MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಗಡಿಯಲ್ಲಿ ಶಿವಸೇನೆ ಪುಂಡಾಟಿಕೆಗೆ ಪೊಲೀಸರ ಬ್ರೇಕ್; ಬಾಲ ಮುದುರಿಕೊಂಡು ವಾಪಸ್ಸಾದ ಪುಂಡರು

ಗಡಿಯಲ್ಲಿ ಶಿವಸೇನೆ ಪುಂಡಾಟಿಕೆಗೆ ಪೊಲೀಸರ ಬ್ರೇಕ್; ಬಾಲ ಮುದುರಿಕೊಂಡು ವಾಪಸ್ಸಾದ ಪುಂಡರು

MES Black Day rally in Belagavi  ಕನ್ನಡ ರಾಜ್ಯೋತ್ಸವದ ದಿನದಂದು ಬೆಳಗಾವಿ ಗಡಿಗೆ ಪ್ರವೇಶಿಸಲು ಯತ್ನಿಸಿದ ಶಿವಸೇನೆಯ ಪುಂಡರನ್ನು ಕರ್ನಾಟಕ ಪೊಲೀಸರು ತಡೆದು ವಾಪಸ್ ಕಳುಹಿಸಿದ್ದಾರೆ. ನಾಡದ್ರೋಹಿ ಎಂಇಎಸ್ ಸಂಘಟನೆಯು ಬೆಳಗಾವಿಯಲ್ಲಿ ಕರಾಳ ದಿನದ ಮೆರವಣಿಗೆಯನ್ನು ನಡೆಸಿದೆ.

1 Min read
Mahmad Rafik
Published : Nov 01 2025, 10:46 AM IST
Share this Photo Gallery
  • FB
  • TW
  • Linkdin
  • Whatsapp
14
ಗಡಿಯಲ್ಲಿ ಪುಂಡಾಡಿಕೆ
Image Credit : Asianet News

ಗಡಿಯಲ್ಲಿ ಪುಂಡಾಡಿಕೆ

ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿರುವಾಗ ಗಡಿಯಲ್ಲಿ ಪುಂಡಾಡಿಕೆ ಮಾಡಲು ಶಿವಸೇನೆಯ ಪುಂಡರು ಆಗಮಿಸಿದ್ದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಂಗನೊಳ್ಳಿ ಗಡಿಯಲ್ಲಿ ರಾಜ್ಯಕ್ಕೆ ಪ್ರವೇಶಿಸಲು ಉದ್ದವ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಅಧ್ಯಕ್ಷ ಸಂಜಯ್ ಪವಾರ್ ಹಾಗೂ ವಿಜಯ ದೇವನೆ ಆಗಮಿಸಿದ್ದರು.

24
ಶಿವಸೇನೆ ಪುಂಡರು
Image Credit : Asianet News

ಶಿವಸೇನೆ ಪುಂಡರು

ಶಿವಸೇನೆ ಪುಂಡರನ್ನು ರಾಜ್ಯದ ಪೊಲೀಸರು ಗಡಿಯಲ್ಲಿಯೇ ತಡೆದಿದ್ದಾರೆ. ಸುಮಾರು 50 ಪುಂಡರ ಗುಂಪಿನೊಂದಿಗೆ ಸಂಜಯ್ ಪವಾರ್ ಹಾಗೂ ವಿಜಯ ದೇವನೆ ಬಂದಿದ್ದರು. ಗಡಿಯಲ್ಲಿ ಪುಂಡಾಟಿಕೆಗೆ ಕರ್ನಾಟಕ ಪೊಲೀಸರು ಬ್ರೇಕ್ ಹಾಕಿದ ಹಿನ್ನೆಲೆ ಬಂದ ದಾರಿಗೆ ಸುಂಕ ಇಲ್ಲದಂತೆ ವಾಪಸ್ ಆಗಿದ್ದಾರೆ. ಮಹಾರಾಷ್ಟ್ರ ಪೊಲೀಸರು ಶಿವಸೇನೆ ಪುಂಡರನ್ನು ಕರೆದುಕೊಂಡು ಹೋಗಿದ್ದಾರೆ.

Related Articles

Related image1
Kannada Rajyotsava: ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು: ವಿದೇಶದಲ್ಲೂ ಕನ್ನಡತನ ಬೆಳೆಸುತ್ತಿರುವ ಕನ್ನಡಿಗರು
Related image2
ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ
34
ನಾಡದ್ರೋಹಿ ಎಂಇಎಸ್‌
Image Credit : Asianet News

ನಾಡದ್ರೋಹಿ ಎಂಇಎಸ್‌

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ನಾಡದ್ರೋಹಿ ಎಂಇಎಸ್‌ ಬೆಳಗಾವಿಯಲ್ಲಿ ಕರಾಳ ದಿನದ ಮೆರವಣಿಗೆಗೆ ಮುಂದಾಗಿದೆ. ಆದ್ರೆ ಕರಾಳ ದಿನಾಚರಣೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅನುಮತಿ ನೀಡಿಲ್ಲ. ನಿರ್ಬಂಧದ ನಡುವೆಯೂ ಬೆಳಗಾವಿಗೆ ಬರೋದಾಗಿ ವಿಜಯ್ ದೇವನೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ:  Kannada Rajyotsava: ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು: ವಿದೇಶದಲ್ಲೂ ಕನ್ನಡತನ ಬೆಳೆಸುತ್ತಿರುವ ಕನ್ನಡಿಗರು

44
ಕರಾಳ ದಿನದ ಮೆರವಣಿಗೆ
Image Credit : Asianet News

ಕರಾಳ ದಿನದ ಮೆರವಣಿಗೆ

ಜಿಲ್ಲಾಡಳಿತದ ಅನುಮತಿ ನಿರಾಕರಣೆ ಮಧ್ಯೆಯೇ ಕರಾಳ ದಿನದ ಮೆರವಣಿಗೆ ಬೆಳಗಾವಿ ಸಂಭಾಜೀ ವೃತ್ತದಿಂದ ಆರಂಭವಾಗಿದೆ. ನಾಡದ್ರೋಹಿಗಳು ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಹಿಡಿದು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಬೆಳಗಾವಿ, ನಿಪ್ಪಾಣಿ ಸೇರಿ ಗಡಿಭಾಗಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗುತ್ತಿದ್ದಾರೆ. ನಾಡದ್ರೋಹಿಗಳು ನಡೆಸ್ತಿರುವ ಅನಧಿಕೃತ ರ್ಯಾಲಿಗೆ ಬೆಳಗಾವಿ ‌ಪೊಲೀಸರ ಭದ್ರತೆ ನೀಡಿದ್ದಾರೆ.

ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ‌ ಕರೆದೊಯ್ಯಬೇಕಿದ್ದ ವಾಹನದಲ್ಲಿ ದಿಢೀರ್ ಇಂಧನ ಸೋರಿಕೆ: ಕೊನೆ ಕ್ಷಣದಲ್ಲಿ ಆದದ್ದೇನು?

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕನ್ನಡ
ಬೆಳಗಾವಿ
ಶಿವಸೇನೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved