MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಲಕ್ಕುಂಡಿ ನಿಧಿಗೆ ಉಂಟು ವಿಜಯನಗರ ಸಾಮ್ರಾಜ್ಯದ ನಂಟು; ಚಿನ್ನಾಭರಣಕ್ಕಿರುವ 300 ವರ್ಷ ಇತಿಹಾಸ ಬಿಚ್ಚಿಟ್ಟ ಡಿಸಿ!

ಲಕ್ಕುಂಡಿ ನಿಧಿಗೆ ಉಂಟು ವಿಜಯನಗರ ಸಾಮ್ರಾಜ್ಯದ ನಂಟು; ಚಿನ್ನಾಭರಣಕ್ಕಿರುವ 300 ವರ್ಷ ಇತಿಹಾಸ ಬಿಚ್ಚಿಟ್ಟ ಡಿಸಿ!

ಗದಗಿನ ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯು ಸುಮಾರು 300 ವರ್ಷಗಳಷ್ಟು ಹಳೆಯದಾದ ವಿಜಯನಗರ ಕಾಲದ ಬಂಗಾರದ ಒಡವೆಗಳೆಂದು ತಿಳಿದುಬಂದಿದೆ. ಸರ್ಕಾರಕ್ಕೆ ಒಪ್ಪಿಸಿದ ರಿತ್ತಿ ಕುಟುಂಬಕ್ಕೆ ನಿವೇಶನ, ಮನೆ ಹಾಗೂ ಉದ್ಯೋಗ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಧಿಕಾರಿ ಕೊಟ್ಟ ಮಾಹಿತಿ ಇಲ್ಲಿದೆ ನೋಡಿ.

1 Min read
Author : Sathish Kumar KH
Published : Jan 14 2026, 04:48 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : Asianet News

ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಲಕ್ಕುಂಡಿಯ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಪತ್ತೆಯಾದ ಬಂಗಾರದ ಒಡವೆಗಳು ಸುಮಾರು 300 ವರ್ಷಗಳ ಹಳೆಯದಾಗಿದ್ದು, ವಿಜಯನಗರ ಸಾಮ್ರಾಜ್ಯದ ಸಮಕಾಲೀನ ಇತಿಹಾಸಕ್ಕೆ ಸಾಕ್ಷಿಯಾಗಿವೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆಗಿನ ವಿಶೇಷ ಸಂವಾದದಲ್ಲಿ ಬಹಿರಂಗಪಡಿಸಿದ್ದಾರೆ.

27
Image Credit : Asianet News

ಲಕ್ಕುಂಡಿಯ ರಿತ್ತಿ ಕುಟುಂಬದ ಮನೆಯಲ್ಲಿ ಸಿಕ್ಕ ಈ ಬಂಗಾರವನ್ನು ಪುರಾತತ್ವ ಇಲಾಖೆಯ ತಜ್ಞರ ತಂಡ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಪರಿಶೀಲಿಸಿದೆ. ಪ್ರಾಥಮಿಕ ವರದಿಯ ಪ್ರಕಾರ, ಇವು ಅಂದಿನ ಕಾಲದಲ್ಲಿ ಶ್ರೀಮಂತರು ಅಥವಾ ರಾಜಮನೆತನಕ್ಕೆ ಹತ್ತಿರವಿದ್ದವರು ಬಳಸುತ್ತಿದ್ದ ಆಭರಣಗಳಿರಬಹುದು ಎಂದು ಅಭಿಪ್ರಾಯಪಡಲಾಗಿದೆ.

Related Articles

Related image1
ಲಕ್ಕುಂಡಿ: ನಿಧಿ ಸಿಕ್ಕ ಜಾಗದಲ್ಲಿ ದೊಡ್ಡ ಸರ್ಪ ಎದ್ದಿದೆ, ಒಂದಲ್ಲ ಒಂದು ದಿನ ಕಚ್ಚುತ್ತೆ, ನಮಗೆ ಆ ಜಾಗ ಬೇಡವೆಂದ ಕುಟುಂಬ!
Related image2
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ರಿತ್ತಿ ಕುಟುಂಬಕ್ಕೆ ಶುಕ್ರದೆಸೆ ಆರಂಭ; ನಿಧಿ ಕಾಯುವ ಸರ್ಪದ ಭಯಪಟ್ಟಿದ್ದವರಿಗೆ ಲಕ್!
37
Image Credit : Asianet News

ಇವುಗಳನ್ನು ರಾಜಮಹಾರಾಜರೇ ಬಳಸಿದ್ದು ಎಂದು ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲ, ಆದರೆ ಆಗಿನ ಕಾಲದ ಉಳ್ಳವರು ಧರಿಸುತ್ತಿದ್ದ ಒಡವೆಗಳಿವು ಎನ್ನುವುದರಲ್ಲಿ ಸಂಶಯವಿಲ್ಲ' ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

47
Image Credit : Asianet News

ಜಮೀನಿನಲ್ಲಿ ಅಥವಾ ಮನೆಯ ಅಡಿಪಾಯದಲ್ಲಿ ಸಿಕ್ಕ ಚಿನ್ನವನ್ನು ಸ್ವಂತಕ್ಕೆ ಬಳಸಿಕೊಳ್ಳದೆ ಸರ್ಕಾರದ ಸುಪರ್ದಿಗೆ ನೀಡಿದ ರಿತ್ತಿ ಕುಟುಂಬದ ಪ್ರಾಮಾಣಿಕತೆಯನ್ನು ಜಿಲ್ಲಾಡಳಿತ ಕೊಂಡಾಡಿದೆ. ಈ ಕುಟುಂಬಕ್ಕೆ ಸರ್ಕಾರದಿಂದ ವಿಶೇಷ ಕೊಡುಗೆ ನೀಡಲು ಚಿಂತನೆ ನಡೆಸಲಾಗುತ್ತಿದೆ.

57
Image Credit : Asianet News

ಈಗಾಗಲೇ ಅವರು ಮನೆ ಕಟ್ಟಲು ಜಾಗ ಕೇಳಿದ್ದಾರೆ, ಅವರಿಗೆ ನಿವೇಶನ ಒದಗಿಸಿ ಮನೆ ಕಟ್ಟಿಕೊಡಲು ವ್ಯವಸ್ಥೆ ಮಾಡುತ್ತೇವೆ. ಅಲ್ಲದೆ, ಕಸ್ತೂರೆವ್ವ ಅವರಿಗೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲು ಕ್ರಮ ಕೈಗೊಳ್ಳಲಾಗುವುದು' ಎಂದು ಶ್ರೀಧರ್ ಅವರು ಭರವಸೆ ನೀಡಿದ್ದಾರೆ.

67
Image Credit : Asianet News

ಈ ನಿಧಿಯ ಬಗ್ಗೆ ಪುರಾತತ್ವ ಇಲಾಖೆ ಇನ್ನೂ ಎರಡು ಮೂರು ದಿನಗಳಲ್ಲಿ ಸ್ಪಷ್ಟವಾದ ವರದಿ ನೀಡಲಿದೆ. ಒಂದು ವೇಳೆ ಈ ಚಿನ್ನದ ಮೇಲೆ ಯಾರಾದರೂ ಹಕ್ಕು (Claim) ಮಂಡಿಸಿದರೆ ಪ್ರಕರಣದ ದಿಕ್ಕು ಬದಲಾಗಬಹುದು.

77
Image Credit : Asianet News

ಇಲ್ಲದಿದ್ದರೆ, ತಜ್ಞರ ವರದಿ ಬಂದ ಕೂಡಲೇ ಇದು ಅಧಿಕೃತವಾಗಿ 'ಸರ್ಕಾರಿ ನಿಧಿ' ಎಂದು ಘೋಷಣೆಯಾಗಲಿದೆ. ಲಕ್ಕುಂಡಿಯ ಇತಿಹಾಸಕ್ಕೆ ಈ ಚಿನ್ನದ ಒಡವೆಗಳು ಹೊಸ ಆಯಾಮ ನೀಡಲಿವೆ ಎಂಬ ನಿರೀಕ್ಷೆಯಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಗದಗ
ಕರ್ನಾಟಕ ಸುದ್ದಿ
ಬಂಗಾರದ ನಿಧಿ
ಚಿನ್ನ

Latest Videos
Recommended Stories
Recommended image1
ನಿಧಿ ಸಿಕ್ಕ ಕುಟುಂಬ ಸರ್ವನಾಶ; ಅರ್ಧಾಯುಷ್ಯಕ್ಕೆ ಪತನ? ಪುರಾಣ, ಮನುಸ್ಮೃತಿಯಂತೆ ಏನು ಮಾಡಬೇಕು?
Recommended image2
ಅರ್ಧ ಕೆಜಿ ಲಕ್ಕುಂಡಿ ನಿಧಿ, ಆದ್ರೆ ಇದೆಂಥಾ ವಿಧಿ? ಸರ್ಕಾರಕ್ಕೆ ನಿಧಿ ಕೊಟ್ಟು ಬೀದಿಗೆ ಬಿತ್ತಾ ಕುಟುಂಬ?
Recommended image3
ಕಬ್ಬು ಕಟಾವು ಕಾರ್ಮಿಕರ ಟ್ರ್ಯಾಕ್ಟರ್ ಅಪಘಾತ; ಇಂದು ಅಕ್ಕ-ತಮ್ಮ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ!
Related Stories
Recommended image1
ಲಕ್ಕುಂಡಿ: ನಿಧಿ ಸಿಕ್ಕ ಜಾಗದಲ್ಲಿ ದೊಡ್ಡ ಸರ್ಪ ಎದ್ದಿದೆ, ಒಂದಲ್ಲ ಒಂದು ದಿನ ಕಚ್ಚುತ್ತೆ, ನಮಗೆ ಆ ಜಾಗ ಬೇಡವೆಂದ ಕುಟುಂಬ!
Recommended image2
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ರಿತ್ತಿ ಕುಟುಂಬಕ್ಕೆ ಶುಕ್ರದೆಸೆ ಆರಂಭ; ನಿಧಿ ಕಾಯುವ ಸರ್ಪದ ಭಯಪಟ್ಟಿದ್ದವರಿಗೆ ಲಕ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved