MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ

ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ

ಹುಬ್ಬಳ್ಳಿ ಬಳಿಯ ಇನಾಂಪುರದಲ್ಲಿ ಅಂತರ್ಜಾತಿ ವಿವಾಹವಾದ ಗರ್ಭಿಣಿ ಮಗಳನ್ನು ತಂದೆಯೇ ಕೊಲೆ ಮಾಡಿರುವ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಈ ಕೃತ್ಯ ಎಸಗಲಾಗಿದ್ದು, ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

2 Min read
Mahmad Rafik
Published : Dec 22 2025, 08:28 AM IST
Share this Photo Gallery
  • FB
  • TW
  • Linkdin
  • Whatsapp
15
ಹುಬ್ಬಳ್ಳಿಯಲ್ಲಿ ಮರ್ಯದಾ ಹ*ತ್ಯೆ
Image Credit : Asianet News

ಹುಬ್ಬಳ್ಳಿಯಲ್ಲಿ ಮರ್ಯದಾ ಹ*ತ್ಯೆ

ಹುಬ್ಬಳ್ಳಿ: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ತಂದೆಯೇ ಕೊ*ಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂಪುರ ಗ್ರಾಮದಲ್ಲಿ ನಡೆದಿದೆ. ಪೋಷಕರಿಂದ ಮಾರಣಾಂತಿಕ ದಾಳಿಗೊಳಗಾಗಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾಳೆ.

25
ಏಳು ತಿಂಗಳ ಹಿಂದೆ ಮದುವೆ
Image Credit : Asianet News

ಏಳು ತಿಂಗಳ ಹಿಂದೆ ಮದುವೆ

ಏಳು ತಿಂಗಳ ಹಿಂದೆ ಮಾನ್ಯ ಪಾಟೀಲ್ ಮತ್ತು ವಿವೇಕಾನಂದ್ ದೊಡ್ಡಮನಿ ಪ್ರೀತಿಸಿ ಮದುವೆಯಾಗಿದ್ದರು. ವಿವೇಕಾನಂದ ದೊಡ್ಡಮನಿ ದಲಿತ ಸಮುದಾಯಕ್ಕೆ ಸೇರಿದ್ದರಿಂದ ಮಾನ್ಯ ಪಾಟೀಲ್ ಕುಟುಂಬಸ್ಥರು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪೊಲೀಸರು ಎರಡು ಕುಟುಂಬಗಳ ನಡುವೆ ರಾಜೀ ಪಂಚಾಯ್ತಿ ಸಹ ನಡೆಸಿದ್ದರು. ರಿಜಿಸ್ಟರ್ ಮದುವೆಯಾದ ಬಳಿಕ ಮಾನ್ಯ ಮತ್ತು ವಿವೇಕಾನಂದ್ ಪ್ರಾಣ ಭಯದಿಂದ ಹಾವೇರಿ ಜಿಲ್ಲೆಯಲ್ಲಿ ವಾಸವಾಗಿದ್ದರು.

Related Articles

Related image1
ಮರ್ಯಾದೆ ಹತ್ಯೆ: ತಂದೆಯಿಂದಲೇ ಮಗಳ ಕೊಲೆ, ಪ್ರೇಮಿ ಆತ್ಮಹತ್ಯೆ!
Related image2
ಕೋಲಾರ ಮತ್ತೊಂದು ಮರ್ಯಾದಾ ಹತ್ಯೆ: ಅನ್ಯ ಜಾತಿ ಯುವಕನ ಪ್ರೀತಿಸಿದ ಮಗಳನ್ನೇ ಕೊಲೆಗೈದ ವೆಂಕಟೇಶ್‌ಗೌಡ
35
ಯುವತಿ ಕುಟುಂಬಸ್ಥರಿಂದ ದಾಳಿ
Image Credit : Asianet News

ಯುವತಿ ಕುಟುಂಬಸ್ಥರಿಂದ ದಾಳಿ

ಡಿಸೆಂಬರ್ 8ರಂದು ಮಾನ್ಯ ಮತ್ತು ವಿವೇಕಾನಂದ್ ಗ್ರಾಮಕ್ಕೆ ಹಿಂದಿರುಗಿದ್ದರು. ಏಳು ತಿಂಗಳ ಬಳಿಕವೂ ಮಾನ್ಯಾ ತಂದೆ ಪ್ರಕಾಶ್ ಗೌಡ ಪಾಟೀಲ್, ಮಾವ ವೀರನಗೌಡ ಪಾಟೀಲ್ ಮತ್ತು ಸೋದರ ಅರುಣ್ ಗೌಡ @ ಆಕಾಶ ಗೌಡ ತಲ್ವಾರ್‌ನಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

45
ಪಾಟೀಲ್ ಕುಟುಂಬದಿಂದ ಸಂಚು
Image Credit : Asianet News

ಪಾಟೀಲ್ ಕುಟುಂಬದಿಂದ ಸಂಚು

ಮಾನ್ಯ ಗ್ರಾಮಕ್ಕೆ ಬಂದಿರುವ ವಿಷಯ ತಿಳಿದ ಪಾಟೀಲ್ ಕುಟುಂಬಸ್ಥರು ಕೊ*ಲೆಗೆ ಪ್ಲಾನ್ ಮಾಡಿದ್ದಾರೆ. ಭಾನುವಾರ ಸಂಜೆ ವಿವೇಕಾನಂದ್ ತಂದೆ ಸುಭಾಷ್ ದೊಡ್ಡಮನಿ ಅವರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆಸಿ ಹ*ತ್ಯೆಗೆ ಯತ್ನಿಸಿದ್ದಾರೆ. ನಂತರ ತಂದೆಗೆ ಅಪಘಾತವಾಗಿದೆ ಎಂದು ವಿವೇಕಾನಂದ್‌ಗೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿಯುತ್ತಲೇ ವಿವೇಕಾನಂದ್ ಮನೆಯಿಂದ ಹೊರಗೆ ಹೋಗಿದ್ದಾನೆ. ಅತ್ತೆ ರೇಣವ್ವಾ ಜೊತೆ ಮಾನ್ಯ ಮನೆಯಲ್ಲಿದ್ದಳು.

ಇದನ್ನೂ ಓದಿ: ಹೆಂಡತಿ ಕಾಟದಿಂದ ಪಾರಾಗಲು ತನ್ನದೇ ಕೊಲೆ ಕತೆ ಹೆಣದವ ಪೊಲೀಸ್ ಬಲೆಗೆ

55
ಆರೋಪಿ ಪೊಲೀಸರ ವಶಕ್ಕೆ
Image Credit : Asianet News

ಆರೋಪಿ ಪೊಲೀಸರ ವಶಕ್ಕೆ

ಮನೆಯಲ್ಲಿ ಇಬ್ಬರೇ ಇದ್ದಾಗ ದಾಳಿ ಮಾಡಿದ ಪಾಟೀಲ್ ಕುಟುಂಬಸ್ಥರು ಮಾರಕಾಸ್ತ್ರಗಳಿಂದ ಆಟ್ಯಾಕ್ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಮಾನ್ಯ ಸಾವನ್ನಪ್ಪಿದ್ದು, ಅತ್ತೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಬಂಧ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಮಾನ್ಯ ಪಾಟೀಲ್ ತಂದೆ ಪ್ರಕಾಶಗೌಡ ಪಾಟೀಲ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನುಳಿದ ಆರೋಪಿಗಳು ಎಸ್ಕೇಪ್ ಆಗಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಮಾನ್ಯ ಆರು ತಿಂಗಳ ಗರ್ಭಿಣಿಯಾಗಿದ್ದರು.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ 3ನೇ ದಿನಕ್ಕೆ ಪತ್ನಿಯ ಕೊಲೆ: ಪ್ರಿಯಕರನ ಮನೆ ಮುಂದೆ ಯುವತಿ ಶವವಿಟ್ಟು ಪೋಷಕರ ಪ್ರತಿಭಟನೆ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಹುಬ್ಬಳ್ಳಿ
ಕೊಲೆ
ಪ್ರೇಮ ವಿವಾಹ
ಮರ್ಯಾದಾ ಹತ್ಯೆ

Latest Videos
Recommended Stories
Recommended image1
ಹೂವಿನಹಡಗಲಿ: ಕೇಳಿದ್ದು 237 ಕೊಠಡಿ, ಸರ್ಕಾರ ಕೊಟ್ಟಿದ್ದು ಒಂದೇ ಕೊಠಡಿ! ಮಕ್ಕಳ ಶಿಕ್ಷಣಕ್ಕೆ ಇಲ್ವಾ ಬೆಲೆ?
Recommended image2
'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!
Recommended image3
ಬೆಂಗಳೂರು ನಗರದಲ್ಲಿ ಶೇ.95 ರಷ್ಟು ಪಲ್ಸ್ ಪೋಲಿಯೋ
Related Stories
Recommended image1
ಮರ್ಯಾದೆ ಹತ್ಯೆ: ತಂದೆಯಿಂದಲೇ ಮಗಳ ಕೊಲೆ, ಪ್ರೇಮಿ ಆತ್ಮಹತ್ಯೆ!
Recommended image2
ಕೋಲಾರ ಮತ್ತೊಂದು ಮರ್ಯಾದಾ ಹತ್ಯೆ: ಅನ್ಯ ಜಾತಿ ಯುವಕನ ಪ್ರೀತಿಸಿದ ಮಗಳನ್ನೇ ಕೊಲೆಗೈದ ವೆಂಕಟೇಶ್‌ಗೌಡ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved