MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಹೆಂಡ್ತಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ಧರಣಿ ಕುಳಿತ ಗಂಡ! ₹2,000 ಯೋಜನೆಯ ಹಣಕ್ಕೆ ₹25,000 ಖರ್ಚು ಮಾಡಿದ ಪತಿ!

ಹೆಂಡ್ತಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ಧರಣಿ ಕುಳಿತ ಗಂಡ! ₹2,000 ಯೋಜನೆಯ ಹಣಕ್ಕೆ ₹25,000 ಖರ್ಚು ಮಾಡಿದ ಪತಿ!

ಕೊಪ್ಪಳದಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಪತ್ನಿಗೆ ಬಾರದಿದ್ದಕ್ಕೆ ಪತಿಯೊಬ್ಬರು ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅತಿಥಿ ಶಿಕ್ಷಕಿಯಾಗಿರುವ ಪತ್ನಿಯ ಖಾತೆಗೆ ಹಣ ಜಮೆಯಾಗದ ಕಾರಣ, ಈವರೆಗೆ ₹25,000 ಖರ್ಚು ಮಾಡಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ.

2 Min read
Author : Sathish Kumar KH
Published : Jul 22 2026, 02:20 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಕೊಪ್ಪಳ (ಜು.22): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಅಡಿ ಪ್ರತಿ ತಿಂಗಳು ₹2,000 ಪಡೆಯಲು ಸಾವಿರಾರು ಮಹಿಳೆಯರು ಇಂದಿಗೂ ಕಾಯುತ್ತಿದ್ದಾರೆ. ಆದರೆ ಕೊಪ್ಪಳದಲ್ಲಿ (Koppal) ಪತ್ನಿಗೆ ಬರಬೇಕಾದ ಈ ಹಣಕ್ಕಾಗಿ ಪತಿಯೊಬ್ಬರು ಜಿಲ್ಲಾ ಆಡಳಿತ ಭವನದ ಮುಂದೆ ಏಕಾಂಗಿಯಾಗಿ ಪ್ರತಿಭಟನೆಗೆ (Protest) ಕುಳಿತಿರುವುದು ಎಲ್ಲರ ಗಮನ ಸೆಳೆಯುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಏನಿದು ಪ್ರಕರಣ? 

ಕುಷ್ಟಗಿ ತಾಲ್ಲೂಕಿನ ಹಾಬಲಕಟ್ಟಿ ಗ್ರಾಮದ ಶರಣಪ್ಪ ಭೋವಿ ಅವರ ಪತ್ನಿ ಶಿಲ್ಪಾ ಭೋವಿ ಅವರು ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ (Guest Teacher) ಕೆಲಸ ಮಾಡುತ್ತಿದ್ದಾರೆ. ಯೋಜನೆ ಜಾರಿಯಾದಾಗಿನಿಂದಲೂ ಶಿಲ್ಪಾ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾಗಿಲ್ಲ. ಇದರಿಂದ ಬೇಸತ್ತ ಪತಿ ಶರಣಪ್ಪ, ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Related Articles

Related image1
Now Playing
ಮೂರು ತಿಂಗಳಾದ್ರು ಗೃಹ ಲಕ್ಷ್ಮಿ ದುಡ್ಡಿಲ್ಲ! #News360 #gruhalakshmi #cmsiddaramaiah
Related image2
ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿಗೆ ಸರ್ಜರಿ: ಗೃಹ ಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾದ ಸರ್ಕಾರ!
35
Image Credit : Asianet News

₹25,000 ಖರ್ಚು ಮಾಡಿದ ಶರಣಪ್ಪ!

ಶರಣಪ್ಪ ಭೋವಿ ಅವರ ಪ್ರಕಾರ, ಕಳೆದ ಮೂರು ವರ್ಷಗಳಿಂದ (ಯೋಜನೆಯ ಆರಂಭದಿಂದ) ಹಣ ಪಡೆಯಲು ಆನ್‌ಲೈನ್ ಅಪ್ಲಿಕೇಶನ್ (Online Application) ಸಲ್ಲಿಸಲು ಮತ್ತು ತಾಂತ್ರಿಕ ದೋಷಗಳನ್ನು ಸರಿಪಡಿಸಲು ಹತ್ತಾರು ಕಚೇರಿಗಳಿಗೆ ಅಲೆದಾಡಿದ್ದಾರೆ. ಈ ಅಲೆದಾಟದಲ್ಲಿ ಅವರು ಇದುವರೆಗೆ ಬರೋಬ್ಬರಿ ₹25,000 ಖರ್ಚು ಮಾಡಿಕೊಂಡಿದ್ದಾರೆ! 'ಬರಬೇಕಾದ ಹಣ ಎರಡು ಸಾವಿರ, ಆದರೆ ಅದನ್ನು ಪಡೆಯಲು ನಾನು ಮಾಡಿದ ಖರ್ಚು ₹25,000 (ಇಪ್ಪತ್ತೈದು ಸಾವಿರ)' ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

45
Image Credit : Asianet News

ಅಧಿಕಾರಿಗಳ ಹಾರಿಕೆ ಉತ್ತರ 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಅಧಿಕಾರಿಗಳನ್ನು ಭೇಟಿ ಮಾಡಿದರೆ, ಕೇವಲ "ತಾಂತ್ರಿಕ ಕಾರಣ" (Technical Issues) ಎನ್ನುವ ನೆಪವೊಡ್ಡುತ್ತಿದ್ದಾರೆ ಎಂದು ಶರಣಪ್ಪ ಆರೋಪಿಸಿದ್ದಾರೆ. ಪದೇ ಪದೇ ಅರ್ಜಿ ಸಲ್ಲಿಸಿದರೂ ಫಲ ಸಿಗದಿದ್ದಾಗ, ತಾವು ಖರ್ಚು ಮಾಡಿರುವ ₹25,000 ಹಣವನ್ನೇ ಸರ್ಕಾರ ವಾಪಸ್ ನೀಡಲಿ ಎಂದು ಅವರು ಮುಖ್ಯಮಂತ್ರಿಗಳು ಮತ್ತು ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಪತ್ರ ಬರೆದಿದ್ದಾರೆ.

55
Image Credit : Asianet News

ನ್ಯಾಯ ಸಿಗುವವರೆಗೂ ಹೋರಾಟ:

‘ನನ್ನ ಪತ್ನಿ ಒಬ್ಬ ಅತಿಥಿ ಶಿಕ್ಷಕಿಯಾಗಿದ್ದರೂ ಅವಳಿಗೆ ಸರ್ಕಾರದ ಸವಲತ್ತು ಸಿಗುತ್ತಿಲ್ಲ ಎಂದರೆ ಸಾಮಾನ್ಯ ಜನರ ಪರಿಸ್ಥಿತಿ ಏನು?’ ಎಂದು ಪ್ರಶ್ನಿಸಿರುವ ಶರಣಪ್ಪ, ಪತ್ನಿಯ ಖಾತೆಗೆ ಗೃಹಲಕ್ಷ್ಮಿ ಹಣ ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಗೃಹಲಕ್ಷ್ಮಿ ಯೋಜನೆ
ಕರ್ನಾಟಕ ಸುದ್ದಿ
ಕೊಪ್ಪಳ
ಶಿಕ್ಷಕರು
Latest Videos
Recommended Stories
Recommended image1
ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಒತ್ತುವರಿ ಆರೋಪ, ರಾಜ್ಯ ಸರ್ಕಾರದಿಂದ ತನಿಖೆಗೆ SIT ರಚನೆ, ಸ್ವಾಗತಿಸಿದ ಸಂಸ್ಥೆ
Recommended image2
ಡಿಸಿಎಂ ತವರಲ್ಲಿ 12 ಜೀತ ಕಾರ್ಮಿಕರ ರಕ್ಷಣೆ; ಪ್ರಪಂಚವನ್ನೇ ನೋಡದೆ 20 ವರ್ಷ ಕಲ್ಲು ಕ್ವಾರಿಯಲ್ಲಿ ಕೆಲಸ!
Recommended image3
ರೇಷನ್ ಕಾರ್ಡ್‌ದಾರರಿಗೆ ಸಿಹಿಸುದ್ದಿ: ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆಗೆ ಆಹಾರ ಇಲಾಖೆ ಆದೇಶ!
Related Stories
Recommended image1
Now Playing
ಮೂರು ತಿಂಗಳಾದ್ರು ಗೃಹ ಲಕ್ಷ್ಮಿ ದುಡ್ಡಿಲ್ಲ! #News360 #gruhalakshmi #cmsiddaramaiah
Recommended image2
ಗ್ಯಾರಂಟಿ ಯೋಜನೆ ಫಲಾನುಭವಿಗಳ ಪಟ್ಟಿಗೆ ಸರ್ಜರಿ: ಗೃಹ ಲಕ್ಷ್ಮಿ, ಗೃಹಜ್ಯೋತಿ ಪರಿಷ್ಕರಣೆಗೆ ಮುಂದಾದ ಸರ್ಕಾರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved