MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕೋಲಾರದ ನರ್ಸ್ ಸುಜಾತಾ ಮರ್ಡರ್: 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು!

ಕೋಲಾರದ ನರ್ಸ್ ಸುಜಾತಾ ಮರ್ಡರ್: 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು!

ಕೋಲಾರದಲ್ಲಿ ವಿವಾಹಿತ ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕೆಲಸಕ್ಕೆ ತೆರಳುತ್ತಿದ್ದ ನರ್ಸ್ ಸುಜಾತಾ ಕೊಲೆಗಿದ್ದು, ಪರಾರಿಯಾಗಲು ಯತ್ನಿಸಿದ ಆರೋಪಿ ಚಿರಂಜೀವಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

2 Min read
Author : Sathish Kumar KH
Published : Jan 15 2026, 12:19 PM IST
Share this Photo Gallery
  • FB
  • TW
  • Linkdin
  • Whatsapp
16
ಪ್ರೀತಿಸುತ್ತಿದ್ದ ಯುವತಿ
Image Credit : Asianet News

ಪ್ರೀತಿಸುತ್ತಿದ್ದ ಯುವತಿ

ಕೋಲಾರ (ಜ.15): ಪ್ರೀತಿ ಹಾಗೂ ಹಣಕಾಸಿನ ವ್ಯವಹಾರದ ನಡುವೆ ಉಂಟಾದ ವಿರಸವು ಕೊಲೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಕೋಲಾರ ನಗರದ ಹೊರವಲಯದ ಬಂಗಾರಪೇಟೆ ಬ್ರಿಡ್ಜ್ ಬಳಿ ನಡೆದಿದೆ. ತನ್ನನ್ನು ಪ್ರೀತಿಸುತ್ತಿದ್ದ ಯುವತಿಯನ್ನೇ ಪ್ರಿಯಕರ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

26
ಘಟನೆಯ ವಿವರ
Image Credit : Asianet News

ಘಟನೆಯ ವಿವರ

ಬಂಗಾರಪೇಟೆ ತಾಲ್ಲೂಕಿನ ದಾಸರಹೊಸಹಳ್ಳಿ ಮೂಲದ ಸುಜಾತಾ (28) ಕೊಲೆಯಾದ ದುರ್ದೈವಿ. ಈಕೆ ನರಸಾಪುರ ಕೈಗಾರಿಕಾ ಪ್ರದೇಶದ 'ಬೆಲ್ರೈಸ್' ಕಂಪನಿಯಲ್ಲಿ ಸ್ಟಾಫ್ ನರ್ಸ್ ಆಗಿ ಕಳೆದ ಮೂರು ತಿಂಗಳಿನಿಂದ ಕೆಲಸ ಮಾಡುತ್ತಿದ್ದರು. ಯಳಬುರ್ಗಿ ಗ್ರಾಮದ ಚಿರಂಜೀವಿ (27) ಎಂಬಾತನೇ ಕೊಲೆ ಮಾಡಿದ ಆರೋಪಿ. ಈತ ಹೊಸಕೋಟೆಯ ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು.

Related Articles

Related image1
ಕೋಲಾರ: ಸೆಕ್ಯೂರಿಟಿ ಕ್ಯಾಬಿನ್‌ನಲ್ಲಿ ಅಗ್ನಿ ಅವಘಡ; ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗು ದುರ್ಮರಣ!
Related image2
ಉತ್ತರಕನ್ನಡ: ಪ್ರೇಮ ವೈಫಲ್ಯಕ್ಕೆ ಬಲಿಯಾದ ಯುವ ಅರ್ಚಕ; ಪ್ರೀತಿಸಿ ಮದುವೆಗೆ ಒಲ್ಲೆ ಎಂದಳಾ ಪ್ರೇಯಸಿ?
36
ಪರಿಚಯ ಪ್ರೀತಿಗೆ ತಿರುಗಿದ್ದು ಹೇಗೆ?
Image Credit : Asianet News

ಪರಿಚಯ ಪ್ರೀತಿಗೆ ತಿರುಗಿದ್ದು ಹೇಗೆ?

ಆರೋಪಿ ಚಿರಂಜೀವಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುವಾಗ ಸ್ತ್ರೀಶಕ್ತಿ ಸಂಘಗಳ ಮೂಲಕ ಸಾಲ ನೀಡುವ ಮತ್ತು ಹಣ ವಸೂಲಿ ಮಾಡುವ ಕೆಲಸ ಮಾಡುತ್ತಿದ್ದನು. ಈ ಸಂದರ್ಭದಲ್ಲಿ ಸುಜಾತಾ ಪರಿಚಯವಾಗಿ, ಇಬ್ಬರ ನಡುವೆ ಪ್ರೀತಿ ಅಂಕುರಿಸಿತ್ತು. ವಿಶೇಷವೆಂದರೆ, ಆರೋಪಿ ಚಿರಂಜೀವಿ ಈಗಾಗಲೇ ವಿವಾಹಿತನಾಗಿದ್ದು, ಇಬ್ಬರು ಮಕ್ಕಳ ತಂದೆಯೂ ಆಗಿದ್ದಾನೆ.

46
ಕೊಲೆಗೆ ಕಾರಣವೇನು?
Image Credit : Asianet News

ಕೊಲೆಗೆ ಕಾರಣವೇನು?

ಪೋಲೀಸ್ ಮೂಲಗಳ ಪ್ರಕಾರ, ಇಬ್ಬರ ನಡುವೆ ಕಳೆದ ಕೆಲವು ದಿನಗಳಿಂದ ಹಣಕಾಸಿನ ವಿಚಾರಕ್ಕೆ ಭಾರಿ ಜಗಳ ನಡೆಯುತ್ತಿತ್ತು. ಸುಜಾತಾ ಆರೋಪಿಯಿಂದ ಹಣ ಪಡೆದಿದ್ದಳು ಎನ್ನಲಾಗಿದ್ದು, ಈ ವಿಚಾರವಾಗಿ ಈ ಹಿಂದೆಯೂ ಚಿರಂಜೀವಿ ಆಕೆಯ ಮೇಲೆ ಹಲ್ಲೆ ಮಾಡಿದ್ದನು.

ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಆದರೂ ಬುದ್ಧಿ ಕಲಿಯದ ಆರೋಪಿ, ಇಂದು ಬೆಳಗ್ಗೆ ಸುಜಾತಾ ಕೆಲಸಕ್ಕೆ ತೆರಳುತ್ತಿದ್ದಾಗ ಕೋಲಾರ ಬಸ್ ಡಿಪೋ ಬಳಿ ತಡೆದು ಮಾತುಕತೆಗೆ ಇಳಿದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ತನ್ನ ಬಳಿಯಿದ್ದ ಚಾಕುವಿನಿಂದ ಸುಜಾತಾಳಿಗೆ ಮನಬಂದಂತೆ ಇರಿದಿದ್ದಾನೆ.

56
ಸ್ಥಳೀಯರಿಂದ ಆರೋಪಿ ಬಂಧನ
Image Credit : Asianet News

ಸ್ಥಳೀಯರಿಂದ ಆರೋಪಿ ಬಂಧನ

ಸುಜಾತಾ ಕಿರುಚಾಟ ಕೇಳಿ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಚಿರಂಜೀವಿಯನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದು, ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

66
ವೈಯಕ್ತಿಕ ಮತ್ತು ಹಣಕಾಸಿನ ಕಾರಣ
Image Credit : Asianet News

ವೈಯಕ್ತಿಕ ಮತ್ತು ಹಣಕಾಸಿನ ಕಾರಣ

ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕನಿಕ ಸಿಕ್ರಿವಾಲ್ ಮಾತನಾಡಿ, 'ವೈಯಕ್ತಿಕ ಮತ್ತು ಹಣಕಾಸಿನ ಕಾರಣಕ್ಕೆ ಈ ಕೊಲೆ ನಡೆದಿದೆ. ಸುಜಾತಾ ಎಷ್ಟು ಹಣ ಪಡೆದಿದ್ದಳು ಮತ್ತು ಕೊಲೆಗೆ ಬೇರೇನಾದರೂ ಪ್ರಚೋದನೆ ಇತ್ತೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ' ಎಂದು ತಿಳಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕೋಲಾರ
ಕರ್ನಾಟಕ ಸುದ್ದಿ
ಕ್ರೈಮ್ ನ್ಯೂಸ್

Latest Videos
Recommended Stories
Recommended image1
ಬೆಂಗಳೂರು: ಅಕ್ರಮ ಬಾಂಗ್ಲಾದೇಶಿಗರು ನೆಲೆಸಿದ್ದ ಶೆಡ್‌ ನಲ್ಲಿ ಸಿಲಿಂಡರ್ ಸ್ಫೋಟ, ಭಾರೀ ಬೆಂಕಿ, ಬಾನೆತ್ತರ ತುಂಬಿಕೊಂಡ ಹೊಗೆ!
Recommended image2
ಮಕ್ಕಳಿಗೆ ಪಾಠ ಹೇಳಿಕೊಟ್ಟ ಶಾಲಾ ಕೊಠಡಿಯಲ್ಲೇ ನೇಣಿಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕ!
Recommended image3
ಹಾಸನ ನಿವೇಶನ ವಿವಾದ: ನಿರ್ಮಾಪಕಿ ಪುಷ್ಮಾ ಅರುಣ್‌ಕುಮಾರ್‌ಗೆ ನ್ಯಾಯಾಲಯದಲ್ಲಿ ಹಿನ್ನಡೆ
Related Stories
Recommended image1
ಕೋಲಾರ: ಸೆಕ್ಯೂರಿಟಿ ಕ್ಯಾಬಿನ್‌ನಲ್ಲಿ ಅಗ್ನಿ ಅವಘಡ; ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗು ದುರ್ಮರಣ!
Recommended image2
ಉತ್ತರಕನ್ನಡ: ಪ್ರೇಮ ವೈಫಲ್ಯಕ್ಕೆ ಬಲಿಯಾದ ಯುವ ಅರ್ಚಕ; ಪ್ರೀತಿಸಿ ಮದುವೆಗೆ ಒಲ್ಲೆ ಎಂದಳಾ ಪ್ರೇಯಸಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved