MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಸಮುದ್ರ ಅಲೆಗಳ ಅಬ್ಬರಕ್ಕೆ ಅಂಕೋಲಾ ಬಂದರಿನಲ್ಲಿ ದೋಣಿ ಮುಳುಗಡೆ; ಭಾರಿ ಮಳೆಗೆ ಜಮಖಂಡಿಯಲ್ಲಿ ಪ್ರವಾಹ!

ಸಮುದ್ರ ಅಲೆಗಳ ಅಬ್ಬರಕ್ಕೆ ಅಂಕೋಲಾ ಬಂದರಿನಲ್ಲಿ ದೋಣಿ ಮುಳುಗಡೆ; ಭಾರಿ ಮಳೆಗೆ ಜಮಖಂಡಿಯಲ್ಲಿ ಪ್ರವಾಹ!

ಉತ್ತರ ಕನ್ನಡದ ಅಂಕೋಲಾದಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಮುಳುಗಡೆಯಾಗಿದೆ. ಮತ್ತೊಂದೆಡೆ, ಬಾಗಲಕೋಟೆಯ ಜಮಖಂಡಿಯಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

1 Min read
Sathish Kumar KH
Published : Oct 09 2025, 06:37 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಉತ್ತರ ಕನ್ನಡ/ಬಾಗಲಕೋಟೆ (ಅ.09): ರಾಜ್ಯದ ಎರಡು ಜಿಲ್ಲೆಗಳಲ್ಲಿ ಪ್ರಕೃತಿಯ ವಿಕೋಪದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಂದರಿನಲ್ಲಿ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಮುಳುಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದ್ದರೆ, ಬಾಗಲಕೋಟೆಯ ಜಮಖಂಡಿಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

25
Image Credit : Asianet News

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಬೇಲೆಕೇರಿ ಬಂದರಿನಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ನಿಲ್ಲಿಸಿದ್ದ ಮೀನುಗಾರಿಕಾ ದೋಣಿಯೊಂದು (ಪರ್ಷಿಯನ್ ಬೋಟ್) ನೀರು ತುಂಬಿ ಮುಳುಗಡೆಯಾಗಿದೆ. 'ಶ್ರೀ ಶಾರದಾಂಬ' ಹೆಸರಿನ ಈ ಬೋಟ್ ಬಂದರಿನಲ್ಲಿ ಲಂಗರು ಹಾಕಿದ್ದ ಸಮಯದಲ್ಲಿ ಅಲೆಗಳು ತೀವ್ರವಾಗಿ ಅಪ್ಪಳಿಸಿದ ಪರಿಣಾಮ, ದೋಣಿಯೊಳಗೆ ನೀರು ತುಂಬಿಕೊಂಡು ಸಂಪೂರ್ಣ ಮುಳುಗಡೆಯಾಗಿದೆ.

Related Articles

Related image1
ಭಟ್ಕಳ ಅಳ್ವೇಕೋಡಿ ದೋಣಿ ದುರಂತ, ಮತ್ತಿಬ್ಬರು ಮೀನುಗಾರರ ಮೃತದೇಹ ಪತ್ತೆ!
Related image2
ಕಬ್ಬಿಗಿಂತ ಸಿಹಿ: ಜೋಳದ ದಂಟಿನಿಂದ ಬೆಲ್ಲ ರೆಡಿ ಮಾಡಿದ ಬಾಗಲಕೋಟೆ ರೈತ ಮಹಾಲಿಂಗಪ್ಪ!
35
Image Credit : Asianet News

ದೋಣಿಯಲ್ಲಿದ್ದ ಮೀನುಗಾರಿಕೆ ಬಲೆ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನೀರಿನಲ್ಲಿ ನಾಶವಾಗಿದ್ದು, ಮಾಲೀಕರಿಗೆ ಭಾರಿ ನಷ್ಟ ಉಂಟಾಗಿದೆ. ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಕರಾವಳಿ ಕಾವಲುಪಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಳುಗಡೆಯಾದ ದೋಣಿಯನ್ನು ಹೊರತೆಗೆಯುವ ಪ್ರಯತ್ನಗಳು ಜಾರಿಯಲ್ಲಿವೆ.

45
Image Credit : Asianet News

ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸುರಿದ ನಿರಂತರ ಮತ್ತು ಭಾರಿ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಜಮಖಂಡಿ ಮತ್ತು ಮುಧೋಳ ನಡುವಿನ ಮುಖ್ಯ ರಸ್ತೆ ಸಂಪೂರ್ಣವಾಗಿ ಮಳೆ ನೀರಿನಿಂದ ಆವೃತಗೊಂಡಿದ್ದು, ರಸ್ತೆಯುದ್ದಕ್ಕೂ ನೀರು ನದಿಯಂತೆ ಹರಿಯುತ್ತಿದೆ. ರಸ್ತೆಯಲ್ಲಿ ನೀರು ನಿಂತ ಪರಿಣಾಮ ಶಾಲಾ ವಾಹನಗಳು ಸೇರಿದಂತೆ ಹಲವು ವಾಹನಗಳು ಕೆಟ್ಟು ನಿಂತಿವೆ. ಬೈಕ್ ಮತ್ತು ಆಟೋ ರಿಕ್ಷಾ ಸವಾರರು ರಸ್ತೆಯಲ್ಲಿ ಸಂಚರಿಸಲು ತೀವ್ರವಾಗಿ ಪರದಾಡುತ್ತಿದ್ದಾರೆ.

55
Image Credit : Asianet News

ಜಮಖಂಡಿ ಪಟ್ಟಣದ ರಸ್ತೆಗಳು ಜಲಾವೃತಗೊಂಡಿರುವುದರಿಂದ ವಾಹನ ಸವಾರರು ಮತ್ತು ಪ್ರಯಾಣಿಕರು ಗಮ್ಯಸ್ಥಾನ ತಲುಪಲು ಹೆಣಗಾಡುತ್ತಿದ್ದಾರೆ. ನಿರಂತರ ಮಳೆಯಿಂದಾಗಿ ನಗರ ಪ್ರದೇಶದಲ್ಲಿ ಕೆಳಮಟ್ಟದ ಪ್ರದೇಶಗಳಿಗೆ ನೀರು ನುಗ್ಗಿದ್ದು, ಪರಿಸ್ಥಿತಿ ಇನ್ನಷ್ಟು ಹದಗೆಡದಂತೆ ಸ್ಥಳೀಯ ಆಡಳಿತವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮಳೆ ಹೀಗೆ ಮುಂದುವರೆದರೆ ಜಮಖಂಡಿ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಆತಂಕ ಸೃಷ್ಟಿಯಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಉತ್ತರ ಕನ್ನಡ
ಕರ್ನಾಟಕ ಸುದ್ದಿ
ಬಾಗಲಕೋಟೆ
ಕರ್ನಾಟಕ ಹವಾಮಾನ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved