MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ಲಂಚ ತೆಗೆದುಕೊಳ್ಳುವಾಗಲೇ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌, ಸಿಂಘಂ ಅವತಾರ ತಳೆದ ಗೋವಿಂದರಾಜು!

ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ಲಂಚ ತೆಗೆದುಕೊಳ್ಳುವಾಗಲೇ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌, ಸಿಂಘಂ ಅವತಾರ ತಳೆದ ಗೋವಿಂದರಾಜು!

ಕೆ.ಪಿ. ಅಗ್ರಹಾರ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು, ಚೀಟಿ ವ್ಯವಹಾರದ ಪ್ರಕರಣವೊಂದರಲ್ಲಿ 4 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಟ್ಟು 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಅವರು, ಚಾಮರಾಜಪೇಟೆಯ ಸಿಎಆರ್ ಗ್ರೌಂಡ್ ಬಳಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

2 Min read
Author : Santosh Naik
Published : Jan 30 2026, 02:35 PM IST
Share this Photo Gallery
  • FB
  • TW
  • Linkdin
  • Whatsapp
19
Image Credit : Asianet News

ಸಿಟಿ ಪೊಲೀಸರ ಇಮೇಜ್‌ಗೆ ಧಕ್ಕೆ ತರುವಂತಹ ಘಟನೆಯಲ್ಲಿ, ಕೆ.ಪಿ. ಅಗ್ರಹಾರ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಬರೋಬ್ಬರಿ 4 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

29
Image Credit : Asianet News

ಚೀಟಿ ವ್ಯವಹಾರದ ಪ್ರಕರಣವೊಂದರಲ್ಲಿ ದೂರುದಾರರಿಗೆ ಅನುಕೂಲ ಮಾಡಿಕೊಡಲು ಹಾಗೂ 'ಬಡ್ಸ್ ಆಕ್ಟ್' (BUDS Act) ಅಡಿ ಕೇಸ್ ದಾಖಲಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಇನ್ಸ್‌ಪೆಕ್ಟರ್‌ಗೆ ಈಗ ಲೋಕಾಯುಕ್ತರ ಅತಿಥಿಯಾಗಿದ್ದಾರೆ..

Related Articles

Related image1
ಬೆಂಗಳೂರು ಚೀಟಿ ವ್ಯವಹಾರ ಇತ್ಯರ್ಥಕ್ಕೆ ₹4 ಲಕ್ಷ ಲಂಚ ಬೇಡಿಕೆ; ಹಣ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್!
Related image2
ಪ್ರಭಾಸ್ ಒಂದು ದಿನದ ಊಟದ ಖರ್ಚು ಎಷ್ಟು ಗೊತ್ತಾ? ಬಾಹುಬಲಿ ಸ್ಟಾರ್ ಲಂಚ್ ಮೆನುವಿನಲ್ಲಿ ಏನಿರುತ್ತೆ?
39
Image Credit : Asianet News

ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯು ಸಿನಿಮಾ ಸ್ಟೈಲ್‌ನಲ್ಲಿತ್ತು. ಮೂಲಗಳ ಪ್ರಕಾರ, ಇನ್ಸ್‌ಪೆಕ್ಟರ್ ಗೋವಿಂದರಾಜು ಒಟ್ಟು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

49
Image Credit : Asianet News

ಈಗಾಗಲೇ 1 ಲಕ್ಷ ರೂ. ಪಡೆದಿದ್ದ ಅವರು, ಬಾಕಿ 4 ಲಕ್ಷ ರೂಪಾಯಿಗಳನ್ನು ಪಡೆಯಲು ಚಾಮರಾಜಪೇಟೆಯ ಸಿಎಆರ್ (CAR) ಗ್ರೌಂಡ್ ಬಳಿ ದೂರುದಾರರನ್ನು ಬರಹೇಳಿದ್ದರು. ಹಣ ಪಡೆಯುತ್ತಿದ್ದಂತೆಯೇ ಲೋಕಾಯುಕ್ತ ಅಧಿಕಾರಿಗಳು ಇನ್ಸ್‌ಪೆಕ್ಟರ್ ಮೇಲೆ ದಾಳಿ ನಡೆಸಿದ್ದಾರೆ.

59
Image Credit : Asianet News

ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆಯಲು ಮುಂದಾದಾಗ ಇನ್ಸ್‌ಪೆಕ್ಟರ್ ಗೋವಿಂದರಾಜು ತೀವ್ರ ಪ್ರತಿರೋಧ ಒಡ್ಡಿದ್ದಾರೆ. ಆರಕ್ಕೂ ಹೆಚ್ಚು ಅಧಿಕಾರಿಗಳು ಅವರನ್ನು ಹಿಡಿದುಕೊಂಡಿದ್ದರೂ, ಕಿರುಚಾಡುತ್ತಾ ರೋಷಾವೇಶ ಪ್ರದರ್ಶಿಸಿದ್ದಾರೆ.

69
Image Credit : Asianet News

ಈ ಹೈಡ್ರಾಮಾ ಸಾರ್ವಜನಿಕರ ಗಮನ ಸೆಳೆದಿದ್ದು, ಪೊಲೀಸರೇ ಸಿನಿಮಾ ಸ್ಟೈಲ್‌ನಲ್ಲಿ ಪ್ರತಿಭಟಿಸಿದ್ದು ಚರ್ಚೆಗೆ ಕಾರಣವಾಗಿದೆ.

79
Image Credit : Asianet News

ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ದೂರುದಾರ ಸೂರಜ್, "ಪ್ರತಿದಿನ ಠಾಣೆಗೆ ಕರೆಸಿ ಹಿಂಸೆ ನೀಡಲಾಗುತ್ತಿತ್ತು. ಪ್ರಕರಣದಿಂದ ಪಾರಾಗಲು ಎಸಿಪಿ ಚಂದನ್ ಅವರಿಗೆ ಹಣ ನೀಡಬೇಕು ಎಂದು ಇನ್ಸ್‌ಪೆಕ್ಟರ್ ಹೇಳುತ್ತಿದ್ದರು. ಪೊಲೀಸ್ ಇಲಾಖೆ ಎಂದರೆ ನ್ಯಾಯ ನೀಡುವ ಜಾಗ ಅಂದುಕೊಂಡಿದ್ದೆವು, ಆದರೆ ಇಲ್ಲಿ ನಡೆಯುತ್ತಿರುವುದೇ ಬೇರೆ," ಎಂದು ನೋವು ತೋಡಿಕೊಂಡಿದ್ದಾರೆ.

89
Image Credit : Asianet News

ಈ ಬಗ್ಗೆ ಮಾತನಾಡಿದ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜು,'ನಿನ್ನೆ ಟ್ರ್ಯಾಪ್ ಕೇಸ್ ಮಾಡಿದ್ದೇವೆ.ಪ್ರಿವೆನ್ಷನ್ ಆಫ್ ಕರಪ್ಷನ್ ಆ್ಯಕ್ಟ್ ಅಡಿ ನಾವು ಟ್ರ್ಯಾಪ್ ಮಾಡಿದ್ದೇವೆ. ಗೋವಿಂದರಾಜು ಎಂಬ ಇನ್ಸ್ಪೆಕ್ಟರ್ ನ ಟ್ರ್ಯಾಪ್ ಮಾಡಲಾಗಿದೆ. ಐದು ಲಕ್ಷ ಹಣ ಡಿಮ್ಯಾಂಡ್ ಮಾಡಿದ್ದರು. 1 ಲಕ್ಷ ತೆಗೆದುಕೊಂಡಿದ್ದು, ಇನ್ನೂ 4 ಲಕ್ಷ ಬೇಡಿಕೆ ಇಟ್ಟಿದ್ದರು. ಅದನ್ನು ಪಡೆಯುವಾಗ ಟ್ರ್ಯಾಪ್‌ ಮಾಡಿದ್ದೇವೆ' ಎಂದು ತಿಳಿಸಿದ್ದಾರೆ.

99
Image Credit : Asianet News

ಚಾಮರಾಜಪೇಟೆಯ ಸಿಎಆರ್ ಗ್ರೌಂಡ್ ಬಳಿ ಟ್ರ್ಯಾಪ್ ಮಾಡಲಾಗಿದೆ. ದೂರುದಾರ ಮಹಮ್ಮದ್‌ ಅಕ್ಬರ್ ಹಾಗೂ ಆತನ ಸ್ನೇಹಿತರ ಮೇಲೆ ಪ್ರಕರಣ ದಾಖಲಾಗಿರುತ್ತೆ. ಈ ಸಂಬಂಧ ಅವರಿಗೆ ಸಹಾಯ ಮಾಡಲು ಹಣ ಕೇಳಿದ್ದರು. ಈ ಬಗ್ಗೆ ದೂರು ಪಡೆದು ನಾವು ಟ್ರ್ಯಾಪ್ ಮಾಡಿದ್ದೇವೆ. ಹಣ ಪಡೆಯುವಾಗ ನಾವು ಟ್ರ್ಯಾಪ್ ಮಾಡಿದ್ದೆವು ಎಂದು ಹೇಳಿದ್ದಾರೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಬೆಂಗಳೂರು
ಬೆಂಗಳೂರು ನಗರ
ಪೊಲೀಸ್
ಸುದ್ದಿ
ಭ್ರಷ್ಟಾಚಾರ
ಲೋಕಾಯುಕ್ತ

Latest Videos
Recommended Stories
Recommended image1
ದಿನೇದಿನೇ ಏರುತ್ತಿರುವ ಚಿನ್ನದ ದರ ಇಳಿಯಲಿ ಎಂದು ಭಕ್ತನ ಹರಕೆ !
Recommended image2
₹ 70 ಲಕ್ಷ ವಿದ್ಯುತ್‌ ಬಿಲ್‌ ಬಾಕಿ : ಸಿದ್ಧಗಂಗಾ ಮಠಕ್ಕೆ ನೀರು ಬಂದ್‌!
Recommended image3
ಕಾಸರಗೋಡು: ಕುಂಬಳೆ ಟೋಲ್ ವಿವಾದ ಭದ್ರತೆಯಲ್ಲಿ ಹಣ ಸಂಗ್ರಹ, ಪ್ರತಿಭಟಿಸಿದ ಚಾಲಕನನ್ನು ಹೊತ್ತೊಯ್ದ ಪೊಲೀಸ್!
Related Stories
Recommended image1
ಬೆಂಗಳೂರು ಚೀಟಿ ವ್ಯವಹಾರ ಇತ್ಯರ್ಥಕ್ಕೆ ₹4 ಲಕ್ಷ ಲಂಚ ಬೇಡಿಕೆ; ಹಣ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್!
Recommended image2
ಪ್ರಭಾಸ್ ಒಂದು ದಿನದ ಊಟದ ಖರ್ಚು ಎಷ್ಟು ಗೊತ್ತಾ? ಬಾಹುಬಲಿ ಸ್ಟಾರ್ ಲಂಚ್ ಮೆನುವಿನಲ್ಲಿ ಏನಿರುತ್ತೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved