ಮನೆಯ ಮೇಲೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ಇಲ್ಲಿವೆ ಫೋಟೋಸ್
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಮನೆಯೊಂದರ ಅಂಗಳಕ್ಕೆ ಮೇಲೆ ಉರುಳಿ ಬಿದ್ದ ಘಟನೆ ಬುಧವಾರ ಪುತ್ತೂರು ತಾಲೂಕಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. ಇಲ್ಲಿವೆ ಫೋಟೋಸ್
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ಸೊಂದು ಮನೆಯೊಂದರ ಅಂಗಳಕ್ಕೆ ಬಿದ್ದಿದೆ.
ಪುತ್ತೂರು ತಾಲೂಕಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ
ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪುತ್ತೂರು ಬಸ್ಸು ನಿಲ್ದಾಣದಿಂದ ಹೊರಟು ಈಶ್ವರಮಂಗಲ ಕಡೆಗೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಈಶ್ವರಮಂಗಲದ ಸಾಂತ್ಯ ಎಂಬಲ್ಲಿ ಮನೆಯೊಂದರ ಅಂಗಳಕ್ಕೆ ಉರುಳಿ ಬಿದ್ದಿದೆ.
ಬಸ್ನಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದರು
ಮನೆಯ ಭಾಗಕ್ಕೆ ಸ್ವಲ್ಪ ಹಾನಿಯಾಗಿದೆ.
ಬಸ್ಸಿನಲ್ಲಿ ಸುಮಾರು 15 ಪ್ರಯಾಣಿಕರಿದ್ದು ಎಲ್ಲರೂ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕರಿಗೆ ಸಣ್ಣ ಪುಟ್ಟಗಾಯಗಳಾಗಿದೆ ಎಂದು ತಿಳಿದು ಬಂದಿದೆ.