MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮುಷ್ಕರದಿಂದ ಬಸ್ ನಿಂತ್ರೂ ಸರ್ಕಾರಕ್ಕೆ ಕೋಟಿ ಕೋಟಿ ಉಳಿತಾಯ; ಹೇಗೆ ಗೊತ್ತಾ?

ಮುಷ್ಕರದಿಂದ ಬಸ್ ನಿಂತ್ರೂ ಸರ್ಕಾರಕ್ಕೆ ಕೋಟಿ ಕೋಟಿ ಉಳಿತಾಯ; ಹೇಗೆ ಗೊತ್ತಾ?

ಸಾರಿಗೆ ನೌಕರರ ಮುಷ್ಕರದಿಂದಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿ 'ಶಕ್ತಿ' ಯೋಜನೆಯಡಿ ಸರ್ಕಾರಕ್ಕೆ. ಉಳಿತಾಯವಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಬಸ್‌ಗಳ ಓಡಾಟ ಸ್ಥಗಿತಗೊಂಡಿತ್ತು.

1 Min read
Mahmad Rafik
Published : Aug 06 2025, 09:03 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Facebook

ಮಂಗಳವಾರ ಸಾರಿಗೆ ನೌಕರರ ಮುಷ್ಕರದಿಂದ ಬಸ್ ನಿಂತರೂ ರಾಜ್ಯ ಸರ್ಕಾರಕ್ಕೆ ಕೋಟಿ ಕೋಟಿ ಹಣ ಉಳಿತಾಯವಾಗಿದೆ. ಮಂಗಳವಾರ ನೌಕರರ ಮುಷ್ಕರದ ಹಿನ್ನೆಲೆ ರಾಜ್ಯದಲ್ಲಿ ಶೇ. 60ಕ್ಕೂ ಹೆಚ್ಚು ಸಾರಿಗೆ ಬಸ್ ಓಡಾಟ ಬಂದ್ ಆಗಿತ್ತು.

25
Image Credit : Asianet News

ಶೇ.60 ಬಸ್ ಓಡಾಟ ಬಂದ್ ಆಗಿದ್ದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿತ್ತು. ರಾಜ್ಯದ ಮಹಿಳೆಯರು ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತವಾಗಿ ಪ್ರಯಾಣಿಸುತ್ತಾರೆ. ನಾಲ್ಕು ನಿಗಮಗಳಿಂದ ನಿತ್ಯ ಸರಾಸರಿ 1.20 ಕೋಟಿ ಜನ ಪ್ರಯಾಣ ಮಾಡ್ತಾರೆ. ಇದರಲ್ಲಿ ನಿತ್ಯ 73 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸುತ್ತಾರೆ.

Related Articles

Related image1
ಹೈಕೋರ್ಟ್ ತರಾಟೆಗೆ ಮಣಿದು ರಾಜ್ಯ ಸಾರಿಗೆ ಮುಷ್ಕರ ವಾಪಸ್: ನೌಕರರ ಸಂಘಟನೆಗೆ ಚಾಟಿ
Related image2
ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿದ ಆರ್. ಅಶೋಕ್‌ಗೆ ಬೆಂಡೆತ್ತಿ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ!
35
Image Credit : Asianet News

ಮಹಿಳಾ ಪ್ರಯಾಣಿಕರ ಟಿಕೆಟ್ ಹಣವನ್ನು ರಾಜ್ಯ ಸರ್ಕಾರವೇ ಪಾವತಿಸುತ್ತದೆ. ಮಂಗಳವಾರ ಒಂದು ದಿನದ ಮುಷ್ಕರದಿಂದಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ ಉಳಿತಾಯವಾಗಿದೆ. ನಿನ್ನೆ ಒಂದೇ ದಿನ ರಾಜ್ಯ ಸರ್ಕಾರಕ್ಕೆ 16 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

45
Image Credit : Asianet News

ಮಂಗಳವಾರ "ಶಕ್ತಿ" ಇಲ್ಲದ ಕಾರಣ ರಾಜ್ಯ ಸರ್ಕಾರಕ್ಕೆ 16 ಕೋಟಿ ಉಳಿತಾಯವಾಗಿದೆ. ಬಿಎಂಟಿಸಿ ಹೊರತು ಪಡಿಸಿ ಮೂರು ನಿಗಮಗಳಲ್ಲಿ ಶೇ. 60 ಮಹಿಳೆ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿತ್ತು. ನಿತ್ಯ ಮಹಿಳಾ ಪ್ರಯಾಣಿಕರ ಓಡಾಟದ ಖರ್ಚು 23 ಕೋಟಿ ರೂಪಾಯಿ ಆಗಿರುತ್ತದೆ.

55
Image Credit : our own

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ನಡೆದ ಸಾರಿಗೆ ನೌಕರರ ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾದರೆ, ಇನ್ನು ಕೆಲವರು ಗೌರಾಗಿದ್ದರು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕೆಎಸ್ಆರ್ಟಿಸಿ
ಕಾಂಗ್ರೆಸ್
ಬಿಎಂಟಿಸಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved