MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕೊಪ್ಪಳದಲ್ಲಿ ಕುಡಿಯುವ ನೀರಿಗಾಗಿ ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ಮತ್ತೊಂದೆಡೆ ಪಿಡಿಒ ಕಚೇರಿಗೆ ಮುತ್ತಿಗೆ

ಕೊಪ್ಪಳದಲ್ಲಿ ಕುಡಿಯುವ ನೀರಿಗಾಗಿ ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ಮತ್ತೊಂದೆಡೆ ಪಿಡಿಒ ಕಚೇರಿಗೆ ಮುತ್ತಿಗೆ

ಕಲ್ಯಾಣ ಕರ್ನಾಟಕದ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಕೊಪ್ಪಳದಲ್ಲಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಸಚಿವರ ಕಾರನ್ನು ಅಡ್ಡಗಟ್ಟಿ ಪ್ರತಿಭಟಿಸಿದರೆ, ರಾಯಚೂರಿನಲ್ಲಿ ಕೋಟಿಗಳ ಯೋಜನೆ ವಿಫಲವಾದ ಹಿನ್ನೆಲೆ, ಪಿಡಿಒ ಕಚೇರಿಗೆ ಮುತ್ತಿಗೆ ಹಾಕಿದರು.

2 Min read
Author : Sathish Kumar KH
Published : Apr 22 2026, 04:26 PM IST
Share this Photo Gallery
  • FB
  • TW
  • Linkdin
  • Whatsapp
16
ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಸಚಿವ ಕಾರು ಅಡ್ಡ
Image Credit : Asianet News

ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಸಚಿವ ಕಾರು ಅಡ್ಡ

ಕೊಪ್ಪಳ/ರಾಯಚೂರು (ಏ.22): ಬಿಸಿಲ ನಾಡು ಖ್ಯಾತಿಯ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಈಗ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹನಿ ನೀರಿಗಾಗಿ ಮೈಲುಗಟ್ಟಲೆ ಅಲೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನೀರಿನ ಬವಣೆಯ ವಿರುದ್ಧ ಜನರ ಆಕ್ರೋಶದ ಕಟ್ಟೆ ಒಡೆದಿದ್ದು, ಕೊಪ್ಪಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಾರನ್ನೇ ತಡೆದು ಮಹಿಳೆಯರು ಪ್ರತಿಭಟಿಸಿದರೆ, ರಾಯಚೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ವಿನೂತನ ಹೋರಾಟ ನಡೆಸಿದ್ದಾರೆ.

26
ಕೊಪ್ಪಳ: ಸಚಿವರ ಕಾರು ತಡೆದ ಖಾಲಿ ಕೊಡಗಳು
Image Credit : Asianet News

ಕೊಪ್ಪಳ: ಸಚಿವರ ಕಾರು ತಡೆದ ಖಾಲಿ ಕೊಡಗಳು

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಇಂದು ಹೈಡ್ರಾಮಾ ನಡೆದಿದೆ. ನವಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮಹಿಳೆಯರು ಶಾಕ್ ನೀಡಿದ್ದಾರೆ. ನೀರಿನ ಸಮಸ್ಯೆ ತಾಳಲಾರದೆ ಆಕ್ರೋಶಗೊಂಡಿದ್ದ ಗ್ರಾಮದ ಮಹಿಳೆಯರು, ಸಚಿವರ ಕಾರಿನ ಮುಂದೆ ಖಾಲಿ ಕೊಡಗಳನ್ನು ಹಿಡಿದು ಅಡ್ಡ ನಿಂತು ಪ್ರತಿಭಟನೆ ನಡೆಸಿದರು.

Related Articles

Related image1
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭ: ಸಚಿವ ಶಿವರಾಜ ತಂಗಡಗಿ
Related image2
ತಹಶೀಲ್ದಾರ್‌ಗಿಂತ ದೊಡ್ಡವನಾದನಾ ಸಚಿವ ಶಿವರಾಜ ತಂಗಡಗಿ ಪುತ್ರ? ಅಧಿಕಾರಿಗಳು ಕುರ್ಚಿ ಇಲ್ಲದೆ ನಿಂತರೆ, ಮಗನಿಗೆ ರಾಜ ಮರ್ಯಾದೆ!
36
ಕಾಮಗಾರಿ ಕೈಬಿಡಿ, ಕುಡಿಯಲು ನೀರು ಕೊಡಿ
Image Credit : Asianet News

ಕಾಮಗಾರಿ ಕೈಬಿಡಿ, ಕುಡಿಯಲು ನೀರು ಕೊಡಿ

'ನಮಗೆ ಅಭಿವೃದ್ಧಿ ಕಾಮಗಾರಿಗಳಿಗಿಂತ ಮೊದಲು ಕುಡಿಯಲು ನೀರು ಕೊಡಿ' ಎಂದು ಮಹಿಳೆಯರು ಸಚಿವರ ಮುಂದೆ ಅಳಲು ತೋಡಿಕೊಂಡರು. ಈ ವೇಳೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸಚಿವರು ಮಹಿಳೆಯರ ಮನವೊಲಿಸಲು ಯತ್ನಿಸಿದರಾದರೂ, ಕೂಡಲೇ ಶಾಶ್ವತ ಪರಿಹಾರ ಕಲ್ಪಿಸುವಂತೆ ಮಹಿಳೆಯರು ಪಟ್ಟು ಹಿಡಿದರು.

46
ರಾಯಚೂರು: 11 ಕೋಟಿ ಯೋಜನೆ ಇದ್ದರೂ ನೀರಿಲ್ಲ!
Image Credit : Asianet News

ರಾಯಚೂರು: 11 ಕೋಟಿ ಯೋಜನೆ ಇದ್ದರೂ ನೀರಿಲ್ಲ!

ಇನ್ನೊಂದೆಡೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದಲ್ಲಿ ನೀರಿನ ಸಮಸ್ಯೆ ವಿಕೋಪಕ್ಕೆ ಹೋಗಿದೆ. ಈ ಗ್ರಾಮಕ್ಕೆ ಕುಡಿಯುವ ನೀರು ಪೂರೈಸಲು ಬರೋಬ್ಬರಿ 11 ಕೋಟಿ ರೂಪಾಯಿ ವೆಚ್ಚದಲ್ಲಿ 'ಬಹುಗ್ರಾಮ ಕುಡಿಯುವ ನೀರಿನ ಯೋಜನೆ' ಜಾರಿಯಲ್ಲಿದೆ. ಆದರೆ, ಕಳೆದ ಒಂದು ವಾರದಿಂದ ಈ ಯೋಜನೆಯ ಎರಡು ಮೋಟಾರುಗಳು ಸುಟ್ಟು ಹೋಗಿದ್ದು, ಪಲಕನಮರಡಿ, ಮದರಕಲ್, ವಂದಲಿ ಮತ್ತು ದೇವರಗುಡ್ಡ ಗ್ರಾಮಗಳು ಸಂಪೂರ್ಣವಾಗಿ ಬಾಯಾರಿಕೆಯಿಂದ ತತ್ತರಿಸುತ್ತಿವೆ.

56
ಪಿಡಿಒ ವಿರುದ್ಧ ಗ್ರಾಮಸ್ಥರ ಆಕ್ರೋಶ:
Image Credit : Asianet News

ಪಿಡಿಒ ವಿರುದ್ಧ ಗ್ರಾಮಸ್ಥರ ಆಕ್ರೋಶ:

ಮೋಟಾರು ಸುಟ್ಟು ಹೋಗಿದ್ದರೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ತಿಮ್ಮಣ್ಣ ಅವರು ಕ್ಯಾರೆ ಎನ್ನುತ್ತಿಲ್ಲ ಎಂಬುದು ಗ್ರಾಮಸ್ಥರ ಗಂಭೀರ ಆರೋಪ. ಮೋಟಾರು ರಿಪೇರಿ ಮಾಡಿಸಿ ಎಂದು ಕೇಳಿದರೆ, 'ಪಂಚಾಯತ್‌ನಲ್ಲಿ ಅನುದಾನವಿಲ್ಲ' ಎಂಬ ಹಾರಿಕೆ ಉತ್ತರ ನೀಡಿ ದುರ್ವರ್ತನೆ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. 

ಇದರಿಂದ ಬೇಸತ್ತ ಜನರು ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತ್ ಕಚೇರಿ ಮುಂದೆ ಜಮಾಯಿಸಿ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಸರ್ಕಾರದ ಗಮನ ಸೆಳೆದರು.

66
ತುರ್ತು ನೀರು ಒದಗಿಸುತ್ತಾ ಜಿಲ್ಲಾಡಳಿತ
Image Credit : Asianet News

ತುರ್ತು ನೀರು ಒದಗಿಸುತ್ತಾ ಜಿಲ್ಲಾಡಳಿತ

ಕೋಟಿ ಕೋಟಿ ರೂಪಾಯಿ ವೆಚ್ಚದ ಯೋಜನೆಗಳು ಕಾಗದದ ಮೇಲೆ ಕಾಣಿಸುತ್ತಿದ್ದರೂ, ಜನರ ಗಂಟಲು ಮಾತ್ರ ಒಣಗುತ್ತಿದೆ. ಅಧಿಕಾರಿಗಳ ಸಮನ್ವಯದ ಕೊರತೆ ಮತ್ತು ನಿರ್ಲಕ್ಷ್ಯದಿಂದಾಗಿ ಜನರು ರಸ್ತೆಗಿಳಿದು ಹೋರಾಡುವಂತಾಗಿದೆ. ಇನ್ನಾದರೂ ಸರ್ಕಾರ ಮತ್ತು ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಕ್ರಮ ಕೈಗೊಳ್ಳಬೇಕಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕೊಪ್ಪಳ
ನೀರು
ರಾಯಚೂರು

Latest Videos
Recommended Stories
Recommended image1
ಬೆಂಗಳೂರು ಸುಡುತ್ತಿರುವುದು ಏಕೆ? ಈ ಬಿಸಿಲ ಧಗೆಯಿಂದ ಪಾರಾಗಲು ಏನು ಮಾಡಬೇಕು?
Recommended image2
ಬರೋಬ್ಬರಿ ಒಂದು ವರ್ಷ ಜೈಲುವಾಸ ಬಳಿಕ ನಟಿ ರನ್ಯಾ ರಾವ್ ಬಿಡುಗಡೆ, ಚಿನ್ನ ಸ್ಮಗ್ಲಿಂಗ್ ಕಥೆ ಮುಗಿಯಿತೇ?
Recommended image3
ತುಮಕೂರು ರಥೋತ್ಸವದಲ್ಲಿ ಕಾಂಗ್ರೆಸ್​ ವಿರುದ್ಧ ಹರಕೆ ಸಲ್ಲಿಕೆ! ಬಾಳೆಹಣ್ಣಿನ ಮೇಲೆ ಹೀಗೊಂದು ಬರಹ
Related Stories
Recommended image1
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಪರ್ವ ಆರಂಭ: ಸಚಿವ ಶಿವರಾಜ ತಂಗಡಗಿ
Recommended image2
ತಹಶೀಲ್ದಾರ್‌ಗಿಂತ ದೊಡ್ಡವನಾದನಾ ಸಚಿವ ಶಿವರಾಜ ತಂಗಡಗಿ ಪುತ್ರ? ಅಧಿಕಾರಿಗಳು ಕುರ್ಚಿ ಇಲ್ಲದೆ ನಿಂತರೆ, ಮಗನಿಗೆ ರಾಜ ಮರ್ಯಾದೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved