಕು ಮೂಡಿದ್ದು, ಇದು ಶಾಲಾ ಆವರಣದವರೆಗೂ ತಲುಪಿದೆ.

Related Articles

Related image1
ಗೊಲ್ಲರಹಟ್ಟಿ ಕಾವ್ಯಾಳನ್ನು 8 ವರ್ಷ ಪ್ರೀತಿಸಿ, ನಿಶ್ಚಿತಾರ್ಥ ಬಳಿಕ ವರದಕ್ಷಿಣೆಗಾಗಿ ಕೈಕೊಡಲು ಮುಂದಾದ ಶಿಕ್ಷಕ!
Related image2
ಸರ್ಕಾರಿ ಶಾಲಾ ವಿದ್ಯಾರ್ಥಿನಿ ಬಟ್ಟೆ ಎಳೆದ ಶಿಕ್ಷಕ ಜಡೇಶನ ಜುಟ್ಟು ಹಿಡಿದ ಗ್ರಾಮಸ್ಥರು! ಶಾಲೆಮುಂದೆ ಪ್ರತಿಭಟನೆ
35
Image Credit : Asianet News

ನಿತ್ಯವೂ ಶಾಲೆಗೆ ಬಂದು ರಂಪಾಟ:

ಮುಖ್ಯ ಶಿಕ್ಷಕ ಸಿದ್ದೇಶ ಅವರ ಎರಡನೇ ಪತ್ನಿ ಚನ್ನಮ್ಮ ಕಳೆದ ಕೆಲವು ತಿಂಗಳಿಂದ ನಿಯಮಿತವಾಗಿ ಶಾಲೆಗೆ ಆಗಮಿಸಿ ಗಲಾಟೆ ಮಾಡುತ್ತಿದ್ದಾರೆ. ಇಂದು ಕೂಡ ಶಾಲೆಗೆ ನುಗ್ಗಿದ ಚನ್ನಮ್ಮ, ನೇರವಾಗಿ ಮುಖ್ಯ ಶಿಕ್ಷಕರ ಕೊಠಡಿಗೆ ತೆರಳಿ ಸಿದ್ದೇಶ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಜೋರಾಗಿ ಕಿರುಚಾಡುತ್ತಾ ಹೈಡ್ರಾಮಾ ಮಾಡಿರುವ ಆಕೆಯ ವರ್ತನೆಯಿಂದ ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ದಂಗಾಗಿದ್ದಾರೆ.

45
Image Credit : Asianet News

ರೋಸಿಹೋದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು:

ದಿನನಿತ್ಯ ನಡೆಯುತ್ತಿರುವ ಈ ನಾಟಕದಿಂದ ಕೋಮಲಾಪುರ ಗ್ರಾಮಸ್ಥರು ಅಕ್ಷರಶಃ ರೋಸಿಹೋಗಿದ್ದಾರೆ. 'ಶಿಕ್ಷಕರು ಮಕ್ಕಳಿಗೆ ಮಾದರಿಯಾಗಿರಬೇಕು. ಆದರೆ ಇಲ್ಲಿ ಮುಖ್ಯ ಶಿಕ್ಷಕರೇ ತಮ್ಮ ಕುಟುಂಬದ ಜಗಳವನ್ನು ಶಾಲೆಗೆ ಎಳೆತರುತ್ತಿದ್ದಾರೆ. ಇದರಿಂದ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಸರಿಯಾಗಿ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ' ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

55
Image Credit : Asianet News

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಈ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಶಾಲೆಯ ಶಿಸ್ತು ಕಾಪಾಡಬೇಕಾದ ಮುಖ್ಯ ಶಿಕ್ಷಕರೇ ಇಂತಹ ಸಂಕಷ್ಟಕ್ಕೆ ಸಿಲುಕಿರುವುದು ಇಲಾಖೆಗೂ ಮುಜುಗರ ತಂದೊಡ್ಡಿದೆ. ಕೂಡಲೇ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಅಥವಾ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಸದ್ಯ ಶಾಲೆಯಲ್ಲಿ ನಡೆಯುತ್ತಿರುವ ಈ 'ಪತ್ನಿ ಪುರಾಣ' ಕುಕನೂರು ತಾಲೂಕಿನಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕೊಪ್ಪಳ
ಶಾಲೆ
ಶಿಕ್ಷಕರು

Latest Videos
Recommended Stories
Recommended image1
ಚಂದ್ರಗುತ್ತಿಯಲ್ಲಿ ಕ್ರಿ.ಶ. 1350ರ ಕಾಲಘಟ್ಟದ ವೀರಗಲ್ಲು ಪತ್ತೆ, ಯುದ್ಧ ಗೆದ್ದ ವಿಜಯನಗರ ಕಾಲದ ಯೋಧನ ಬಣ್ಣನೆ!
Recommended image2
ಬೀದರ್: ಚಿಕಿತ್ಸೆ ಸಿಗದೆ ರೋಗಿ ಸಾಯಲು ಯತ್ನ, BRIMS ನಿರ್ದೇಶಕಿ ನೋ ರೆಸ್ಪಾನ್ಸ್, 'ನನಗೂ ಇದಕ್ಕೂ ಸಂಬಂಧಿವಿಲ್ಲ' ಎಂದ DHO!
Recommended image3
ಕಾಡಾನೆ ನಾಡಿಗೆ ಬರದಂತೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ₹12.77 ಕೋಟಿ ಅನುದಾನ ಬಿಡುಗಡೆ
Related Stories
Recommended image1
ಗೊಲ್ಲರಹಟ್ಟಿ ಕಾವ್ಯಾಳನ್ನು 8 ವರ್ಷ ಪ್ರೀತಿಸಿ, ನಿಶ್ಚಿತಾರ್ಥ ಬಳಿಕ ವರದಕ್ಷಿಣೆಗಾಗಿ ಕೈಕೊಡಲು ಮುಂದಾದ ಶಿಕ್ಷಕ!
Recommended image2
ಸರ್ಕಾರಿ ಶಾಲಾ ವಿದ್ಯಾರ್ಥಿನಿ ಬಟ್ಟೆ ಎಳೆದ ಶಿಕ್ಷಕ ಜಡೇಶನ ಜುಟ್ಟು ಹಿಡಿದ ಗ್ರಾಮಸ್ಥರು! ಶಾಲೆಮುಂದೆ ಪ್ರತಿಭಟನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved