40 ವರ್ಷಗಳ ನಂತರ ಡಿಕೆಶಿ ಮಾಡಿದ ಕೆಲಸ, 'ಆ ದಿನಗಳು'
ಬೆಂಗಳೂರು(ಜೂ. 29) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ 40 ವರ್ಷಗಳ ನಂತರ ಈ ಕೆಲಸ ಮಾಡಿದ್ದಾರೆ. ತಮ್ಮ ಸಂತಸವನ್ನು ಸೋಶಿಯಲ್ ಮೀಡಿಯಾ ಮುಖೇನ ಹಂಚಿಕೊಂಡಿದ್ದಾರೆ.
40 ವರ್ಷಗಳ ನಂತರ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ.
ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ಮತ್ತು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದ ಮತ್ತು ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದುಹೋದವು ಎಂದು ಬರೆದುಕೊಂಡಿದ್ದಾರೆ.
ಕಳೆದ ವಾರ ಸಂಭವಿಸಿದ ಸೂರ್ಯ ಗ್ರಹಣದ ನಂತರ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ನದಿಯಲ್ಲಿ ಈಜಾಡಿದರು.
ಸಂಗಮದ ಬಳಿಯ ಕಾವೇರಿ ನದಿಯಲ್ಲಿ ಈಜಾಡಿದರು.
ಡಿಕೆ ಶಿವಕುಮಾರ್ ಹಂಚಿಕೊಂಡಿರುವ ಪೋಟೋಗಳು ಸಾವಿರಕ್ಕೂ ಅಧಿಕ ಶೇರ್ ಆಗಿದೆ.
ಡಿಕೆ ಶಿವಕುಮಾರ್ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು.
ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ತೆಗೆದುಕೊಳ್ಳುವ ಸಿದ್ಧತೆಯಲ್ಲಿ ಶಿವಕುಮಾರ್ ಇದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಜುಲೈ 2 ರಂದು ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.