MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ವೇಳೆ ಸಚಿವ ಸೋಮಣ್ಣಗೆ ಮುಖಭಂಗ, ಹೊಡೆದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು!

ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ವೇಳೆ ಸಚಿವ ಸೋಮಣ್ಣಗೆ ಮುಖಭಂಗ, ಹೊಡೆದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು!

ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ವೇಳೆ ಪ್ರೋಟೋಕಾಲ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಗಲಾಟೆ ನಡೆಯಿತು. ಈ ಗದ್ದಲದಿಂದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರ್ಯಕ್ರಮವನ್ನು ಮೊಟಕುಗೊಳಿಸಿ ನಿರ್ಗಮಿಸಿದರು. 

2 Min read
Author : Gowthami K
Published : Jan 05 2026, 04:30 PM IST
Share this Photo Gallery
  • FB
  • TW
  • Linkdin
  • Whatsapp
17
ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ
Image Credit : Asianet News

ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ

ಕೊಪ್ಪಳ: ರೈಲ್ವೆ ಮೇಲ್ಸೇತುವೆ ಶಂಕುಸ್ಥಾಪನೆ ವೇಳೆ ಭಾರೀ ಹೈಡ್ರಾಮಾ. ಪ್ರೋಟೋಕಾಲ್ ವಿಚಾರಕ್ಕೆ ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ, ಕೇಂದ್ರ ಸಚಿವ ಸೋಮಣ್ಣ ಕಾರ್ಯಕ್ರಮ ಮೊಟಕುಗೊಳಿಸಿ ನಿರ್ಗಮನ. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಕೇಂದ್ರ ಸರ್ಕಾರದ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಎದುರೇ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮ ಗದ್ದಲ, ವಾಗ್ವಾದ ಹಾಗೂ ಗಲಾಟೆಗೆ ಸಾಕ್ಷಿಯಾಯಿತು.

27
ತಂಗಡಗಿ , ಹಿಟ್ನಾಳ್ ಇಬ್ಬರ ಹೆಸರು ಇಲ್ಲದ್ದಕ್ಕೆ ಕಿಡಿ
Image Credit : Asianet News

ತಂಗಡಗಿ , ಹಿಟ್ನಾಳ್ ಇಬ್ಬರ ಹೆಸರು ಇಲ್ಲದ್ದಕ್ಕೆ ಕಿಡಿ

ಕಾರ್ಯಕ್ರಮದ ಆಹ್ವಾನ ಪತ್ರಿಕೆ ಹಾಗೂ ಪ್ರೋಟೋಕಾಲ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಂಸದ ರಾಜಶೇಖರ ಹಿಟ್ನಾಳ್ ಅವರ ಹೆಸರುಗಳು ಇಲ್ಲದಿರುವುದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಇದನ್ನು ಪ್ರೋಟೋಕಾಲ್ ಉಲ್ಲಂಘನೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಸಚಿವ ಸೋಮಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಲ ಕಾರ್ಯಕರ್ತರು ಖುರ್ಚಿ ಎಸೆಯಲು ಯತ್ನಿಸಿದ್ದು, ಸಚಿವ ಸೋಮಣ್ಣ ಅವರ ಕಾರಿನ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

Related Articles

Related image1
ರಾಜ್ಯ ಸರ್ಕಾರದ ಬಳಿ ಹಣ ಇಲ್ಲ, ನೀವೇ ರೈಲ್ವೆ ಯೋಜನೆ ಮುಗಿಸಿ: ಕೇಂದ್ರ ಸಚಿವ ವಿ.ಸೋಮಣ್ಣ
Related image2
ನಮ್ಮ ಹತ್ರ ದುಡ್ಡಿಲ್ಲ ಎಂದ ಶಾಸಕ; 'ಜಾಗ ಕೊಡ್ರಪ್ಪ ಸಾಕು, ಪ್ರಾಜೆಕ್ಟ್ ನಾನು ಮಾಡ್ತೀನಿ' ಕೇಂದ್ರ ಸಚಿವ ಸೋಮಣ್ಣ ಖಡಕ್ ಕೌಂಟರ್!
37
ವೇದಿಕೆ ಬಳಿ ಸಚಿವರ ನಡುವೆಯೇ ವಾಗ್ವಾದ
Image Credit : Asianet News

ವೇದಿಕೆ ಬಳಿ ಸಚಿವರ ನಡುವೆಯೇ ವಾಗ್ವಾದ

ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಸೋಮಣ್ಣ ಪೂಜೆ ನೆರವೇರಿಸಿ ಶಂಕುಸ್ಥಾಪನೆ ಮಾಡಲು ಮುಂದಾದಾಗ, ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಕೂಡ ಪ್ರೋಟೋಕಾಲ್ ವಿಚಾರವನ್ನು ಎತ್ತಿ ಹಿಡಿದು ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ ಬಳಿ ಸಚಿವ ಸೋಮಣ್ಣ, “ಇಂತಹ ಕಾರ್ಯಕ್ರಮಗಳಲ್ಲಿ ಪಟಾಲಂ ತೆಗೆದುಕೊಂಡು ಗಲಾಟೆ ಮಾಡಬೇಡಿ” ಎಂದು ಹೇಳಿದ್ದು, ಇದರಿಂದ ಶಿವರಾಜ್ ತಂಗಡಗಿ ಮತ್ತಷ್ಟು ಕೆರಳಿದರು. ಪರಿಣಾಮ ವೇದಿಕೆಯ ಬಳಿಯೇ ಇಬ್ಬರ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ನಡೆಯಿತು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಜೋರಾಯಿತು.

47
ಕೇವಲ ಐದು ನಿಮಿಷದಲ್ಲೇ ಕಾರ್ಯಕ್ರಮ ಮುಕ್ತಾಯ
Image Credit : Asianet News

ಕೇವಲ ಐದು ನಿಮಿಷದಲ್ಲೇ ಕಾರ್ಯಕ್ರಮ ಮುಕ್ತಾಯ

ಗಲಾಟೆ ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಮೊಟಕುಗೊಳಿಸಿ, ಕೇವಲ ಐದು ನಿಮಿಷಗಳಲ್ಲೇ ಸ್ಥಳದಿಂದ ನಿರ್ಗಮಿಸಿದರು. ಶಂಕುಸ್ಥಾಪನೆ ಕಾರ್ಯಕ್ರಮ ಪೂರ್ಣ ಪ್ರಮಾಣದಲ್ಲಿ ನಡೆಯದೆ ಅರ್ಧದಲ್ಲೇ ಮುಕ್ತಾಯವಾಯಿತು. ಕಾರ್ಯಕ್ರಮ ಮುಗಿಸಿ ಹೊರಟಾಗಲೂ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಸೋಮಣ್ಣ ಮೇಲೆ ಖುರ್ಚಿ ತೂರಲು ಯತ್ನಿಸಿದ್ದು, ಈ ವೇಳೆ ಅವರ ಅಂಗರಕ್ಷಕರು ತಕ್ಷಣ ಹಸ್ತಕ್ಷೇಪ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

57
‘ಪ್ರೋಟೋಕಾಲ್ ಮಿಸ್ ಆಗಿಲ್ಲ’ – ಸೋಮಣ್ಣ ಸ್ಪಷ್ಟನೆ
Image Credit : Asianet News

‘ಪ್ರೋಟೋಕಾಲ್ ಮಿಸ್ ಆಗಿಲ್ಲ’ – ಸೋಮಣ್ಣ ಸ್ಪಷ್ಟನೆ

ಘಟನೆ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವಿ. ಸೋಮಣ್ಣ, “ಪ್ರೋಟೋಕಾಲ್ ಉಲ್ಲಂಘನೆಯಾಗಿಲ್ಲ. ಇದು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಣದಿಂದ ನಡೆಯುತ್ತಿರುವ ಯೋಜನೆ. ಉದ್ದೇಶಪೂರ್ವಕವಾಗಿ ಕಾರ್ಯಕರ್ತರ ನಡುವೆ ಗಲಾಟೆ ಮಾಡಿಸಲಾಗಿದೆ” ಎಂದು ಆರೋಪಿಸಿದರು.

67
26.97 ಕೋಟಿ ವೆಚ್ಚದ ಮೇಲ್ಸೇತುವೆ ಯೋಜನೆ
Image Credit : Asianet News

26.97 ಕೋಟಿ ವೆಚ್ಚದ ಮೇಲ್ಸೇತುವೆ ಯೋಜನೆ

ಹಿಟ್ನಾಳ–ಗಿಣಗೇರಾ–ಮುನಿರಾಬಾದ್ ಮಾರ್ಗದಲ್ಲಿ, ಎಲ್‌ಸಿ ಸಂಖ್ಯೆ 77ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಮೇಲ್ಸೇತುವೆ ಕಾಮಗಾರಿ ಸುಮಾರು ₹26.97 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.

ರಾಷ್ಟ್ರೀಯ ಹೆದ್ದಾರಿ 67ರ ಗಿಣಗೇರಾ–ಮುನಿರಾಬಾದ್ ರಸ್ತೆಯಲ್ಲಿ ಈ ಸೇತುವೆ ನಿರ್ಮಾಣವಾದರೆ, ಹುಲಿಗೆಮ್ಮ ದೇವಸ್ಥಾನ, ಅಂಜನಾದ್ರಿ ಯಾತ್ರಾರ್ಥಿಗಳು, ದಿನನಿತ್ಯ ಪ್ರಯಾಣಿಸುವ ಸಾರ್ವಜನಿಕರಿಗೆ ತಡೆರಹಿತ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಮಾರ್ಗದಲ್ಲಿ ದಿನವೊಂದಕ್ಕೆ ಸರಾಸರಿ 2,25,800 ವಾಹನಗಳ ಸಂಚಾರ ಇರುವುದರಿಂದ, ಮೇಲ್ಸೇತುವೆ ನಿರ್ಮಾಣ ಅತ್ಯಂತ ಮಹತ್ವದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

77
ರಾಜಕೀಯ ಕ್ರೆಡಿಟ್ ವಾರ್‌ಗೆ ಸಾಕ್ಷಿಯಾದ ಕಾರ್ಯಕ್ರಮ
Image Credit : Asianet News

ರಾಜಕೀಯ ಕ್ರೆಡಿಟ್ ವಾರ್‌ಗೆ ಸಾಕ್ಷಿಯಾದ ಕಾರ್ಯಕ್ರಮ

ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ರಾಜಕೀಯ ಕ್ರೆಡಿಟ್ ವಾರ್‌ಗೆ ಸಾಕ್ಷಿಯಾದುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕೊಪ್ಪಳದಲ್ಲಿ ನಡೆದ ಈ ಘಟನೆ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರತಿಧ್ವನಿ ಹೆಚ್ಚಾಗುವ ಸಾಧ್ಯತೆ ಇದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕೊಪ್ಪಳ
ಐಆರ್‌ಸಿಟಿಸಿ
ಕಾಂಗ್ರೆಸ್
ಬಿಜೆಪಿ
ವಿ. ಸೋಮಣ್ಣ

Latest Videos
Recommended Stories
Recommended image1
ಮೂರು ವರ್ಷದಲ್ಲಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ಸಂಗ್ರವಾದ ಟೋಲ್ ಎಷ್ಟು?
Recommended image2
ಬಳ್ಳಾರಿ ಗಲಾಟೆಗೆ ಬಿಗ್ ಟ್ವಿಸ್ಟ್ , ರಸ್ತೆ ಬದಿ ಸಿಕ್ತು ಬುಲೆಟ್‌, ರಾಜಶೇಖರ್ ಮರಣೋತ್ತರ ಪರೀಕ್ಷೆ 2 ಸಲ ಮಾಡಿದ್ಯಾಕೆ?
Recommended image3
ಬೆಂಗಳೂರು: ಅಪಾರ್ಟ್‌ಮೆಂಟಲ್ಲಿ ಉಸಿರುಗಟ್ಟಿ ಮಂಗಳೂರು ಟೆಕ್ಕಿ ಶರ್ಮಿಳಾ ಸಾವು
Related Stories
Recommended image1
ರಾಜ್ಯ ಸರ್ಕಾರದ ಬಳಿ ಹಣ ಇಲ್ಲ, ನೀವೇ ರೈಲ್ವೆ ಯೋಜನೆ ಮುಗಿಸಿ: ಕೇಂದ್ರ ಸಚಿವ ವಿ.ಸೋಮಣ್ಣ
Recommended image2
ನಮ್ಮ ಹತ್ರ ದುಡ್ಡಿಲ್ಲ ಎಂದ ಶಾಸಕ; 'ಜಾಗ ಕೊಡ್ರಪ್ಪ ಸಾಕು, ಪ್ರಾಜೆಕ್ಟ್ ನಾನು ಮಾಡ್ತೀನಿ' ಕೇಂದ್ರ ಸಚಿವ ಸೋಮಣ್ಣ ಖಡಕ್ ಕೌಂಟರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved