MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ 62 ಜನರು ಪ್ರಯಾಣಿಸುತ್ತಿದ್ದ ಕೆಕೆಆರ್‌ಟಿಸಿ ಬಸ್

ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ 62 ಜನರು ಪ್ರಯಾಣಿಸುತ್ತಿದ್ದ ಕೆಕೆಆರ್‌ಟಿಸಿ ಬಸ್

ಕೂಡ್ಲಿಗಿ ಹೊರವಲಯದಲ್ಲಿ, ಬೈಕ್‌ಗೆ ದಾರಿ ಬಿಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕೆಕೆಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಚಾಲಕ, ನಿರ್ವಾಹಕ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಒಟ್ಟು 62 ಮಂದಿ ಪ್ರಯಾಣಿಸುತ್ತಿದ್ದರು.

1 Min read
Author : Mahmad Rafik
Published : Mar 10 2026, 01:11 PM IST
Share this Photo Gallery
  • FB
  • TW
  • Linkdin
  • Whatsapp
15
ಕೆಕೆಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ
Image Credit : Asianet News

ಕೆಕೆಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ

ಕೆಕೆಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿಯಾಗಿ ಚಾಲಕ, ನಿರ್ವಾಹಕ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೊಳಗಾದ ಬಸ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 62 ಜನರು ಪ್ರಯಾಣಿಸುತ್ತಿದ್ದರು.

25
ಕೂಡ್ಲಿಗಿ ಬಸ್ ಘಟಕ
Image Credit : Asianet News

ಕೂಡ್ಲಿಗಿ ಬಸ್ ಘಟಕ

ಕೂಡ್ಲಿಗಿ ಘಟಕಕ್ಕೆ ಸೇರಿದ ಬಸ್ ಇಂದು ಬೆಳಗ್ಗೆ ಕಸಾಪುರಕ್ಕೆ ಹೋಗಿ ಮರಳಿ ನಗರಕ್ಕೆ ಬರುತ್ತಿತ್ತು. ಪಟ್ಟಣದ ಗುಡೇಕೋಟೆ ರಸ್ತೆಯಲ್ಲಿನ ಸಾಗರ ಡಾಬಾ ಬಳಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಎದುರಿಗೆ ಬರುತ್ತಿದ್ದ ಬೈಕ್‌ಗೆ ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಲ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

Related Articles

Related image1
ಕೊಟ್ಟೂರಿನ 'ಕಂಪ್ಯೂಟರ್' ಮ್ಯಾನ್‌ ಲೆಕ್ಕದ ಮಾಯಾಜಾಲ; ಗುಟ್ಟು ರಟ್ಟು ಮಾಡಿದ ಮಗ್ಗಿ ಅಜ್ಜಯ್ಯ
Related image2
ಹಾಯ್, ಹೆಲೋ ಅಂತಾಳೆ, ಲಾಡ್ಜ್‌ಗೆ ಕರೀತಾಳೆ; ಸ್ನಾನ ಮಾಡಿ ಅಂತ ಬಟ್ಟೆ ಬಿಚ್ಚಿಸ್ತಾಳೆ!
35
ಚಾಲಕನ ಕಾಲಿಗೆ ಪೆಟ್ಟು
Image Credit : Asianet News

ಚಾಲಕನ ಕಾಲಿಗೆ ಪೆಟ್ಟು

ಬಸ್ ಚಾಲಕ ಶಶಿಧರ್ ಅವರ ಬಲಗಾಲಿಗೆ ಗಾಯವಾಗಿದ್ದು, ಮೂಳೆ ಮುರಿತವಾಗಿರುವ ಸಾಧ್ಯತೆಗಳಿವೆ. ನಿರ್ವಾಹಕ ಪಾಟೀಲ್ ಅವರ ಮುಖಕ್ಕೆ ಪೆಟ್ಟು ಬಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣ ಪ್ರಮಾಣದ ಗಾಯಳಾಗಿವೆ. ಗಾಯಾಳುಗಳನ್ನು ಕೂಡ್ಲಿಗೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ

45
62 ಜನರು ಪ್ರಯಾಣಸುತ್ತಿದ್ದ ಬಸ್
Image Credit : Asianet News

62 ಜನರು ಪ್ರಯಾಣಸುತ್ತಿದ್ದ ಬಸ್

ವಿದ್ಯಾರ್ಥಿಗಳು ಸೇರಿದಂತೆ ಬಸ್ಸಿನಲ್ಲಿ 62 ಜನರಿದ್ದರು. ಬೆಳಗ್ಗೆಯ ಸಮಯವಾಗಿದ್ದರಿಂದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುತ್ತದೆ. ವಿಷಯ ತಿಳಿದ ಕೂಡ್ಲಿಗಿ ಠಾಣೆಯ ಸಿಪಿಐ ಪ್ರಲ್ಹಾದ್ ಆರ್ ಚನ್ನಗಿರಿ, ಪಿಎಸೈ ಸಿ. ಪ್ರಕಾಶ ಸ್ಥಳಕ್ಕೆ ಭೇಟಿ ನೀಡಿ ಗಾಯಳಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಇದನ್ನೂ ಓದಿ: ಮಗಳ ಮದುವೆ ಮಾಡಿಸಲು ಸಾಧ್ಯವಾಗದೇ ತಂದೆ ಸಾವು, ಅಪ್ಪನ ಕಳ್ಕೊಂಡ ನೋವಿನಲ್ಲಿ ಪುತ್ರಿ ದುರಂತ ಅಂತ್ಯ

55
ಕಾರ್‌ ಮೇಲೆ ಕಂಟೈನರ್ ಬಿದ್ದು 8 ವರ್ಷ ಮಗು ಬಲಿ
Image Credit : Asianet News

ಕಾರ್‌ ಮೇಲೆ ಕಂಟೈನರ್ ಬಿದ್ದು 8 ವರ್ಷ ಮಗು ಬಲಿ

ಕಂಟೈನರನ್ನು ಚಾಲಕ ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ 8 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಅರಗಾ ಗ್ರಾಮದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ. ಕಾರಿನ ಚಾಲಕ ಸೇರಿ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಕಂಟೈನರ್ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕೃತ್ಯ ಎಸಗಿದ ಬಳಿಕ ಪರಾರಿಯಾಗಲು ಯತ್ನಿಸಿದ ಕಂಟೈನರ್ ಚಾಲಕನನ್ನು ಪೊಲೀಸರು ವಶ ಪಡೆದಿದ್ದಾರೆ

ಇದನ್ನೂ ಓದಿ: ಸರ್, ಪ್ಲೀಸ್ ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ವಿಜಯನಗರ
ಅಪಘಾತ

Latest Videos
Recommended Stories
Recommended image1
ನೀವು ವರದಿ ಮಾಡುವಂತೆಯೇ ನಾನು ಕಾಯುತ್ತಾ ಕುಳಿತ್ತಿರುವೆ: ಡಿಕೆಶಿ
Recommended image2
LPG Gas ಕೊರತೆ ಅಂತ ಗಾಬರಿಯಾದ್ರಾ? ಅಸಲಿ ಸತ್ಯ ಬೇರೆ ಇದೆ! ಕರಾಳ ದಂಧೆಗೆ ಮೋಸ ಹೋಗ್ಬೇಡಿ!
Recommended image3
ದಾವಣಗೆರೆ: ಹಿಂದೂ ಮುಸ್ಲಿಂ ಪ್ರೇಮ: ತುಂಗಭದ್ರಾ ನದಿಗೆ ಹಾರಿದ ಜೋಡಿ
Related Stories
Recommended image1
ಕೊಟ್ಟೂರಿನ 'ಕಂಪ್ಯೂಟರ್' ಮ್ಯಾನ್‌ ಲೆಕ್ಕದ ಮಾಯಾಜಾಲ; ಗುಟ್ಟು ರಟ್ಟು ಮಾಡಿದ ಮಗ್ಗಿ ಅಜ್ಜಯ್ಯ
Recommended image2
ಹಾಯ್, ಹೆಲೋ ಅಂತಾಳೆ, ಲಾಡ್ಜ್‌ಗೆ ಕರೀತಾಳೆ; ಸ್ನಾನ ಮಾಡಿ ಅಂತ ಬಟ್ಟೆ ಬಿಚ್ಚಿಸ್ತಾಳೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved