MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಲಕ್ಕುಂಡಿ ನಿಧಿಗೆ ಇದೆಯಾ ಸರ್ಪಗಾವಲು? ಭಯದಿಂದ ವಿಭಿನ್ನ ಬೇಡಿಕೆಯಿಟ್ಟ ಕುಟುಂಬದ ಮಹಿಳೆ

ಲಕ್ಕುಂಡಿ ನಿಧಿಗೆ ಇದೆಯಾ ಸರ್ಪಗಾವಲು? ಭಯದಿಂದ ವಿಭಿನ್ನ ಬೇಡಿಕೆಯಿಟ್ಟ ಕುಟುಂಬದ ಮಹಿಳೆ

ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಮನೆಯ ಅಡಿಪಾಯ ತೋಡುವಾಗ ಸಿಕ್ಕ ಬಂಗಾರದ ಆಭರಣಗಳ ಕುರಿತು ಪುರಾತತ್ವ ಇಲಾಖೆ ಅಧಿಕಾರಿಯ ಗೊಂದಲಕಾರಿ ಹೇಳಿಕೆಗಳು ವಿವಾದ ಸೃಷ್ಟಿಸಿವೆ. ನಿಧಿ ಸಿಕ್ಕ ಜಾಗದಲ್ಲಿ ದೋಷವಿದೆ ಎಂದು ನಂಬಿರುವ ಕುಟುಂಬ, ತಮಗೆ ಚಿನ್ನದ ಬದಲು ಮನೆ ಹಾಗೂ ಉದ್ಯೋಗ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

2 Min read
Author : Kannadaprabha News
Published : Jan 13 2026, 07:38 AM IST
Share this Photo Gallery
  • FB
  • TW
  • Linkdin
  • Whatsapp
16
ಬಂಗಾರದ ಆಭರಣ
Image Credit : Asianet News

ಬಂಗಾರದ ಆಭರಣ

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶನಿವಾರ ಮನೆಯ ಅಡಿಪಾಯ ತೋಡಿದಾಗ ಸಿಕ್ಕ ಬಂಗಾರದ ಆಭರಣಗಳ ವಿಷಯವಾಗಿ ಪುರಾತತ್ವ ಇಲಾಖೆಯ ಅಧಿಕಾರಿ ರಮೇಶ ಅವರು ಸೋಮವಾರ ಉಲ್ಟಾ ಹೊಡೆದ ಹಿನ್ನೆಲೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

26
ಸರ್ಕಾರದ ಆಸ್ತಿ
Image Credit : Asianet News

ಸರ್ಕಾರದ ಆಸ್ತಿ

ಕೇಂದ್ರ ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ್ ಮೂಲಿಮನಿ ಅವರು, ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ಇದು ನಿಧಿಯಲ್ಲ, ಅವರ ಪೂರ್ವಜರು ಇಟ್ಟಿದ್ದ ಬಂಗಾರ ಎಂದು ಹೇಳಿಕೆ ನೀಡಿದ್ದರು. ಇದರಿಂದಾಗಿ ಆಸೆಯಿಂದ ನಮ್ಮ ಬಂಗಾರ ನಮಗೆ ಕೊಟ್ಟು ಬಿಡಿ ಎಂದು ಕುಟುಂಬಸ್ಥರು ಬೇಡಿಕೆ ಇಟ್ಟಿದ್ದರು. ಆದರೆ ಸೋಮವಾರ ಅದೇ ಅಧಿಕಾರಿ ಗ್ರಾಮಕ್ಕೆ ಬಂದು ಇದು ಸರ್ಕಾರದ ಆಸ್ತಿ ಎಂದು ಹೇಳಿರುವುದು ಸಹಜವಾಗಿಯೇ ಗ್ರಾಮಸ್ಥರನ್ನು ಕೆರಳಿಸಿದೆ.

Related Articles

Related image1
ಲಕ್ಕುಂಡಿ: ನಿಧಿ ಸಿಕ್ಕ ಜಾಗದಲ್ಲಿ ದೊಡ್ಡ ಸರ್ಪ ಎದ್ದಿದೆ, ಒಂದಲ್ಲ ಒಂದು ದಿನ ಕಚ್ಚುತ್ತೆ, ನಮಗೆ ಆ ಜಾಗ ಬೇಡವೆಂದ ಕುಟುಂಬ!
Related image2
ಲಕ್ಕುಂಡಿ: ಮನೆ ಅಡಿಪಾಯ ತೋಡುವಾಗ ಪುರಾತನ ನಿಧಿ ಪತ್ತೆ! 101 ದೇವಸ್ಥಾನಗಳ ಊರಲ್ಲಿದೆಯೇ ಚಿನ್ನದ ಗಣಿ?
36
ವೈಜ್ಞಾನಿಕ ಪರಿಶೀಲನೆ
Image Credit : Asianet News

ವೈಜ್ಞಾನಿಕ ಪರಿಶೀಲನೆ

ವೈಜ್ಞಾನಿಕ ಪರಿಶೀಲನೆ ನಡೆಸದೇ ಇಂತಹ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ರೀತಿಯ ತಪ್ಪು ಮಾಹಿತಿ ನೀಡಿದ ಅಧಿಕಾರಿಯ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳ ನಿರ್ಲಕ್ಷ್ಯದ ಧೋರಣೆ ಮತ್ತು ಕುಟುಂಬಕ್ಕೆ ಸ್ಪಂದಿಸುವ ಮನೋಭಾವನೆ ವ್ಯಕ್ತಪಡಿಸದೇ ಇರುವುಕ್ಕೂ ಆಕ್ರೋಶ ವ್ಯಕ್ತಪಡಿಸಿದರು.

46
ಯಾವುದೇ ಪ್ರಯೋಜನವಿಲ್ಲ
Image Credit : Asianet News

ಯಾವುದೇ ಪ್ರಯೋಜನವಿಲ್ಲ

ಹಂಪಿ ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಸೋಮವಾರ ಭೇಟಿ ಪರಿಶೀಲನೆ ನಡೆಸಿದರು. ಹಂಪಿ ವಿಭಾಗದ ನಿರ್ದೇಶಕ ಆರ್. ಸೈಜೇಶ್ವರ ಸ್ಥಳ ಪರಿವೀಕ್ಷಣೆ ವೇಳೆ ಮಾತನಾಡಿ, 1962ರ ನಿಯಮ ಪ್ರಕಾರ ₹10 ಮೌಲ್ಯಕ್ಕಿಂತ ಹೆಚ್ಚಿನ ಮೊತ್ತದ ವಸ್ತು ಸಿಕ್ಕರೆ ಸರ್ಕಾರಕ್ಕೆ ಸಲ್ಲುತ್ತದೆ. ಭೂಮಿಯ ಒಂದು ಅಡಿ ಆಳದಲ್ಲಿ ಏನೇ ಸಿಕ್ಕರೂ ಅದು ಸರ್ಕಾರದ್ದಾಗಿದೆ. ಇನ್ನೂ ಇದು ಯಾವ ಕಾಲಕ್ಕೆ ಸೇರಿದ್ದು, ಯಾರ ಆಳ್ವಿಕೆಯ ಎಂಬುದು ಬಗ್ಗೆ ಪರಿಶೀಲನೆ ನಡೆಯಬೇಕಿದೆ.

ವಶಕ್ಕೆ ಪಡೆದ ಆಭರಣಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಮಾತುಕತೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ ಎಂದು ಹೇಳಿದ್ದನ್ನು ಬಿಟ್ಟಲ್ಲಿ ಆ ಕುಟುಂಬಕ್ಕೆ ಮಾತ್ರ ಭರವಸೆ ಮಾತ್ರ ಸೋಮವಾರವೂ ಯಾವ ಅಧಿಕಾರಿಗಳಿಂದಲೂ ಸಿಗಲಿಲ್ಲ.

56
ಕುಟುಂಬದ ವಿಭಿನ್ನ ಬೇಡಿಕೆ
Image Credit : Asianet News

ಕುಟುಂಬದ ವಿಭಿನ್ನ ಬೇಡಿಕೆ

ರಿತ್ತಿ ಕುಟುಂಬದ ಸದಸ್ಯರು ಸೋಮವಾರ ಕನ್ನಡಪ್ರಭದೊಂದಿಗೆ ಮಾತನಾಡಿ, ನಮಗೆ ಆ ಚಿನ್ನ ಬೇಡ ಆ ಜಾಗದಲ್ಲಿ ದೋಷವಿದೆ (ಅಪಶಕುನ). ಅಲ್ಲಿ ದೊಡ್ಡ ಸರ್ಪ ಕಂಡಿದ್ದು, ನಮಗೆ ಭಯವಾಗುತ್ತಿದೆ. ಆ ಜಾಗವನ್ನು ಸರ್ಕಾರವೇ ವಶಕ್ಕೆ ಪಡೆದು ದೇವಸ್ಥಾನ ನಿರ್ಮಿಸಲಿ. ನಮಗೆ ವಾಸಿಸಲು ಒಂದು ಸೂರು ಹಾಗೂ ಮಗನಿಗೆ ಉದ್ಯೋಗ ನೀಡಿದರೆ ಸಾಕು ಎಂದು ಮನವಿ ಮಾಡಿದ್ದಾರೆ.

66
ಶ್ಲಾಘನೀಯ
Image Credit : Asianet News

ಶ್ಲಾಘನೀಯ

ರಿತ್ತಿ ಕುಟುಂಬದವರು ತಮ್ಮ ಕಡು ಬಡತನದಲ್ಲೂ ಇಷ್ಟು ದೊಡ್ಡ ಮೊತ್ತದ ಬಂಗಾರವನ್ನು ಸರ್ಕಾರಕ್ಕೆ ಒಪ್ಪಿಸಿರುವುದು ಅತ್ಯಂತ ಶ್ಲಾಘನೀಯ. ಅವರಿಗೆ ಮನೆ ಒದಗಿಸುವ ಹಾಗೂ ನೆಮ್ಮದಿಯ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕೊಡಿಸುತ್ತೇನೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ತಿಳಿಸಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಗದಗ
ಟ್ರೆಂಡಿಂಗ್ ನ್ಯೂಸ್

Latest Videos
Recommended Stories
Recommended image1
ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌
Recommended image2
ಕೋಗಿಲು ಅಕ್ರಮ ಮನೆಗಳ ತೆರವು ಎನ್‌ಐಎ ತನಿಖೆಗೆ ನೀಡಲು ಆಗ್ರಹ
Recommended image3
ಹುಟ್ಟಿದ ಮಗು ನೋಡಲು ಬರಲೇ ಇಲ್ಲ ಅಪ್ಪ: ಹೆರಿಗೆ ರಜೆಯಲ್ಲಿ ಬಂದಿದ್ದ ಸೈನಿಕ ಅಪಘಾತಕ್ಕೆ ಬಲಿ!
Related Stories
Recommended image1
ಲಕ್ಕುಂಡಿ: ನಿಧಿ ಸಿಕ್ಕ ಜಾಗದಲ್ಲಿ ದೊಡ್ಡ ಸರ್ಪ ಎದ್ದಿದೆ, ಒಂದಲ್ಲ ಒಂದು ದಿನ ಕಚ್ಚುತ್ತೆ, ನಮಗೆ ಆ ಜಾಗ ಬೇಡವೆಂದ ಕುಟುಂಬ!
Recommended image2
ಲಕ್ಕುಂಡಿ: ಮನೆ ಅಡಿಪಾಯ ತೋಡುವಾಗ ಪುರಾತನ ನಿಧಿ ಪತ್ತೆ! 101 ದೇವಸ್ಥಾನಗಳ ಊರಲ್ಲಿದೆಯೇ ಚಿನ್ನದ ಗಣಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved