MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ, 3 ಲಕ್ಷಕ್ಕೂ ಅಧಿಕ ಜನ ಭಾಗಿ

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ, 3 ಲಕ್ಷಕ್ಕೂ ಅಧಿಕ ಜನ ಭಾಗಿ

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್ಚಿತ್ರದುರ್ಗ (ಸೆ.17): ಚಿತ್ರದುರ್ಗ ಅಂದ್ರೆ ಎಲ್ಲರಿಗೂ ನೆನಪಾಗೋದು ಕಲ್ಲಿನ ಕೋಟೆ ಅಂತ. ಆದ್ರೆ ಕಳೆದ ಹತ್ತಾರು ವರ್ಷಗಳಿಂದ ಇಡೀ ದೇಶದ ಗಮನ ಸೆಳೆದಿರುವ ಕೋಟೆನಾಡಿನ ಹಿಂದು ಮಹಾಗಣಪತಿ ಬೃಹತ್ ಶೋಭಾಯಾತ್ರೆ ಇಂದು ಅದ್ದೂರಿಯಾಗಿ ನಡೆಯಿತು. ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದಲ್ಲದೇ ಯುವಕ, ಯುವತಿಯರು, ಮಕ್ಕಳು ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದ್ರು. ಕೋಟೆನಾಡು ಚಿತ್ರದುರ್ಗದ ವಿಹಿಂಪ ಹಾಗೂ ಭಜರಂಗದಳ ನೇತೃತ್ವದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಹಿಂದೂ ಮಹಾಗಣಪತಿ. ಸತತ 21 ದಿನಗಳ ಕಾಲ ವಿಶೇಷ ಪೂಜಾ ಕೈಂಕಾರ್ಯ ‌ನೆರವೇರಿಸಿದ ಬಳಿಕ ಹಿಂದು ಮಹಾಗಣಪತಿ ವಿಸರ್ಜನಾ ಯಾತ್ರೆ ಇಂದು ನಡೆಯಿತು. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಶೋಭಯಾತ್ರೆಯಲ್ಲಿ ಮೂರು ಲಕ್ಷಕ್ಕು ಅಧಿಕ ಜನರು ಭಾಗಿಯಾಗಿದ್ರು. 

1 Min read
Gowthami K
Published : Sep 17 2022, 09:18 PM IST
Share this Photo Gallery
  • FB
  • TW
  • Linkdin
  • Whatsapp
14

 ಕಳೆದ ಎರಡು ವರ್ಷ ಕೊರೊನಾ ಮಹಾಮಾರಿಯಿಂದಾಗಿ ಸರಳ ಶೋಭಾಯಾತ್ರೆ ಉತ್ಸವ ನೆರವೇರಿಸಿದ್ದ ಕೋಟೆನಾಡಲ್ಲಿ, ಈ ಬಾರಿ ಅದ್ದೂರಿಯಾಗಿ  ಗಣೇಶೋತ್ಸವ ನಡೆಸಲಾಯ್ತು. 

24

 ಇಂದು ನಡೆದ ಶೋಭಾಯಾತ್ರೆ ಹಿನ್ನಲೆಯಲ್ಲಿ, ಇಡೀ ಚಿತ್ರದುರ್ಗ  ಕೇಸರಿಮಯಾಗಿದ್ದೂ, ರಾಜ್ಯದ ವಿವಿದೆಡೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿದ್ದ ಯುವಕ, ಯುವತಿಯರು ಡಿಜೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದ್ರು. ಕೇಕೆ ಹಾಕಿ ಜೈ ಶ್ರೀರಾಮ್ ಎಂದು ರಣಕೇಕೆ ಕೂಗುತ್ತಾ ಎಂಜಾಯ್ ಮಾಡಿದ್ರು. 

34

 ಇನ್ನು ಈ ವಿಸರ್ಜನಾ ಯಾತ್ರೆಗೆ ವಿಶ್ವ ಹಿಂದು ಪರಿಷತ್  ರಾಷ್ಟ್ರೀಯ ಸಹ ಕಾರ್ಯದರ್ಶಿ ಅಂಬರೀಶ್ ಸಿಂಗ್ ಚಾಲನೆ ನೀಡಿದ್ರು. ಈ ವೇಳೆ ಗಣಪತಿಗೆ ಎಲಿಕಾಫ್ಟರ್ ನಲ್ಲಿ ಸುರಿಸಿದ ಪುಷ್ಪಾರ್ಚನೆ ನೆರೆದಿದ್ದವರ ಗಮನ ಸೆಳೆಯಿತು. 

44
Chitradurga ganapathi

Chitradurga ganapathi

 ಒಟ್ಟಾರೆ ಗಣಪತಿ ಪ್ರತಿಷ್ಠಾಪನೆ ದಿನದಿಂದಲೂ ಎಲ್ಲರ ಗಮನ ಸೆಳೆದಿದ್ದ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನೆ ಇಂದು ಬೃಹತ್  ಶೋಭಾಯಾತ್ರೆ ಮೂಲಕ ನೆರೆವೇರಿತು. ಶೋಭಾಯತ್ರೆಯಲ್ಲಿ ಕೇಸರಿ ಉಡುಪು ಧರಿಸಿ ಭಾಗಿಯಾಗಿದ್ದ  ಮೂರು ಲಕ್ಷಕ್ಕು ಅಧಿಕ ಜನರು ಈ ಅದ್ಬುತ ಕ್ಷಣಕ್ಕೆ ಸಾಕ್ಷಿಯಾದ್ರು.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಚಿತ್ರದುರ್ಗ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved