MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ತುಮಕೂರು-ರಾಯದುರ್ಗ-ಪಾವಗಡ ರೈಲು ಮಾರ್ಗಕ್ಕೆ ಮರುಜೀವ; ಯಾವಾಗ ಶುರುವಾಗಲಿದೆ ಸಂಚಾರ?

ತುಮಕೂರು-ರಾಯದುರ್ಗ-ಪಾವಗಡ ರೈಲು ಮಾರ್ಗಕ್ಕೆ ಮರುಜೀವ; ಯಾವಾಗ ಶುರುವಾಗಲಿದೆ ಸಂಚಾರ?

ತುಮಕೂರು-ರಾಯದುರ್ಗ ಹೊಸ ರೈಲು ಮಾರ್ಗದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಚಾಲನೆ ಸಿಕ್ಕಿದೆ. ಕೇಂದ್ರ ಸಚಿವ ವಿ.ಸೋಮಣ್ಣ 2027ರೊಳಗೆ ಪೂರ್ಣಗೊಳಿಸುವ ಭರವಸೆ ನೀಡಿದ್ದರೆ, ಡಿಸಿಎಂ ಡಾ.ಜಿ.ಪರಮೇಶ್ವರ್ ಒಂದು ವರ್ಷದೊಳಗೆ ತುಮಕೂರು-ಪಾವಗಡ ಮಾರ್ಗ ಪೂರ್ಣಗೊಳಿಸಲು ಸೂಚಿಸಿದ್ದಾರೆ. 

2 Min read
Author : Kannadaprabha News
Published : Jul 01 2026, 08:35 AM IST
Share this Photo Gallery
  • FB
  • TW
  • Linkdin
  • Whatsapp
15
ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಕಾಮಗಾರಿ
Image Credit : Gemini

ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಕಾಮಗಾರಿ

ಕೊರಟಗೆರೆ: ಗಡಿಭಾಗಗಳ ಕನಸಿನ ಕೂಸಾದ ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಕಾಮಗಾರಿಗೆ ಚಾಲನೆ ಸಿಕ್ಕಿದ್ದು ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಹತ್ತಿರ ಬಂದಂತೆ ಕಾಣಿಸುತ್ತಿದೆ.

ತುಮಕೂರು ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನು 2012ರಲ್ಲಿ ಆರಂಭಿಸಲಾಯಿತು. ಒಟ್ಟು 206 ಕಿ.ಮೀ. ಉದ್ದದ ಲೈನ್ ಇದಾಗಿದ್ದು, ಸುಮಾರು 1850 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ಘೋಷಿಸಿದ್ದರೂ, ಆ ನಂತರ 2500 ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ 125 ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ರೈಲ್ವೆ ಕಾಮಗಾರಿ ಪ್ರಾರಂಭಕ್ಕೆ ಸಂತಸ
Image Credit : Gemini

ರೈಲ್ವೆ ಕಾಮಗಾರಿ ಪ್ರಾರಂಭಕ್ಕೆ ಸಂತಸ

ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ 81 ಕಿ.ಮೀ ವರೆಗೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಿಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ನನಗುದ್ದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭವಾಗಿರುವುದು ಈ ಭಾಗದ ಕೂಲಿ ಕಾರ್ಮಿಕರಿಗೆ, ತುಮಕೂರು ಬೆಂಗಳೂರಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಸಂತಸ ತಂದಿದೆ.

Related Articles

Related image1
ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ: ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ
Related image2
ಬೆಂಗಳೂರಿನಿಂದ ಕನಕಪುರ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರಕ್ಕೆ RRTCಗೆ ಸಿಎಂ ಮನವಿ
35
ಕೇಂದ್ರ ರೈಲ್ಚೆ ಸಚಿವ ವಿ.ಸೋಮಣ್ಣ ಭರವಸೆ
Image Credit : Gemini

ಕೇಂದ್ರ ರೈಲ್ಚೆ ಸಚಿವ ವಿ.ಸೋಮಣ್ಣ ಭರವಸೆ

ತುಮಕೂರು ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಜಯಗಳಿಸಿದ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ರೈಲ್ಚೆ ಸಚಿವರಾಗಿ ಸೋಮಣ್ಣ ಅವರನ್ನ ಆಯ್ಕೆ ಮಾಡಿದ್ದು ತುಮಕೂರು ಜನರಿಗೆ ಅದೃಷ್ಟ ಬಂದಂತೆ ಆಗಿದೆ. ಜಿಲ್ಲೆಯಲ್ಲಿ ನೆನಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಇಂದು ಚಾಲನೆಗೊಂಡಿವೆ ಕೆಲವು ಕಾಮಗಾರಿಗಳು ಮುಗಿದಿವೆ. ಇದರ ಜೊತೆಗೆ ಹಲವಾರು ವರ್ಷಗಳಿಂದ ಕಾಮಗಾರಿಯೇ ಪ್ರಾರಂಭವಾಗದ ತುಮಕೂರು ರಾಯದುರ್ಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಸಚಿವ ವಿ.ಸೋಮಣ್ಣ ಅವರು 2027ರ ಒಳಗೆ ಕಾಮಗಾರಿ ಮುಗಿಯುವ ಭರವಸೆ ನೀಡಿದ್ದಾರೆ.

45
 ಡಾ.ಜಿ.ಪರಮೇಶ್ವರ್ ಪರಿಶೀಲನೆ
Image Credit : Gemini

ಡಾ.ಜಿ.ಪರಮೇಶ್ವರ್ ಪರಿಶೀಲನೆ

ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿ ಹಲವು ವರ್ಷಗಳಿಂದ ನೆನಗುದ್ದಿಗೆ ಬಿದ್ದಿದ್ದು, ಉಪ ಮುಖ್ಯಮಂತ್ರಿ ಸ್ಥಾನ ಪಡೆಯುತ್ತಿದಂತೆ ಡಾ.ಜಿ.ಪರಮೇಶ್ವರ್ ಅವರು ಪಾವಗಡ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಂದು ವರ್ಷದೊಳಗೆ ಪಾವಗಡದಿಂದ ತುಮಕೂರಿನವರೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

55
ಬಹು ವರ್ಷಗಳ ಕನಸಿನ ಕೂಸು
Image Credit : Getty

ಬಹು ವರ್ಷಗಳ ಕನಸಿನ ಕೂಸು

ಬಹು ವರ್ಷಗಳ ಕನಸಿನ ಕೂಸಾದ ತುಮಕೂರು ರಾರ್ಯದುರ್ಗ ರೈಲ್ವೆ ಕಾಮಗಾರಿ ಕನಸಾಗಿ ಉಳಿದಿತ್ತು. ನಾನು ನಮ್ಮ ಹಳ್ಳಿಯಿಂದ ತುಮಕೂರಿಗೆ ಕೆಲಸಕ್ಕೆ ಹೋಗುತ್ತಿದ್ದು, ತುಮಕೂರು ಪಾವಗಡ ರಾಜ್ಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಜಾಸ್ತಿಯಾಗಿದ್ದು, ಬೈಕ್ ಸವಾರರು ಜೀವ ಕೈಯಲ್ಲಿ ಇಟ್ಟುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯ ವ್ಯಕ್ತಿ ಮಹೇಶ್ ಕೂಲಿ ಹೇಳುತ್ತಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ತುಮಕೂರು
ಭಾರತೀಯ ರೈಲ್ವೆ
ರೈಲು
ವಿ. ಸೋಮಣ್ಣ

Latest Videos
Recommended Stories
Recommended image1
Kadur: ಶತಮಾನದ ಬಳಿಕ ಪೊಲೀಸರ ಬಿಗಿ ಭದ್ರತೆಯಲ್ಲಿ ಹನುಮ ದೇಗುಲ ಪ್ರವೇಶಿಸಿದ ದಲಿತರು
Recommended image2
ಕೊನೆಗೂ ಕುಮಟಾದ ಯಡ್ತಾರೆ-ಕಬ್ಬರ್ಗಿ ಗ್ರಾಮಕ್ಕೆ ಬಂತು ಬಸ್; ಅಧಿಕೃತವಾಗಿ ಪ್ರತಿನಿತ್ಯ ಸಂಚಾರ
Recommended image3
Illegal Bangladeshi in Bengaluru: ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 12 ಮಂದಿ ಬಾಂಗ್ಲಾದೇಶಿಗರ ಬಂಧನ
Related Stories
Recommended image1
ಮಾದಾವರ-ತುಮಕೂರು ಮೆಟ್ರೋ ಡಿಪಿಆರ್ ಸಿದ್ಧ: ಮಹತ್ವದ ಯೋಜನೆಗೆ ಸರ್ಕಾರದ ಒಪ್ಪಿಗೆ ಮಾತ್ರ ಬಾಕಿ
Recommended image2
ಬೆಂಗಳೂರಿನಿಂದ ಕನಕಪುರ, ಮೈಸೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರಕ್ಕೆ RRTCಗೆ ಸಿಎಂ ಮನವಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved