MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಉಡುಪಿ:ಹೌಸ್ ಕೀಪಿಂಗ್ ಮಗಳು, ಕನ್ನಡ ಶಾಲೆಯ ಹಳ್ಳಿ ಪ್ರತಿಭೆ ಸ್ಪೂರ್ತಿ ಶೆಟ್ಟಿ'ಮಿಸ್ ಯೂನಿವರ್ಸ್ ಇಂಡಿಯಾ' ಫೈನಲಿಸ್ಟ್!

ಉಡುಪಿ:ಹೌಸ್ ಕೀಪಿಂಗ್ ಮಗಳು, ಕನ್ನಡ ಶಾಲೆಯ ಹಳ್ಳಿ ಪ್ರತಿಭೆ ಸ್ಪೂರ್ತಿ ಶೆಟ್ಟಿ'ಮಿಸ್ ಯೂನಿವರ್ಸ್ ಇಂಡಿಯಾ' ಫೈನಲಿಸ್ಟ್!

ಉಡುಪಿಯ ಸಾಮಾನ್ಯ ಕುಟುಂಬದ ಸ್ಪೂರ್ತಿ ಶೆಟ್ಟಿ 'ಮಿಸ್ ಯೂನಿವರ್ಸ್ ಇಂಡಿಯಾ' ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಸುತ್ತಿನಲ್ಲಿ ಸೋತರೂ 'ವೈಲ್ಡ್ ಕಾರ್ಡ್ ಎಂಟ್ರಿ' ಮೂಲಕ ರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಟ್ಟಿರುವ ಇವರ ಯಶೋಗಾಥೆ ಹಲವರಿಗೆ ಸ್ಪೂರ್ತಿದಾಯಕವಾಗಿದೆ.

2 Min read
Author : Gowthami K
Published : Jul 16 2026, 03:54 PM IST
Share this Photo Gallery
  • FB
  • TW
  • Linkdin
  • Whatsapp
15
ಸಾಮಾನ್ಯ ಕುಟುಂಬದ ಹೆಣ್ಣುಮಗಳು ಸ್ಪೂರ್ತಿ
Image Credit : Asianet News

ಸಾಮಾನ್ಯ ಕುಟುಂಬದ ಹೆಣ್ಣುಮಗಳು ಸ್ಪೂರ್ತಿ

ಉಡುಪಿ: ಕರಾವಳಿಯ ಪ್ರತಿಭೆಗಳು ಕೇವಲ ಶಿಕ್ಷಣ, ಕ್ರೀಡೆಯಲ್ಲಷ್ಟೇ ಅಲ್ಲ, ಜಾಗತಿಕ ಮಟ್ಟದ ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೂ ತಮ್ಮ ಛಾಪು ಮೂಡಿಸಬಲ್ಲರು ಎಂಬುದನ್ನು ಉಡುಪಿಯ ಬೆಡಗಿ ಸ್ಪೂರ್ತಿ ಶೆಟ್ಟಿ ಸಾಬೀತುಪಡಿಸಿದ್ದಾರೆ. ಉಡುಪಿಯಲ್ಲಿ ಹುಟ್ಟಿ ಬೆಳೆದ ಸಾಮಾನ್ಯ ಕುಟುಂಬದ ಹೆಣ್ಣುಮಗಳು ಸ್ಪೂರ್ತಿ ಶೆಟ್ಟಿ, ಇದೀಗ ಪ್ರತಿಷ್ಠಿತ 'ಮಿಸ್ ಯೂನಿವರ್ಸ್ ಇಂಡಿಯಾ' (Miss Universe India) ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗುವ ಮೂಲಕ ಇಡೀ ಜಿಲ್ಲೆ ಮತ್ತು ರಾಜ್ಯವೇ ಹೆಮ್ಮೆಪಡುವಂತೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸಾಮಾನ್ಯ ಹಿನ್ನೆಲೆ, ಅಸಾಮಾನ್ಯ ಕನಸು
Image Credit : Asianet News

ಸಾಮಾನ್ಯ ಹಿನ್ನೆಲೆ, ಅಸಾಮಾನ್ಯ ಕನಸು

ಸ್ಪೂರ್ತಿ ಶೆಟ್ಟಿ ಅವರ ಈ ಸಾಧನೆಯ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ. ಅತ್ಯಂತ ಸಾಮಾನ್ಯ ಮತ್ತು ಬಡ ಕುಟುಂಬದ ಹಿನ್ನೆಲೆಯಿಂದ ಬಂದ ಚೆಲುವೆ ಇವರು. ಇವರ ತಾಯಿ ಮಣಿಪಾಲ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ (ಸ್ವಚ್ಛತಾ ಸಿಬ್ಬಂದಿ) ಆಗಿ ಕೆಲಸ ಮಾಡುತ್ತಾ ಮಗಳ ಕನಸುಗಳಿಗೆ ಆಸರೆಯಾಗಿದ್ದಾರೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ಧೃತಿಗೆಡದ ಸ್ಪೂರ್ತಿ, ಉಡುಪಿಯಲ್ಲೇ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಬಳಿಕ ಉನ್ನತ ವ್ಯಾಸಂಗದಲ್ಲಿ ಎಂಬಿಎ (MBA) ಪದವಿ ಪಡೆದಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಪೂರ್ಣಕಾಲಿಕ ಉದ್ಯೋಗ ಮಾಡುತ್ತಿರುವ ಇವರು, ತಮ್ಮ ಕೆಲಸದ ಜೊತೆಜೊತೆಗೇ ಮಾಡಲಿಂಗ್ ಕ್ಷೇತ್ರವನ್ನು ಹವ್ಯಾಸವಾಗಿ ಆರಂಭಿಸಿದ್ದರು.

Related Articles

Related image1
ಭುವನ್ ಗೌಡ ಮದುವೆಯಲ್ಲಿ Miss Diva Supranational ಸುಂದರಿಯರು… ಭಟ್ರು-ಶೆಟ್ರನ್ನು ಜೊತೆಗೆ ನೋಡಿ ಫ್ಯಾನ್ಸ್ ಖುಷ್
Related image2
ಲವ್​ ಜಿಹಾದ್​ಗೆ ಒಳಗಾಗಿದ್ದ Miss India Earth ನಾಪತ್ತೆ! ಹಿಂದೂ ಧರ್ಮಕ್ಕೆ ವಾಪಸಾದ ಬೆನ್ನಲ್ಲೇ ನಿಗೂಢ ಕಣ್ಮರೆ
35
ಸೋಲಿನಿಂದ ಗೆಲುವಿನತ್ತ ವೈಲ್ಡ್ ಕಾರ್ಡ್ ಎಂಟ್ರಿ!
Image Credit : Asianet News

ಸೋಲಿನಿಂದ ಗೆಲುವಿನತ್ತ ವೈಲ್ಡ್ ಕಾರ್ಡ್ ಎಂಟ್ರಿ!

ಮಿಸ್ ಯೂನಿವರ್ಸ್ ವೇದಿಕೆ ತಲುಪುವ ಮುನ್ನ ಸ್ಪೂರ್ತಿ ಆರಂಭದಲ್ಲಿ ತೀವ್ರ ನಿರಾಶೆ ಎದುರಿಸಬೇಕಾಗಿ ಬಂದಿತ್ತು. ಮಿಸ್ ಯೂನಿವರ್ಸ್ ಸ್ಪರ್ಧೆಯ ಕರ್ನಾಟಕ ವಿಭಾಗದ ಪ್ರಾದೇಶಿಕ ಸುತ್ತಿನಲ್ಲಿ ಸ್ಪರ್ಧಿಸಿದ್ದ ಇವರು ಜಯಗಳಿಸಲು ಸಾಧ್ಯವಾಗಿರಲಿಲ್ಲ. ಆದರೆ, ಅವರಲ್ಲಿದ್ದ ಪ್ರತಿಭೆ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಗುರುತಿಸಿದ ತೀರ್ಪುಗಾರರು ಇವರಿಗೆ 'ವೈಲ್ಡ್ ಕಾರ್ಡ್ ಎಂಟ್ರಿ' (Wild Card Entry) ನೀಡಿದ್ದಾರೆ. ಈ ಮೂಲಕ ಸೋಲನ್ನು ಮೆಟ್ಟಿ ನಿಂತು ನೇರವಾಗಿ ರಾಷ್ಟ್ರೀಯ ಮಟ್ಟದ ಅಂತಿಮ ಸುತ್ತಿಗೆ ಲಗ್ಗೆ ಇಡುವಲ್ಲಿ ಸ್ಪೂರ್ತಿ ಯಶಸ್ವಿಯಾಗಿದ್ದಾರೆ.

45
ಆಗಸ್ಟ್ 23ರಂದು ಗ್ರ್ಯಾಂಡ್ ಫಿನಾಲೆ
Image Credit : Asianet News

ಆಗಸ್ಟ್ 23ರಂದು ಗ್ರ್ಯಾಂಡ್ ಫಿನಾಲೆ

ಆಗಸ್ಟ್ 23ರಂದು ನವದೆಹಲಿಯಲ್ಲಿ ಮಹಾ ಫೈನಲ್ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿ ಬಂದಿರುವ ಅತ್ಯಂತ ಪ್ರತಿಭಾವಂತ 50 ಸುಂದರಿಯರೊಂದಿಗೆ ಉಡುಪಿಯ ಸ್ಪೂರ್ತಿ ಶೆಟ್ಟಿ ಅಂತಿಮ ಸುತ್ತಿನಲ್ಲಿ ಪೈಪೋಟಿ ನಡೆಸಲಿದ್ದಾರೆ. ಈ ಬಹುನಿರೀಕ್ಷಿತ 'ಮಿಸ್ ಯೂನಿವರ್ಸ್ ಇಂಡಿಯಾ'ದ ಗ್ರ್ಯಾಂಡ್ ಫಿನಾಲೆ (Grand Finale) ಇದೇ ಆಗಸ್ಟ್ 23ರಂದು ನವದೆಹಲಿಯಲ್ಲಿ ಅದ್ಧೂರಿಯಾಗಿ ಜರುಗಲಿದೆ.

55
ಕಾರ್ಪೊರೇಟ್ ಉದ್ಯೋಗದ ಜೊತೆಗೆ ಗ್ಲಾಮರ್ ಲೋಕದ ಪ್ರತಿಭೆ
Image Credit : Asianet News

ಕಾರ್ಪೊರೇಟ್ ಉದ್ಯೋಗದ ಜೊತೆಗೆ ಗ್ಲಾಮರ್ ಲೋಕದ ಪ್ರತಿಭೆ

ಕನ್ನಡ ಮಾಧ್ಯಮದಲ್ಲಿ ಓದಿ, ಕಷ್ಟದ ಪರಿಸ್ಥಿತಿಯಲ್ಲೂ ಕಾರ್ಪೊರೇಟ್ ಉದ್ಯೋಗದ ಜೊತೆಗೆ ಗ್ಲಾಮರ್ ಲೋಕದಲ್ಲೂ ಸಾಧನೆ ಮಾಡಿರುವ ಸ್ಪೂರ್ತಿ ಶೆಟ್ಟಿ ಅವರ ಈ ಯಶೋಗಾಥೆ ಇಂದು ಸಹಸ್ರಾರು ಗ್ರಾಮೀಣ ಭಾಗದ ಯುವತಿಯರಿಗೆ ದೊಡ್ಡ ಪ್ರೇರಣೆಯಾಗಿದೆ. ನವದೆಹಲಿಯ ಅಂತಿಮ ಜಿದ್ದಾಜಿದ್ದಿನಲ್ಲಿ ಗೆದ್ದು ಉಡುಪಿಯ ಈ ಮಗಳು ವಿಶ್ವ ಸುಂದರಿ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವಂತಾಗಲಿ ಎಂಬುದು ಕನ್ನಡಿಗರ ಆಶಯವಾಗಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಉಡುಪಿ
ಮಿಸ್ ಇಂಡಿಯಾ
ಕರ್ನಾಟಕ ಸುದ್ದಿ
ಮನರಂಜನಾ ಸುದ್ದಿ

Latest Videos
Recommended Stories
Recommended image1
ಬೆಂಗಳೂರು-ಮುಂಬೈ ವಂದೇ ಭಾರತ್: ಕಲಬುರಗಿ ಮಾರ್ಗ ಬದಲಾವಣೆ ಮಾಡಿ ಬೇರೆ ಕಡೆ ತಿರುಗಿಸಲು ಹುನ್ನಾರ ನಡೀತಿದ್ಯಾ?
Recommended image2
ಬ್ಯಾಗ್‌ ಜಿಪ್‌ ರಿಪೇರಿ ಮಾಡೋ ಗಂಗಾವತಿ ಹುಡುಗನ 1 ದಿನದ ಎಷ್ಟು ಸಂಪಾದನೆ ಎಷ್ಟು? ಇದೇ ಬ್ಯುಸಿನೆಸ್‌ ತಾಕತ್ತು!
Recommended image3
ರೈಲ್ವೇ ಇಲಾಖೆಯಲ್ಲಿ ಉದ್ಯೋಗಾವಕಾಶ; ಡಿಗ್ರಿ ಪಾಸಾಗಿದ್ರೆ ಸಾಕು, ಇವತ್ತೇ ಅರ್ಜಿ ಸಲ್ಲಿಸಿ..!
Related Stories
Recommended image1
ಭುವನ್ ಗೌಡ ಮದುವೆಯಲ್ಲಿ Miss Diva Supranational ಸುಂದರಿಯರು… ಭಟ್ರು-ಶೆಟ್ರನ್ನು ಜೊತೆಗೆ ನೋಡಿ ಫ್ಯಾನ್ಸ್ ಖುಷ್
Recommended image2
ಲವ್​ ಜಿಹಾದ್​ಗೆ ಒಳಗಾಗಿದ್ದ Miss India Earth ನಾಪತ್ತೆ! ಹಿಂದೂ ಧರ್ಮಕ್ಕೆ ವಾಪಸಾದ ಬೆನ್ನಲ್ಲೇ ನಿಗೂಢ ಕಣ್ಮರೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved