MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಂಡ್ಯ ಅಪಘಾತ: ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ!

ಮಂಡ್ಯ ಅಪಘಾತ: ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ!

ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸಿಮೆಂಟ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಲಾರಿ ಹಳ್ಳಕ್ಕೆ ಉರುಳಿದ್ದು, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

1 Min read
Sathish Kumar KH
Published : Dec 24 2025, 12:06 PM IST
Share this Photo Gallery
  • FB
  • TW
  • Linkdin
  • Whatsapp
14
ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಡಿಕ್ಕಿ
Image Credit : Asianet News

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಡಿಕ್ಕಿ

ಮಂಡ್ಯ (ಡಿ.24): ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಹನುಮಂತನಗರದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಸಿಮೆಂಟ್ ಹೊತ್ತೊಯ್ಯುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ.

24
ಘಟನೆಯ ವಿವರ
Image Credit : Asianet News

ಘಟನೆಯ ವಿವರ

ಬುಧವಾರ ಮಂಡ್ಯದಿಂದ ಕೆ.ಎಂ.ದೊಡ್ಡಿ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿತ್ತು. ಇದೇ ವೇಳೆ ಕೆ.ಎಂ.ದೊಡ್ಡಿಯಿಂದ ಮಂಡ್ಯ ಕಡೆಗೆ ಸಿಮೆಂಟ್ ಮೂಟೆಗಳನ್ನು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಲಾರಿಯು ಹನುಮಂತನಗರದ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ತಕ್ಷಣ ಲಾರಿಯು ಪಕ್ಕದಲ್ಲಿದ್ದ ಆಳವಾದ ಹಳ್ಳಕ್ಕೆ ಉರುಳಿ ಬಿದ್ದಿದೆ.

Related Articles

Related image1
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
Related image2
ಮಂಡ್ಯ: 'ರಾಮ-ಲಕ್ಷಣ' ನಾಣ್ಯದ ಹೆಸರಲ್ಲಿ ವಂಚನೆಗೆ ಯತ್ನ; ಇಬ್ಬರು ವಂಚಕರಿಗೆ ಬಿತ್ತು ಗೂಸಾ!
34
ಅದೃಷ್ಟವಶಾತ್ ತಪ್ಪಿದ ಅನಾಹುತ
Image Credit : Asianet News

ಅದೃಷ್ಟವಶಾತ್ ತಪ್ಪಿದ ಅನಾಹುತ

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಡಿಕ್ಕಿ ಸಂಭವಿಸುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿ ಕೂಗಾಡಿದ್ದಾರೆ. ಆದರೆ, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಿಯಂತ್ರಣಕ್ಕೆ ಬಂದಿದ್ದು, ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಲಾರಿ ಚಾಲಕ ಹಾಗೂ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

44
ಟ್ರಾಫಿಕ್ ಜಾಂ ಮತ್ತು ಪೊಲೀಸ್ ಭೇಟಿ
Image Credit : Asianet News

ಟ್ರಾಫಿಕ್ ಜಾಂ ಮತ್ತು ಪೊಲೀಸ್ ಭೇಟಿ

ಅಪಘಾತದಿಂದಾಗಿ ಮಂಡ್ಯ-ಕೆಎಂ ದೊಡ್ಡಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಂ.ದೊಡ್ಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಳ್ಳಕ್ಕೆ ಬಿದ್ದ ಲಾರಿಯನ್ನು ಕ್ರೇನ್ ಮೂಲಕ ಮೇಲೆತ್ತುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆಯ ಈ ತಿರುವು ಅತ್ಯಂತ ಅಪಾಯಕಾರಿಯಾಗಿದ್ದು, ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಮಂಡ್ಯ
ಕೆಎಸ್ಆರ್ಟಿಸಿ

Latest Videos
Recommended Stories
Recommended image1
ಮದುವೆ ನಿರಾಕರಣೆ: ಯುವತಿ ತಾಯಿಯ ಜೀವಕ್ಕೆ ಕುತ್ತು ತಂದ ದುರುಳ!
Recommended image2
ರೈಲಲ್ಲಿ ಬ್ಯಾಗ್‌ ಮರೆವವರ ನೆರವಿಗೆ 'ಆಪರೇಷನ್‌ ಅಮಾನತ್‌': 2.25 ಕೋಟಿ ಮೌಲ್ಯದ ವಸ್ತುಗಳನ್ನು ರಕ್ಷಿಸಿದ ಆರ್‌ಪಿಎಫ್‌
Recommended image3
Bengaluru 2ನೇ ಏರ್‌ಫೋರ್ಟ್‌ಗೆ ಡಿಎಫ್‌ಆರ್‌ ಸಿದ್ಧತೆಗೆ ಟೆಂಡರ್‌: ವನ್ಯಜೀವಿ ಪರಿಣಾಮಕ್ಕೂ ಅಧ್ಯಯನ
Related Stories
Recommended image1
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
Recommended image2
ಮಂಡ್ಯ: 'ರಾಮ-ಲಕ್ಷಣ' ನಾಣ್ಯದ ಹೆಸರಲ್ಲಿ ವಂಚನೆಗೆ ಯತ್ನ; ಇಬ್ಬರು ವಂಚಕರಿಗೆ ಬಿತ್ತು ಗೂಸಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved