MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind-W vs Pak-W Asia Cup 2026
Teacher's Day Wishes 2026
Teacher's Day Special
Karnataka Farmers Loan Waiver
Sharavathi Pumped Storage Project
Bengaluru FSSAI Inspection
KPSC Ex-chairman Shivashankarappa
India Forex Reserves
Karnataka Police Constable Recruitment
Karnataka Rakshana Vedike
ISRO GSLV F17 Launch
Bengaluru Suburban Rail
  • Home
  • Karnataka Districts
  • ವಿಜಯಪುರ-ಯಶವಂತಪುರ ರೈಲಿನ ಇಂಜಿನ್ ವೈಫಲ್ಯ; ಬಸವ ಎಕ್ಸ್‌ಪ್ರೆಸ್ ತಡೆದು ಕಲ್ಲು ತೂರಾಟ

ವಿಜಯಪುರ-ಯಶವಂತಪುರ ರೈಲಿನ ಇಂಜಿನ್ ವೈಫಲ್ಯ; ಬಸವ ಎಕ್ಸ್‌ಪ್ರೆಸ್ ತಡೆದು ಕಲ್ಲು ತೂರಾಟ

ವಿಜಯಪುರದಿಂದ ಯಶವಂತಪುರಕ್ಕೆ ಹೊರಟಿದ್ದ ರೈಲು ತಾಂತ್ರಿಕ ದೋಷದಿಂದ ಸುಮಾರು 5 ಗಂಟೆಗಳ ಕಾಲ ನಿಂತಿತ್ತು. ಇದರಿಂದಾಗಿ, CAR/DAR ಪೊಲೀಸ್ ಪರೀಕ್ಷೆಗೆ ತೆರಳುತ್ತಿದ್ದ ನೂರಾರು ಅಭ್ಯರ್ಥಿಗಳು ಪರೀಕ್ಷೆ ತಪ್ಪುವ ಆತಂಕದಿಂದ ರೈಲ್ವೆ ಇಲಾಖೆ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದರು.

1 Min read
Author : Mahmad Rafik
Published : Sep 05 2026, 07:11 PM IST
Share this Photo Gallery
  • FB
  • TW
  • Linkdin
  • Whatsapp
15
ವಿಜಯಪುರದಿಂದ ಯಶವಂತಪುರಕ್ಕೆ ಹೊರಟಿದ್ದ ರೈಲು
Image Credit : Asianet News

ವಿಜಯಪುರದಿಂದ ಯಶವಂತಪುರಕ್ಕೆ ಹೊರಟಿದ್ದ ರೈಲು

ವಿಜಯಪುರದಿಂದ ಯಶವಂತಪುರಕ್ಕೆ ಹೊರಟಿದ್ದ ರೈಲು (ಸಂಖ್ಯೆ 16548) ವಿಜಯಪುರ ರೈಲು ನಿಲ್ದಾಣದಿಂದ ಮಧ್ಯಾಹ್ನ 2:50ಕ್ಕೆ ನಿರ್ಗಮಿಸಿ, ಸುಮಾರು 3-4 ಕಿಲೋಮೀಟರ್ ಚಲಿಸುತ್ತಿದ್ದಂತೆಯೇ ತಾಂತ್ರಿಕ ದೋಷದಿಂದ ಇಂಜಿನ್ ವೈಫಲ್ಯ ಕಂಡಿದೆ. ಮರುದಿನ ಬೆಳಗ್ಗೆ 5:00 ಗಂಟೆಗೆ ಯಶವಂತಪುರಕ್ಕೆ ತಲುಪಬೇಕಿದ್ದ ಈ ರೈಲು, ಇಂಜಿನ್ ಸಮಸ್ಯೆಯಿಂದಾಗಿ ಸತತ 5 ಗಂಟೆಗಳ ಕಾಲ ಒಂದೇ ಸ್ಥಳದಲ್ಲಿ ನಿಂತು ಪ್ರಯಾಣಿಕರಿಗೆ ತೀವ್ರ ತೊಂದರೆಯುಂಟುಮಾಡಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಸಿಟಿ ಆರ್ಮ್ಡ್ (CAR) ಹಾಗೂ ಡಿಸ್ಟ್ರಿಕ್ಟ್ ಆರ್ಮ್ಡ್ (DAR) ಮೀಸಲು ಪೊಲೀಸ್ ಪಡೆ ಹುದ್ದೆಗಳ ಪರೀಕ್ಷೆ
Image Credit : Asianet News

ಸಿಟಿ ಆರ್ಮ್ಡ್ (CAR) ಹಾಗೂ ಡಿಸ್ಟ್ರಿಕ್ಟ್ ಆರ್ಮ್ಡ್ (DAR) ಮೀಸಲು ಪೊಲೀಸ್ ಪಡೆ ಹುದ್ದೆಗಳ ಪರೀಕ್ಷೆ

ಈ ರೈಲಿನಲ್ಲಿ ಮರುದಿನ ಬೆಳಗ್ಗೆ 10:00 ಗಂಟೆಗೆ ನಡೆಯಲಿದ್ದ ಸಿಟಿ ಆರ್ಮ್ಡ್ (CAR) ಹಾಗೂ ಡಿಸ್ಟ್ರಿಕ್ಟ್ ಆರ್ಮ್ಡ್ (DAR) ಮೀಸಲು ಪೊಲೀಸ್ ಪಡೆ ಹುದ್ದೆಗಳ ಪರೀಕ್ಷೆಗೆ ಹಾಜರಾಗಬೇಕಿದ್ದ ಸುಮಾರು 500 ರಿಂದ 1000 ಪರೀಕ್ಷಾರ್ಥಿಗಳು ಪ್ರಯಾಣಿಸುತ್ತಿದ್ದರು. ಪರೀಕ್ಷಾರ್ಥಿಗಳು ಬೆಳಿಗ್ಗೆ 9:30 ರೊಳಗೆ ಬೆಂಗಳೂರು ಹಾಗೂ ತುಮಕೂರಿನ ಪರೀಕ್ಷಾ ಕೇಂದ್ರ ತಲುಪುವುದು ಕಡ್ಡಾಯವಾಗಿದ್ದರಿಂದ, ರೈಲಿನ ವಿಳಂಬದಿಂದ ಆಕ್ರೋಶಗೊಂಡ ಅಭ್ಯರ್ಥಿಗಳು ಕೆಳಗಿಳಿದು ರೈಲ್ವೆ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದರು.

Related Articles

Related image1
ವಿಜಯಪುರ: ನಿವೃತ್ತ ಶಿಕ್ಷಕರಿಗೆ ಪುಸ್ತಕಗಳಿಂದ ತುಲಾಭಾರ ಮಾಡಿದ ವಿದ್ಯಾರ್ಥಿಗಳು
Related image2
ವಿಜಯಪುರ ಗಗನಕ್ಕೆ ಹೊಸ ರೆಕ್ಕೆ: ಮಹತ್ವದ ಹೆಜ್ಜೆಯ ಮಾಹಿತಿ ಹಂಚಿಕೊಂಡ ಸಚಿವ MB ಪಾಟೀಲ್
35
ಕಲ್ಲು ತೂರಾಟ
Image Credit : Asianet News

ಕಲ್ಲು ತೂರಾಟ

ಈ ವೇಳೆ ಪಕ್ಕದ ಹಳಿಯಲ್ಲಿ ಬಾಗಲಕೋಟೆ, ಸೊಲ್ಲಾಪುರ ಹಾಗೂ ಮೈಸೂರು ಮಾರ್ಗವಾಗಿ ಸಂಚರಿಸುತ್ತಿದ್ದ ಬಸವ ಎಕ್ಸ್‌ಪ್ರೆಸ್ ರೈಲನ್ನು ತಡೆದು, ಕೆಲ ಯುವಕರು ಚಲಿಸುತ್ತಿದ್ದ ರೈಲಿನ ಮುಂದೆ ನಿಂತು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

45
ರೈಲು ಚಲಿಸುವಂತೆ ವ್ಯವಸ್ಥೆ
Image Credit : Social Media

ರೈಲು ಚಲಿಸುವಂತೆ ವ್ಯವಸ್ಥೆ

ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಯುವಕರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇದೇ ಸಮಯದಲ್ಲಿ ರೈಲ್ವೆ ಅಧಿಕಾರಿಗಳು ವಿಜಯಪುರ-ಬೆಂಗಳೂರು ರೈಲಿಗೆ ಹಿಂಬದಿಯಿಂದ ಮತ್ತೊಂದು ಇಂಜಿನ್ ಜೋಡಿಸಿ ರೈಲು ಚಲಿಸುವಂತೆ ವ್ಯವಸ್ಥೆ ಮಾಡಿದರು.

55
ರೈಲ್ವೆ ಇಲಾಖೆಯೇ ಹೊಣೆ
Image Credit : AI

ರೈಲ್ವೆ ಇಲಾಖೆಯೇ ಹೊಣೆ

ರೈಲು ಚಲಿಸಲು ಪ್ರಾರಂಭಿಸುತ್ತಿದ್ದಂತೆ ಪರೀಕ್ಷಾರ್ಥಿಗಳು ಮತ್ತೆ ಪ್ರಯಾಣಕ್ಕೆ ಅಣಿಯಾದರಾದರೂ, ಮರುದಿನದ ಪರೀಕ್ಷೆಗೆ ಒಂದು ವೇಳೆ ವಿಳಂಬವಾದರೆ ಅದಕ್ಕೆ ಸಂಪೂರ್ಣವಾಗಿ ರೈಲ್ವೆ ಇಲಾಖೆಯೇ ಹೊಣೆ ಎಂದು ಆರೋಪಿಸಿದರು. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ತೀವ್ರ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ವಿಜಯಪುರ
ಭಾರತೀಯ ರೈಲ್ವೆ
ರೈಲು

Latest Videos
Recommended Stories
Recommended image1
ಆರ್‌ಸಿಬಿ ಫ್ಯಾನ್ಸ್‌ಗೆ ಬಿಗ್‌ ಅಪ್ಡೇಟ್‌; ಹೊಸತನ ಬಂದರೂ, ಹಳೆಯ ಗುರುತು ಬಿಟ್ಟುಕೊಡದ ಬಿರ್ಲಾ!
Recommended image2
ದೇವರೇ.. ದರ್ಶನ್ ಸಂಕಷ್ಟ ದೂರವಾಗಲಿ: ಮಗನಿಗಾಗಿ ವಿಶೇಷ ಪೂಜೆ ಸಲ್ಲಿಸಿದ ತಾಯಿ ಮೀನಾ ತೂಗುದೀಪ
Recommended image3
ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು 3 ವರ್ಷದಲ್ಲಿ 5500 ಕೋಟಿ ಖರ್ಚು - ತೇಜಸ್ವಿ ಸೂರ್ಯ ಬಿಚ್ಚಿಟ್ರು ಸತ್ಯ
Related Stories
Recommended image1
ವಿಜಯಪುರ: ನಿವೃತ್ತ ಶಿಕ್ಷಕರಿಗೆ ಪುಸ್ತಕಗಳಿಂದ ತುಲಾಭಾರ ಮಾಡಿದ ವಿದ್ಯಾರ್ಥಿಗಳು
Recommended image2
ವಿಜಯಪುರ ಗಗನಕ್ಕೆ ಹೊಸ ರೆಕ್ಕೆ: ಮಹತ್ವದ ಹೆಜ್ಜೆಯ ಮಾಹಿತಿ ಹಂಚಿಕೊಂಡ ಸಚಿವ MB ಪಾಟೀಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved