MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬರಗಾಲ ನಡುವೆಯೂ ತುಂಬಿದ ರಾಜ್ಯದ ಮೊದಲ ಆಣೆಕಟ್ಟು; ಶಿವಮೊಗ್ಗದ ತುಂಗಾ ಜಲಾಶಯದಿಂದ ನೀರು ಬಿಡುಗಡೆ!

ಬರಗಾಲ ನಡುವೆಯೂ ತುಂಬಿದ ರಾಜ್ಯದ ಮೊದಲ ಆಣೆಕಟ್ಟು; ಶಿವಮೊಗ್ಗದ ತುಂಗಾ ಜಲಾಶಯದಿಂದ ನೀರು ಬಿಡುಗಡೆ!

ರಾಜ್ಯದಲ್ಲಿ ಆವರಿಸಿರುವ ಬರಗಾಲದ ಛಾಯೆಯ ನಡುವೆಯೂ ಮಲೆನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯವು ಈ ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ಭರ್ತಿಯಾಗಿದೆ. ಧಾರಾಕಾರ ಮಳೆಯಿಂದ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.

1 Min read
Author : Sathish Kumar KH
Published : Jul 06 2026, 05:32 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಶಿವಮೊಗ್ಗ (ಜು.06): ಮಲೆನಾಡಿನ ಜೀವನಾಡಿ ಎಂದೇ ಕರೆಯಲ್ಪಡುವ ಶಿವಮೊಗ್ಗ ಜಿಲ್ಲೆಯ ಗಾಜನೂರು ತುಂಗಾ ಜಲಾಶಯವು ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲೇ ಮೊದಲು ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಮೂರು ದಿನಗಳಿಂದ ಜಲಾನಯನ ಪ್ರದೇಶಗಳಾದ ಶೃಂಗೇರಿ, ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದ್ದು, ಡ್ಯಾಂ ಸಂಪೂರ್ಣ ಭರ್ತಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಜಲಾಶಯದ ಸದ್ಯದ ಸ್ಥಿತಿ:

ಗಾಜನೂರು ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್ ಆಗಿದ್ದು, ಸದ್ಯದ ಮಟ್ಟ 588.21 ಮೀಟರ್ ತಲುಪಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 3.24 ಟಿಎಂಸಿ ಇದ್ದು, ಪ್ರಸ್ತುತ 3.20 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ಕೆಲವು ದಿನಗಳಿಂದ ಒಳಹರಿವು 20,565 ಕ್ಯೂಸೆಕ್‌ನಿಂದ 25,376 ಕ್ಯೂಸೆಕ್ ವರೆಗೆ ಏರಿಳಿತವಾಗುತ್ತಿದೆ.

Related Articles

Related image1
ರೈತರಿಗೆ ಗುಡ್ ನ್ಯೂಸ್: ನವಲಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸರ್ಕಾರದ ಭರವಸೆ
Related image2
ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ
35
Image Credit : Asianet News

ನದಿಗೆ ನೀರು ಬಿಡುಗಡೆ:

ಜುಲೈ 4 ರಿಂದಲೇ ಜಲಾಶಯದಿಂದ ನೀರನ್ನು ಹೊರಬಿಡಲು ಆರಂಭಿಸಲಾಗಿದೆ. ಆರಂಭದಲ್ಲಿ 12 ಕ್ರಸ್ಟ್ ಗೇಟ್‌ಗಳ ಮೂಲಕ ಸುಮಾರು 22,822 ಕ್ಯೂಸೆಕ್ ವರೆಗೆ ನೀರನ್ನು ಹರಿಸಲಾಗಿತ್ತು. ಸದ್ಯ 8 ಕ್ರೆಸ್ಟ್ ಗೇಟ್ ಮೂಲಕ 13,558 ಕ್ಯೂಸೆಕ್ ನೀರನ್ನು ತುಂಗಭದ್ರಾ ಜಲಾಶಯದ ಕಡೆಗೆ ಬಿಡಲಾಗುತ್ತಿದೆ. ಮಳೆ ಅಬ್ಬರ ಮುಂದುವರಿದಲ್ಲಿ ಹೊರಹರಿವಿನ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ.

45
Image Credit : Asianet News

ಜನತೆಗೆ ಎಚ್ಚರಿಕೆ:

ಜಲಾಶಯದಿಂದ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ತುಂಗಾ ನದಿ ಪಾತ್ರದ ಕೆಳಭಾಗದ ನಿವಾಸಿಗಳಿಗೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ನದಿ ದಡದಲ್ಲಿರುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಹಳ್ಳ-ಕೊಳ್ಳಗಳು ಮತ್ತು ನಾಲೆಯ ಆಸುಪಾಸಿಗೆ ಜಾನುವಾರುಗಳನ್ನು ಬಿಡಬಾರದು ಎಂದು ಆಡಳಿತ ಮಂಡಳಿ ಆದೇಶಿಸಿದೆ.

55
Image Credit : Asianet News

ಯೆಲ್ಲೋ ಅಲರ್ಟ್ ಘೋಷಣೆ:

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದ್ದು, ಜನರು ಅನಗತ್ಯವಾಗಿ ನದಿ ತೀರಕ್ಕೆ ತೆರಳದಂತೆ ಮತ್ತು ಪ್ರವಾಸಿಗರು ಜಲಪಾತಗಳ ಬಳಿ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕರ್ನಾಟಕದ ನದಿಗಳು
ಕರ್ನಾಟಕ ಮಳೆ
ಮಳೆ
ಶಿವಮೊಗ್ಗ

Latest Videos
Recommended Stories
Recommended image1
ಎಚ್‌ಎಂಟಿಗೆ ಬಿಗ್ ಶಾಕ್! 15,000 ಕೋಟಿ ರೂ. ಮೌಲ್ಯದ 430 ಎಕರೆ ಅರಣ್ಯ ಭೂಮಿ ಸರ್ಕಾರಕ್ಕೆ ಹಿಂತಿರುಗಿಸಲು ಆದೇಶ
Recommended image2
NASA ಜೊತೆ ಕೈಜೋಡಿಸಿದ ಕರ್ನಾಟಕದ ಸ್ಪೇಸ್ ಸ್ಟಾರ್; ಕನ್ನಡ ಮಣ್ಣಿನ ಅಪ್ರತಿಮ ಪ್ರತಿಭೆಯ ಸಾಹಸದ ಕತೆ..!
Recommended image3
ಟಿಕೆಟ್‌ನಲ್ಲಿ ಬೆಂಗಳೂರಿನ 1 ವರ್ಷದ ಮಗು ಏಕಾಂಗಿ ಪ್ರಯಾಣ ಎಂದು ತೋರಿಸ್ತಿತ್ತು.. ಆಮೇಲೆ?
Related Stories
Recommended image1
ರೈತರಿಗೆ ಗುಡ್ ನ್ಯೂಸ್: ನವಲಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸರ್ಕಾರದ ಭರವಸೆ
Recommended image2
ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved