MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊಡಗಿನಲ್ಲಿ ಮಳೆಯ ಅಬ್ಬರ: ರಸ್ತೆ ಬಂದ್, ವಿದ್ಯುತ್ ಕಡಿತ, ಭೂಕುಸಿತ ಭೀತಿಯಿಂದ ಜನಜೀವನ ಅಸ್ತವ್ಯಸ್ತ

ಕೊಡಗಿನಲ್ಲಿ ಮಳೆಯ ಅಬ್ಬರ: ರಸ್ತೆ ಬಂದ್, ವಿದ್ಯುತ್ ಕಡಿತ, ಭೂಕುಸಿತ ಭೀತಿಯಿಂದ ಜನಜೀವನ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳ ಮೇಲೆ ಮರಗಳು ಉರುಳಿ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.  ತ್ರಿವೇಣಿ ಸಂಗಮ ಸ್ನಾನಘಟ್ಟ, ಪಕ್ಕದ ಉದ್ಯಾನ ಮುಳುಗಿದೆ.

2 Min read
Sathish Kumar KH
Published : May 25 2025, 07:10 PM IST| Updated : May 25 2025, 07:50 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಮಳೆ ಹೀಗೆಯೇ ಮುಂದುವರಿದಲ್ಲಿ ಭಾಗಮಂಡಲ ನಾಪೋಕ್ಲು, ಭಾಗಮಂಡಲ ಮತ್ತು ಮಡಿಕೇರಿ ರಸ್ತೆಗಳ ಮೇಲು ನೀರು ಹರಿಯಲಿದೆ. ಕಾವೇರಿ ನದಿಯಲ್ಲಿ ಒಂದೇ ದಿನಕ್ಕೆ ಆರು ಅಡಿ ನೀರು ಪ್ರಮಾಣ ಏರಿಕೆಯಾಗಿದೆ. ಕುಶಾಲನಗರ, ಸೋಮವಾರಪೇಟೆ ತಾಲ್ಲೂಕುಗಳಲ್ಲೂ ಭಾರೀ ಮಳೆಯಾಗುತ್ತಿದೆ. ಸೋಮವಾರಪೇಟೆ ಮಡಿಕೇರಿ ಮುಖ್ಯ ರಸ್ತೆ, ಹಾಗೆ ಸೋಮವಾರಪೇಟೆ ಕುಶಾಲನಗರ ರಸ್ತೆಯಲ್ಲೂ ಮರಗಳು ಧರೆಗುರುಳಿವೆ. ಇದರಿಂದ ಸಾಕಷ್ಟು ಸಮಯ ರಸ್ತೆ ಸಂಚಾರ ಬಂದ್ ಆಗಿದ್ದವು. ಮತ್ತೊಂದೆಡೆ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲೂ ಭಾರಿ ಮಳೆಯಾಗುತ್ತಿದೆ.

25
Image Credit : Asianet News

ಕುಶಾಲನಗರ ಸಿದ್ದಾಪುರ ನಡುವಿನ ವಾಲ್ನೂರು ಬಳಿ ಬೃಹತ್ ಗಾತ್ರದ ಎರಡು ಮರಗಳು ಮುರಿದು ಬಿದ್ದಿದ್ದರಿಂದ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಸ್ಥಳಕ್ಕೆ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಅವರ ನೇತೃತ್ವದ ತಂಡ ಭೇಟಿ, ಕೂಡಲೇ ಮರ ತೆರವುಗೊಳಿಸಿದ್ದಾರೆ. ಮತ್ತೊಂದೆಡೆ ವಿರಾಜಪೇಟೆಯ ಭಾಗದಲ್ಲಿ ಸುರಿದ ಭಾರೀ ಮಳೆಗೆ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ವಿರಾಜಪೇಟೆ ಪಟ್ಟಣದ ವಿಜಯನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಪರಿಣಾಮ ಅಲ್ಲಿನ ನಿವಾಸಿಗಳು ಸಾಕಷ್ಟು ಪರದಾಡಿದ್ದಾರೆ. ಒಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರಿಸುತ್ತಿದ್ದು ಕೊಡಗಿನ ಜನರು ತತ್ತರಿಸುವಂತೆ ಆಗಿದೆ. ಇನ್ನೂ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ 28 ನೇ ತಾರೀಖಿನವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Related Articles

Related image1
Now Playing
ಮಲೆತಿರಿಕೆ ಬೆಟ್ಟದಲ್ಲಿ ಬಿರುಕು; ಮಳೆಗಾಲ ಬಂದ್ರೆ ಈ ಜನರಿಗೆ ನರಕ । Kodagu Rains
Related image2
Kodagu: ಕುಸಿಯುವ ಆತಂಕದಲ್ಲಿ ವಿರಾಜಪೇಟೆ ಅಯ್ಯಪ್ಪ ಬೆಟ್ಟದ ಜನರ ಬದುಕು
35
Image Credit : Asianet News

ಕಳೆದ ಎರಡು ವರ್ಷಗಳ ಹಿಂದೆಯೇ ಎಫ್ಎಂಸಿ ಕಾಲೇಜು ರಸ್ತೆಯಲ್ಲಿ ಸಾಯಿ ಕ್ರೀಡಾಂಗಣದ ಎದುರು ಮಳೆಗೆ ಕುಸಿದಿದ್ದ ರಾಜಕಾಲುವೆ ತಡೆಗೋಡೆ ಮತ್ತೆ ಕುಸಿಯುವ ಆತಂಕ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತೆ ಬಿರುಕುಗಳು ಕಾಣಿಸಿಕೊಂಡಿದ್ದು ಇಡೀ ಮಣ್ಣು ಕುಸಿದು ಕಾಲುವೆ ಮುಚ್ಚಿ ಹೋಗುವ ಆತಂಕ ಎದುರಾಗಿದೆ. ಕಾಮಗಾರಿ ಮಾಡಲಾಗುತ್ತಿದ್ದರೂ ಅದು ಪೂರ್ಣಗೊಂಡಿಲ್ಲ. 

ಮಧ್ಯಭಾಗದಲ್ಲಿ ಮಾತ್ರವೇ ತಡೆಗೋಡೆ ನಿರ್ಮಿಸಲಾಗಿದೆ. ಇದರಿಂದ ಎರಡು ಬದಿಗಳಲ್ಲಿ ಭಾರೀ ಪ್ರಮಾಣದ ಮಣ್ಣು ಕುಸಿಯುವ ಹಂತ ತಲುಪಿದೆ. ತಡೆಗೋಡೆ ಪಕ್ಕಕ್ಕೆ ಸುರಿದಿರುವ ಮಣ್ಣು ಕಾಲುವೆಗೆ ಜಾರುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಜಾರಿದಲ್ಲಿ ರಸ್ತೆಯೂ ಕುಸಿಯುವ ಭೀತಿ ಇದೆ. ರಸ್ತೆ ಕುಸಿದಲ್ಲಿ ಸುಬ್ರಹ್ಮಣ್ಯನಗರ, ಎಫ್ಎಂಸಿ ಕಾಲೇಜು, ಗಾಳಿಬೀಡು ಸೇರಿದಂತೆ ಹಲವೆಡಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್ ಆಗಲಿದೆ. ಒಂದು ವೇಳೆ ಹಾಗೆಯೇ ಆದಲಿ, ವಿಜಯ ವಿನಾಯಕ ದೇವಾಲಯ ಮುಂಭಾಗದಿಂದ ಕಿರಿದಾದ ರಸ್ತೆಯಲ್ಲಿ ಎಲ್ಲಾ ವಾಹನಗಳ ಓಡಾಡಬೇಕಾದ ಪರಸ್ಥಿತಿ ನಿರ್ಮಾಣವಾಗಲಿದೆ.

45
Image Credit : Asianet News

ಬೇಸಿಗೆಯಲ್ಲಿಯೇ ಕಾಮಗಾರಿ ಮುಗಿಸದ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣ ಆಗಲು ಕಾರಣವಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತೀವ್ರಗೊಳ್ಳುತ್ತಿದ್ದು ಪರಿಸ್ಥಿತಿ ಏನಾಗುವುದೋ ಎನ್ನುವಂತೆ ಆಗಿದೆ. ಸದ್ಯ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ತಡೆಗೋಡೆ ಕಾಮಗಾರಿಯನ್ನು ಸ್ಥಗಿತಮಾಡಲಾಗಿದೆ. ಕಳೆದ ಮಳೆಗಾಲದ ಸಂದರ್ಭದಲ್ಲೂ ಇದೇ ರೀತಿಯಾಗಿ ರಸ್ತೆಯನ್ನು ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಅವಧಿಗೂ ಮುನ್ನವೇ ಶುರುವಾದ ಮುಂಗಾರು ಮಳೆಗೆ ಕೊಡಗು ಜಿಲ್ಲೆ ತತ್ತರಿಸಿ ಹೋಗಿದೆ. ಭಾರೀ ಗಾಳಿ ಜೊತೆಗೆ ಗಂಟೆಗೆ 45 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಸೇರಿ ಹಲವೆಡೆ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿ ಬಿದ್ದಿವೆ.

55
Image Credit : Asianet News

ಮಡಿಕೇರಿಯ ಅಶೋಕಪುರದ ಚಟ್ಟಳ್ಳಿ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ. ಬೃಹತ್ ಗಾತ್ರದ ಮರ ಬಿದ್ದ ಹಿನ್ನೆಲೆಯಲ್ಲಿ ಪಕ್ಕದಲ್ಲಿಯೇ ಇದ್ದ ವಿದ್ಯುತ್ ಲೈನ್ ಮೇಲೆ ಬಿದ್ದಿದ್ದರಿಂದ ಒಂದು ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದರೆ, ಮತ್ತೊಂದು ವಿದ್ಯುತ್ ಕಂಬ ನೆಲದಿಂದಲೇ ಬಡಸಮೇತ ಬಿದ್ದಿದೆ. ಜೊತೆ ನೀರುಕೊಲ್ಲಿ ಎಂಬಲ್ಲಿಯೂ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಹೀಗಾಗಿ ಕೊಡಗು ಜಿಲ್ಲೆಯ ಹಲವು ಗ್ರಾಮೀಣ ಪ್ರದೇಶಗಳು ಕತ್ತಲಲ್ಲಿ ಮುಳುಗುವಂತೆ ಆಗಿದೆ. ಇದುವರೆಗೆ ಬರೋಬ್ಬರಿ 197 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಲೈನ್ ಸರಿಪಡಿಸಲು ಕೆಇಬಿ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕೆಇಬಿ ಸಿಬ್ಬಂದಿ ಮಳೆ ಲೆಕ್ಕಿಸದೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.

ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್, ಸುವರ್ಣ ನ್ಯೂಸ್

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕೊಡಗು
ಕರ್ನಾಟಕ ಸುದ್ದಿ
ಮಳೆ
ಕರ್ನಾಟಕ ಹವಾಮಾನ

Latest Videos
Recommended Stories
Recommended image1
ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Recommended image2
19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
Recommended image3
ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ: ಕೇಂದ್ರ ಸಚಿವ ಕುಮಾರಸ್ವಾಮಿ
Related Stories
Recommended image1
Now Playing
ಮಲೆತಿರಿಕೆ ಬೆಟ್ಟದಲ್ಲಿ ಬಿರುಕು; ಮಳೆಗಾಲ ಬಂದ್ರೆ ಈ ಜನರಿಗೆ ನರಕ । Kodagu Rains
Recommended image2
Kodagu: ಕುಸಿಯುವ ಆತಂಕದಲ್ಲಿ ವಿರಾಜಪೇಟೆ ಅಯ್ಯಪ್ಪ ಬೆಟ್ಟದ ಜನರ ಬದುಕು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved